Homeಕರ್ನಾಟಕಸತ್ಯವನ್ನು ಮುಚ್ಚಿಡಬಹುದು, ಆದರೆ ನಾಶ ಮಾಡಲಾಗುವುದಿಲ್ಲ: ಸಿದ್ದರಾಮಯ್ಯ

ಸತ್ಯವನ್ನು ಮುಚ್ಚಿಡಬಹುದು, ಆದರೆ ನಾಶ ಮಾಡಲಾಗುವುದಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ದಿನೇ ದಿನೇ ತಿರುವು ಪಡೆಯುತ್ತಿದ್ದು, ಸ್ಯಾಂಡಲ್‌ವುಡ್ ನಟ-ನಟಿಯರನ್ನು ಒಳಗೊಂಡು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಪರಸ್ಪರ ಯುದ್ಧಕ್ಕೆ ನಿಂತುಬಿಟ್ಟಿವೆ.

ಡ್ರಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟಿ ರಾಗಿಣಿ ಜೊತೆಗಿನ ಚುನಾವಣ ಪ್ರಚಾರದಲ್ಲಿ ತೆಗೆಸಿಕೊಂಡ ಬಿಜೆಪಿ ನಾಯಕರ, ಕಾರ್ಯಕರ್ತರ ಫೋಟೋಗಳು ವೈರಲ್ ಆಗಿದ್ದವು. ಇದು ರಾಗಿಣಿ ಬಿಜೆಪಿ ಜೊತೆಗೆ ನಂಟಿದೆ ಎಂದು ಬಿಂಬಿಸಲಾಗಿತ್ತು. ಇದಕ್ಕೆ ಬಿಜೆಪಿ ಆಕೆ ನಮ್ಮ ಪಕ್ಷದವರಲ್ಲ ಎಂಬ ಸ್ಪಷ್ಟನೆ ನೀಡಿ ಕೈತೊಳೆದುಕೊಂಡಿದೆ.

ಈಗ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ನಾಯಕರ ಜೊತೆ ನಟಿ ರಾಗಿಣಿ ಇರುವ ಚಿತ್ರಗಳನ್ನು ಬಿಜೆಪಿ ಬಿಡುಗಡೆ ಮಾಡುತ್ತಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಎದುರೆದುರೇ ಪೈಪೋಟಿಗೆ ನಿಂತಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಾಂಗ್ರೆಸ್ ಮತ್ತು ಅವರ ಶಾಸಕರು ಡ್ರಗ್ಸ್ ಪರ ಇದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ಇದಕ್ಕೆ ಪ್ರತ್ಯುತ್ತರ ನೀಡಿರುವ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ. ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ ಎಂದು ಹೇಳಿದ್ದಾರೆ.

ವಿರೋಧ ಪಕ್ಷದವರ ಮೇಲೆ ಮಾಡುತ್ತಿರುವ ಆರೋಪಗಳನ್ನು ಖಂಡಿಸುವುದಾಗಿ ತಿಳಿಸಿರುವ ಅವರು, ಮಾದಕ ವಸ್ತುಗಳ ಹಾವಳಿ ನಿಮೂಲನೆಯ ಉದ್ದೇಶವಿದ್ದರೇ ಸುಳ್ಳು ಆರೋಪ ಮಾಡುತ್ತಿರುವವರ ಬಾಯಿ ಮುಚ್ಚಿಸಿ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಿದ್ದಾರೆ.

ಆರೋಪಿ ಜೊತೆಗಿನ ಫೋಟೋಗಳ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ. ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ ಎಂದಿದ್ದಾರೆ.

ಡ್ರಗ್ಸ್ ಹಗರಣದ ತನಿಖೆ ಹಾದಿ ತಪ್ಪುತ್ತಿದೆ ಎಂದಿರುವ ವಿ-ಪಕ್ಷ ನಾಯಕ, ಡಿಜೆ ಹಳ್ಳಿ ಗಲಭೆಯ ತನಿಖೆಯನ್ನು ಉದಾಹರಣೆ ನೀಡಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ: ಸಿದ್ದರಾಮಯ್ಯನವರ 13 ಅಂಶಗಳ ಪತ್ರ – ಉತ್ತರಿಸುವರೇ ಸಿಎಂ?

ಇಷ್ಟು ದಿನ ಪೊಲೀಸ್, ಸ್ಯಾಂಡಲ್‌ವುಡ್ ಎನ್ನುತ್ತಿದ್ದವರಿಗೆ ಎರಡು ಪಕ್ಷಗಳ ಆರೋಪ-ಪ್ರತ್ಯಾರೋಪಗಳು ಮತ್ತಷ್ಟು ಮನರಂಜನೆ ನೀಡುತ್ತಿವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಆರೋಪಗಳನ್ನು ಗಂಬೀರವಾಗಿ ಪರಿಗಣಿಸಿರುವುದು ಅವರ ಟ್ವೀಟ್‌ಗಳಿಂದ ಕಂಡುಬರುತ್ತಿದೆ.

ಸ್ಯಾಂಡಲ್​ವುಡ್ ಡ್ರಗ್ಸ್​ ಕೇಸ್​ಗೆ ಸಂಬಂರಧಿಸಿದಂತೆ ಸಿಸಿಬಿ ಪೊಲೀಸರಿಂದ ಅರೆಸ್ಟ್ ಆಗಿರುವ ರಾಗಿಣಿ, ಸಂಜನಾ ಗಲ್ರಾನಿ,ರವಿಶಂಕರ್, ಪ್ರಶಾಂತ್ ರಾಂಕ, ಲೂಮ್ ಪೆಪ್ಪರ್, ರಾಹುಲ್ ಅವರನ್ನು ಮತ್ತೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.


ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...