Homeಮುಖಪುಟಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

ನಟ ಶಾರುಖ್ ಖಾನ್ ಮೇಲೆ ದಾಳಿ ನಡೆಸಲು ಬಿಜೆಪಿ ಅವರ ಮಗ ಆರ್ಯನ್‌ರನ್ನು ಗುರಿಯಾಗಿಸಿದೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಭಾನುವಾರ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಡೆಸಿದ ದಾಳಿಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಹಿರಿಯ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಗುರುವಾರ ಆರೋಪಿಸಿದ್ದಾರೆ. ಬಿಜೆಪಿ ಪದಾಧಿಕಾರಿ ಮತ್ತು ಖಾಸಗಿ ತನಿಖಾಧಿಕಾರಿ ಖಾಸಗಿಯಾಗಿ ಭಾಗವಹಿಸಿದ್ದಾರೆ ಎಂದು  ನವಾಬ್ ಮಲಿಕ್ ವಿಡಿಯೊವೊಂದನ್ನು ಟ್ವೀಟ್ ಮಾಡಿದ್ದಾರೆ.

ರಾಜ್ಯ ಸರ್ಕಾರದ ಕ್ಯಾಬಿನೆಟ್ ಮಂತ್ರಿಯೂ ಆಗಿರುವ ನವಾಬ್ ಮಲಿಕ್, ಕೆಪಿ ಗೋಸಾವಿ ಮತ್ತು ಬಿಜೆಪಿ ಪದಾಧಿಕಾರಿ ಮನೀಶ್ ಭಾನುಶಾಲಿ ಇಬ್ಬರು ಹಡಗಿನ ಮೇಲೆ ದಾಳಿ ನಡೆದ ತಡರಾತ್ರಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಚೇರಿಗೆ ಹೋಗುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಭಾನುವಾರ ತಡರಾತ್ರಿ ಇಬ್ಬರು ಬಿಳಿ ಕಾರಿನಿಂದ ಇಳಿದು ಡ್ರಗ್ ಏಜೆನ್ಸಿಯ ಮುಂಬೈ ಕಚೇರಿಗೆ ಹೋಗುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಇಬ್ಬರು ವ್ಯಕ್ತಿಗಳು ಸ್ಪಷ್ಟವಾಗಿ ಕಾಣಿಸುತ್ತಾರೆ.

ಇದನ್ನೂ ಓದಿ: ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

ಈ ವಿಡಿಯೊವನ್ನು ಟ್ವೀಟ್ ಮಾಡಿರುವ ನವಾಬ್ ಮಲಿಕ್, ’ಕ್ರೂಸ್ ಹಡಗಿನ ಮೇಲೆ ದಾಳಿ ನಡೆದ ದಿನ ಕಿರಣ್ ಪಿ ಗೋಸಾಯಿ ಮತ್ತು ಮನೀಶ್ ಭಾನುಶಾಲಿ ಇಬ್ಬರು ಎನ್‌ಸಿಬಿ ಕಚೇರಿಗೆ ಭೇಟಿ ನೀಡುತ್ತಿರುವ ದೃಶ್ಯ’ ಎಂದಿದ್ದಾರೆ.

ಇನ್ನೊಂದು ವಿಡಿಯೊ ಪೋಸ್ಟ್ ಮಾಡಿರುವ ಎನ್‌ಸಿಪಿ ನಾಯಕ, ಹಿರಿಯ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೇಡೆ ಅವರ ಹೇಳಿಕೆಗಳಲ್ಲಿನ ವ್ಯತ್ಯಾಸಗಳನ್ನು ಹೊರಗೆಳೆದಿದ್ದಾರೆ.

” ಎಂಟು ಜನರನ್ನು ಬಂಧಿಸಿರುವಾಗ, 8 ರಿಂದ 10 ಜನರನ್ನು ಬಂಧಿಸಲಾಗಿದೆ ಎಂದು ಸಮೀರ್ ವಾಂಖೇಡೆ ಹೇಳಿಕೆ ನೀಡಿದ್ದಾರೆ. ಅವರಿಗೆ ಅವರ ಮಾತುಗಳ ಮೇಲೆ ಏಕೆ ಹಿಡಿತವಿಲ್ಲ? ಹಾಗಾದರೇ ಅವರಿಗೆ ಇನ್ನೂ ಇಬ್ಬರನ್ನು ಬಂಧಿಸುವ ಉದ್ದೇಶವಿದೆಯೇ?” ಎಂದು ನವಾಬ್ ಮಲಿಕ್ ಟ್ವೀಟ್ ಮಾಡಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿ ನಡೆಸಿದ್ದ ಅವರು, “ಮಹಾರಾಷ್ಟ್ರವನ್ನು ದುರ್ಬಳಕೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು. ಬಾಲಿವುಡ್ ನಟ ಶಾರುಖ್ ಖಾನ್ ಮೇಲೆ ದಾಳಿ ನಡೆಸಲು ಬಿಜೆಪಿ ಅವರ ಮಗ ಆರ್ಯನ್ ಖಾನ್‌ರನ್ನು ಗುರಿಯಾಗಿಸಿದೆ ಎಂದು ಆರೋಪಿಸಿದ್ದಾರೆ.

