Homeಮುಖಪುಟಪಾಕಿಸ್ತಾನದಿಂದ ಕಾಶ್ಮೀರಕ್ಕೆ ಡ್ರಗ್ ಕಳ್ಳಸಾಗಣೆ: ಐವರು ಪೊಲೀಸ್ ಸೇರಿ 17 ಜನರ ಬಂಧನ

ಪಾಕಿಸ್ತಾನದಿಂದ ಕಾಶ್ಮೀರಕ್ಕೆ ಡ್ರಗ್ ಕಳ್ಳಸಾಗಣೆ: ಐವರು ಪೊಲೀಸ್ ಸೇರಿ 17 ಜನರ ಬಂಧನ

- Advertisement -
- Advertisement -

ಪಾಕಿಸ್ತಾನದಿಂದ ಕಳ್ಳ ಸಾಗಣೆ ಮಾಡಲಾಗುತ್ತಿರುವ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪೊಲೀಸರು, ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ 17 ಜನರನ್ನು ಬಂಧಿಸಿದ್ದಾರೆ. ಈ ಆರೋಪಿಗಳಲ್ಲಿ ಐವರೂ ಪೊಲೀಸರೂ ಸೇರಿದ್ದಾರೆ.

ಈ ದೊಡ್ಡ ಗುಂಪು ಗಡಿ ನಿಯಂತ್ರಣ ರೇಖೆಯ ಬಳಿಯಿಂದ ಮಾದಕವಸ್ತು ಕಳ್ಳಸಾಗಣೆಯಲ್ಲಿ ತೊಡಗಿತ್ತು. ನಂತರ ಕಾಶ್ಮೀರದ ವಿವಿಧ ಭಾಗಗಳಿಗೆ ಡ್ರಗ್ ಸರಬರಾಜು ಮಾಡುತ್ತಿತ್ತು. ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್ ಮೂಲಕ ಪಾಕಿಸ್ತಾನದಿಂದ ಡ್ರಗ್ಸ್ ತರಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಪ್ರಮುಖ ಮಾದಕ ದ್ರವ್ಯಗಳ ಘಟಕವನ್ನು ನಾವು ಭೇದಿಸಿದ್ದೇವೆ. 17 ಜನರನ್ನು ಬಂಧಿಸಲಾಗಿದೆ – ಐವರು ಪೊಲೀಸರು, ಅಂಗಡಿಯವರು, ರಾಜಕೀಯ ಕಾರ್ಯಕರ್ತರು ಮತ್ತು ಗುತ್ತಿಗೆದಾರ ಇದರಲ್ಲಿ ಸೇರಿದ್ದಾರೆ” ಎಂದು ಕುಪ್ವಾರದ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಯುಗಲ್ ಕುಮಾರ್ ಮನ್ಹಾಸ್ ವಿವರಿಸಿದ್ದಾರೆ. “ಡ್ರಗ್‌ ಪಾಕಿಸ್ತಾನದಿಂದ ಸರಬರಾಜಾಗುತ್ತಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿರುವ ಕೆರಾನ್‌ನ ನಿವಾಸಿ ಶಾಕಿರ್ ಅಲಿ ಖಾನ್, ಕೆರಾನ್‌ನಲ್ಲಿ ವಾಸಿಸುತ್ತಿರುವ ತನ್ನ ಮಗ ತಮ್ಹೀದ್ ಅಹ್ಮದ್‌ಗೆ ಮಾದಕ ದ್ರವ್ಯಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಎಸ್‌ಎಸ್‌ಪಿ ಮಾಹಿತಿ ನೀಡಿದ್ದಾರೆ.

ಕುಪ್ವಾರ ಪಟ್ಟಣ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಕೆಲವು ಡ್ರಗ್ ಪ್ಯಾಡ್ಲರ್‌ಗಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾದಕವಸ್ತು ಕಳ್ಳಸಾಗಣೆಯಲ್ಲಿ ತೊಡಗಿರುವ ದೊಡ್ಡ ಜಾಲವು ತನಿಖೆಯ ವೇಳೆ ಪತ್ತೆಯಾಗಿದೆ ಎಂದಿದ್ದಾರೆ.

ಆರೋಪಿಯಿಂದ ಈವರೆಗೆ ಎರಡು ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಘಟಕವು ಐದು ಕೆಜಿ ಹೆರಾಯಿನ್‌ ಪಡೆದಿತ್ತು” ಎಂದು ಎಸ್ಎಸ್ಪಿ ಮಾಹಿತಿ ನೀಡಿದ್ದಾರೆ.

ಈ ವರ್ಷ ಕಾಶ್ಮೀರದ ಗಡಿ ಜಿಲ್ಲೆಯಲ್ಲಿ 161 ಜನರ ವಿರುದ್ಧ 85 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡ್ರಗ್ಸ್ ದಂಧೆ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಗಡಿ ನಿಯಂತ್ರಣ ರೇಖೆಯ ಬಳಿ ನಿಯೋಜಿಸಲಾದ ಭದ್ರತಾ ಪಡೆಗಳ ಕೆಲವು ಅಧಿಕಾರಿಗಳೂ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆಗೆ ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ರಾಷ್ಟ್ರೀಯ ತನಿಖಾ ಸಂಸ್ಥೆಯು ಕುಪ್ವಾರಾ ಜಿಲ್ಲೆಯ ಹಂದ್ವಾರಾ ಪ್ರದೇಶದಲ್ಲಿ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಲಷ್ಕರ್-ಎ-ತೈಬಾದ ಉಗ್ರಗಾಮಿ ಗುಂಪುಗೆ ಸಂಪರ್ಕ ಹೊಂದಿರುವ ಗಡಿ ಭದ್ರತಾ ಪಡೆ ಅಧಿಕಾರಿಯನ್ನು ಬಂಧಿಸಿತ್ತು.

ಬಿಎಸ್‌ಎಫ್ ಸಬ್ ಇನ್ಸ್‌ಪೆಕ್ಟರ್ ರೋಮೇಶ್ ಕುಮಾರ್ ಅವರಿಂದ ಎನ್‌ಐಎ ₹ 91 ಲಕ್ಷ ನಗದು ವಶಪಡಿಸಿಕೊಂಡಿತ್ತು. ಈ ನಗದು ಮಾದಕವಸ್ತು ಕಳ್ಳಸಾಗಣೆಯಿಂದ ಬಂದ ಹಣದ ಭಾಗವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....