Homeಮುಖಪುಟಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

ನಟ ಶಾರುಖ್ ಖಾನ್ ಮೇಲೆ ದಾಳಿ ನಡೆಸಲು ಬಿಜೆಪಿ ಅವರ ಮಗ ಆರ್ಯನ್‌ರನ್ನು ಗುರಿಯಾಗಿಸಿದೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಭಾನುವಾರ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಡೆಸಿದ ದಾಳಿಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಹಿರಿಯ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಗುರುವಾರ ಆರೋಪಿಸಿದ್ದಾರೆ. ಬಿಜೆಪಿ ಪದಾಧಿಕಾರಿ ಮತ್ತು ಖಾಸಗಿ ತನಿಖಾಧಿಕಾರಿ ಖಾಸಗಿಯಾಗಿ ಭಾಗವಹಿಸಿದ್ದಾರೆ ಎಂದು  ನವಾಬ್ ಮಲಿಕ್ ವಿಡಿಯೊವೊಂದನ್ನು ಟ್ವೀಟ್ ಮಾಡಿದ್ದಾರೆ.

ರಾಜ್ಯ ಸರ್ಕಾರದ ಕ್ಯಾಬಿನೆಟ್ ಮಂತ್ರಿಯೂ ಆಗಿರುವ ನವಾಬ್ ಮಲಿಕ್, ಕೆಪಿ ಗೋಸಾವಿ ಮತ್ತು ಬಿಜೆಪಿ ಪದಾಧಿಕಾರಿ ಮನೀಶ್ ಭಾನುಶಾಲಿ ಇಬ್ಬರು ಹಡಗಿನ ಮೇಲೆ ದಾಳಿ ನಡೆದ ತಡರಾತ್ರಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಚೇರಿಗೆ ಹೋಗುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಭಾನುವಾರ ತಡರಾತ್ರಿ ಇಬ್ಬರು ಬಿಳಿ ಕಾರಿನಿಂದ ಇಳಿದು ಡ್ರಗ್ ಏಜೆನ್ಸಿಯ ಮುಂಬೈ ಕಚೇರಿಗೆ ಹೋಗುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಇಬ್ಬರು ವ್ಯಕ್ತಿಗಳು ಸ್ಪಷ್ಟವಾಗಿ ಕಾಣಿಸುತ್ತಾರೆ.

ಇದನ್ನೂ ಓದಿ: ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

ಈ ವಿಡಿಯೊವನ್ನು ಟ್ವೀಟ್ ಮಾಡಿರುವ ನವಾಬ್ ಮಲಿಕ್, ’ಕ್ರೂಸ್ ಹಡಗಿನ ಮೇಲೆ ದಾಳಿ ನಡೆದ ದಿನ ಕಿರಣ್ ಪಿ ಗೋಸಾಯಿ ಮತ್ತು ಮನೀಶ್ ಭಾನುಶಾಲಿ ಇಬ್ಬರು ಎನ್‌ಸಿಬಿ ಕಚೇರಿಗೆ ಭೇಟಿ ನೀಡುತ್ತಿರುವ ದೃಶ್ಯ’ ಎಂದಿದ್ದಾರೆ.

ಇನ್ನೊಂದು ವಿಡಿಯೊ ಪೋಸ್ಟ್ ಮಾಡಿರುವ ಎನ್‌ಸಿಪಿ ನಾಯಕ, ಹಿರಿಯ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೇಡೆ ಅವರ ಹೇಳಿಕೆಗಳಲ್ಲಿನ ವ್ಯತ್ಯಾಸಗಳನ್ನು ಹೊರಗೆಳೆದಿದ್ದಾರೆ.

” ಎಂಟು ಜನರನ್ನು ಬಂಧಿಸಿರುವಾಗ, 8 ರಿಂದ 10 ಜನರನ್ನು ಬಂಧಿಸಲಾಗಿದೆ ಎಂದು ಸಮೀರ್ ವಾಂಖೇಡೆ ಹೇಳಿಕೆ ನೀಡಿದ್ದಾರೆ. ಅವರಿಗೆ ಅವರ ಮಾತುಗಳ ಮೇಲೆ ಏಕೆ ಹಿಡಿತವಿಲ್ಲ? ಹಾಗಾದರೇ ಅವರಿಗೆ ಇನ್ನೂ ಇಬ್ಬರನ್ನು ಬಂಧಿಸುವ ಉದ್ದೇಶವಿದೆಯೇ?” ಎಂದು ನವಾಬ್ ಮಲಿಕ್ ಟ್ವೀಟ್ ಮಾಡಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿ ನಡೆಸಿದ್ದ ಅವರು, “ಮಹಾರಾಷ್ಟ್ರವನ್ನು ದುರ್ಬಳಕೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು. ಬಾಲಿವುಡ್ ನಟ ಶಾರುಖ್ ಖಾನ್ ಮೇಲೆ ದಾಳಿ ನಡೆಸಲು ಬಿಜೆಪಿ ಅವರ ಮಗ ಆರ್ಯನ್ ಖಾನ್‌ರನ್ನು ಗುರಿಯಾಗಿಸಿದೆ ಎಂದು ಆರೋಪಿಸಿದ್ದಾರೆ.

