Homeಮುಖಪುಟಕನ್ನಡದಲ್ಲಿ ಔ‍ಷಧ ಚೀಟಿ | ಪ್ರಾಧಿಕಾರದ ಪ್ರಸ್ತಾಪ 'ಅಸಂಬದ್ಧ ಮತ್ತು ಅನಗತ್ಯ': ಖ್ಯಾತ ವೈದ್ಯ ಶ್ರೀನಿವಾಸ...

ಕನ್ನಡದಲ್ಲಿ ಔ‍ಷಧ ಚೀಟಿ | ಪ್ರಾಧಿಕಾರದ ಪ್ರಸ್ತಾಪ ‘ಅಸಂಬದ್ಧ ಮತ್ತು ಅನಗತ್ಯ’: ಖ್ಯಾತ ವೈದ್ಯ ಶ್ರೀನಿವಾಸ ಕಕ್ಕಿಲ್ಲಾಯ ಅಸಮಾಧಾನ

- Advertisement -
- Advertisement -

ರಾಜ್ಯದ ವೈದ್ಯರುಗಳು ರೋಗಿಗಳಿಗೆ ನೀಡುವ ಔಷಧ ಚೀಟಿಗಳನ್ನು ಕನ್ನಡದಲ್ಲಿ ಬರೆಯಬೇಕು ಎನ್ನುವ ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋಷೋತ್ತಮ ಬಿಳಿಮಲೆ ಅವರ ಪ್ರಸ್ತಾಪಕ್ಕೆ ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ‘ಅಸಂಬದ್ಧ’ ಮತ್ತು ‘ಅನಗತ್ಯ’ ಪ್ರಸ್ತಾಪ ಎಂದು ಹೇಳಿದ್ದಾರೆ. ”ವೈದ್ಯರುಗಳಿಗೆ ರೋಗಿಗಳ ಶುಶ್ರೂಷೆ ಮಾಡುವುದು ಆದ್ಯ ಕರ್ತವ್ಯವಾಗಿದೆ, ಕನ್ನಡ ಬೆಳೆಸುವುದಲ್ಲ. ಒಂದು ವೇಳೆ ಕನ್ನಡ ಬೆಳೆಸುವುದು ವೈದ್ಯರುಗಳ ಕೆಲಸ ಎಂದು ಪ್ರಾಧಿಕಾರ ಹೇಳುವುದಾದರೆ, ಪ್ರಾಧಿಕಾರದಲ್ಲಿ ಕನ್ನಡ ಬೆಳೆಸುವ ಮತ್ತು ಉಳಿಸುವ ಯಾವುದೆ ಹೊಸ ಚಿಂತನೆ ಇಲ್ಲ ಎಂದರ್ಥ” ಎಂದು ಅವರು ಹೇಳಿದ್ದಾರೆ. ಕನ್ನಡದಲ್ಲಿ ಔ‍ಷಧ ಚೀಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕನ್ನಡ ಪ್ರಾಧಿಕಾರದ ಪ್ರಸ್ತಾಪದ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಡಾಕ್ಟರ್ ಶ್ರೀನಿವಾಸ ಕಕ್ಕಿಲ್ಲಾಯ ಅವರು, ಕನ್ನಡ ಬೆಳೆಸುವುದು ವೈದ್ಯರ ಕೆಲಸವಲ್ಲ ಎಂದು ಹೇಳಿದರು. “ನನಗೆ ಪ್ರೊಫೆಸರ್ ಬಿಳಿಮಲೆ ಮೇಲೆ ತುಂಬಾ ಗೌರವಿದೆ, ಅವರು ಮಾಡಿರುವ ಕೆಲಸಗಳ ಬಗ್ಗೆ ಹೆಮ್ಮೆಯಿದೆ. ಆದರೆ ಅವರ ಇಂತಹ ಸಲಹೆಗಳನ್ನು ನಾನು ಒಪ್ಪಬೇಕೆಂದಿಲ್ಲ. ಒಂದು ವೇಳೆ ಔ‍ಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆದರೆ ಅದು ಭಾರಿ ಗೊಂದಲಕ್ಕೆ ದಾರಿ ಮಾಡಿಕೊಡುತ್ತದೆ. ರೋಗಿಗಳಿಗೆ ಏನಾದರೂ ಹೆಚ್ಚು ಕಮ್ಮಿಯಾದರೆ, ಅದಕ್ಕೆ ಹೊಣೆ ಯಾರು” ಎಂದು ಕೇಳಿದರು.

