Homeಮುಖಪುಟಡ್ರಗ್ಸ್ ಕೇಸ್: ರಾಕುಲ್, ರಾಣಾ, ಪುರಿ ಜಗನ್ನಾಥ್, ರವಿತೇಜಾ ಸೇರಿ 12 ಮಂದಿಗೆ ಇಡಿ ಸಮನ್ಸ್

ಡ್ರಗ್ಸ್ ಕೇಸ್: ರಾಕುಲ್, ರಾಣಾ, ಪುರಿ ಜಗನ್ನಾಥ್, ರವಿತೇಜಾ ಸೇರಿ 12 ಮಂದಿಗೆ ಇಡಿ ಸಮನ್ಸ್

- Advertisement -
- Advertisement -

ನಾಲ್ಕು ವರ್ಷದ ಹಿಂದಿನ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಕುಲ್ ಪ್ರೀತ್ ಸಿಂಗ್, ನಟರಾದ ರಾಣಾ ದಗ್ಗುಬಾಟಿ, ರವಿತೇಜಾ, ನಿರ್ದೇಶಕ ಪುರಿ ಜಗನ್ನಾಥ್, ನಟಿ ಚಾರ್ಮಿ ಕೌರ್ ಮತ್ತು ಮುಮೈತ್ ಖಾನ್ ಸೇರಿದಂತೆ 12 ಮಂದಿ ಟಾಲಿವುಡ್ ನಟರು ಮತ್ತು ನಿರ್ದೇಶಕರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.

ಆಗಸ್ಟ್ 31 ಕ್ಕೆ ನಿರ್ದೇಶಕ ಪುರಿ ಜಗನ್ನಾಥ್ ಅವರಿಗೆ ಸಮನ್ಸ್ ನೀಡಿದ್ದರೆ, ಸೆಪ್ಟೆಂಬರ್ 6 ಕ್ಕೆ ನಟಿ ರಾಕುಲ್ ಪ್ರೀತ್ ಸಿಂಗ್‌ಗೆ ಸಮನ್ಸ್ ನೀಡಲಾಗಿದೆ. ನಟರಾದ ರಾಣಾ ದಗ್ಗುಬಾಟಿ ಮತ್ತು ರವಿತೇಜಾ ಅವರಿಗೆ ಕ್ರಮವಾಗಿ ಸೆಪ್ಟೆಂಬರ್ 8 ಮತ್ತು 9 ರಂದು ಸಮನ್ಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ನಟಿ ಮುಮೈತ್ ಖಾನ್‌ಗೆ ನವೆಂಬರ್ 15 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ನಟಿ ಚಾರ್ಮಿ ಕೌರ್ ಅವರಿಗಗೂ ಇಡಿ ಸಮನ್ಸ್ ಜಾರಿ ಮಾಡಿದೆ.

2017 ರ ಡ್ರಗ್ ಕೇಸ್ ಸಂಬಂಧವಾಗಿ ಈ 12 ಜನ ನಟರು ಮತ್ತು ನಿರ್ದೇಶಕರನ್ನು ವಿಶೇಷ ತನಿಖಾ ತಂಡವು (ಎಸ್‌ಐಟಿ) ಈ ಹಿಂದೆ ವಿಚಾರಣೆ ನಡೆಸಿತ್ತು. ಸಾಕ್ಷಿ, ಆಧಾರಗಳ ಕೊರತೆಯಿಂದ ಪ್ರಕರಣವನ್ನು ಬಿಟ್ಟುಬಿಡಲಾಗಿತ್ತು.

ಇದನ್ನೂ ಓದಿ: ನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

ಈಗ ಇದೇ ಪ್ರಕರಣದಲ್ಲಿ ಸೆಲೆಬ್ರಿಟಿಗಳನ್ನು ಸಾಕ್ಷಿಯಾಗಿ ಕರೆಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಕ್ರಮ ಹಣ ವರ್ಗಾವಣೆ, ಡ್ರಗ್ಸ್ ಸೇವನೆ ಮತ್ತು ಸರಬರಾಜು ಪ್ರಕರಣಗಳಲ್ಲಿ ಸಮನ್ಸ್ ನೀಡಲಾಗಿದೆ.

ಜುಲೈ 2017 ರಲ್ಲಿ ಹೈದರಾಬಾದ್ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡವು ಟಾಲಿವುಡ್ ಸೆಲೆಬ್ರಿಟಿಗಳು ಮತ್ತು ಇತರರ ವಿರುದ್ಧ ತನಿಖೆಯನ್ನು ಆರಂಭಿಸಿತ್ತು.

2017 ರ ಜುಲೈನಲ್ಲಿ ಡ್ರಗ್ ಪ್ರಕರಣ ಬಹಿರಂಗವಾಗಿತ್ತು. ಡ್ರಗ್ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳು ದಾಖಲಾಗಿದ್ದವು. ಡಚ್ ಪ್ರಜೆ, ದಕ್ಷಿಣ ಆಫ್ರಿಕಾದ ಪ್ರಜೆ ಸೇರಿದಂತೆ ಮಾಜಿ ಏರೋಸ್ಪೇಸ್ ಎಂಜಿನಿಯರ್ ಆಗಿದ್ದ ಯುಎಸ್ ಪ್ರಜೆ ಸೇರಿದಂತೆ 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ಎಸ್‌ಐಟಿ ದಕ್ಷಿಣ ಆಫ್ರಿಕಾದ ಪ್ರಜೆ, ರಾಫೆಲ್ ಅಲೆಕ್ಸ್ ವಿಕ್ಟರ್ ಎಂಬುವವರನ್ನು ಮುಂಬೈನಿಂದ ಹೈದರಾಬಾದ್‌ಗೆ ಕೊಕೇನ್ ಸಾಗಿಸಿದ ಆರೋಪದ ಮೇಲೆ 2017 ರ ಆಗಸ್ಟ್‌ನಲ್ಲಿ ಬಂಧಿಸಿತ್ತು.

ವಿಶೇಷ ತನಿಖಾ ತಂಡವು ಸೆಲೆಬ್ರಿಟಿಗಳು ಸೇರಿದಂತೆ 62 ಶಂಕಿತರ ಕೂದಲು ಮತ್ತು ಉಗುರಿನ ಮಾದರಿಗಳನ್ನು ಸಂಗ್ರಹಿಸಿತ್ತು, ಆದರೆ ಇಲ್ಲಿಯವರೆಗೆ, ಎಸ್‌ಐಟಿ ಯಾವುದೇ ಸೆಲೆಬ್ರಿಟಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿಲ್ಲ. ಯಾವ ಸೆಲೆಬ್ರಿಟಿಗಳು ಡ್ರಗ್ ಕಳ್ಳಸಾಗಣೆ, ಡ್ರಗ್ ಸೇವನೆಯ ಭಾಗವಾಗಿದ್ದಾರೆ ಎಂಬುದನ್ನು ಕೂಡ ಎಸ್‌ಐಟಿ ಇಲ್ಲಿಯವರೆಗೆ ಬಹಿರಂಗಪಡಿಸಿಲ್ಲ.


ಇದನ್ನೂ ಓದಿ: ಪಮೇಲಾ-ಡ್ರಗ್ಸ್ ಪ್ರಕರಣ : ಬಂಗಾಳ ಬಿಜೆಪಿ ನಾಯಕ ರಾಕೇಶ್ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...