Homeಮುಖಪುಟಡ್ರಗ್ಸ್ ಕೇಸ್: ನಟಿ ಅನನ್ಯ ಪಾಂಡೆಯ ಲ್ಯಾಪ್‌ಟಾಪ್, ಮೊಬೈಲ್ ಎನ್‌ಸಿಬಿ ವಶಕ್ಕೆ

ಡ್ರಗ್ಸ್ ಕೇಸ್: ನಟಿ ಅನನ್ಯ ಪಾಂಡೆಯ ಲ್ಯಾಪ್‌ಟಾಪ್, ಮೊಬೈಲ್ ಎನ್‌ಸಿಬಿ ವಶಕ್ಕೆ

- Advertisement -
- Advertisement -

ಮುಂಬೈ ಡ್ರಗ್ಸ್ ಕೇಸ್‌ಗೆ ಸಂಬಂಧಿಸಿದಂತೆ 22 ವರ್ಷದ ಬಾಲಿವುಡ್ ನಟಿ ಅನನ್ಯ ಪಾಂಡೆಯವರ ಮುಂಬೈ ಮನೆಯ ಮೇಲೆ ಇಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದೆ. ದಾಳಿಯಲ್ಲಿ ನಟಿಯ ಲ್ಯಾಪ್ ಟಾಪ್ ಮತ್ತು ಮೊಬೈಲ್ ಫೋನ್ ಎನ್‌ಸಿಬಿ ವಶಪಡಿಸಿಕೊಂಡಿದೆ.

ಈ ತಿಂಗಳ ಆರಂಭದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್‌ ಮಗ ಆರ್ಯನ್ ಖಾನ್ ಮತ್ತು ಇತರರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಬಂಧಿಸಿದ್ದಾರೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಟಿಗೆ ಸಮನ್ಸ್ ನೀಡಿದ್ದರಿಂದ ಅನನ್ಯ ಪಾಂಡೆ ತನ್ನ ತಂದೆ ನಟ ಚಂಕಿ ಪಾಂಡೆಯೊಂದಿಗೆ ಎನ್‌ಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.

ಪ್ರಕರಣದಲ್ಲಿ ಬಂಧಿತ ಆರೋಪಿ ಆರ್ಯನ್ ಖಾನ್‌ ಅವರ ವಾಟ್ಯಾಪ್‌ ಚಾಟ್‌ಗಳಲ್ಲಿ ನಟಿಯೊಂದಿಗೆ ಡ್ರಗ್ಸ್ ಕುರಿತ ಚರ್ಚೆ ನಡೆದಿವೆ ಎಂದು ವರದಿಗಳು ಬಂದಿದ್ದವು. ಆದರೆ, ಆರ್ಯನ್ ಆನ್ ಪ್ರಕರಣದಲ್ಲಿ ನಟಿಯ   ಪಾತ್ರವಿದೆಯೇ ಎಂಬ ಬಗ್ಗೆ NCB ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಮಗ ಆರ್ಯನ್ ಖಾನ್‌ರನ್ನು ಭೇಟಿಯಾದ ನಟ ಶಾರುಖ್ ಖಾನ್‌

 

ಎರಡು ಗಂಟೆಗಳ ಕಾಲ ನಟಿ ಅನನ್ಯ ಪಾಂಡೆಯವರನ್ನು ಪ್ರಶ್ನಿಸಿರುವ ಎನ್‌ಸಿಬಿ ಅಧಿಕಾರಿಗಳು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಹೇಳಿಕೆಗಳನ್ನು ದಾಖಲಿಸಬೇಕಿರುವುದರಿಂದ ಶುಕ್ರವಾರ (ಅ.22) ಬೆಳಿಗ್ಗೆ 11 ಗಂಟೆಗೆ ಮತ್ತೆ ಕಚೇರಿಗೆ ಹಾಜರಾಗುವಂತೆ ತಿಳಿಸಿದೆ. ಡ್ರಗ್ಸ್ ಪ್ರಕರಣದಲ್ಲಿ ಆಕೆ ಆರೋಪಿಯಲ್ಲ. ವಿಚಾರಣೆಗಾಗಿ ಮಾತ್ರ ಆಕೆಯನ್ನು ಕರೆಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಅನನ್ಯ ಪಾಂಡೆ ಮತ್ತು ಆರ್ಯನ್ ಖಾನ್  ಕಾಮನ್ ಫ್ರೆಂಡ್ಸ್ ಸರ್ಕಲ್‌ ಹೊಂದಿದ್ದಾರೆ. ಅನನ್ಯ ಮತ್ತು ಆರ್ಯನ್ ಸಹೋದರಿ ಸುಹಾನಾ ಉತ್ತಮ ಸ್ನೇಹಿತರಾಗಿದ್ದಾರೆ. ಅನನ್ಯ ಪಾಂಡೆ 2019 ರಲ್ಲಿ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ. ಈಕೆ  ಬಾಲಿವುಡ್ ನಟ ಚುಂಕಿ ಪಾಂಡೆ ಮತ್ತು ಭಾವನಾ ಪಾಂಡೆ ಅವರ ಪುತ್ರಿ.

Aryan Khan- Suhana Khan की करीबी दोस्त हैं Ananya Pandey, ये तस्वीरें हैं सबूत - Bollywood News AajTak

ಅನನ್ಯ ಪಾಂಡೆ 2019ರಲ್ಲಿ ತೆರೆಕಂಡ ‘ಸ್ಟೂಡೆಂಟ್​ ಆಫ್​ ದಿ ಇಯರ್​ 2’ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟವರಿಗೆ ಮೊದಲ ಸಿನಿಮಾದಲ್ಲೇ ಫಿಲ್ಮ್​ ಫೇರ್​ ಪ್ರಶಸ್ತಿ ದಕ್ಕಿತ್ತು. ನಂತರ ಕಾರ್ತಿಕ್ ಆರ್ಯನ್, ಭೂಮಿ ಪಡ್ನೇಕರ್‌ ಜೊತೆಗೆ ‘ಪತಿ ಪತ್ನಿ ಔರ್​ ವೋ’ ಚಿತ್ರದಲ್ಲಿ ನಟಿಸಿದ್ದರು. ‘ಖಾಲಿ ಪೀಲಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಅಕ್ಟೋಬರ್ 2 ರಂದು ಮುಂಬೈನ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದ ನಂತರ ಆರ್ಯನ್ ಖಾನ್ ಬಂಧನಕ್ಕೆ ಒಳಗಾಗಿದ್ದರು. ಆರ್ಯನ್ ಖಾನ್ ಮತ್ತು ಇನ್ನಿಬ್ಬರಿಗೆ ಡ್ರಗ್ ಪ್ರಕರಣದಲ್ಲಿ ಜಾಮೀನು ನೀಡಲು ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಜಾಮೀನು ನಿರಾಕರಿಸಿರುವುದರ ವಿರುದ್ಧ ಆರ್ಯನ್ ಖಾನ್‌ ಬಾ೦ಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ: ಪೇಪರ್‌ವರ್ಕ್‌ಗಾಗಿ ನಟ ಶಾರುಖ್ ಖಾನ್ ಮನೆಗೆ ಎನ್‌ಸಿಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...