Homeಮುಖಪುಟಉತ್ತರಪ್ರದೇಶ: ಮಾದಕ ದ್ರವ್ಯ ಕಳ್ಳಸಾಗಣೆ, ಜುಗಾರಿ,  ಭಿಕ್ಷೆ ಬೇಡುವುದನ್ನು 'ವೃತ್ತಿ' ಎಂದು ಪಟ್ಟಿ ಮಾಡಿದ ಪೊಲೀಸ್‌...

ಉತ್ತರಪ್ರದೇಶ: ಮಾದಕ ದ್ರವ್ಯ ಕಳ್ಳಸಾಗಣೆ, ಜುಗಾರಿ,  ಭಿಕ್ಷೆ ಬೇಡುವುದನ್ನು ‘ವೃತ್ತಿ’ ಎಂದು ಪಟ್ಟಿ ಮಾಡಿದ ಪೊಲೀಸ್‌ ಇಲಾಖೆಯ ಅಧಿಕೃತ ಅಪ್ಲಿಕೇಶನ್!

- Advertisement -
- Advertisement -

ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರಪ್ರದೇಶ ಸರಕಾರ ಮತ್ತೆ ಮುಜುಗರಕ್ಕೆ ಈಡಾಗಿದ್ದು, ಉತ್ತರಪ್ರದೇಶ ಪೊಲೀಸ್ ಮೊಬೈಲ್ ಅಪ್ಲಿಕೇಶನ್ UPCOPನಲ್ಲಿ ಬಾಡಿಗೆದಾರರ ಪರಿಶೀಲನೆಗಾಗಿ ವೃತ್ತಿ ಬಗ್ಗೆ ಪಟ್ಟಿ ಮಾಡಿದೆ. ಅವುಗಳಲ್ಲಿ ‘ಮಾದಕ ದ್ರವ್ಯಗಳ ಕಳ್ಳಸಾಗಣೆ’, ‘ಜುಗಾರಿ’,  ಮತ್ತು ‘ಭಿಕ್ಷೆ ಬೇಡುವುದನ್ನು ವೃತ್ತಿ ಎಂದು ಪಟ್ಟಿ ಮಾಡಲಾಗಿದೆ.

ಸಾಮಾಜಿಕ ಮಾಧ್ಯಮ ಬಳಕೆದಾರರು ಯುಪಿ ಪೋಲಿಸರ ಈ ವೃತ್ತಿ ಪಟ್ಟಿಯ ಬಗ್ಗೆ ಟೀಕಿಸಿದ್ದಾರೆ. ಅಧಿಕಾರಿಗಳ ಗಮನಕ್ಕೆ ತರುವ ಉದ್ದೇಶದಿಂದ ಈ ಕುರಿತ ಸ್ಕ್ರೀನ್‌ ಶಾಟ್‌ಗಳನ್ನು ಅಪ್‌ಲೋಡ್‌ ಮಾಡಿದ್ದಾರೆ. ಉತ್ತರಪ್ರದೇಶದ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ಸ್ಕ್ರೀನ್‌ಶಾಟ್‌ಗಳನ್ನು ಗಮನಿಸಿದ್ದು ಅಧಿಕಾರಿಗಳು ಈ ಕುರಿತು ಗಮನ ಹರಿಸಿದ್ದಾರೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶದ ಪೊಲೀಸರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ, ಇದನ್ನು ಸೂಚಿಸಿದ್ದಕ್ಕಾಗಿ ಧನ್ಯವಾದಗಳು. ಈ ಅಸಂಗತತೆಯನ್ನು ಸರಿಪಡಿಸಲು ನಾವು ಅಗತ್ಯ ಕ್ರಮವನ್ನು ಕೈಗೊಳ್ಳುತ್ತೇವೆ. ಇದು ಹೇಗೆ ಸಂಭವಿಸಿತು ಎಂಬುವುದರ ಕುರಿತು ಉತ್ತರಪ್ರದೇಶದ ಪೋಲಿಸ್‌ ಅಧಿಕಾರಿಗಳು ಇನ್ನೂ ಸ್ಪಷ್ಟವಾದ ವಿವರಣೆಯನ್ನು ನೀಡಿಲ್ಲ.

ಯುಪಿ ಪೋಲೀಸ್ ಅಪ್ಲಿಕೇಶನ್‌ನಲ್ಲಿ ಮಾಲಿಕರು ಬಾಡಿಗೆ ನೀಡುವಾಗ, ಬಾಡಿಗೆದಾರರ ಹಿನ್ನೆಲೆ ಪರಿಶೀಲನೆಗೆ ʼUPCOPʼ ಆ್ಯಪ್‌ ಬಳಸುತ್ತಾರೆ. ಅದಕ್ಕಾಗಿ ಸಿದ್ಧಪಡಿಸಲಾದ ಡೇಟಾಬೇಸ್‌ನ್ನು ಎನ್‌ಸಿಆರ್‌ಬಿ ಡೇಟಾದಿಂದ ಪಡೆಯಲಾಗಿದೆ.

UPCOP ಅಪ್ಲಿಕೇಶನ್‌ನ್ನು ದೂರುಗಳು, ವರದಿಗಳು ಮತ್ತು ಸಾಮಾನ್ಯ ಎಫ್‌ಐಆರ್‌ಗಳನ್ನು ಸಲ್ಲಿಸಲು ಬಳಸಲಾಗುತ್ತದೆ. ಅಧಿಕಾರಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, UPCOPನ್ನು ತಾಂತ್ರಿಕ ಸೇವಾ ವಿಭಾಗವು ಮೇಲ್ವಿಚಾರಣೆ ಮಾಡುತ್ತದೆ, ಇದು ADG ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿರುತ್ತದೆ. NCRB ಡೇಟಾ ಬದಲಾಗಿಲ್ಲ. ನಾವು ಈ ಬಗ್ಗೆ ಅಗತ್ಯ ಬದಲಾವಣೆಗಳನ್ನು ಸಹ ಬಯಸುತ್ತೇವೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶ ಸರ್ಕಾರವು ಅಭಿವೃದ್ಧಿಪಡಿಸಿದ UPCOP ಅಪ್ಲಿಕೇಶನನ್ನು ಕೆಲವು ವರ್ಷಗಳ ಹಿಂದೆ ಪೊಲೀಸ್ ಸಹಾಯಕ್ಕಾಗಿ ಆನ್‌ಲೈನ್ ಸೇವೆಗಳನ್ನು ಸುಗಮಗೊಳಿಸಲು ಪ್ರಾರಂಭಿಸಲಾಯಿತು. ಅಪ್ಲಿಕೇಶನ್ ಬಳಕೆದಾರರಿಗೆ ದೂರುಗಳು, ಎಫ್‌ಐಆರ್‌ಗಳು ಮತ್ತು ಸೈಬರ್‌ಕ್ರೈಮ್ ಪ್ರಕರಣಗಳನ್ನು ದಾಖಲಿಸಲು ಅನುಮತಿಸುತ್ತದೆ.

ಇದನ್ನು ಓದಿ: ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...