“ಮೊದಲನೆಯದಾಗಿ ಈಗಾಗಲೆ ಲಕ್ಷಾಂತರ ಔಷಧಿ ಬ್ರಾಂಡ್‌ಗಳು ಮಾರುಕಟ್ಟೆಯಲ್ಲಿ ಇವೆ. ಔ‍ಷಧಗಳ ಹೆಸರಿನಲ್ಲಿ ಒಂದು ಅಕ್ಷರ ಬದಲಾದರೂ ಅದು ಬೇರೆಯೆ ಆಗಿಬಿಡುತ್ತದೆ. ಅಲ್ಲದೆ, ಕನ್ನಡದಲ್ಲಿ ಔಷದ ಬರೆದರೆ ಔಷಧ ಅಂಗಡಿಗಳಲ್ಲಿ ಔಷಧ ಕೊಡುವವರು ಕನ್ನಡಿಗರೆ ಆಗಿರುವುದಿಲ್ಲ. ಅದನ್ನು ಓದಲು ತಿಳಿಯದೆ ಮತ್ತೆ ನಮಗೆ ಕರೆ ಮಾಡಿ ಅದರ ಬಗ್ಗೆ ಕೇಳುತ್ತಾರೆ. ನಾವು ರೋಗಿಗಳನ್ನು ಬಿಟ್ಟು ಅವರಿಗೆ ಉತ್ತರಿಸುವುದೆ ಕೆಲಸ ಮಾಡಿಕೊಂಡಿರಲು ಸಾಧ್ಯವಿಲ್ಲ. ಕನ್ನಡ ಕಟ್ಟುವ ಕೆಲಸ ಎಂದರೆ ಇದಲ್ಲ” ಎಂದು ಅವರು ತಿಳಿಸಿದರು.

“ಜಗತ್ತುಈಗ ಕಿರಿದಾಗುತ್ತಿದೆ. ನಾವು ಆಧುನಿಕ ವೈದ್ಯರು ಜಗತ್ತಿನಾದ್ಯಂತ ವೈದ್ಯರು ಬರೆಯುವ ಹಾಗೆ ಔ‍ಷಧಿ ಚೀಟಿಯನ್ನು ಬರೆಯುತ್ತೇವೆ. ಮಂಗಳೂರಿನಲ್ಲಿ ಒಬ್ಬ ವೈದ್ಯ ಬರೆದ ಔ‍ಷಧ ಚೀಟಿ ಜಗತ್ತಿನ ಮತ್ತು ದೇಶದ ಬೇರೆ ವೈದ್ಯರಿಗೂ ಓದುವಂತೆ ಇದ್ದು ರೋಗಿಯ ಶುಶ್ರೂಷೆ ಮಾಡುವಂತೆ ಇರಬೇಕು. ಒಂದು ವೇಳೆ ನಾನು ಕನ್ನಡದಲ್ಲಿ ಔಷಧ ಚೀಟಿ ಬರೆದು ಕೊಟ್ಟ ರೋಗಿಯು ಕೇರಳದಲ್ಲಿ ಅನಾರೋಗ್ಯ ಪೀಡಿತನಾದರೆ, ಆತನಿಗೆ ಕನ್ನಡ ಬಾರದ ಮಲಯಾಳಂ ವೈದ್ಯರು ರೋಗ ನಿರ್ಣಯ ಮಾಡಿ ಹೇಗೆ ಚಿಕಿತ್ಸೆ ನೀಡುತ್ತಾರೆ?. ಔ‍ಷಧ ಚೀಟಿ ಎಂದರೆ ಕೇವಲ ಭಾಷೆಯ ಭಾವನಾತ್ಮಕ ವಿಚಾರ ಅಲ್ಲ, ಅದು ರೋಗಿಗಳ ರೋಗ ನಿರ್ಣಯದ ದಾಖಲೆ ಕೂಡಾ ಆಗಿದೆ” ಎಂದು ಅವರು ಹೇಳಿದರು.

ಇದನ್ನೂಓದಿ:ಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ ಹೊಡೆಯಲಾಗಿದೆ ಎಂದ ಹೈಕೋರ್ಟ್‌

