Homeಮುಖಪುಟಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

ನಟ ಶಾರುಖ್ ಖಾನ್ ಮೇಲೆ ದಾಳಿ ನಡೆಸಲು ಬಿಜೆಪಿ ಅವರ ಮಗ ಆರ್ಯನ್‌ರನ್ನು ಗುರಿಯಾಗಿಸಿದೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಭಾನುವಾರ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಡೆಸಿದ ದಾಳಿಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಹಿರಿಯ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಗುರುವಾರ ಆರೋಪಿಸಿದ್ದಾರೆ. ಬಿಜೆಪಿ ಪದಾಧಿಕಾರಿ ಮತ್ತು ಖಾಸಗಿ ತನಿಖಾಧಿಕಾರಿ ಖಾಸಗಿಯಾಗಿ ಭಾಗವಹಿಸಿದ್ದಾರೆ ಎಂದು  ನವಾಬ್ ಮಲಿಕ್ ವಿಡಿಯೊವೊಂದನ್ನು ಟ್ವೀಟ್ ಮಾಡಿದ್ದಾರೆ.

ರಾಜ್ಯ ಸರ್ಕಾರದ ಕ್ಯಾಬಿನೆಟ್ ಮಂತ್ರಿಯೂ ಆಗಿರುವ ನವಾಬ್ ಮಲಿಕ್, ಕೆಪಿ ಗೋಸಾವಿ ಮತ್ತು ಬಿಜೆಪಿ ಪದಾಧಿಕಾರಿ ಮನೀಶ್ ಭಾನುಶಾಲಿ ಇಬ್ಬರು ಹಡಗಿನ ಮೇಲೆ ದಾಳಿ ನಡೆದ ತಡರಾತ್ರಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಚೇರಿಗೆ ಹೋಗುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಭಾನುವಾರ ತಡರಾತ್ರಿ ಇಬ್ಬರು ಬಿಳಿ ಕಾರಿನಿಂದ ಇಳಿದು ಡ್ರಗ್ ಏಜೆನ್ಸಿಯ ಮುಂಬೈ ಕಚೇರಿಗೆ ಹೋಗುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಇಬ್ಬರು ವ್ಯಕ್ತಿಗಳು ಸ್ಪಷ್ಟವಾಗಿ ಕಾಣಿಸುತ್ತಾರೆ.

ಇದನ್ನೂ ಓದಿ: ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

ಈ ವಿಡಿಯೊವನ್ನು ಟ್ವೀಟ್ ಮಾಡಿರುವ ನವಾಬ್ ಮಲಿಕ್, ’ಕ್ರೂಸ್ ಹಡಗಿನ ಮೇಲೆ ದಾಳಿ ನಡೆದ ದಿನ ಕಿರಣ್ ಪಿ ಗೋಸಾಯಿ ಮತ್ತು ಮನೀಶ್ ಭಾನುಶಾಲಿ ಇಬ್ಬರು ಎನ್‌ಸಿಬಿ ಕಚೇರಿಗೆ ಭೇಟಿ ನೀಡುತ್ತಿರುವ ದೃಶ್ಯ’ ಎಂದಿದ್ದಾರೆ.

ಇನ್ನೊಂದು ವಿಡಿಯೊ ಪೋಸ್ಟ್ ಮಾಡಿರುವ ಎನ್‌ಸಿಪಿ ನಾಯಕ, ಹಿರಿಯ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೇಡೆ ಅವರ ಹೇಳಿಕೆಗಳಲ್ಲಿನ ವ್ಯತ್ಯಾಸಗಳನ್ನು ಹೊರಗೆಳೆದಿದ್ದಾರೆ.

” ಎಂಟು ಜನರನ್ನು ಬಂಧಿಸಿರುವಾಗ, 8 ರಿಂದ 10 ಜನರನ್ನು ಬಂಧಿಸಲಾಗಿದೆ ಎಂದು ಸಮೀರ್ ವಾಂಖೇಡೆ ಹೇಳಿಕೆ ನೀಡಿದ್ದಾರೆ. ಅವರಿಗೆ ಅವರ ಮಾತುಗಳ ಮೇಲೆ ಏಕೆ ಹಿಡಿತವಿಲ್ಲ? ಹಾಗಾದರೇ ಅವರಿಗೆ ಇನ್ನೂ ಇಬ್ಬರನ್ನು ಬಂಧಿಸುವ ಉದ್ದೇಶವಿದೆಯೇ?” ಎಂದು ನವಾಬ್ ಮಲಿಕ್ ಟ್ವೀಟ್ ಮಾಡಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿ ನಡೆಸಿದ್ದ ಅವರು, “ಮಹಾರಾಷ್ಟ್ರವನ್ನು ದುರ್ಬಳಕೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು. ಬಾಲಿವುಡ್ ನಟ ಶಾರುಖ್ ಖಾನ್ ಮೇಲೆ ದಾಳಿ ನಡೆಸಲು ಬಿಜೆಪಿ ಅವರ ಮಗ ಆರ್ಯನ್ ಖಾನ್‌ರನ್ನು ಗುರಿಯಾಗಿಸಿದೆ ಎಂದು ಆರೋಪಿಸಿದ್ದಾರೆ.

