Homeಮುಖಪುಟಡ್ರಗ್ ಕೇಸ್:‍ ನಟಿ ಶ್ರದ್ಧಾ‌ ಕಪೂರ್‌, ಸಾರಾ ಅಲಿ ಖಾನ್‌ಗೆ ಎನ್‌ಸಿ‌ಬಿ ಸಮನ್ಸ್ ಸಾಧ್ಯತೆ

ಡ್ರಗ್ ಕೇಸ್:‍ ನಟಿ ಶ್ರದ್ಧಾ‌ ಕಪೂರ್‌, ಸಾರಾ ಅಲಿ ಖಾನ್‌ಗೆ ಎನ್‌ಸಿ‌ಬಿ ಸಮನ್ಸ್ ಸಾಧ್ಯತೆ

ರಿಯಾ ಚಕ್ರವರ್ತಿಯ ಪ್ರಾಥಮಿಕ ತನಿಖೆಯ ಸಮಯದಲ್ಲಿ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಇತರ ಕೆಲವು ನಟರ ಹೆಸರುಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಸಹಜ ಸಾವಿನ ತನಿಖೆ ಜೊತೆಗೆ ಡ್ರಗ್ಸ್ ಕೇಸ್ ಕೂಡ ಸೇರಿಕೊಂಡಿದ್ದು, ಈ ಸಂಬಂಧ ನಟಿ ಶ್ರದ್ಧಾ ಕಪೂರ್‌, ಸಾರಾ ಅಲಿ ಖಾನ್‌ರನ್ನು ಈ ವಾರ ವಿಚಾರಣೆಗೆ ಕರೆಯಬಹುದು ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ. ತನ್ನ ಗೆಳೆಯ ಸುಶಾಂತ್ ಸಿಂಗ್ ರಜಪೂತ್‌ಗೆ ಡ್ರಗ್ಸ್ ಒದಗಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ಪ್ರಶ್ನಿಸುವಾಗ ಅವರ ಇವರ ಹೆಸರುಗಳು ಕೇಳಿಬಂದಿವೆ ಎಂದು ವರದಿಯಾಗಿದೆ.

ನಟಿ ರಿಯಾ ಚಕ್ರವರ್ತಿಯ ಮೊಬೈಲ್ ಫೋನ್‌ನಿಂದ ಮರುಪಡೆಯಲಾದ ವಾಟ್ಸಾಪ್ ಸಂದೇಶದ ಆಧಾರದ ಮೇಲೆ ಫೆಡರಲ್ ಏಜೆನ್ಸಿ ಮೊದಲ ಪ್ರಕರಣ ನೋಂದಾಯಿಸಿತ್ತು. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಈ ನಟಿಯರಿಗೆ ಸಮನ್ಸ್ ನೀಡಬಹುದು ಎಂದು ಮೂಲಗಳು ತಿಳಿಸಿವೆ.

PC: Hindustan Times

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಇನ್ನು 59 ಗ್ರಾಂ ಗಾಂಜಾ ವಶಪಡಿಸಿಕೊಂಡ ಆಧಾರದ ಮೇಲೆ ಏಜೆನ್ಸಿ ಎರಡನೇ ಪ್ರಕರಣವನ್ನು ದಾಖಲಿಸಿದೆ. ಇದರಲ್ಲಿ ರಿಯಾ ಚಕ್ರವರ್ತಿ ಸೇರಿದಂತೆ 15ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಯಲ್ಲದೆ, ಈ ತಿಂಗಳ ಆರಂಭದಲ್ಲಿ ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ರಜಪೂತ್ ಅವರ ಇಬ್ಬರು ಉದ್ಯೋಗಿಗಳು ಮತ್ತು ಬಾಲಿವುಡ್ ಜೊತೆ ಸಂಬಂಧ ಹೊಂದಿರುವ ಡ್ರಗ್ಸ್ ಮಾರಾಟಗಾರರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಗೆ ಸೆ.22ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಬೈಕುಲಾ ಜೈಲಿನಲ್ಲಿ ಇರಿಸಲಾಗಿದೆ.

“ರಿಯಾ ಚಕ್ರವರ್ತಿಯ ಮೊಬೈಲ್‌ನಿಂದ ಮರುಪಡೆಯಲಾದ ವಾಟ್ಸಾಪ್ ಸಂದೇಶಗಳ ಆಧಾರದ ಮೇಲೆ ನೋಂದಾಯಿಸಲಾದ ಮೊದಲ ಪ್ರಕರಣದ ಪ್ರಾಥಮಿಕ ತನಿಖೆಯ ಸಮಯದಲ್ಲಿ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಇತರ ಕೆಲವು ನಟರ ಹೆಸರುಗಳು ಬಂದಿವೆ. ಇಬ್ಬರೂ ಈ ವಾರ ತನಿಖೆಗೆ ಬರಲು ಶೀಘ್ರದಲ್ಲೇ ಸಮನ್ಸ್ ನೀಡಲಾಗುವುದು  ಎಂದು ತನಿಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ನಟಿ ಶ್ರದ್ಧಾ ಕಪೂರ್,‌ ‍ಸುಶಾಂತ್‌ ಸಿಂಗ್ ರಜಪೂತ್ ಅವರ ಲೋನಾವ್ಲಾ ಫಾರ್ಮ್ ಹೌಸ್‌ನಲ್ಲಿ ನಡೆದ ಚಿಚ್ಚೋರೆ ಚಿತ್ರದ ಯಶಸ್ಸಿನ ಪಾಟಿಯಲ್ಲಿ ಭಾಗವಹಿಸಿದ್ದರು. ಪ್ರಕರಣದಲ್ಲಿ ನಟಿ ರಾಕುಲ್ ಪ್ರೀತ್ ಹೆಸರು ಕೂಡ ಕೇಳಿಬಂದಿತ್ತು.

PC: Hamara Photo

34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ಮುಂಬೈನ ತನ್ನ ಅಪಾರ್ಟ್ಮೆಂಟ್‌ನಲ್ಲಿ  ಶವವಾಗಿ ಪತ್ತೆಯಾಗಿದ್ದರು. ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯಗಳು ನಡೆಸುತ್ತಿವೆ. ಅಸಹಜ ಸಾವು ಪ್ರಕರಣಕ್ಕೆ ಡ್ರಗ್ಸ್ ಕೇಸ್ ಕೂಡ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...