Homeಮುಖಪುಟಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು

ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು

- Advertisement -
- Advertisement -

ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಭಾರಿ ಡ್ರಗ್ಸ್ ಪಿತೂರಿ ಅಥವಾ ಅಂತಾರಾಷ್ಟ್ರೀಯ ಡ್ರಗ್ಸ್ ಕಳ್ಳಸಾಗಣೆ ಸಿಂಡಿಕೇಟ್‌ನ ಭಾಗವಾಗಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಮತ್ತು ಅವರನ್ನು ಬಂಧಿಸಿದ ಕಾರ್ಡೆಲಿಯಾ ವಿಹಾರ ನೌಕೆಯ ಮೇಲಿನ ದಾಳಿಯಲ್ಲಿ ಹಲವಾರು ಅಕ್ರಮಗಳು ನಡೆದಿವೆ ಎಂದು ವಿಶೇಷ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)ದ ತನಿಖಾ ತಂಡವು (SIT) ಪತ್ತೆಹಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಿಂದೂಸ್ಥಾನ್‌ ಟೈಮ್ಸ್‌ ವರದಿ ಮಾಡಿದೆ.

NCB ಯ ಮುಂಬೈ ಘಟಕದ ಆರೋಪಗಳಿಗೆ ವಿರುದ್ಧವಾಗಿ, SIT ಯ ಕೆಲವು ಪ್ರಮುಖ ಸಂಶೋಧನೆಗಳನ್ನು ಅಧಿಕಾರಿಗಳು ಹಿಂದೂಸ್ಥಾನ್‌ ಟೈಮ್ಸ್‌‌‌ನೊಂದಿಗೆ ಹಂಚಿಕೊಂಡಿದ್ದಾರೆ. ಅವರು ಹೇಳುವಂತೆ, “ಆರ್ಯನ್ ಖಾನ್ ಅವರಲ್ಲಿ ಡ್ರಗ್ಸ್‌ ಇರಲಿಲ್ಲ, ಆದ್ದರಿಂದ ಅವರ ಫೋನ್ ತೆಗೆದುಕೊಂಡು ಅವರ ಚಾಟ್‌ಗಳನ್ನು ಪರಿಶೀಲಿಸುವ ಅಗತ್ಯವಿಲ್ಲ. ಚಾಟ್‌ಗಳು ಆರ್ಯನ್‌ ಅವರು ಯಾವುದೇ ಅಂತರಾಷ್ಟ್ರೀಯ ಸಿಂಡಿಕೇಟ್‌ನ ಭಾಗವಾಗಿದ್ದರು ಎಂದು ಸೂಚಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್‌ ಪ್ರಕರಣ: ಆರ್ಯನ್‌ ಖಾನ್‌ ರಕ್ಷಿಸಿದ ಒಂದು ಸೆಲ್ಫಿಯ ಕಥೆ!

“ಎನ್‌ಸಿಬಿ ನಿಯಮದಂತೆ ದಾಳಿಯ ಸಮಯದಲ್ಲಿ ಮಾಡಬೇಕಿದ್ದ ಕಡ್ಡಾಯ ವೀಡಿಯೊ ರೆಕಾರ್ಡ್ ಅನ್ನು ಮಾಡಲಾಗಿಲ್ಲ. ಪ್ರಕರಣದಲ್ಲಿ ಬಂಧಿತರಾದ ಹಲವು ಆರೋಪಿಗಳಿಂದ ಡ್ರಗ್ಸ್‌ ಒಂದನ್ನೆ ವಶಪಡಿಸಿಕೊಂಡಿದೆ ಎಂದು ತೋರಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಖಚಿತವಾಗಿ ಹೇಳುವುದಾದರೆ, ಎಸ್‌ಐಟಿ ತನಿಖೆ ಪೂರ್ಣಗೊಂಡಿಲ್ಲ. ಅದು ತನ್ನ ಅಂತಿಮ ವರದಿಯನ್ನು ಎನ್‌ಸಿಬಿ ಡೈರೆಕ್ಟರ್ ಜನರಲ್ ಎಸ್‌ಎನ್ ಪ್ರಧಾನ್ ಅವರಿಗೆ ಸಲ್ಲಿಸಲು ಒಂದೆರಡು ತಿಂಗಳಾಗಬಹುದು. ನಿರ್ದಿಷ್ಟವಾಗಿ ಆರ್ಯನ್‌ ಖಾನ್ ಅವರು ಯಾವುದೇ ಮಾದಕವಸ್ತುಗಳನ್ನು ಹೊಂದಿರದಿದ್ದರೂ, ಸೇವನೆ ಮಾಡಿದ್ದಕ್ಕೆ ದೋಷಾರೋಪಣೆ ಮಾಡಬಹುದೆ ಎಂದು ಅಂತಿಮ ನಿರ್ಧಾರದ ಮೊದಲು ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಲಾಗುವುದು” ಎಂಬ ಅಂಶದ ಬಗ್ಗೆ, ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಸ್‌ಐಟಿ ತನಿಖೆಯು ದಾಳಿಯ ಬಗ್ಗೆ ಮತ್ತು ಎನ್‌ಸಿಬಿಯ ಮಾಜಿ ಮುಂಬೈ ವಲಯ ಘಟಕದ ನಿರ್ದೇಶಕ ಸಮೀರ್ ವಾಂಖೆಡೆ ಅವರ ನಡವಳಿಕೆಯ ಮೇಲೆ ಹೆಚ್ಚಿನ ಪ್ರಶ್ನೆಗಳನ್ನು ಎತ್ತುವಂತಿದೆ ಎಂದು ಹಿಂದೂಸ್ಥಾನ್ ವರದಿ ಹೇಳಿದೆ.

ಮುಂಬೈನ ಗ್ರೀನ್ ಗೇಟ್‌ನಲ್ಲಿರುವ ಅಂತರಾಷ್ಟ್ರೀಯ ಕ್ರೂಸ್ ಟರ್ಮಿನಲ್‌ನಲ್ಲಿ, ಕಾರ್ಡೆಲಿಯಾ ಕ್ರೂಸ್‌‌ ಹಡಗಿನ ಮೇಲೆ ಕಳೆದ ವರ್ಷ ಅಕ್ಟೋಬರ್ 2 ರ ರಾತ್ರಿ ವಾಂಖೆಡೆ ಮತ್ತು ಅಧಿಕಾರಿಗಳು ದಾಳಿ ಮಾಡಿದ್ದರು. ಕ್ರೂಸ್ ಹಡಗಿನಿಂದ 13 ಗ್ರಾಂ ಕೊಕೇನ್, ಐದು ಗ್ರಾಂ ಮೆಫೆಡ್ರೋನ್, 21 ಗ್ರಾಂ ಗಾಂಜಾ, 22 ಎಂಡಿಎಂಎ (ಎಕ್ಸ್ಟಸಿ) ಮಾತ್ರೆಗಳು ಮತ್ತು ₹ 1.33 ಲಕ್ಷ ನಗದನ್ನು ಈ ವೇಳೆ ಎನ್‌ಸಿಬಿ ವಶಪಡಿಸಿಕೊಂಡಿದೆ.

ಇದನ್ನೂ ಓದಿ: ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....