Homeಕರ್ನಾಟಕಡ್ರಗ್‌ ಪ್ರಕರಣ: ಆರ್ಯನ್‌ ಖಾನ್‌ ರಕ್ಷಿಸಿದ ಒಂದು ಸೆಲ್ಫಿಯ ಕಥೆ!

ಡ್ರಗ್‌ ಪ್ರಕರಣ: ಆರ್ಯನ್‌ ಖಾನ್‌ ರಕ್ಷಿಸಿದ ಒಂದು ಸೆಲ್ಫಿಯ ಕಥೆ!

- Advertisement -
- Advertisement -

ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಸುಲಿಗೆಗಾಗಿ ಅಪಹರಿಸಲಾಗಿತ್ತು, ಒಂದು ಸೆಲ್ಫಿಯಿಂದಾಗಿ ಅವರ ಆಟವು ಹಾಳಾಯಿತು ಎಂದು ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅಪಹರಣದ ಸಂಚಿನ ಭಾಗವಾಗಿದ್ದಾರೆ ಎಂದು ಮಲಿಕ್ ಆರೋಪಿಸಿದ್ದಾರೆ.

ಬಿಜೆಪಿ ನಾಯಕ ಮೋಹಿತ್ ಕಾಂಬೋಜ್ ಈ ಸಂಚನ್ನು ರೂಪಿಸಿದ್ದಾರೆ ಎಂದಿರುವ ಮಲಿಕ್‌, ಆರ್ಯನ್ ಖಾನ್ ಅಂಥವರನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುವ ಸಂಚು ನಡೆದಿದೆ ಎಂದೂ ಆರೋಪಿಸಿದ್ದಾರೆ.

ಮುಂಬೈ ಕರಾವಳಿಯ ಕ್ರೂಸ್ ಹಡಗಿನ ಮೇಲೆ ಅಕ್ಟೋಬರ್‌ನಲ್ಲಿ ವಾಂಖೆಡೆ ನೇತೃತ್ವದಲ್ಲಿ ದಾಳಿ ನಡೆಸಿದ ನಂತರ ಆರ್ಯನ್‌ ಖಾನ್‌ ಅವರನ್ನು ಬಂಧಿಸಲಾಯಿತು. ದಾಳಿ ವೇಳೆ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಆದರೆ ಆರ್ಯನ್ ಖಾನ್ ಡ್ರಗ್ಸ್ ಸೇವಿಸಿಲ್ಲ ಎಂದು ದೃಢವಾಗಿದೆ. ಆರ್ಯನ್‌ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

“ಆರ್ಯನ್ ಖಾನ್ ಟಿಕೆಟ್ ಖರೀದಿಸಿ ವಿಲಾಸಕ್ಕೆಂದು ಹೋಗಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಲಾಗಿದೆ. ಪ್ರತೀಕ್ ಗಾಬಾ ಮತ್ತು ಅಮೀರ್ ಫರ್ನಿಚರ್‌ವಾಲಾ ಕಾರಣಕ್ಕಾಗಿ ಅವರು ಅಲ್ಲಿಗೆ ಹೋಗಿದ್ದಾರೆ. ನಾನು ನೇರವಾಗಿ ಹೇಳಲು ಬಯಸುತ್ತೇನೆ- ಅದು ಅಪಹರಣ ಮತ್ತು ಸುಲಿಗೆಯ ಪ್ರಕರಣವಾಗಿದೆ” ಎಂದು ಸಚಿವರು ದೂರಿದ್ದಾರೆ.

ಬಿಜೆಪಿ ನಾಯಕ ಮೋಹಿತ್ ಕಾಂಬೋಜ್ ಅವರ ಕಡೆಯಿಂದ ಅಪಹರಣ ನಡೆಸಲಾಗಿತ್ತು ಎಂದು ಮಲಿಕ್ ಆರೋಪಿಸಿದ್ದು, “ಆರ್ಯನ್ ಖಾನ್ ಅವರನ್ನು ಅಲ್ಲಿಗೆ ಕರೆದೊಯ್ದರು. 25 ಕೋಟಿ ರೂ. ಸುಲಿಗೆಯ ಆಟ ಪ್ರಾರಂಭವಾಯಿತು. 18 ಕೋಟಿ ರೂ.ಗೆ ಒಪ್ಪಂದವಾಯಿತು. ₹ 50 ಲಕ್ಷ ರೂ. ಪಾವತಿಸಲಾಯಿತು. ಆದರೆ ಒಂದು ಸೆಲ್ಫಿ ಅವರ ಆಟವನ್ನು ಹಾಳುಮಾಡಿದೆ ಮತ್ತು ಇದು ಸತ್ಯ” ಎಂದು ಅವರು ಪ್ರತಿಪಾದಿಸಿದ್ದಾರೆ.

ಮಲಿಕ್ ಅವರು ಯಾರನ್ನೂ ಹೆಸರಿಸದಿದ್ದರೂ, ಆರ್ಯನ್ ಖಾನ್ ಅವರೊಂದಿಗೆ ಖಾಸಗಿ ತನಿಖಾಧಿಕಾರಿ ಕೆ.ಪಿ.ಗೋಸಾವಿ ಅವರು ಇರುವ ಸೆಲ್ಫಿಯ ಕುರಿತೇ ಹೇಳುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಫೋಟೋವು ದಾಳಿಯ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಬಿಜೆಪಿ ಮುಖಂಡ ಮೋಹಿತ್ ಕಾಂಬೋಜ್ ಅವರನ್ನು ಪ್ರಕರಣದ ಮಾಸ್ಟರ್ ಮೈಂಡ್ ಎಂದು ನವಾಬ್‌ ಮಲ್ಲಿಕ್‌ ಹೇಳಿದ್ದಾರೆ. ಸುಲಿಗೆ ದಂಧೆಯಲ್ಲಿ ಡ್ರಗ್ಸ್ ವಿರೋಧಿ ಅಧಿಕಾರಿ ಸಮೀರ್ ವಾಂಖೆಡೆ ಅವರು ಪಾಲುದಾರರಾಗಿದ್ದಾರೆ ಎಂದಿದ್ದಾರೆ.

ರಾಜ್ಯ ಸಚಿವ ಅಸ್ಲಂ ಶೇಖ್ ಮತ್ತು ಹಲವಾರು ಸಚಿವರ ಮಕ್ಕಳನ್ನು ಕ್ರೂಸ್‌ಗೆ ಕರೆತರಲು ಕಾಶಿಫ್ ಖಾನ್ ಸೇರಿದಂತೆ ಸಂಘಟಕರು ಯೋಜಿಸಿದ್ದರು. ಮಹಾರಾಷ್ಟ್ರ ಸರ್ಕಾರವನ್ನು ದೂಷಿಸಲು ಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಮಲಿಕ್ ತಿಳಿಸಿದ್ದಾರೆ.

ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ಕಾಂಬೋಜ್, ಪ್ರಕರಣದ ಸುತ್ತ ಸುಳ್ಳುಗಳನ್ನು ಹಬ್ಬಿಸಲಾಗುತ್ತಿದೆ. ಮಹಾರಾಷ್ಟ್ರದ ಕೆಲವು ಸಚಿವರು ಶಾರುಖ್ ಖಾನ್ ಅವರಿಂದ ಹಣವನ್ನು ಸುಲಿಗೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...