Homeಮುಖಪುಟಡ್ರಗ್ಸ್ ಕೇಸ್: ನಟಿ ಅನನ್ಯ ಪಾಂಡೆಯ ಲ್ಯಾಪ್‌ಟಾಪ್, ಮೊಬೈಲ್ ಎನ್‌ಸಿಬಿ ವಶಕ್ಕೆ

ಡ್ರಗ್ಸ್ ಕೇಸ್: ನಟಿ ಅನನ್ಯ ಪಾಂಡೆಯ ಲ್ಯಾಪ್‌ಟಾಪ್, ಮೊಬೈಲ್ ಎನ್‌ಸಿಬಿ ವಶಕ್ಕೆ

- Advertisement -
- Advertisement -

ಮುಂಬೈ ಡ್ರಗ್ಸ್ ಕೇಸ್‌ಗೆ ಸಂಬಂಧಿಸಿದಂತೆ 22 ವರ್ಷದ ಬಾಲಿವುಡ್ ನಟಿ ಅನನ್ಯ ಪಾಂಡೆಯವರ ಮುಂಬೈ ಮನೆಯ ಮೇಲೆ ಇಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದೆ. ದಾಳಿಯಲ್ಲಿ ನಟಿಯ ಲ್ಯಾಪ್ ಟಾಪ್ ಮತ್ತು ಮೊಬೈಲ್ ಫೋನ್ ಎನ್‌ಸಿಬಿ ವಶಪಡಿಸಿಕೊಂಡಿದೆ.

ಈ ತಿಂಗಳ ಆರಂಭದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್‌ ಮಗ ಆರ್ಯನ್ ಖಾನ್ ಮತ್ತು ಇತರರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಬಂಧಿಸಿದ್ದಾರೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಟಿಗೆ ಸಮನ್ಸ್ ನೀಡಿದ್ದರಿಂದ ಅನನ್ಯ ಪಾಂಡೆ ತನ್ನ ತಂದೆ ನಟ ಚಂಕಿ ಪಾಂಡೆಯೊಂದಿಗೆ ಎನ್‌ಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.

ಪ್ರಕರಣದಲ್ಲಿ ಬಂಧಿತ ಆರೋಪಿ ಆರ್ಯನ್ ಖಾನ್‌ ಅವರ ವಾಟ್ಯಾಪ್‌ ಚಾಟ್‌ಗಳಲ್ಲಿ ನಟಿಯೊಂದಿಗೆ ಡ್ರಗ್ಸ್ ಕುರಿತ ಚರ್ಚೆ ನಡೆದಿವೆ ಎಂದು ವರದಿಗಳು ಬಂದಿದ್ದವು. ಆದರೆ, ಆರ್ಯನ್ ಆನ್ ಪ್ರಕರಣದಲ್ಲಿ ನಟಿಯ   ಪಾತ್ರವಿದೆಯೇ ಎಂಬ ಬಗ್ಗೆ NCB ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಮಗ ಆರ್ಯನ್ ಖಾನ್‌ರನ್ನು ಭೇಟಿಯಾದ ನಟ ಶಾರುಖ್ ಖಾನ್‌

 

ಎರಡು ಗಂಟೆಗಳ ಕಾಲ ನಟಿ ಅನನ್ಯ ಪಾಂಡೆಯವರನ್ನು ಪ್ರಶ್ನಿಸಿರುವ ಎನ್‌ಸಿಬಿ ಅಧಿಕಾರಿಗಳು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಹೇಳಿಕೆಗಳನ್ನು ದಾಖಲಿಸಬೇಕಿರುವುದರಿಂದ ಶುಕ್ರವಾರ (ಅ.22) ಬೆಳಿಗ್ಗೆ 11 ಗಂಟೆಗೆ ಮತ್ತೆ ಕಚೇರಿಗೆ ಹಾಜರಾಗುವಂತೆ ತಿಳಿಸಿದೆ. ಡ್ರಗ್ಸ್ ಪ್ರಕರಣದಲ್ಲಿ ಆಕೆ ಆರೋಪಿಯಲ್ಲ. ವಿಚಾರಣೆಗಾಗಿ ಮಾತ್ರ ಆಕೆಯನ್ನು ಕರೆಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಅನನ್ಯ ಪಾಂಡೆ ಮತ್ತು ಆರ್ಯನ್ ಖಾನ್  ಕಾಮನ್ ಫ್ರೆಂಡ್ಸ್ ಸರ್ಕಲ್‌ ಹೊಂದಿದ್ದಾರೆ. ಅನನ್ಯ ಮತ್ತು ಆರ್ಯನ್ ಸಹೋದರಿ ಸುಹಾನಾ ಉತ್ತಮ ಸ್ನೇಹಿತರಾಗಿದ್ದಾರೆ. ಅನನ್ಯ ಪಾಂಡೆ 2019 ರಲ್ಲಿ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ. ಈಕೆ  ಬಾಲಿವುಡ್ ನಟ ಚುಂಕಿ ಪಾಂಡೆ ಮತ್ತು ಭಾವನಾ ಪಾಂಡೆ ಅವರ ಪುತ್ರಿ.

Aryan Khan- Suhana Khan की करीबी दोस्त हैं Ananya Pandey, ये तस्वीरें हैं सबूत - Bollywood News AajTak

ಅನನ್ಯ ಪಾಂಡೆ 2019ರಲ್ಲಿ ತೆರೆಕಂಡ ‘ಸ್ಟೂಡೆಂಟ್​ ಆಫ್​ ದಿ ಇಯರ್​ 2’ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟವರಿಗೆ ಮೊದಲ ಸಿನಿಮಾದಲ್ಲೇ ಫಿಲ್ಮ್​ ಫೇರ್​ ಪ್ರಶಸ್ತಿ ದಕ್ಕಿತ್ತು. ನಂತರ ಕಾರ್ತಿಕ್ ಆರ್ಯನ್, ಭೂಮಿ ಪಡ್ನೇಕರ್‌ ಜೊತೆಗೆ ‘ಪತಿ ಪತ್ನಿ ಔರ್​ ವೋ’ ಚಿತ್ರದಲ್ಲಿ ನಟಿಸಿದ್ದರು. ‘ಖಾಲಿ ಪೀಲಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಅಕ್ಟೋಬರ್ 2 ರಂದು ಮುಂಬೈನ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದ ನಂತರ ಆರ್ಯನ್ ಖಾನ್ ಬಂಧನಕ್ಕೆ ಒಳಗಾಗಿದ್ದರು. ಆರ್ಯನ್ ಖಾನ್ ಮತ್ತು ಇನ್ನಿಬ್ಬರಿಗೆ ಡ್ರಗ್ ಪ್ರಕರಣದಲ್ಲಿ ಜಾಮೀನು ನೀಡಲು ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಜಾಮೀನು ನಿರಾಕರಿಸಿರುವುದರ ವಿರುದ್ಧ ಆರ್ಯನ್ ಖಾನ್‌ ಬಾ೦ಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ: ಪೇಪರ್‌ವರ್ಕ್‌ಗಾಗಿ ನಟ ಶಾರುಖ್ ಖಾನ್ ಮನೆಗೆ ಎನ್‌ಸಿಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...