Homeಮುಖಪುಟಡ್ರಗ್ಸ್ ಕೇಸ್: ನಟಿ ಅನನ್ಯ ಪಾಂಡೆಯ ಲ್ಯಾಪ್‌ಟಾಪ್, ಮೊಬೈಲ್ ಎನ್‌ಸಿಬಿ ವಶಕ್ಕೆ

ಡ್ರಗ್ಸ್ ಕೇಸ್: ನಟಿ ಅನನ್ಯ ಪಾಂಡೆಯ ಲ್ಯಾಪ್‌ಟಾಪ್, ಮೊಬೈಲ್ ಎನ್‌ಸಿಬಿ ವಶಕ್ಕೆ

- Advertisement -
- Advertisement -

ಮುಂಬೈ ಡ್ರಗ್ಸ್ ಕೇಸ್‌ಗೆ ಸಂಬಂಧಿಸಿದಂತೆ 22 ವರ್ಷದ ಬಾಲಿವುಡ್ ನಟಿ ಅನನ್ಯ ಪಾಂಡೆಯವರ ಮುಂಬೈ ಮನೆಯ ಮೇಲೆ ಇಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದೆ. ದಾಳಿಯಲ್ಲಿ ನಟಿಯ ಲ್ಯಾಪ್ ಟಾಪ್ ಮತ್ತು ಮೊಬೈಲ್ ಫೋನ್ ಎನ್‌ಸಿಬಿ ವಶಪಡಿಸಿಕೊಂಡಿದೆ.

ಈ ತಿಂಗಳ ಆರಂಭದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್‌ ಮಗ ಆರ್ಯನ್ ಖಾನ್ ಮತ್ತು ಇತರರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಬಂಧಿಸಿದ್ದಾರೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಟಿಗೆ ಸಮನ್ಸ್ ನೀಡಿದ್ದರಿಂದ ಅನನ್ಯ ಪಾಂಡೆ ತನ್ನ ತಂದೆ ನಟ ಚಂಕಿ ಪಾಂಡೆಯೊಂದಿಗೆ ಎನ್‌ಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.

ಪ್ರಕರಣದಲ್ಲಿ ಬಂಧಿತ ಆರೋಪಿ ಆರ್ಯನ್ ಖಾನ್‌ ಅವರ ವಾಟ್ಯಾಪ್‌ ಚಾಟ್‌ಗಳಲ್ಲಿ ನಟಿಯೊಂದಿಗೆ ಡ್ರಗ್ಸ್ ಕುರಿತ ಚರ್ಚೆ ನಡೆದಿವೆ ಎಂದು ವರದಿಗಳು ಬಂದಿದ್ದವು. ಆದರೆ, ಆರ್ಯನ್ ಆನ್ ಪ್ರಕರಣದಲ್ಲಿ ನಟಿಯ   ಪಾತ್ರವಿದೆಯೇ ಎಂಬ ಬಗ್ಗೆ NCB ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಮಗ ಆರ್ಯನ್ ಖಾನ್‌ರನ್ನು ಭೇಟಿಯಾದ ನಟ ಶಾರುಖ್ ಖಾನ್‌

 

ಎರಡು ಗಂಟೆಗಳ ಕಾಲ ನಟಿ ಅನನ್ಯ ಪಾಂಡೆಯವರನ್ನು ಪ್ರಶ್ನಿಸಿರುವ ಎನ್‌ಸಿಬಿ ಅಧಿಕಾರಿಗಳು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಹೇಳಿಕೆಗಳನ್ನು ದಾಖಲಿಸಬೇಕಿರುವುದರಿಂದ ಶುಕ್ರವಾರ (ಅ.22) ಬೆಳಿಗ್ಗೆ 11 ಗಂಟೆಗೆ ಮತ್ತೆ ಕಚೇರಿಗೆ ಹಾಜರಾಗುವಂತೆ ತಿಳಿಸಿದೆ. ಡ್ರಗ್ಸ್ ಪ್ರಕರಣದಲ್ಲಿ ಆಕೆ ಆರೋಪಿಯಲ್ಲ. ವಿಚಾರಣೆಗಾಗಿ ಮಾತ್ರ ಆಕೆಯನ್ನು ಕರೆಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಅನನ್ಯ ಪಾಂಡೆ ಮತ್ತು ಆರ್ಯನ್ ಖಾನ್  ಕಾಮನ್ ಫ್ರೆಂಡ್ಸ್ ಸರ್ಕಲ್‌ ಹೊಂದಿದ್ದಾರೆ. ಅನನ್ಯ ಮತ್ತು ಆರ್ಯನ್ ಸಹೋದರಿ ಸುಹಾನಾ ಉತ್ತಮ ಸ್ನೇಹಿತರಾಗಿದ್ದಾರೆ. ಅನನ್ಯ ಪಾಂಡೆ 2019 ರಲ್ಲಿ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ. ಈಕೆ  ಬಾಲಿವುಡ್ ನಟ ಚುಂಕಿ ಪಾಂಡೆ ಮತ್ತು ಭಾವನಾ ಪಾಂಡೆ ಅವರ ಪುತ್ರಿ.

Aryan Khan- Suhana Khan की करीबी दोस्त हैं Ananya Pandey, ये तस्वीरें हैं सबूत - Bollywood News AajTak

ಅನನ್ಯ ಪಾಂಡೆ 2019ರಲ್ಲಿ ತೆರೆಕಂಡ ‘ಸ್ಟೂಡೆಂಟ್​ ಆಫ್​ ದಿ ಇಯರ್​ 2’ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟವರಿಗೆ ಮೊದಲ ಸಿನಿಮಾದಲ್ಲೇ ಫಿಲ್ಮ್​ ಫೇರ್​ ಪ್ರಶಸ್ತಿ ದಕ್ಕಿತ್ತು. ನಂತರ ಕಾರ್ತಿಕ್ ಆರ್ಯನ್, ಭೂಮಿ ಪಡ್ನೇಕರ್‌ ಜೊತೆಗೆ ‘ಪತಿ ಪತ್ನಿ ಔರ್​ ವೋ’ ಚಿತ್ರದಲ್ಲಿ ನಟಿಸಿದ್ದರು. ‘ಖಾಲಿ ಪೀಲಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಅಕ್ಟೋಬರ್ 2 ರಂದು ಮುಂಬೈನ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದ ನಂತರ ಆರ್ಯನ್ ಖಾನ್ ಬಂಧನಕ್ಕೆ ಒಳಗಾಗಿದ್ದರು. ಆರ್ಯನ್ ಖಾನ್ ಮತ್ತು ಇನ್ನಿಬ್ಬರಿಗೆ ಡ್ರಗ್ ಪ್ರಕರಣದಲ್ಲಿ ಜಾಮೀನು ನೀಡಲು ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಜಾಮೀನು ನಿರಾಕರಿಸಿರುವುದರ ವಿರುದ್ಧ ಆರ್ಯನ್ ಖಾನ್‌ ಬಾ೦ಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ: ಪೇಪರ್‌ವರ್ಕ್‌ಗಾಗಿ ನಟ ಶಾರುಖ್ ಖಾನ್ ಮನೆಗೆ ಎನ್‌ಸಿಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...