Homeಮುಖಪುಟಡ್ರಗ್ಸ್ ಕೇಸ್: ರಾಕುಲ್, ರಾಣಾ, ಪುರಿ ಜಗನ್ನಾಥ್, ರವಿತೇಜಾ ಸೇರಿ 12 ಮಂದಿಗೆ ಇಡಿ ಸಮನ್ಸ್

ಡ್ರಗ್ಸ್ ಕೇಸ್: ರಾಕುಲ್, ರಾಣಾ, ಪುರಿ ಜಗನ್ನಾಥ್, ರವಿತೇಜಾ ಸೇರಿ 12 ಮಂದಿಗೆ ಇಡಿ ಸಮನ್ಸ್

- Advertisement -
- Advertisement -

ನಾಲ್ಕು ವರ್ಷದ ಹಿಂದಿನ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಕುಲ್ ಪ್ರೀತ್ ಸಿಂಗ್, ನಟರಾದ ರಾಣಾ ದಗ್ಗುಬಾಟಿ, ರವಿತೇಜಾ, ನಿರ್ದೇಶಕ ಪುರಿ ಜಗನ್ನಾಥ್, ನಟಿ ಚಾರ್ಮಿ ಕೌರ್ ಮತ್ತು ಮುಮೈತ್ ಖಾನ್ ಸೇರಿದಂತೆ 12 ಮಂದಿ ಟಾಲಿವುಡ್ ನಟರು ಮತ್ತು ನಿರ್ದೇಶಕರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.

ಆಗಸ್ಟ್ 31 ಕ್ಕೆ ನಿರ್ದೇಶಕ ಪುರಿ ಜಗನ್ನಾಥ್ ಅವರಿಗೆ ಸಮನ್ಸ್ ನೀಡಿದ್ದರೆ, ಸೆಪ್ಟೆಂಬರ್ 6 ಕ್ಕೆ ನಟಿ ರಾಕುಲ್ ಪ್ರೀತ್ ಸಿಂಗ್‌ಗೆ ಸಮನ್ಸ್ ನೀಡಲಾಗಿದೆ. ನಟರಾದ ರಾಣಾ ದಗ್ಗುಬಾಟಿ ಮತ್ತು ರವಿತೇಜಾ ಅವರಿಗೆ ಕ್ರಮವಾಗಿ ಸೆಪ್ಟೆಂಬರ್ 8 ಮತ್ತು 9 ರಂದು ಸಮನ್ಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ನಟಿ ಮುಮೈತ್ ಖಾನ್‌ಗೆ ನವೆಂಬರ್ 15 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ನಟಿ ಚಾರ್ಮಿ ಕೌರ್ ಅವರಿಗಗೂ ಇಡಿ ಸಮನ್ಸ್ ಜಾರಿ ಮಾಡಿದೆ.

2017 ರ ಡ್ರಗ್ ಕೇಸ್ ಸಂಬಂಧವಾಗಿ ಈ 12 ಜನ ನಟರು ಮತ್ತು ನಿರ್ದೇಶಕರನ್ನು ವಿಶೇಷ ತನಿಖಾ ತಂಡವು (ಎಸ್‌ಐಟಿ) ಈ ಹಿಂದೆ ವಿಚಾರಣೆ ನಡೆಸಿತ್ತು. ಸಾಕ್ಷಿ, ಆಧಾರಗಳ ಕೊರತೆಯಿಂದ ಪ್ರಕರಣವನ್ನು ಬಿಟ್ಟುಬಿಡಲಾಗಿತ್ತು.

ಇದನ್ನೂ ಓದಿ: ನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

ಈಗ ಇದೇ ಪ್ರಕರಣದಲ್ಲಿ ಸೆಲೆಬ್ರಿಟಿಗಳನ್ನು ಸಾಕ್ಷಿಯಾಗಿ ಕರೆಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಕ್ರಮ ಹಣ ವರ್ಗಾವಣೆ, ಡ್ರಗ್ಸ್ ಸೇವನೆ ಮತ್ತು ಸರಬರಾಜು ಪ್ರಕರಣಗಳಲ್ಲಿ ಸಮನ್ಸ್ ನೀಡಲಾಗಿದೆ.

ಜುಲೈ 2017 ರಲ್ಲಿ ಹೈದರಾಬಾದ್ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡವು ಟಾಲಿವುಡ್ ಸೆಲೆಬ್ರಿಟಿಗಳು ಮತ್ತು ಇತರರ ವಿರುದ್ಧ ತನಿಖೆಯನ್ನು ಆರಂಭಿಸಿತ್ತು.

2017 ರ ಜುಲೈನಲ್ಲಿ ಡ್ರಗ್ ಪ್ರಕರಣ ಬಹಿರಂಗವಾಗಿತ್ತು. ಡ್ರಗ್ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳು ದಾಖಲಾಗಿದ್ದವು. ಡಚ್ ಪ್ರಜೆ, ದಕ್ಷಿಣ ಆಫ್ರಿಕಾದ ಪ್ರಜೆ ಸೇರಿದಂತೆ ಮಾಜಿ ಏರೋಸ್ಪೇಸ್ ಎಂಜಿನಿಯರ್ ಆಗಿದ್ದ ಯುಎಸ್ ಪ್ರಜೆ ಸೇರಿದಂತೆ 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ಎಸ್‌ಐಟಿ ದಕ್ಷಿಣ ಆಫ್ರಿಕಾದ ಪ್ರಜೆ, ರಾಫೆಲ್ ಅಲೆಕ್ಸ್ ವಿಕ್ಟರ್ ಎಂಬುವವರನ್ನು ಮುಂಬೈನಿಂದ ಹೈದರಾಬಾದ್‌ಗೆ ಕೊಕೇನ್ ಸಾಗಿಸಿದ ಆರೋಪದ ಮೇಲೆ 2017 ರ ಆಗಸ್ಟ್‌ನಲ್ಲಿ ಬಂಧಿಸಿತ್ತು.

ವಿಶೇಷ ತನಿಖಾ ತಂಡವು ಸೆಲೆಬ್ರಿಟಿಗಳು ಸೇರಿದಂತೆ 62 ಶಂಕಿತರ ಕೂದಲು ಮತ್ತು ಉಗುರಿನ ಮಾದರಿಗಳನ್ನು ಸಂಗ್ರಹಿಸಿತ್ತು, ಆದರೆ ಇಲ್ಲಿಯವರೆಗೆ, ಎಸ್‌ಐಟಿ ಯಾವುದೇ ಸೆಲೆಬ್ರಿಟಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿಲ್ಲ. ಯಾವ ಸೆಲೆಬ್ರಿಟಿಗಳು ಡ್ರಗ್ ಕಳ್ಳಸಾಗಣೆ, ಡ್ರಗ್ ಸೇವನೆಯ ಭಾಗವಾಗಿದ್ದಾರೆ ಎಂಬುದನ್ನು ಕೂಡ ಎಸ್‌ಐಟಿ ಇಲ್ಲಿಯವರೆಗೆ ಬಹಿರಂಗಪಡಿಸಿಲ್ಲ.


ಇದನ್ನೂ ಓದಿ: ಪಮೇಲಾ-ಡ್ರಗ್ಸ್ ಪ್ರಕರಣ : ಬಂಗಾಳ ಬಿಜೆಪಿ ನಾಯಕ ರಾಕೇಶ್ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...