Homeಮುಖಪುಟಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಮಗ ಆರ್ಯನ್ ಖಾನ್‌ರನ್ನು ಭೇಟಿಯಾದ ನಟ ಶಾರುಖ್ ಖಾನ್‌

ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಮಗ ಆರ್ಯನ್ ಖಾನ್‌ರನ್ನು ಭೇಟಿಯಾದ ನಟ ಶಾರುಖ್ ಖಾನ್‌

- Advertisement -
- Advertisement -

ಮುಂಬೈನ ಕಡಲತೀರದಲ್ಲಿ ಐಷಾರಾಮಿ ಕ್ರೂಸ್ ಹಡಗಿನ ಡ್ರಗ್ಸ್ ಪಾರ್ಟಿ ಪ್ರಕರಣದ ಆರೋಪದಲ್ಲಿ ಜೈಲಿನಲ್ಲಿರುವ ಆರ್ಯನ್‌ ಖಾನ್‌ರನ್ನು ನೋಡಲು ಅವರ ತಂದೆ ಬಾಲಿವುಡ್ ನಟ ಶಾರುಖ್‌ ಖಾನ್‌ ಗುರುವಾರ ಮುಂಬೈನ ಆರ್ಥರ್ ರೋಡ್ ಜೈಲಿಗೆ ಭೇಟಿ ನೀಡಿದ್ದರು.

ಕಳೆದ ಅಕ್ಟೋಬರ್ 8 ರಿಂದ ಜೈಲಿನಲ್ಲಿರುವ ಮಗನನ್ನು ಶಾರುಖ್‌ ಖಾನ್‌ ಇಂದು ಜೈಲಿಗೆ ಭೇಟಿ ನೀಡಿ ಮಾತನಾಡಿಸಿದ್ದಾರೆ. ಬೆಳಗ್ಗೆ 9 ಗಂಟೆಗೆ ಜೈಲಿಗೆ ತಲುಪಿದ್ದ ಶಾರುಖ್ ಖಾನ್ 9.35 ಕ್ಕೆ ವಾಪಸ್ ಹೊರಟರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೂಲಗಳ ಪ್ರಕಾರ ಶಾರುಖ್‌ ಖಾನ್‌, ಆರ್ಯನ್‌ರನ್ನು ಸುಮಾರು 20 ನಿಮಿಷಗಳ ಕಾಲ ಮಾತನಾಡಿಸಿದ್ದಾರೆ. ನಟನ ಭೇಟಿ ಹಿನ್ನೆಲೆ, ಹೆಚ್ಚಿನ ಸಂಖ್ಯೆಯಲ್ಲಿ ಮಾಧ್ಯಮದವರು ಮತ್ತು ಸ್ಥಳೀಯ ನಿವಾಸಿಗಳು ಜೈಲಿನ ಹೊರಗೆ ಜಮಾಯಿಸಿದ್ದರು. ಜೈಲಿನ ಆವರಣದ ಹೊರಗೆ ಭಾರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. 

ಇದನ್ನೂ ಓದಿ: ಆರ್ಯನ್ ಖಾನ್‌ರ ಮೂಲಭೂತ ಹಕ್ಕುಗಳನ್ನು ಉಳಿಸಿ: ಸುಪ್ರೀಂಗೆ ಶಿವಸೇನಾ ಸಚಿವನ ಅರ್ಜಿ

ಇಷ್ಟು ದಿನ ಕೊರೊನಾ ಕಾರಣದಿಂದ ಜೈಲಿಗೆ ಕೈದಿಗಳ ಕುಟುಂಬ ಸದಸ್ಯರಿಗೆ ಅವಕಾಶವಿರಲಿಲ್ಲ. ಗುರುವಾರ (ಅ.21)ದಿಂದ ಅಧಿಕಾರಿಗಳು ಕುಟುಂಬ ಸದಸ್ಯರಿಗೆ ಅವಕಾಶ ನೀಡಿರುವ ಹಿನ್ನೆಲೆ ಶಾರುಖ್‌ ಖಾನ್‌ ಮಗನ ಭೇಟಿಗೆ ಧಾವಿಸಿದ್ದರು.

ಅಕ್ಟೋಬರ್ 2 ರಂದು ಮುಂಬೈನ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದ ನಂತರ ಆರ್ಯನ್ ಖಾನ್ ಬಂಧನಕ್ಕೆ ಒಳಗಾಗಿದ್ದರು. ಆರ್ಯನ್‌ ಖಾನ್ ಬಂಧನದ ಬಳಿಕ ಇದು ತಂದೆ-ಮಗನ ಮೊದಲ ಭೇಟಿಯಾಗಿದೆ.

ಇದನ್ನೂ ಓದಿ: ಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಆರ್ಯನ್ ಖಾನ್ ಮತ್ತು ಇನ್ನಿಬ್ಬರಿಗೆ ಡ್ರಗ್ ಪ್ರಕರಣದಲ್ಲಿ ಜಾಮೀನು ನೀಡಲು ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಜಾಮೀನು ನಿರಾಕರಿಸಿರುವುದರ ವಿರುದ್ಧ ಆರ್ಯನ್ ಖಾನ್‌ ಬಾ೦ಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಆರ್ಯನ್ ಖಾನ್ ಮತ್ತು ಅರ್ಬಾಜ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದು, ಮುನ್ಮುನ್ ಅವರನ್ನು ಮುಂಬೈನ ಬೈಕುಲ್ಲಾ ಮಹಿಳಾ ಜೈಲಿನಲ್ಲಿ ಇರಿಸಲಾಗಿದೆ. ಈ ಪ್ರಕರಣದ ಆರೋಪಿ ಆರ್ಯನ್ ಖಾನ್ ಮತ್ತು ಇತರರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8 (ಸಿ), 20 (ಬಿ), 27, 28, 29 ಮತ್ತು 35 ರ ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ.

“ಆರ್ಯನ್ ಖಾನ್ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ. ಜೊತೆಗೆ ಅವರು ಮಾದಕದ್ರವ್ಯ ನಿಯಂತ್ರಣ ಬ್ಯೂರೋದ (NCB) ಅಧಿಕಾರಿಯ ಹಗೆತನಕ್ಕೆ ಬಲಿಯಾಗಿದ್ದಾರೆ” ಎಂದು ಶಿವಸೇನಾ ನಾಯಕ, ರಾಜ್ಯ ಸಚಿವ ಕಿಶೋರ್ ತಿವಾರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್‌ಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...