Homeಮುಖಪುಟಪಾಕಿಸ್ತಾನದಿಂದ ಕಾಶ್ಮೀರಕ್ಕೆ ಡ್ರಗ್ ಕಳ್ಳಸಾಗಣೆ: ಐವರು ಪೊಲೀಸ್ ಸೇರಿ 17 ಜನರ ಬಂಧನ

ಪಾಕಿಸ್ತಾನದಿಂದ ಕಾಶ್ಮೀರಕ್ಕೆ ಡ್ರಗ್ ಕಳ್ಳಸಾಗಣೆ: ಐವರು ಪೊಲೀಸ್ ಸೇರಿ 17 ಜನರ ಬಂಧನ

- Advertisement -
- Advertisement -

ಪಾಕಿಸ್ತಾನದಿಂದ ಕಳ್ಳ ಸಾಗಣೆ ಮಾಡಲಾಗುತ್ತಿರುವ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪೊಲೀಸರು, ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ 17 ಜನರನ್ನು ಬಂಧಿಸಿದ್ದಾರೆ. ಈ ಆರೋಪಿಗಳಲ್ಲಿ ಐವರೂ ಪೊಲೀಸರೂ ಸೇರಿದ್ದಾರೆ.

ಈ ದೊಡ್ಡ ಗುಂಪು ಗಡಿ ನಿಯಂತ್ರಣ ರೇಖೆಯ ಬಳಿಯಿಂದ ಮಾದಕವಸ್ತು ಕಳ್ಳಸಾಗಣೆಯಲ್ಲಿ ತೊಡಗಿತ್ತು. ನಂತರ ಕಾಶ್ಮೀರದ ವಿವಿಧ ಭಾಗಗಳಿಗೆ ಡ್ರಗ್ ಸರಬರಾಜು ಮಾಡುತ್ತಿತ್ತು. ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್ ಮೂಲಕ ಪಾಕಿಸ್ತಾನದಿಂದ ಡ್ರಗ್ಸ್ ತರಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಪ್ರಮುಖ ಮಾದಕ ದ್ರವ್ಯಗಳ ಘಟಕವನ್ನು ನಾವು ಭೇದಿಸಿದ್ದೇವೆ. 17 ಜನರನ್ನು ಬಂಧಿಸಲಾಗಿದೆ – ಐವರು ಪೊಲೀಸರು, ಅಂಗಡಿಯವರು, ರಾಜಕೀಯ ಕಾರ್ಯಕರ್ತರು ಮತ್ತು ಗುತ್ತಿಗೆದಾರ ಇದರಲ್ಲಿ ಸೇರಿದ್ದಾರೆ” ಎಂದು ಕುಪ್ವಾರದ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಯುಗಲ್ ಕುಮಾರ್ ಮನ್ಹಾಸ್ ವಿವರಿಸಿದ್ದಾರೆ. “ಡ್ರಗ್‌ ಪಾಕಿಸ್ತಾನದಿಂದ ಸರಬರಾಜಾಗುತ್ತಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿರುವ ಕೆರಾನ್‌ನ ನಿವಾಸಿ ಶಾಕಿರ್ ಅಲಿ ಖಾನ್, ಕೆರಾನ್‌ನಲ್ಲಿ ವಾಸಿಸುತ್ತಿರುವ ತನ್ನ ಮಗ ತಮ್ಹೀದ್ ಅಹ್ಮದ್‌ಗೆ ಮಾದಕ ದ್ರವ್ಯಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಎಸ್‌ಎಸ್‌ಪಿ ಮಾಹಿತಿ ನೀಡಿದ್ದಾರೆ.

ಕುಪ್ವಾರ ಪಟ್ಟಣ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಕೆಲವು ಡ್ರಗ್ ಪ್ಯಾಡ್ಲರ್‌ಗಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾದಕವಸ್ತು ಕಳ್ಳಸಾಗಣೆಯಲ್ಲಿ ತೊಡಗಿರುವ ದೊಡ್ಡ ಜಾಲವು ತನಿಖೆಯ ವೇಳೆ ಪತ್ತೆಯಾಗಿದೆ ಎಂದಿದ್ದಾರೆ.

ಆರೋಪಿಯಿಂದ ಈವರೆಗೆ ಎರಡು ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಘಟಕವು ಐದು ಕೆಜಿ ಹೆರಾಯಿನ್‌ ಪಡೆದಿತ್ತು” ಎಂದು ಎಸ್ಎಸ್ಪಿ ಮಾಹಿತಿ ನೀಡಿದ್ದಾರೆ.

ಈ ವರ್ಷ ಕಾಶ್ಮೀರದ ಗಡಿ ಜಿಲ್ಲೆಯಲ್ಲಿ 161 ಜನರ ವಿರುದ್ಧ 85 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡ್ರಗ್ಸ್ ದಂಧೆ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಗಡಿ ನಿಯಂತ್ರಣ ರೇಖೆಯ ಬಳಿ ನಿಯೋಜಿಸಲಾದ ಭದ್ರತಾ ಪಡೆಗಳ ಕೆಲವು ಅಧಿಕಾರಿಗಳೂ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆಗೆ ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ರಾಷ್ಟ್ರೀಯ ತನಿಖಾ ಸಂಸ್ಥೆಯು ಕುಪ್ವಾರಾ ಜಿಲ್ಲೆಯ ಹಂದ್ವಾರಾ ಪ್ರದೇಶದಲ್ಲಿ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಲಷ್ಕರ್-ಎ-ತೈಬಾದ ಉಗ್ರಗಾಮಿ ಗುಂಪುಗೆ ಸಂಪರ್ಕ ಹೊಂದಿರುವ ಗಡಿ ಭದ್ರತಾ ಪಡೆ ಅಧಿಕಾರಿಯನ್ನು ಬಂಧಿಸಿತ್ತು.

ಬಿಎಸ್‌ಎಫ್ ಸಬ್ ಇನ್ಸ್‌ಪೆಕ್ಟರ್ ರೋಮೇಶ್ ಕುಮಾರ್ ಅವರಿಂದ ಎನ್‌ಐಎ ₹ 91 ಲಕ್ಷ ನಗದು ವಶಪಡಿಸಿಕೊಂಡಿತ್ತು. ಈ ನಗದು ಮಾದಕವಸ್ತು ಕಳ್ಳಸಾಗಣೆಯಿಂದ ಬಂದ ಹಣದ ಭಾಗವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...