Homeಮುಖಪುಟಕನ್ನಡದಲ್ಲಿ ಔ‍ಷಧ ಚೀಟಿ | ಪ್ರಾಧಿಕಾರದ ಪ್ರಸ್ತಾಪ 'ಅಸಂಬದ್ಧ ಮತ್ತು ಅನಗತ್ಯ': ಖ್ಯಾತ ವೈದ್ಯ ಶ್ರೀನಿವಾಸ...

ಕನ್ನಡದಲ್ಲಿ ಔ‍ಷಧ ಚೀಟಿ | ಪ್ರಾಧಿಕಾರದ ಪ್ರಸ್ತಾಪ ‘ಅಸಂಬದ್ಧ ಮತ್ತು ಅನಗತ್ಯ’: ಖ್ಯಾತ ವೈದ್ಯ ಶ್ರೀನಿವಾಸ ಕಕ್ಕಿಲ್ಲಾಯ ಅಸಮಾಧಾನ

- Advertisement -
- Advertisement -

ರಾಜ್ಯದ ವೈದ್ಯರುಗಳು ರೋಗಿಗಳಿಗೆ ನೀಡುವ ಔಷಧ ಚೀಟಿಗಳನ್ನು ಕನ್ನಡದಲ್ಲಿ ಬರೆಯಬೇಕು ಎನ್ನುವ ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋಷೋತ್ತಮ ಬಿಳಿಮಲೆ ಅವರ ಪ್ರಸ್ತಾಪಕ್ಕೆ ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ‘ಅಸಂಬದ್ಧ’ ಮತ್ತು ‘ಅನಗತ್ಯ’ ಪ್ರಸ್ತಾಪ ಎಂದು ಹೇಳಿದ್ದಾರೆ. ”ವೈದ್ಯರುಗಳಿಗೆ ರೋಗಿಗಳ ಶುಶ್ರೂಷೆ ಮಾಡುವುದು ಆದ್ಯ ಕರ್ತವ್ಯವಾಗಿದೆ, ಕನ್ನಡ ಬೆಳೆಸುವುದಲ್ಲ. ಒಂದು ವೇಳೆ ಕನ್ನಡ ಬೆಳೆಸುವುದು ವೈದ್ಯರುಗಳ ಕೆಲಸ ಎಂದು ಪ್ರಾಧಿಕಾರ ಹೇಳುವುದಾದರೆ, ಪ್ರಾಧಿಕಾರದಲ್ಲಿ ಕನ್ನಡ ಬೆಳೆಸುವ ಮತ್ತು ಉಳಿಸುವ ಯಾವುದೆ ಹೊಸ ಚಿಂತನೆ ಇಲ್ಲ ಎಂದರ್ಥ” ಎಂದು ಅವರು ಹೇಳಿದ್ದಾರೆ. ಕನ್ನಡದಲ್ಲಿ ಔ‍ಷಧ ಚೀಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕನ್ನಡ ಪ್ರಾಧಿಕಾರದ ಪ್ರಸ್ತಾಪದ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಡಾಕ್ಟರ್ ಶ್ರೀನಿವಾಸ ಕಕ್ಕಿಲ್ಲಾಯ ಅವರು, ಕನ್ನಡ ಬೆಳೆಸುವುದು ವೈದ್ಯರ ಕೆಲಸವಲ್ಲ ಎಂದು ಹೇಳಿದರು. “ನನಗೆ ಪ್ರೊಫೆಸರ್ ಬಿಳಿಮಲೆ ಮೇಲೆ ತುಂಬಾ ಗೌರವಿದೆ, ಅವರು ಮಾಡಿರುವ ಕೆಲಸಗಳ ಬಗ್ಗೆ ಹೆಮ್ಮೆಯಿದೆ. ಆದರೆ ಅವರ ಇಂತಹ ಸಲಹೆಗಳನ್ನು ನಾನು ಒಪ್ಪಬೇಕೆಂದಿಲ್ಲ. ಒಂದು ವೇಳೆ ಔ‍ಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆದರೆ ಅದು ಭಾರಿ ಗೊಂದಲಕ್ಕೆ ದಾರಿ ಮಾಡಿಕೊಡುತ್ತದೆ. ರೋಗಿಗಳಿಗೆ ಏನಾದರೂ ಹೆಚ್ಚು ಕಮ್ಮಿಯಾದರೆ, ಅದಕ್ಕೆ ಹೊಣೆ ಯಾರು” ಎಂದು ಕೇಳಿದರು.

