Homeಮುಖಪುಟಕನ್ನಡದಲ್ಲಿ ಔ‍ಷಧ ಚೀಟಿ | ಪ್ರಾಧಿಕಾರದ ಪ್ರಸ್ತಾಪ 'ಅಸಂಬದ್ಧ ಮತ್ತು ಅನಗತ್ಯ': ಖ್ಯಾತ ವೈದ್ಯ ಶ್ರೀನಿವಾಸ...

ಕನ್ನಡದಲ್ಲಿ ಔ‍ಷಧ ಚೀಟಿ | ಪ್ರಾಧಿಕಾರದ ಪ್ರಸ್ತಾಪ ‘ಅಸಂಬದ್ಧ ಮತ್ತು ಅನಗತ್ಯ’: ಖ್ಯಾತ ವೈದ್ಯ ಶ್ರೀನಿವಾಸ ಕಕ್ಕಿಲ್ಲಾಯ ಅಸಮಾಧಾನ

- Advertisement -
- Advertisement -

ರಾಜ್ಯದ ವೈದ್ಯರುಗಳು ರೋಗಿಗಳಿಗೆ ನೀಡುವ ಔಷಧ ಚೀಟಿಗಳನ್ನು ಕನ್ನಡದಲ್ಲಿ ಬರೆಯಬೇಕು ಎನ್ನುವ ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋಷೋತ್ತಮ ಬಿಳಿಮಲೆ ಅವರ ಪ್ರಸ್ತಾಪಕ್ಕೆ ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ‘ಅಸಂಬದ್ಧ’ ಮತ್ತು ‘ಅನಗತ್ಯ’ ಪ್ರಸ್ತಾಪ ಎಂದು ಹೇಳಿದ್ದಾರೆ. ”ವೈದ್ಯರುಗಳಿಗೆ ರೋಗಿಗಳ ಶುಶ್ರೂಷೆ ಮಾಡುವುದು ಆದ್ಯ ಕರ್ತವ್ಯವಾಗಿದೆ, ಕನ್ನಡ ಬೆಳೆಸುವುದಲ್ಲ. ಒಂದು ವೇಳೆ ಕನ್ನಡ ಬೆಳೆಸುವುದು ವೈದ್ಯರುಗಳ ಕೆಲಸ ಎಂದು ಪ್ರಾಧಿಕಾರ ಹೇಳುವುದಾದರೆ, ಪ್ರಾಧಿಕಾರದಲ್ಲಿ ಕನ್ನಡ ಬೆಳೆಸುವ ಮತ್ತು ಉಳಿಸುವ ಯಾವುದೆ ಹೊಸ ಚಿಂತನೆ ಇಲ್ಲ ಎಂದರ್ಥ” ಎಂದು ಅವರು ಹೇಳಿದ್ದಾರೆ. ಕನ್ನಡದಲ್ಲಿ ಔ‍ಷಧ ಚೀಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕನ್ನಡ ಪ್ರಾಧಿಕಾರದ ಪ್ರಸ್ತಾಪದ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಡಾಕ್ಟರ್ ಶ್ರೀನಿವಾಸ ಕಕ್ಕಿಲ್ಲಾಯ ಅವರು, ಕನ್ನಡ ಬೆಳೆಸುವುದು ವೈದ್ಯರ ಕೆಲಸವಲ್ಲ ಎಂದು ಹೇಳಿದರು. “ನನಗೆ ಪ್ರೊಫೆಸರ್ ಬಿಳಿಮಲೆ ಮೇಲೆ ತುಂಬಾ ಗೌರವಿದೆ, ಅವರು ಮಾಡಿರುವ ಕೆಲಸಗಳ ಬಗ್ಗೆ ಹೆಮ್ಮೆಯಿದೆ. ಆದರೆ ಅವರ ಇಂತಹ ಸಲಹೆಗಳನ್ನು ನಾನು ಒಪ್ಪಬೇಕೆಂದಿಲ್ಲ. ಒಂದು ವೇಳೆ ಔ‍ಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆದರೆ ಅದು ಭಾರಿ ಗೊಂದಲಕ್ಕೆ ದಾರಿ ಮಾಡಿಕೊಡುತ್ತದೆ. ರೋಗಿಗಳಿಗೆ ಏನಾದರೂ ಹೆಚ್ಚು ಕಮ್ಮಿಯಾದರೆ, ಅದಕ್ಕೆ ಹೊಣೆ ಯಾರು” ಎಂದು ಕೇಳಿದರು.

