Homeಮುಖಪುಟಡ್ರಗ್ಸ್ ಕೇಸ್: ರಾಕುಲ್, ರಾಣಾ, ಪುರಿ ಜಗನ್ನಾಥ್, ರವಿತೇಜಾ ಸೇರಿ 12 ಮಂದಿಗೆ ಇಡಿ ಸಮನ್ಸ್

ಡ್ರಗ್ಸ್ ಕೇಸ್: ರಾಕುಲ್, ರಾಣಾ, ಪುರಿ ಜಗನ್ನಾಥ್, ರವಿತೇಜಾ ಸೇರಿ 12 ಮಂದಿಗೆ ಇಡಿ ಸಮನ್ಸ್

- Advertisement -
- Advertisement -

ನಾಲ್ಕು ವರ್ಷದ ಹಿಂದಿನ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಕುಲ್ ಪ್ರೀತ್ ಸಿಂಗ್, ನಟರಾದ ರಾಣಾ ದಗ್ಗುಬಾಟಿ, ರವಿತೇಜಾ, ನಿರ್ದೇಶಕ ಪುರಿ ಜಗನ್ನಾಥ್, ನಟಿ ಚಾರ್ಮಿ ಕೌರ್ ಮತ್ತು ಮುಮೈತ್ ಖಾನ್ ಸೇರಿದಂತೆ 12 ಮಂದಿ ಟಾಲಿವುಡ್ ನಟರು ಮತ್ತು ನಿರ್ದೇಶಕರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.

ಆಗಸ್ಟ್ 31 ಕ್ಕೆ ನಿರ್ದೇಶಕ ಪುರಿ ಜಗನ್ನಾಥ್ ಅವರಿಗೆ ಸಮನ್ಸ್ ನೀಡಿದ್ದರೆ, ಸೆಪ್ಟೆಂಬರ್ 6 ಕ್ಕೆ ನಟಿ ರಾಕುಲ್ ಪ್ರೀತ್ ಸಿಂಗ್‌ಗೆ ಸಮನ್ಸ್ ನೀಡಲಾಗಿದೆ. ನಟರಾದ ರಾಣಾ ದಗ್ಗುಬಾಟಿ ಮತ್ತು ರವಿತೇಜಾ ಅವರಿಗೆ ಕ್ರಮವಾಗಿ ಸೆಪ್ಟೆಂಬರ್ 8 ಮತ್ತು 9 ರಂದು ಸಮನ್ಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ನಟಿ ಮುಮೈತ್ ಖಾನ್‌ಗೆ ನವೆಂಬರ್ 15 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ನಟಿ ಚಾರ್ಮಿ ಕೌರ್ ಅವರಿಗಗೂ ಇಡಿ ಸಮನ್ಸ್ ಜಾರಿ ಮಾಡಿದೆ.

2017 ರ ಡ್ರಗ್ ಕೇಸ್ ಸಂಬಂಧವಾಗಿ ಈ 12 ಜನ ನಟರು ಮತ್ತು ನಿರ್ದೇಶಕರನ್ನು ವಿಶೇಷ ತನಿಖಾ ತಂಡವು (ಎಸ್‌ಐಟಿ) ಈ ಹಿಂದೆ ವಿಚಾರಣೆ ನಡೆಸಿತ್ತು. ಸಾಕ್ಷಿ, ಆಧಾರಗಳ ಕೊರತೆಯಿಂದ ಪ್ರಕರಣವನ್ನು ಬಿಟ್ಟುಬಿಡಲಾಗಿತ್ತು.

ಇದನ್ನೂ ಓದಿ: ನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

ಈಗ ಇದೇ ಪ್ರಕರಣದಲ್ಲಿ ಸೆಲೆಬ್ರಿಟಿಗಳನ್ನು ಸಾಕ್ಷಿಯಾಗಿ ಕರೆಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಕ್ರಮ ಹಣ ವರ್ಗಾವಣೆ, ಡ್ರಗ್ಸ್ ಸೇವನೆ ಮತ್ತು ಸರಬರಾಜು ಪ್ರಕರಣಗಳಲ್ಲಿ ಸಮನ್ಸ್ ನೀಡಲಾಗಿದೆ.

ಜುಲೈ 2017 ರಲ್ಲಿ ಹೈದರಾಬಾದ್ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡವು ಟಾಲಿವುಡ್ ಸೆಲೆಬ್ರಿಟಿಗಳು ಮತ್ತು ಇತರರ ವಿರುದ್ಧ ತನಿಖೆಯನ್ನು ಆರಂಭಿಸಿತ್ತು.

2017 ರ ಜುಲೈನಲ್ಲಿ ಡ್ರಗ್ ಪ್ರಕರಣ ಬಹಿರಂಗವಾಗಿತ್ತು. ಡ್ರಗ್ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳು ದಾಖಲಾಗಿದ್ದವು. ಡಚ್ ಪ್ರಜೆ, ದಕ್ಷಿಣ ಆಫ್ರಿಕಾದ ಪ್ರಜೆ ಸೇರಿದಂತೆ ಮಾಜಿ ಏರೋಸ್ಪೇಸ್ ಎಂಜಿನಿಯರ್ ಆಗಿದ್ದ ಯುಎಸ್ ಪ್ರಜೆ ಸೇರಿದಂತೆ 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ಎಸ್‌ಐಟಿ ದಕ್ಷಿಣ ಆಫ್ರಿಕಾದ ಪ್ರಜೆ, ರಾಫೆಲ್ ಅಲೆಕ್ಸ್ ವಿಕ್ಟರ್ ಎಂಬುವವರನ್ನು ಮುಂಬೈನಿಂದ ಹೈದರಾಬಾದ್‌ಗೆ ಕೊಕೇನ್ ಸಾಗಿಸಿದ ಆರೋಪದ ಮೇಲೆ 2017 ರ ಆಗಸ್ಟ್‌ನಲ್ಲಿ ಬಂಧಿಸಿತ್ತು.

ವಿಶೇಷ ತನಿಖಾ ತಂಡವು ಸೆಲೆಬ್ರಿಟಿಗಳು ಸೇರಿದಂತೆ 62 ಶಂಕಿತರ ಕೂದಲು ಮತ್ತು ಉಗುರಿನ ಮಾದರಿಗಳನ್ನು ಸಂಗ್ರಹಿಸಿತ್ತು, ಆದರೆ ಇಲ್ಲಿಯವರೆಗೆ, ಎಸ್‌ಐಟಿ ಯಾವುದೇ ಸೆಲೆಬ್ರಿಟಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿಲ್ಲ. ಯಾವ ಸೆಲೆಬ್ರಿಟಿಗಳು ಡ್ರಗ್ ಕಳ್ಳಸಾಗಣೆ, ಡ್ರಗ್ ಸೇವನೆಯ ಭಾಗವಾಗಿದ್ದಾರೆ ಎಂಬುದನ್ನು ಕೂಡ ಎಸ್‌ಐಟಿ ಇಲ್ಲಿಯವರೆಗೆ ಬಹಿರಂಗಪಡಿಸಿಲ್ಲ.


ಇದನ್ನೂ ಓದಿ: ಪಮೇಲಾ-ಡ್ರಗ್ಸ್ ಪ್ರಕರಣ : ಬಂಗಾಳ ಬಿಜೆಪಿ ನಾಯಕ ರಾಕೇಶ್ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...