“ಮೊದಲನೆಯದಾಗಿ ಈಗಾಗಲೆ ಲಕ್ಷಾಂತರ ಔಷಧಿ ಬ್ರಾಂಡ್‌ಗಳು ಮಾರುಕಟ್ಟೆಯಲ್ಲಿ ಇವೆ. ಔ‍ಷಧಗಳ ಹೆಸರಿನಲ್ಲಿ ಒಂದು ಅಕ್ಷರ ಬದಲಾದರೂ ಅದು ಬೇರೆಯೆ ಆಗಿಬಿಡುತ್ತದೆ. ಅಲ್ಲದೆ, ಕನ್ನಡದಲ್ಲಿ ಔಷದ ಬರೆದರೆ ಔಷಧ ಅಂಗಡಿಗಳಲ್ಲಿ ಔಷಧ ಕೊಡುವವರು ಕನ್ನಡಿಗರೆ ಆಗಿರುವುದಿಲ್ಲ. ಅದನ್ನು ಓದಲು ತಿಳಿಯದೆ ಮತ್ತೆ ನಮಗೆ ಕರೆ ಮಾಡಿ ಅದರ ಬಗ್ಗೆ ಕೇಳುತ್ತಾರೆ. ನಾವು ರೋಗಿಗಳನ್ನು ಬಿಟ್ಟು ಅವರಿಗೆ ಉತ್ತರಿಸುವುದೆ ಕೆಲಸ ಮಾಡಿಕೊಂಡಿರಲು ಸಾಧ್ಯವಿಲ್ಲ. ಕನ್ನಡ ಕಟ್ಟುವ ಕೆಲಸ ಎಂದರೆ ಇದಲ್ಲ” ಎಂದು ಅವರು ತಿಳಿಸಿದರು.

“ಜಗತ್ತುಈಗ ಕಿರಿದಾಗುತ್ತಿದೆ. ನಾವು ಆಧುನಿಕ ವೈದ್ಯರು ಜಗತ್ತಿನಾದ್ಯಂತ ವೈದ್ಯರು ಬರೆಯುವ ಹಾಗೆ ಔ‍ಷಧಿ ಚೀಟಿಯನ್ನು ಬರೆಯುತ್ತೇವೆ. ಮಂಗಳೂರಿನಲ್ಲಿ ಒಬ್ಬ ವೈದ್ಯ ಬರೆದ ಔ‍ಷಧ ಚೀಟಿ ಜಗತ್ತಿನ ಮತ್ತು ದೇಶದ ಬೇರೆ ವೈದ್ಯರಿಗೂ ಓದುವಂತೆ ಇದ್ದು ರೋಗಿಯ ಶುಶ್ರೂಷೆ ಮಾಡುವಂತೆ ಇರಬೇಕು. ಒಂದು ವೇಳೆ ನಾನು ಕನ್ನಡದಲ್ಲಿ ಔಷಧ ಚೀಟಿ ಬರೆದು ಕೊಟ್ಟ ರೋಗಿಯು ಕೇರಳದಲ್ಲಿ ಅನಾರೋಗ್ಯ ಪೀಡಿತನಾದರೆ, ಆತನಿಗೆ ಕನ್ನಡ ಬಾರದ ಮಲಯಾಳಂ ವೈದ್ಯರು ರೋಗ ನಿರ್ಣಯ ಮಾಡಿ ಹೇಗೆ ಚಿಕಿತ್ಸೆ ನೀಡುತ್ತಾರೆ?. ಔ‍ಷಧ ಚೀಟಿ ಎಂದರೆ ಕೇವಲ ಭಾಷೆಯ ಭಾವನಾತ್ಮಕ ವಿಚಾರ ಅಲ್ಲ, ಅದು ರೋಗಿಗಳ ರೋಗ ನಿರ್ಣಯದ ದಾಖಲೆ ಕೂಡಾ ಆಗಿದೆ” ಎಂದು ಅವರು ಹೇಳಿದರು.

ಇದನ್ನೂಓದಿ:ಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ ಹೊಡೆಯಲಾಗಿದೆ ಎಂದ ಹೈಕೋರ್ಟ್‌

