Homeಮುಖಪುಟಪಾಕಿಸ್ತಾನದಿಂದ ಕಾಶ್ಮೀರಕ್ಕೆ ಡ್ರಗ್ ಕಳ್ಳಸಾಗಣೆ: ಐವರು ಪೊಲೀಸ್ ಸೇರಿ 17 ಜನರ ಬಂಧನ

ಪಾಕಿಸ್ತಾನದಿಂದ ಕಾಶ್ಮೀರಕ್ಕೆ ಡ್ರಗ್ ಕಳ್ಳಸಾಗಣೆ: ಐವರು ಪೊಲೀಸ್ ಸೇರಿ 17 ಜನರ ಬಂಧನ

- Advertisement -
- Advertisement -

ಪಾಕಿಸ್ತಾನದಿಂದ ಕಳ್ಳ ಸಾಗಣೆ ಮಾಡಲಾಗುತ್ತಿರುವ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪೊಲೀಸರು, ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ 17 ಜನರನ್ನು ಬಂಧಿಸಿದ್ದಾರೆ. ಈ ಆರೋಪಿಗಳಲ್ಲಿ ಐವರೂ ಪೊಲೀಸರೂ ಸೇರಿದ್ದಾರೆ.

ಈ ದೊಡ್ಡ ಗುಂಪು ಗಡಿ ನಿಯಂತ್ರಣ ರೇಖೆಯ ಬಳಿಯಿಂದ ಮಾದಕವಸ್ತು ಕಳ್ಳಸಾಗಣೆಯಲ್ಲಿ ತೊಡಗಿತ್ತು. ನಂತರ ಕಾಶ್ಮೀರದ ವಿವಿಧ ಭಾಗಗಳಿಗೆ ಡ್ರಗ್ ಸರಬರಾಜು ಮಾಡುತ್ತಿತ್ತು. ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್ ಮೂಲಕ ಪಾಕಿಸ್ತಾನದಿಂದ ಡ್ರಗ್ಸ್ ತರಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಪ್ರಮುಖ ಮಾದಕ ದ್ರವ್ಯಗಳ ಘಟಕವನ್ನು ನಾವು ಭೇದಿಸಿದ್ದೇವೆ. 17 ಜನರನ್ನು ಬಂಧಿಸಲಾಗಿದೆ – ಐವರು ಪೊಲೀಸರು, ಅಂಗಡಿಯವರು, ರಾಜಕೀಯ ಕಾರ್ಯಕರ್ತರು ಮತ್ತು ಗುತ್ತಿಗೆದಾರ ಇದರಲ್ಲಿ ಸೇರಿದ್ದಾರೆ” ಎಂದು ಕುಪ್ವಾರದ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಯುಗಲ್ ಕುಮಾರ್ ಮನ್ಹಾಸ್ ವಿವರಿಸಿದ್ದಾರೆ. “ಡ್ರಗ್‌ ಪಾಕಿಸ್ತಾನದಿಂದ ಸರಬರಾಜಾಗುತ್ತಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿರುವ ಕೆರಾನ್‌ನ ನಿವಾಸಿ ಶಾಕಿರ್ ಅಲಿ ಖಾನ್, ಕೆರಾನ್‌ನಲ್ಲಿ ವಾಸಿಸುತ್ತಿರುವ ತನ್ನ ಮಗ ತಮ್ಹೀದ್ ಅಹ್ಮದ್‌ಗೆ ಮಾದಕ ದ್ರವ್ಯಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಎಸ್‌ಎಸ್‌ಪಿ ಮಾಹಿತಿ ನೀಡಿದ್ದಾರೆ.

ಕುಪ್ವಾರ ಪಟ್ಟಣ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಕೆಲವು ಡ್ರಗ್ ಪ್ಯಾಡ್ಲರ್‌ಗಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾದಕವಸ್ತು ಕಳ್ಳಸಾಗಣೆಯಲ್ಲಿ ತೊಡಗಿರುವ ದೊಡ್ಡ ಜಾಲವು ತನಿಖೆಯ ವೇಳೆ ಪತ್ತೆಯಾಗಿದೆ ಎಂದಿದ್ದಾರೆ.

ಆರೋಪಿಯಿಂದ ಈವರೆಗೆ ಎರಡು ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಘಟಕವು ಐದು ಕೆಜಿ ಹೆರಾಯಿನ್‌ ಪಡೆದಿತ್ತು” ಎಂದು ಎಸ್ಎಸ್ಪಿ ಮಾಹಿತಿ ನೀಡಿದ್ದಾರೆ.

ಈ ವರ್ಷ ಕಾಶ್ಮೀರದ ಗಡಿ ಜಿಲ್ಲೆಯಲ್ಲಿ 161 ಜನರ ವಿರುದ್ಧ 85 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡ್ರಗ್ಸ್ ದಂಧೆ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಗಡಿ ನಿಯಂತ್ರಣ ರೇಖೆಯ ಬಳಿ ನಿಯೋಜಿಸಲಾದ ಭದ್ರತಾ ಪಡೆಗಳ ಕೆಲವು ಅಧಿಕಾರಿಗಳೂ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆಗೆ ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ರಾಷ್ಟ್ರೀಯ ತನಿಖಾ ಸಂಸ್ಥೆಯು ಕುಪ್ವಾರಾ ಜಿಲ್ಲೆಯ ಹಂದ್ವಾರಾ ಪ್ರದೇಶದಲ್ಲಿ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಲಷ್ಕರ್-ಎ-ತೈಬಾದ ಉಗ್ರಗಾಮಿ ಗುಂಪುಗೆ ಸಂಪರ್ಕ ಹೊಂದಿರುವ ಗಡಿ ಭದ್ರತಾ ಪಡೆ ಅಧಿಕಾರಿಯನ್ನು ಬಂಧಿಸಿತ್ತು.

ಬಿಎಸ್‌ಎಫ್ ಸಬ್ ಇನ್ಸ್‌ಪೆಕ್ಟರ್ ರೋಮೇಶ್ ಕುಮಾರ್ ಅವರಿಂದ ಎನ್‌ಐಎ ₹ 91 ಲಕ್ಷ ನಗದು ವಶಪಡಿಸಿಕೊಂಡಿತ್ತು. ಈ ನಗದು ಮಾದಕವಸ್ತು ಕಳ್ಳಸಾಗಣೆಯಿಂದ ಬಂದ ಹಣದ ಭಾಗವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...