“ಮೊದಲನೆಯದಾಗಿ ಈಗಾಗಲೆ ಲಕ್ಷಾಂತರ ಔಷಧಿ ಬ್ರಾಂಡ್‌ಗಳು ಮಾರುಕಟ್ಟೆಯಲ್ಲಿ ಇವೆ. ಔ‍ಷಧಗಳ ಹೆಸರಿನಲ್ಲಿ ಒಂದು ಅಕ್ಷರ ಬದಲಾದರೂ ಅದು ಬೇರೆಯೆ ಆಗಿಬಿಡುತ್ತದೆ. ಅಲ್ಲದೆ, ಕನ್ನಡದಲ್ಲಿ ಔಷದ ಬರೆದರೆ ಔಷಧ ಅಂಗಡಿಗಳಲ್ಲಿ ಔಷಧ ಕೊಡುವವರು ಕನ್ನಡಿಗರೆ ಆಗಿರುವುದಿಲ್ಲ. ಅದನ್ನು ಓದಲು ತಿಳಿಯದೆ ಮತ್ತೆ ನಮಗೆ ಕರೆ ಮಾಡಿ ಅದರ ಬಗ್ಗೆ ಕೇಳುತ್ತಾರೆ. ನಾವು ರೋಗಿಗಳನ್ನು ಬಿಟ್ಟು ಅವರಿಗೆ ಉತ್ತರಿಸುವುದೆ ಕೆಲಸ ಮಾಡಿಕೊಂಡಿರಲು ಸಾಧ್ಯವಿಲ್ಲ. ಕನ್ನಡ ಕಟ್ಟುವ ಕೆಲಸ ಎಂದರೆ ಇದಲ್ಲ” ಎಂದು ಅವರು ತಿಳಿಸಿದರು.

“ಜಗತ್ತುಈಗ ಕಿರಿದಾಗುತ್ತಿದೆ. ನಾವು ಆಧುನಿಕ ವೈದ್ಯರು ಜಗತ್ತಿನಾದ್ಯಂತ ವೈದ್ಯರು ಬರೆಯುವ ಹಾಗೆ ಔ‍ಷಧಿ ಚೀಟಿಯನ್ನು ಬರೆಯುತ್ತೇವೆ. ಮಂಗಳೂರಿನಲ್ಲಿ ಒಬ್ಬ ವೈದ್ಯ ಬರೆದ ಔ‍ಷಧ ಚೀಟಿ ಜಗತ್ತಿನ ಮತ್ತು ದೇಶದ ಬೇರೆ ವೈದ್ಯರಿಗೂ ಓದುವಂತೆ ಇದ್ದು ರೋಗಿಯ ಶುಶ್ರೂಷೆ ಮಾಡುವಂತೆ ಇರಬೇಕು. ಒಂದು ವೇಳೆ ನಾನು ಕನ್ನಡದಲ್ಲಿ ಔಷಧ ಚೀಟಿ ಬರೆದು ಕೊಟ್ಟ ರೋಗಿಯು ಕೇರಳದಲ್ಲಿ ಅನಾರೋಗ್ಯ ಪೀಡಿತನಾದರೆ, ಆತನಿಗೆ ಕನ್ನಡ ಬಾರದ ಮಲಯಾಳಂ ವೈದ್ಯರು ರೋಗ ನಿರ್ಣಯ ಮಾಡಿ ಹೇಗೆ ಚಿಕಿತ್ಸೆ ನೀಡುತ್ತಾರೆ?. ಔ‍ಷಧ ಚೀಟಿ ಎಂದರೆ ಕೇವಲ ಭಾಷೆಯ ಭಾವನಾತ್ಮಕ ವಿಚಾರ ಅಲ್ಲ, ಅದು ರೋಗಿಗಳ ರೋಗ ನಿರ್ಣಯದ ದಾಖಲೆ ಕೂಡಾ ಆಗಿದೆ” ಎಂದು ಅವರು ಹೇಳಿದರು.

ಇದನ್ನೂಓದಿ:ಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ ಹೊಡೆಯಲಾಗಿದೆ ಎಂದ ಹೈಕೋರ್ಟ್‌