“ಕಳೆದ ಒಂದು ತಿಂಗಳಿನಿಂದ, ಮುಂದಿನ ಗುರಿ ನಟ ಶಾರುಖ್ ಖಾನ್ ಎಂದು ಕ್ರೈಮ್ ವರದಿಗಾರರಿಗೆ ಮಾಹಿತಿ ರವಾನಿಸಲಾಗುತ್ತಿದೆ. ಕ್ರೂಸ್ ಹಡಗಿನಲ್ಲಿ ಎನ್‌ಸಿಬಿ ದಾಳಿಯ ನಂತರ ಬಂಧಿತರಾದ ಎಂಟು ಜನರಲ್ಲಿ ಆರ್ಯನ್ ಖಾನ್ ಒಬ್ಬರಾಗಿದ್ದಾರೆ. ಆದರೆ, ಆತನ ಬಳಿಯಿಂದ ಯಾವುದೇ ಔಷಧಗಳನ್ನು ವಶಪಡಿಸಿಕೊಳ್ಳಲಾಗಿಲ್ಲ” ಎಂದು ಹೇಳಿದ್ದರು.

ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಭಾಗವಾಗಿರುವ ಎನ್‌ಸಿಪಿಯ ಮಲಿಕ್, ಹೊರಗಿನವರಿಗೆ ಎನ್‌ಸಿಬಿಯ ಕಾರ್ಯಾಚರಣೆಗೆ ಹೇಗೆ ಅವಕಾಶ ನೀಡಲಾಗಿದೆ ಎಂಬುದಕ್ಕೆ ಉತ್ತರ ನೀಡಬೇಕು. ಮಹಾರಾಷ್ಟ್ರವನ್ನು ದುರುಪಯೋಗಪಡಿಸಿಕೊಳ್ಳಲು ಬಿಜೆಪಿ ಎನ್‌ಸಿಬಿಯನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಪದಾಧಿಕಾರಿ ಮನೀಶ್ ಭಾನುಶಾಲಿ ಅವರು ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋಗೆ (ಎನ್‌ಸಿಬಿ) ಎಚ್ಚರಿಕೆಯ ನಾಗರಿಕರಾಗಿ ಡ್ರಗ್ಸ್ ಪಾರ್ಟಿಯ ಬಗ್ಗೆ ಮಾಹಿತಿ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಸಚಿವ ನವಾಬ್ ಮಲಿಕ್ ತಮ್ಮ ಗುರುತನ್ನು ಬಹಿರಂಗಪಡಿಸಿರುವುದರಿಂದ ಡ್ರಗ್ ಪೆಡ್ಲರ್‌ಗಳಿಂದ ತನ್ನ ಜೀವಕ್ಕೆ ಅಪಾಯವಿದೆ ಎಂದು ರಕ್ಷಣೆ ಕೋರಿದ್ದಾರೆ.

ಆರೋಪಗಳಿಗೆ ಪ್ರತಿಕ್ರಿಯಿಸಿರುವ ಎನ್‌ಸಿಬಿ ಉಪ ಮಹಾನಿರ್ದೇಶಕ ಜ್ಞಾನೇಶ್ವರ್ ಸಿಂಗ್, ಇಬ್ಬರು ಏಜೆನ್ಸಿಯ ಕಾನೂನುಗಳ ಪ್ರಕಾರವೇ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಇಬ್ಬರು “ಸ್ವತಂತ್ರ ಸಾಕ್ಷಿಗಳು” ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯೆ ನೀಡಿಲ್ಲ.


ಇದನ್ನೂ ಓದಿ: ಮಗನ ಡ್ರಗ್ಸ್‌ ಪ್ರಕರಣದ ವಿಚಾರದಲ್ಲಿ ಶಾರುಖ್ ಮೇಲಿನ ದಾಳಿ ಅಸಹ್ಯವಾಗಿದೆ: ಶಶಿ ತರೂರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....