“ಅಷ್ಟೆ ಅಲ್ಲದೆ, ವೈದ್ಯರು ಹೇಗೆ ಔ‍ಷಧ ಚೀಟಿ ಬರೆಯಬೇಕು ಎಂದು ನಮಗೆ ವೈದ್ಯ ಪರಿಷತ್ತು ಆದೇಶಿಸುತ್ತದೆ. ಅದನ್ನು ವೈದ್ಯರು ಪಾಲಿಸಬೇಕಿದೆ. ಅದು ಬಿಟ್ಟು ಕನ್ನಡ ಪ್ರಾಧಿಕಾರ ಇದನ್ನು ಹೇಳುವ ಹಾಗೆಯೆ ಇಲ್ಲ. ಇತ್ತಿಚೆಗೆ ಆರೋಗ್ಯ ಸಚಿವರು ಕೂಡಾ ಇದನ್ನೇ ಹೇಳಿದ್ದಾರೆ. ಭಾಷೆ ತಳಮಟ್ಟದಿಂದ ಬೆಳೆಯುವುದಕ್ಕೆ ವೈದ್ಯರು ಆಯಾ ಭಾಷೆಗಳಲ್ಲಿ ಚೀಟಿ ಬರೆಯುವುದೇ ಮುಖ್ಯ ಕಾರಣ ಎಂದಾದರೆ ಅಭಿವೃದ್ಧಿ ಪ್ರಾಧಿಕಾರವು ಕೂಡ ಬೇಕಾಗಿಲ್ಲ ಅಲ್ಲವೆ. ಭಾಷೆ ಬೆಳೆಸುವ ಜವಾಬ್ದಾರಿಯನ್ನೂ ವೈದ್ಯರುಗಳಿಗೆ ಚೀಟಿ ಬರೆಯಲು ವಹಿಸಿಕೊಟ್ಟರಾಯಿತು” ಎಂದು ಅವರು ಹೇಳಿದರು.

“ಕನ್ನಡ ಬೆಳೆಯಬೇಕು, ಬೆಳೆಸಬೇಕು ಎಂಬ ಬಿಳಿಮಲೆ ಅವರ ಚಿಂತನೆಯ ಬಗ್ಗೆ ನನಗೆ ಸಮ್ಮತಿಯಿದೆ. ನಾನು ಅದರ ವಿರೋಧಿಯು ಅಲ್ಲ. ಆದರೆ ಅದನ್ನು ವೈದ್ಯರ ಮೇಲೆ ಹಾಕುವುದು ಸರಿಯಲ್ಲ. ಅದಕ್ಕಾಗಿ ಬೇರೆ ದಾರಿಯನ್ನು ಕನ್ನಡ ಪ್ರಾಧಿಕಾರ ಹುಡುಕಬೇಕು. ಈ ರಾಜ್ಯಕ್ಕೆ ಬಂದು ವೈದ್ಯಕೀಯ ಶಾಸ್ತ್ರ ಕಲಿಯುವ ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸುವ ಬಗ್ಗೆ ಪ್ರಾಧಿಕಾರ ಚಿಂತಿಸಲಿ. ಪ್ರೊಫೆಸರ್ ಬಿಳಿಮಲೆ ಅವರಲ್ಲಿ ಕನ್ನಡ ಕಲಿಸುವ ಇಂತಹ ಹಲವು ಮಾದರಿಗಳು ಇವೆ. ಇದರಲ್ಲಿ ಅವರು ತಜ್ಞರು ಕೂಡಾ ಆಗಿದ್ದಾರೆ” ಎಂದು ತಿಳಿಸಿದರು.

“ಬೇರೆ ರಾಜ್ಯದ ವಿದ್ಯಾರ್ಥಿಗಳು ಕನ್ನಡ ಕಲಿತು ರೋಗಿಗಳೊಂದಿಗೆ ಸಂವಹನ ನಡೆಸಿದರೆ ಅದು ಕನ್ನಡ ಕಟ್ಟುವ ಕೆಲಸ ಆಗಲಿದೆ. ಜೊತೆಗೆ ಕನ್ನಡದ ರೋಗಿಗಳಿಗೆ ಇದರಿಂದ ಲಾಭವೂ ಆಗಲಿದೆ. ಅಷ್ಟೆ ಅಲ್ಲದೆ, ವೈದ್ಯಕೀಯ ಸಾಹಿತ್ಯ ಬರೆಯುವರಿಗೆ ಪ್ರಾಧಿಕಾರ ಪ್ರೋತ್ಸಾಹ ನೀಡಿ ಅವರನ್ನು ಬೆಳೆಸಬೇಕಿದೆ. ಜೊತೆಗೆ ವೈದ್ಯಕೀಯ ಭಾಷೆಯಲ್ಲಿ ಇರುವ ಹಲವು ಪದಗಳನ್ನು ಕನ್ನಡೀಕರಣ ಮಾಡುವಲ್ಲಿ ಮತ್ತು ಅದನ್ನು ಕನ್ನಡಿಗರಿಗೆ ತಲುಪಿಸುವಲ್ಲಿ ಕೆಲಸವನ್ನು ಮಾಡಬೇಕಿದೆ. ಅದು ಬಿಟ್ಟು ವೈದ್ಯರ ಮೇಲೆ ಕನ್ನಡ ಉಳಿಸುವ ಭಾರ ಹಾಕುವುದು ಸರಿಯಲ್ಲ” ಎಂದು ಡಾಕ್ಟರ್ ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದರು.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...