Homeಮುಖಪುಟಡ್ರಗ್ಸ್‌ ಪ್ರಕರಣ: ಎನ್‌ಸಿಬಿ ಪೊಲೀಸರಿಂದ ನಟ ಅಜಾಜ್ ಖಾನ್ ಬಂಧನ

ಡ್ರಗ್ಸ್‌ ಪ್ರಕರಣ: ಎನ್‌ಸಿಬಿ ಪೊಲೀಸರಿಂದ ನಟ ಅಜಾಜ್ ಖಾನ್ ಬಂಧನ

- Advertisement -
- Advertisement -

ಡ್ರಗ್ಸ್ ಪ್ರಕರಣ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಮತ್ತು ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಜ್ ಖಾನ್ ಅನ್ನು ಇಂದು (ಮಾ.31) ಮಾದಕವಸ್ತು ನಿಯಂತ್ರಣ ದಳ (ಎನ್‌ಸಿಬಿ) ಬಂಧಿಸಿದೆ.

ಡ್ರಗ್ ಪೆಡ್ಲರ್ ಶಾದಾಬ್ ಬಟಾಟಾ ವಿಚಾರಣೆ ವೇಳೆ ಅಜಾಜ್ ಖಾನ್ ಹೆಸರೂ ಕೇಳಿಬಂದಿತ್ತು. ಈ ಸಂಬಂಧ ಮಂಗಳವಾರ ರಾಜಸ್ಥಾನದಿಂದ ಬಂದ ಅಜಾಜ್ ಖಾನ್ ಅನ್ನು ಮುಂಬೈ ವಿಮಾನ ನಿಲ್ದಾಣದಲ್ಲಿಯೇ ವಶಕ್ಕೆ ಪಡೆಯಲಾಗಿತ್ತು. ನಂತರ ನಗರದ ಅಂಧೇರಿ ಮತ್ತು ಲೋಖಂಡ್ವಾಲಾ ಪ್ರದೇಶಗಳಲ್ಲಿ ಶೋಧದ ವೇಳೆ ಅವರ ನಿವಾಸದಿಂದ ಆಲ್‌ಪ್ರಜೋಲಮ್ ಮಾತ್ರೆಗಳು ಪತ್ತೆಯಾಗಿವೆ ಎಂದು ತನಿಖಾ ಸಂಸ್ಥೆ ಹೇಳಿದೆ.

ಮಂಗಳವಾರವಷ್ಟೇ ಮುಂಬೈಗೆ ಬಂದಿಳಿದಿದ್ದ ಅಜಾಜ್ ಖಾನ್, ದಕ್ಷಿಣ ಮುಂಬೈನ ಎನ್‌ಸಿಬಿ ಕಚೇರಿಯ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿ, ನನ್ನನ್ನು ಬಂಧಿಸಿಲ್ಲ; ಆದರೆ ಸ್ವತಃ ನಾನೇ ಅಧಿಕಾರಿಗಳನ್ನು ಭೇಟಿ ಮಾಡಲು ಬಂದಿರುವುದಾಗಿ ತಿಳಿಸಿದ್ದರು. ಆದರೆ ಈಗ ಅವರನ್ನು ಬಂಧಿಸಲಾಗಿದೆ.

ಡ್ರಗ್ ಪೆಡ್ಲರ್ ಶಾದಾಬ್ ಬಟಾಟಾ ನಿವಾಸದಲ್ಲಿ 2 ಕಿಲೋಗ್ರಾಂಗಳಷ್ಟು ನಿಷೇಧಿತ ಮೆಫೆಡ್ರೋನ್ ಡ್ರಗ್‌ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಂಸ್ಥೆ ಹೇಳಿತ್ತು.

ಇದನ್ನೂ ಓದಿ: FIR ಎಲ್ಲಿದೆ? ನೀವು ಕಾನೂನಿಗಿಂತ ದೊಡ್ಡವರ?: ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ತರಾಟೆ

ಬಾಲಿವುಡ್‌ ನಟ ಸುಶಾಂತ್ ಸಿಂಗ್ ಸಾವಿನ ನಂತರ ದೇಶದ ಚಿತ್ರರಂಗ ವಲಯದಲ್ಲಿ ಡ್ರಗ್ಸ್‌ ಮಾಫಿಯಾ ಬಗ್ಗೆ ಸಾಕಷ್ಟು ಸುದ್ದಿಗಳು ಹೊರಬಂದಿದ್ದವು. ಇದರಲ್ಲಿ ಹಲವಾರು ತಾರೆಯರೂ ಸೇರಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದಲ್ಲಿಯೂ ಈ ಜಾಲ ಹರಡಿಕೊಂಡಿದೆ ಎಂಬ ಸುಳಿವು ಸಿಕ್ಕ ನಂತರ ಪೊಲೀಸರು ತನಿಖೆ ಆರಂಭಿಸಿದ್ದರು.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ 25 ಮಂದಿ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಪಾರ್ಟಿಗಳಲ್ಲಿ ಡ್ರಗ್ಸ್ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಪ್ರಕರಣವನ್ನು ಬೆನ್ನತ್ತಿದ ಸಿಸಿಬಿ ಪೊಲೀಸರು, ಕೆಲವರನ್ನು ಬಂಧಿಸಿದ್ದರು. ಕೆಲವರು ಈಗಾಗಲೇ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಇದೀಗ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, 2,900 ಪುಟಗಳ ದೋಷಾರೋಪ ಪಟ್ಟಿಯನ್ನು ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಏಷ್ಯನ್ ವಿರೋಧಿ ಹಿಂಸಾಚಾರ ನಿಗ್ರಹಿಸಲು ಕ್ರಮ: ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....