“ಅಷ್ಟೆ ಅಲ್ಲದೆ, ವೈದ್ಯರು ಹೇಗೆ ಔ‍ಷಧ ಚೀಟಿ ಬರೆಯಬೇಕು ಎಂದು ನಮಗೆ ವೈದ್ಯ ಪರಿಷತ್ತು ಆದೇಶಿಸುತ್ತದೆ. ಅದನ್ನು ವೈದ್ಯರು ಪಾಲಿಸಬೇಕಿದೆ. ಅದು ಬಿಟ್ಟು ಕನ್ನಡ ಪ್ರಾಧಿಕಾರ ಇದನ್ನು ಹೇಳುವ ಹಾಗೆಯೆ ಇಲ್ಲ. ಇತ್ತಿಚೆಗೆ ಆರೋಗ್ಯ ಸಚಿವರು ಕೂಡಾ ಇದನ್ನೇ ಹೇಳಿದ್ದಾರೆ. ಭಾಷೆ ತಳಮಟ್ಟದಿಂದ ಬೆಳೆಯುವುದಕ್ಕೆ ವೈದ್ಯರು ಆಯಾ ಭಾಷೆಗಳಲ್ಲಿ ಚೀಟಿ ಬರೆಯುವುದೇ ಮುಖ್ಯ ಕಾರಣ ಎಂದಾದರೆ ಅಭಿವೃದ್ಧಿ ಪ್ರಾಧಿಕಾರವು ಕೂಡ ಬೇಕಾಗಿಲ್ಲ ಅಲ್ಲವೆ. ಭಾಷೆ ಬೆಳೆಸುವ ಜವಾಬ್ದಾರಿಯನ್ನೂ ವೈದ್ಯರುಗಳಿಗೆ ಚೀಟಿ ಬರೆಯಲು ವಹಿಸಿಕೊಟ್ಟರಾಯಿತು” ಎಂದು ಅವರು ಹೇಳಿದರು.

“ಕನ್ನಡ ಬೆಳೆಯಬೇಕು, ಬೆಳೆಸಬೇಕು ಎಂಬ ಬಿಳಿಮಲೆ ಅವರ ಚಿಂತನೆಯ ಬಗ್ಗೆ ನನಗೆ ಸಮ್ಮತಿಯಿದೆ. ನಾನು ಅದರ ವಿರೋಧಿಯು ಅಲ್ಲ. ಆದರೆ ಅದನ್ನು ವೈದ್ಯರ ಮೇಲೆ ಹಾಕುವುದು ಸರಿಯಲ್ಲ. ಅದಕ್ಕಾಗಿ ಬೇರೆ ದಾರಿಯನ್ನು ಕನ್ನಡ ಪ್ರಾಧಿಕಾರ ಹುಡುಕಬೇಕು. ಈ ರಾಜ್ಯಕ್ಕೆ ಬಂದು ವೈದ್ಯಕೀಯ ಶಾಸ್ತ್ರ ಕಲಿಯುವ ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸುವ ಬಗ್ಗೆ ಪ್ರಾಧಿಕಾರ ಚಿಂತಿಸಲಿ. ಪ್ರೊಫೆಸರ್ ಬಿಳಿಮಲೆ ಅವರಲ್ಲಿ ಕನ್ನಡ ಕಲಿಸುವ ಇಂತಹ ಹಲವು ಮಾದರಿಗಳು ಇವೆ. ಇದರಲ್ಲಿ ಅವರು ತಜ್ಞರು ಕೂಡಾ ಆಗಿದ್ದಾರೆ” ಎಂದು ತಿಳಿಸಿದರು.

“ಬೇರೆ ರಾಜ್ಯದ ವಿದ್ಯಾರ್ಥಿಗಳು ಕನ್ನಡ ಕಲಿತು ರೋಗಿಗಳೊಂದಿಗೆ ಸಂವಹನ ನಡೆಸಿದರೆ ಅದು ಕನ್ನಡ ಕಟ್ಟುವ ಕೆಲಸ ಆಗಲಿದೆ. ಜೊತೆಗೆ ಕನ್ನಡದ ರೋಗಿಗಳಿಗೆ ಇದರಿಂದ ಲಾಭವೂ ಆಗಲಿದೆ. ಅಷ್ಟೆ ಅಲ್ಲದೆ, ವೈದ್ಯಕೀಯ ಸಾಹಿತ್ಯ ಬರೆಯುವರಿಗೆ ಪ್ರಾಧಿಕಾರ ಪ್ರೋತ್ಸಾಹ ನೀಡಿ ಅವರನ್ನು ಬೆಳೆಸಬೇಕಿದೆ. ಜೊತೆಗೆ ವೈದ್ಯಕೀಯ ಭಾಷೆಯಲ್ಲಿ ಇರುವ ಹಲವು ಪದಗಳನ್ನು ಕನ್ನಡೀಕರಣ ಮಾಡುವಲ್ಲಿ ಮತ್ತು ಅದನ್ನು ಕನ್ನಡಿಗರಿಗೆ ತಲುಪಿಸುವಲ್ಲಿ ಕೆಲಸವನ್ನು ಮಾಡಬೇಕಿದೆ. ಅದು ಬಿಟ್ಟು ವೈದ್ಯರ ಮೇಲೆ ಕನ್ನಡ ಉಳಿಸುವ ಭಾರ ಹಾಕುವುದು ಸರಿಯಲ್ಲ” ಎಂದು ಡಾಕ್ಟರ್ ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದರು.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...