Homeಮುಖಪುಟಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು

ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು

- Advertisement -
- Advertisement -

ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಭಾರಿ ಡ್ರಗ್ಸ್ ಪಿತೂರಿ ಅಥವಾ ಅಂತಾರಾಷ್ಟ್ರೀಯ ಡ್ರಗ್ಸ್ ಕಳ್ಳಸಾಗಣೆ ಸಿಂಡಿಕೇಟ್‌ನ ಭಾಗವಾಗಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಮತ್ತು ಅವರನ್ನು ಬಂಧಿಸಿದ ಕಾರ್ಡೆಲಿಯಾ ವಿಹಾರ ನೌಕೆಯ ಮೇಲಿನ ದಾಳಿಯಲ್ಲಿ ಹಲವಾರು ಅಕ್ರಮಗಳು ನಡೆದಿವೆ ಎಂದು ವಿಶೇಷ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)ದ ತನಿಖಾ ತಂಡವು (SIT) ಪತ್ತೆಹಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಿಂದೂಸ್ಥಾನ್‌ ಟೈಮ್ಸ್‌ ವರದಿ ಮಾಡಿದೆ.

NCB ಯ ಮುಂಬೈ ಘಟಕದ ಆರೋಪಗಳಿಗೆ ವಿರುದ್ಧವಾಗಿ, SIT ಯ ಕೆಲವು ಪ್ರಮುಖ ಸಂಶೋಧನೆಗಳನ್ನು ಅಧಿಕಾರಿಗಳು ಹಿಂದೂಸ್ಥಾನ್‌ ಟೈಮ್ಸ್‌‌‌ನೊಂದಿಗೆ ಹಂಚಿಕೊಂಡಿದ್ದಾರೆ. ಅವರು ಹೇಳುವಂತೆ, “ಆರ್ಯನ್ ಖಾನ್ ಅವರಲ್ಲಿ ಡ್ರಗ್ಸ್‌ ಇರಲಿಲ್ಲ, ಆದ್ದರಿಂದ ಅವರ ಫೋನ್ ತೆಗೆದುಕೊಂಡು ಅವರ ಚಾಟ್‌ಗಳನ್ನು ಪರಿಶೀಲಿಸುವ ಅಗತ್ಯವಿಲ್ಲ. ಚಾಟ್‌ಗಳು ಆರ್ಯನ್‌ ಅವರು ಯಾವುದೇ ಅಂತರಾಷ್ಟ್ರೀಯ ಸಿಂಡಿಕೇಟ್‌ನ ಭಾಗವಾಗಿದ್ದರು ಎಂದು ಸೂಚಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್‌ ಪ್ರಕರಣ: ಆರ್ಯನ್‌ ಖಾನ್‌ ರಕ್ಷಿಸಿದ ಒಂದು ಸೆಲ್ಫಿಯ ಕಥೆ!

“ಎನ್‌ಸಿಬಿ ನಿಯಮದಂತೆ ದಾಳಿಯ ಸಮಯದಲ್ಲಿ ಮಾಡಬೇಕಿದ್ದ ಕಡ್ಡಾಯ ವೀಡಿಯೊ ರೆಕಾರ್ಡ್ ಅನ್ನು ಮಾಡಲಾಗಿಲ್ಲ. ಪ್ರಕರಣದಲ್ಲಿ ಬಂಧಿತರಾದ ಹಲವು ಆರೋಪಿಗಳಿಂದ ಡ್ರಗ್ಸ್‌ ಒಂದನ್ನೆ ವಶಪಡಿಸಿಕೊಂಡಿದೆ ಎಂದು ತೋರಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಖಚಿತವಾಗಿ ಹೇಳುವುದಾದರೆ, ಎಸ್‌ಐಟಿ ತನಿಖೆ ಪೂರ್ಣಗೊಂಡಿಲ್ಲ. ಅದು ತನ್ನ ಅಂತಿಮ ವರದಿಯನ್ನು ಎನ್‌ಸಿಬಿ ಡೈರೆಕ್ಟರ್ ಜನರಲ್ ಎಸ್‌ಎನ್ ಪ್ರಧಾನ್ ಅವರಿಗೆ ಸಲ್ಲಿಸಲು ಒಂದೆರಡು ತಿಂಗಳಾಗಬಹುದು. ನಿರ್ದಿಷ್ಟವಾಗಿ ಆರ್ಯನ್‌ ಖಾನ್ ಅವರು ಯಾವುದೇ ಮಾದಕವಸ್ತುಗಳನ್ನು ಹೊಂದಿರದಿದ್ದರೂ, ಸೇವನೆ ಮಾಡಿದ್ದಕ್ಕೆ ದೋಷಾರೋಪಣೆ ಮಾಡಬಹುದೆ ಎಂದು ಅಂತಿಮ ನಿರ್ಧಾರದ ಮೊದಲು ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಲಾಗುವುದು” ಎಂಬ ಅಂಶದ ಬಗ್ಗೆ, ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಸ್‌ಐಟಿ ತನಿಖೆಯು ದಾಳಿಯ ಬಗ್ಗೆ ಮತ್ತು ಎನ್‌ಸಿಬಿಯ ಮಾಜಿ ಮುಂಬೈ ವಲಯ ಘಟಕದ ನಿರ್ದೇಶಕ ಸಮೀರ್ ವಾಂಖೆಡೆ ಅವರ ನಡವಳಿಕೆಯ ಮೇಲೆ ಹೆಚ್ಚಿನ ಪ್ರಶ್ನೆಗಳನ್ನು ಎತ್ತುವಂತಿದೆ ಎಂದು ಹಿಂದೂಸ್ಥಾನ್ ವರದಿ ಹೇಳಿದೆ.

ಮುಂಬೈನ ಗ್ರೀನ್ ಗೇಟ್‌ನಲ್ಲಿರುವ ಅಂತರಾಷ್ಟ್ರೀಯ ಕ್ರೂಸ್ ಟರ್ಮಿನಲ್‌ನಲ್ಲಿ, ಕಾರ್ಡೆಲಿಯಾ ಕ್ರೂಸ್‌‌ ಹಡಗಿನ ಮೇಲೆ ಕಳೆದ ವರ್ಷ ಅಕ್ಟೋಬರ್ 2 ರ ರಾತ್ರಿ ವಾಂಖೆಡೆ ಮತ್ತು ಅಧಿಕಾರಿಗಳು ದಾಳಿ ಮಾಡಿದ್ದರು. ಕ್ರೂಸ್ ಹಡಗಿನಿಂದ 13 ಗ್ರಾಂ ಕೊಕೇನ್, ಐದು ಗ್ರಾಂ ಮೆಫೆಡ್ರೋನ್, 21 ಗ್ರಾಂ ಗಾಂಜಾ, 22 ಎಂಡಿಎಂಎ (ಎಕ್ಸ್ಟಸಿ) ಮಾತ್ರೆಗಳು ಮತ್ತು ₹ 1.33 ಲಕ್ಷ ನಗದನ್ನು ಈ ವೇಳೆ ಎನ್‌ಸಿಬಿ ವಶಪಡಿಸಿಕೊಂಡಿದೆ.

ಇದನ್ನೂ ಓದಿ: ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...