“ಕಳೆದ ಒಂದು ತಿಂಗಳಿನಿಂದ, ಮುಂದಿನ ಗುರಿ ನಟ ಶಾರುಖ್ ಖಾನ್ ಎಂದು ಕ್ರೈಮ್ ವರದಿಗಾರರಿಗೆ ಮಾಹಿತಿ ರವಾನಿಸಲಾಗುತ್ತಿದೆ. ಕ್ರೂಸ್ ಹಡಗಿನಲ್ಲಿ ಎನ್‌ಸಿಬಿ ದಾಳಿಯ ನಂತರ ಬಂಧಿತರಾದ ಎಂಟು ಜನರಲ್ಲಿ ಆರ್ಯನ್ ಖಾನ್ ಒಬ್ಬರಾಗಿದ್ದಾರೆ. ಆದರೆ, ಆತನ ಬಳಿಯಿಂದ ಯಾವುದೇ ಔಷಧಗಳನ್ನು ವಶಪಡಿಸಿಕೊಳ್ಳಲಾಗಿಲ್ಲ” ಎಂದು ಹೇಳಿದ್ದರು.

ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಭಾಗವಾಗಿರುವ ಎನ್‌ಸಿಪಿಯ ಮಲಿಕ್, ಹೊರಗಿನವರಿಗೆ ಎನ್‌ಸಿಬಿಯ ಕಾರ್ಯಾಚರಣೆಗೆ ಹೇಗೆ ಅವಕಾಶ ನೀಡಲಾಗಿದೆ ಎಂಬುದಕ್ಕೆ ಉತ್ತರ ನೀಡಬೇಕು. ಮಹಾರಾಷ್ಟ್ರವನ್ನು ದುರುಪಯೋಗಪಡಿಸಿಕೊಳ್ಳಲು ಬಿಜೆಪಿ ಎನ್‌ಸಿಬಿಯನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಪದಾಧಿಕಾರಿ ಮನೀಶ್ ಭಾನುಶಾಲಿ ಅವರು ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋಗೆ (ಎನ್‌ಸಿಬಿ) ಎಚ್ಚರಿಕೆಯ ನಾಗರಿಕರಾಗಿ ಡ್ರಗ್ಸ್ ಪಾರ್ಟಿಯ ಬಗ್ಗೆ ಮಾಹಿತಿ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಸಚಿವ ನವಾಬ್ ಮಲಿಕ್ ತಮ್ಮ ಗುರುತನ್ನು ಬಹಿರಂಗಪಡಿಸಿರುವುದರಿಂದ ಡ್ರಗ್ ಪೆಡ್ಲರ್‌ಗಳಿಂದ ತನ್ನ ಜೀವಕ್ಕೆ ಅಪಾಯವಿದೆ ಎಂದು ರಕ್ಷಣೆ ಕೋರಿದ್ದಾರೆ.

ಆರೋಪಗಳಿಗೆ ಪ್ರತಿಕ್ರಿಯಿಸಿರುವ ಎನ್‌ಸಿಬಿ ಉಪ ಮಹಾನಿರ್ದೇಶಕ ಜ್ಞಾನೇಶ್ವರ್ ಸಿಂಗ್, ಇಬ್ಬರು ಏಜೆನ್ಸಿಯ ಕಾನೂನುಗಳ ಪ್ರಕಾರವೇ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಇಬ್ಬರು “ಸ್ವತಂತ್ರ ಸಾಕ್ಷಿಗಳು” ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯೆ ನೀಡಿಲ್ಲ.


ಇದನ್ನೂ ಓದಿ: ಮಗನ ಡ್ರಗ್ಸ್‌ ಪ್ರಕರಣದ ವಿಚಾರದಲ್ಲಿ ಶಾರುಖ್ ಮೇಲಿನ ದಾಳಿ ಅಸಹ್ಯವಾಗಿದೆ: ಶಶಿ ತರೂರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...