“ಕಳೆದ ಒಂದು ತಿಂಗಳಿನಿಂದ, ಮುಂದಿನ ಗುರಿ ನಟ ಶಾರುಖ್ ಖಾನ್ ಎಂದು ಕ್ರೈಮ್ ವರದಿಗಾರರಿಗೆ ಮಾಹಿತಿ ರವಾನಿಸಲಾಗುತ್ತಿದೆ. ಕ್ರೂಸ್ ಹಡಗಿನಲ್ಲಿ ಎನ್‌ಸಿಬಿ ದಾಳಿಯ ನಂತರ ಬಂಧಿತರಾದ ಎಂಟು ಜನರಲ್ಲಿ ಆರ್ಯನ್ ಖಾನ್ ಒಬ್ಬರಾಗಿದ್ದಾರೆ. ಆದರೆ, ಆತನ ಬಳಿಯಿಂದ ಯಾವುದೇ ಔಷಧಗಳನ್ನು ವಶಪಡಿಸಿಕೊಳ್ಳಲಾಗಿಲ್ಲ” ಎಂದು ಹೇಳಿದ್ದರು.

ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಭಾಗವಾಗಿರುವ ಎನ್‌ಸಿಪಿಯ ಮಲಿಕ್, ಹೊರಗಿನವರಿಗೆ ಎನ್‌ಸಿಬಿಯ ಕಾರ್ಯಾಚರಣೆಗೆ ಹೇಗೆ ಅವಕಾಶ ನೀಡಲಾಗಿದೆ ಎಂಬುದಕ್ಕೆ ಉತ್ತರ ನೀಡಬೇಕು. ಮಹಾರಾಷ್ಟ್ರವನ್ನು ದುರುಪಯೋಗಪಡಿಸಿಕೊಳ್ಳಲು ಬಿಜೆಪಿ ಎನ್‌ಸಿಬಿಯನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಪದಾಧಿಕಾರಿ ಮನೀಶ್ ಭಾನುಶಾಲಿ ಅವರು ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋಗೆ (ಎನ್‌ಸಿಬಿ) ಎಚ್ಚರಿಕೆಯ ನಾಗರಿಕರಾಗಿ ಡ್ರಗ್ಸ್ ಪಾರ್ಟಿಯ ಬಗ್ಗೆ ಮಾಹಿತಿ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಸಚಿವ ನವಾಬ್ ಮಲಿಕ್ ತಮ್ಮ ಗುರುತನ್ನು ಬಹಿರಂಗಪಡಿಸಿರುವುದರಿಂದ ಡ್ರಗ್ ಪೆಡ್ಲರ್‌ಗಳಿಂದ ತನ್ನ ಜೀವಕ್ಕೆ ಅಪಾಯವಿದೆ ಎಂದು ರಕ್ಷಣೆ ಕೋರಿದ್ದಾರೆ.

ಆರೋಪಗಳಿಗೆ ಪ್ರತಿಕ್ರಿಯಿಸಿರುವ ಎನ್‌ಸಿಬಿ ಉಪ ಮಹಾನಿರ್ದೇಶಕ ಜ್ಞಾನೇಶ್ವರ್ ಸಿಂಗ್, ಇಬ್ಬರು ಏಜೆನ್ಸಿಯ ಕಾನೂನುಗಳ ಪ್ರಕಾರವೇ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಇಬ್ಬರು “ಸ್ವತಂತ್ರ ಸಾಕ್ಷಿಗಳು” ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯೆ ನೀಡಿಲ್ಲ.


ಇದನ್ನೂ ಓದಿ: ಮಗನ ಡ್ರಗ್ಸ್‌ ಪ್ರಕರಣದ ವಿಚಾರದಲ್ಲಿ ಶಾರುಖ್ ಮೇಲಿನ ದಾಳಿ ಅಸಹ್ಯವಾಗಿದೆ: ಶಶಿ ತರೂರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...