“ಅಷ್ಟೆ ಅಲ್ಲದೆ, ವೈದ್ಯರು ಹೇಗೆ ಔ‍ಷಧ ಚೀಟಿ ಬರೆಯಬೇಕು ಎಂದು ನಮಗೆ ವೈದ್ಯ ಪರಿಷತ್ತು ಆದೇಶಿಸುತ್ತದೆ. ಅದನ್ನು ವೈದ್ಯರು ಪಾಲಿಸಬೇಕಿದೆ. ಅದು ಬಿಟ್ಟು ಕನ್ನಡ ಪ್ರಾಧಿಕಾರ ಇದನ್ನು ಹೇಳುವ ಹಾಗೆಯೆ ಇಲ್ಲ. ಇತ್ತಿಚೆಗೆ ಆರೋಗ್ಯ ಸಚಿವರು ಕೂಡಾ ಇದನ್ನೇ ಹೇಳಿದ್ದಾರೆ. ಭಾಷೆ ತಳಮಟ್ಟದಿಂದ ಬೆಳೆಯುವುದಕ್ಕೆ ವೈದ್ಯರು ಆಯಾ ಭಾಷೆಗಳಲ್ಲಿ ಚೀಟಿ ಬರೆಯುವುದೇ ಮುಖ್ಯ ಕಾರಣ ಎಂದಾದರೆ ಅಭಿವೃದ್ಧಿ ಪ್ರಾಧಿಕಾರವು ಕೂಡ ಬೇಕಾಗಿಲ್ಲ ಅಲ್ಲವೆ. ಭಾಷೆ ಬೆಳೆಸುವ ಜವಾಬ್ದಾರಿಯನ್ನೂ ವೈದ್ಯರುಗಳಿಗೆ ಚೀಟಿ ಬರೆಯಲು ವಹಿಸಿಕೊಟ್ಟರಾಯಿತು” ಎಂದು ಅವರು ಹೇಳಿದರು.

“ಕನ್ನಡ ಬೆಳೆಯಬೇಕು, ಬೆಳೆಸಬೇಕು ಎಂಬ ಬಿಳಿಮಲೆ ಅವರ ಚಿಂತನೆಯ ಬಗ್ಗೆ ನನಗೆ ಸಮ್ಮತಿಯಿದೆ. ನಾನು ಅದರ ವಿರೋಧಿಯು ಅಲ್ಲ. ಆದರೆ ಅದನ್ನು ವೈದ್ಯರ ಮೇಲೆ ಹಾಕುವುದು ಸರಿಯಲ್ಲ. ಅದಕ್ಕಾಗಿ ಬೇರೆ ದಾರಿಯನ್ನು ಕನ್ನಡ ಪ್ರಾಧಿಕಾರ ಹುಡುಕಬೇಕು. ಈ ರಾಜ್ಯಕ್ಕೆ ಬಂದು ವೈದ್ಯಕೀಯ ಶಾಸ್ತ್ರ ಕಲಿಯುವ ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸುವ ಬಗ್ಗೆ ಪ್ರಾಧಿಕಾರ ಚಿಂತಿಸಲಿ. ಪ್ರೊಫೆಸರ್ ಬಿಳಿಮಲೆ ಅವರಲ್ಲಿ ಕನ್ನಡ ಕಲಿಸುವ ಇಂತಹ ಹಲವು ಮಾದರಿಗಳು ಇವೆ. ಇದರಲ್ಲಿ ಅವರು ತಜ್ಞರು ಕೂಡಾ ಆಗಿದ್ದಾರೆ” ಎಂದು ತಿಳಿಸಿದರು.

“ಬೇರೆ ರಾಜ್ಯದ ವಿದ್ಯಾರ್ಥಿಗಳು ಕನ್ನಡ ಕಲಿತು ರೋಗಿಗಳೊಂದಿಗೆ ಸಂವಹನ ನಡೆಸಿದರೆ ಅದು ಕನ್ನಡ ಕಟ್ಟುವ ಕೆಲಸ ಆಗಲಿದೆ. ಜೊತೆಗೆ ಕನ್ನಡದ ರೋಗಿಗಳಿಗೆ ಇದರಿಂದ ಲಾಭವೂ ಆಗಲಿದೆ. ಅಷ್ಟೆ ಅಲ್ಲದೆ, ವೈದ್ಯಕೀಯ ಸಾಹಿತ್ಯ ಬರೆಯುವರಿಗೆ ಪ್ರಾಧಿಕಾರ ಪ್ರೋತ್ಸಾಹ ನೀಡಿ ಅವರನ್ನು ಬೆಳೆಸಬೇಕಿದೆ. ಜೊತೆಗೆ ವೈದ್ಯಕೀಯ ಭಾಷೆಯಲ್ಲಿ ಇರುವ ಹಲವು ಪದಗಳನ್ನು ಕನ್ನಡೀಕರಣ ಮಾಡುವಲ್ಲಿ ಮತ್ತು ಅದನ್ನು ಕನ್ನಡಿಗರಿಗೆ ತಲುಪಿಸುವಲ್ಲಿ ಕೆಲಸವನ್ನು ಮಾಡಬೇಕಿದೆ. ಅದು ಬಿಟ್ಟು ವೈದ್ಯರ ಮೇಲೆ ಕನ್ನಡ ಉಳಿಸುವ ಭಾರ ಹಾಕುವುದು ಸರಿಯಲ್ಲ” ಎಂದು ಡಾಕ್ಟರ್ ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದರು.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...