Homeಕರ್ನಾಟಕಸತ್ಯವನ್ನು ಮುಚ್ಚಿಡಬಹುದು, ಆದರೆ ನಾಶ ಮಾಡಲಾಗುವುದಿಲ್ಲ: ಸಿದ್ದರಾಮಯ್ಯ

ಸತ್ಯವನ್ನು ಮುಚ್ಚಿಡಬಹುದು, ಆದರೆ ನಾಶ ಮಾಡಲಾಗುವುದಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ದಿನೇ ದಿನೇ ತಿರುವು ಪಡೆಯುತ್ತಿದ್ದು, ಸ್ಯಾಂಡಲ್‌ವುಡ್ ನಟ-ನಟಿಯರನ್ನು ಒಳಗೊಂಡು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಪರಸ್ಪರ ಯುದ್ಧಕ್ಕೆ ನಿಂತುಬಿಟ್ಟಿವೆ.

ಡ್ರಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟಿ ರಾಗಿಣಿ ಜೊತೆಗಿನ ಚುನಾವಣ ಪ್ರಚಾರದಲ್ಲಿ ತೆಗೆಸಿಕೊಂಡ ಬಿಜೆಪಿ ನಾಯಕರ, ಕಾರ್ಯಕರ್ತರ ಫೋಟೋಗಳು ವೈರಲ್ ಆಗಿದ್ದವು. ಇದು ರಾಗಿಣಿ ಬಿಜೆಪಿ ಜೊತೆಗೆ ನಂಟಿದೆ ಎಂದು ಬಿಂಬಿಸಲಾಗಿತ್ತು. ಇದಕ್ಕೆ ಬಿಜೆಪಿ ಆಕೆ ನಮ್ಮ ಪಕ್ಷದವರಲ್ಲ ಎಂಬ ಸ್ಪಷ್ಟನೆ ನೀಡಿ ಕೈತೊಳೆದುಕೊಂಡಿದೆ.

ಈಗ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ನಾಯಕರ ಜೊತೆ ನಟಿ ರಾಗಿಣಿ ಇರುವ ಚಿತ್ರಗಳನ್ನು ಬಿಜೆಪಿ ಬಿಡುಗಡೆ ಮಾಡುತ್ತಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಎದುರೆದುರೇ ಪೈಪೋಟಿಗೆ ನಿಂತಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಾಂಗ್ರೆಸ್ ಮತ್ತು ಅವರ ಶಾಸಕರು ಡ್ರಗ್ಸ್ ಪರ ಇದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ಇದಕ್ಕೆ ಪ್ರತ್ಯುತ್ತರ ನೀಡಿರುವ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ. ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ ಎಂದು ಹೇಳಿದ್ದಾರೆ.

ವಿರೋಧ ಪಕ್ಷದವರ ಮೇಲೆ ಮಾಡುತ್ತಿರುವ ಆರೋಪಗಳನ್ನು ಖಂಡಿಸುವುದಾಗಿ ತಿಳಿಸಿರುವ ಅವರು, ಮಾದಕ ವಸ್ತುಗಳ ಹಾವಳಿ ನಿಮೂಲನೆಯ ಉದ್ದೇಶವಿದ್ದರೇ ಸುಳ್ಳು ಆರೋಪ ಮಾಡುತ್ತಿರುವವರ ಬಾಯಿ ಮುಚ್ಚಿಸಿ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಿದ್ದಾರೆ.

ಆರೋಪಿ ಜೊತೆಗಿನ ಫೋಟೋಗಳ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ. ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ ಎಂದಿದ್ದಾರೆ.

ಡ್ರಗ್ಸ್ ಹಗರಣದ ತನಿಖೆ ಹಾದಿ ತಪ್ಪುತ್ತಿದೆ ಎಂದಿರುವ ವಿ-ಪಕ್ಷ ನಾಯಕ, ಡಿಜೆ ಹಳ್ಳಿ ಗಲಭೆಯ ತನಿಖೆಯನ್ನು ಉದಾಹರಣೆ ನೀಡಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ: ಸಿದ್ದರಾಮಯ್ಯನವರ 13 ಅಂಶಗಳ ಪತ್ರ – ಉತ್ತರಿಸುವರೇ ಸಿಎಂ?

ಇಷ್ಟು ದಿನ ಪೊಲೀಸ್, ಸ್ಯಾಂಡಲ್‌ವುಡ್ ಎನ್ನುತ್ತಿದ್ದವರಿಗೆ ಎರಡು ಪಕ್ಷಗಳ ಆರೋಪ-ಪ್ರತ್ಯಾರೋಪಗಳು ಮತ್ತಷ್ಟು ಮನರಂಜನೆ ನೀಡುತ್ತಿವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಆರೋಪಗಳನ್ನು ಗಂಬೀರವಾಗಿ ಪರಿಗಣಿಸಿರುವುದು ಅವರ ಟ್ವೀಟ್‌ಗಳಿಂದ ಕಂಡುಬರುತ್ತಿದೆ.

ಸ್ಯಾಂಡಲ್​ವುಡ್ ಡ್ರಗ್ಸ್​ ಕೇಸ್​ಗೆ ಸಂಬಂರಧಿಸಿದಂತೆ ಸಿಸಿಬಿ ಪೊಲೀಸರಿಂದ ಅರೆಸ್ಟ್ ಆಗಿರುವ ರಾಗಿಣಿ, ಸಂಜನಾ ಗಲ್ರಾನಿ,ರವಿಶಂಕರ್, ಪ್ರಶಾಂತ್ ರಾಂಕ, ಲೂಮ್ ಪೆಪ್ಪರ್, ರಾಹುಲ್ ಅವರನ್ನು ಮತ್ತೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.


ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...