Homeಮುಖಪುಟಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು

ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು

- Advertisement -
- Advertisement -

ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಭಾರಿ ಡ್ರಗ್ಸ್ ಪಿತೂರಿ ಅಥವಾ ಅಂತಾರಾಷ್ಟ್ರೀಯ ಡ್ರಗ್ಸ್ ಕಳ್ಳಸಾಗಣೆ ಸಿಂಡಿಕೇಟ್‌ನ ಭಾಗವಾಗಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಮತ್ತು ಅವರನ್ನು ಬಂಧಿಸಿದ ಕಾರ್ಡೆಲಿಯಾ ವಿಹಾರ ನೌಕೆಯ ಮೇಲಿನ ದಾಳಿಯಲ್ಲಿ ಹಲವಾರು ಅಕ್ರಮಗಳು ನಡೆದಿವೆ ಎಂದು ವಿಶೇಷ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)ದ ತನಿಖಾ ತಂಡವು (SIT) ಪತ್ತೆಹಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಿಂದೂಸ್ಥಾನ್‌ ಟೈಮ್ಸ್‌ ವರದಿ ಮಾಡಿದೆ.

NCB ಯ ಮುಂಬೈ ಘಟಕದ ಆರೋಪಗಳಿಗೆ ವಿರುದ್ಧವಾಗಿ, SIT ಯ ಕೆಲವು ಪ್ರಮುಖ ಸಂಶೋಧನೆಗಳನ್ನು ಅಧಿಕಾರಿಗಳು ಹಿಂದೂಸ್ಥಾನ್‌ ಟೈಮ್ಸ್‌‌‌ನೊಂದಿಗೆ ಹಂಚಿಕೊಂಡಿದ್ದಾರೆ. ಅವರು ಹೇಳುವಂತೆ, “ಆರ್ಯನ್ ಖಾನ್ ಅವರಲ್ಲಿ ಡ್ರಗ್ಸ್‌ ಇರಲಿಲ್ಲ, ಆದ್ದರಿಂದ ಅವರ ಫೋನ್ ತೆಗೆದುಕೊಂಡು ಅವರ ಚಾಟ್‌ಗಳನ್ನು ಪರಿಶೀಲಿಸುವ ಅಗತ್ಯವಿಲ್ಲ. ಚಾಟ್‌ಗಳು ಆರ್ಯನ್‌ ಅವರು ಯಾವುದೇ ಅಂತರಾಷ್ಟ್ರೀಯ ಸಿಂಡಿಕೇಟ್‌ನ ಭಾಗವಾಗಿದ್ದರು ಎಂದು ಸೂಚಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್‌ ಪ್ರಕರಣ: ಆರ್ಯನ್‌ ಖಾನ್‌ ರಕ್ಷಿಸಿದ ಒಂದು ಸೆಲ್ಫಿಯ ಕಥೆ!

“ಎನ್‌ಸಿಬಿ ನಿಯಮದಂತೆ ದಾಳಿಯ ಸಮಯದಲ್ಲಿ ಮಾಡಬೇಕಿದ್ದ ಕಡ್ಡಾಯ ವೀಡಿಯೊ ರೆಕಾರ್ಡ್ ಅನ್ನು ಮಾಡಲಾಗಿಲ್ಲ. ಪ್ರಕರಣದಲ್ಲಿ ಬಂಧಿತರಾದ ಹಲವು ಆರೋಪಿಗಳಿಂದ ಡ್ರಗ್ಸ್‌ ಒಂದನ್ನೆ ವಶಪಡಿಸಿಕೊಂಡಿದೆ ಎಂದು ತೋರಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಖಚಿತವಾಗಿ ಹೇಳುವುದಾದರೆ, ಎಸ್‌ಐಟಿ ತನಿಖೆ ಪೂರ್ಣಗೊಂಡಿಲ್ಲ. ಅದು ತನ್ನ ಅಂತಿಮ ವರದಿಯನ್ನು ಎನ್‌ಸಿಬಿ ಡೈರೆಕ್ಟರ್ ಜನರಲ್ ಎಸ್‌ಎನ್ ಪ್ರಧಾನ್ ಅವರಿಗೆ ಸಲ್ಲಿಸಲು ಒಂದೆರಡು ತಿಂಗಳಾಗಬಹುದು. ನಿರ್ದಿಷ್ಟವಾಗಿ ಆರ್ಯನ್‌ ಖಾನ್ ಅವರು ಯಾವುದೇ ಮಾದಕವಸ್ತುಗಳನ್ನು ಹೊಂದಿರದಿದ್ದರೂ, ಸೇವನೆ ಮಾಡಿದ್ದಕ್ಕೆ ದೋಷಾರೋಪಣೆ ಮಾಡಬಹುದೆ ಎಂದು ಅಂತಿಮ ನಿರ್ಧಾರದ ಮೊದಲು ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಲಾಗುವುದು” ಎಂಬ ಅಂಶದ ಬಗ್ಗೆ, ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಸ್‌ಐಟಿ ತನಿಖೆಯು ದಾಳಿಯ ಬಗ್ಗೆ ಮತ್ತು ಎನ್‌ಸಿಬಿಯ ಮಾಜಿ ಮುಂಬೈ ವಲಯ ಘಟಕದ ನಿರ್ದೇಶಕ ಸಮೀರ್ ವಾಂಖೆಡೆ ಅವರ ನಡವಳಿಕೆಯ ಮೇಲೆ ಹೆಚ್ಚಿನ ಪ್ರಶ್ನೆಗಳನ್ನು ಎತ್ತುವಂತಿದೆ ಎಂದು ಹಿಂದೂಸ್ಥಾನ್ ವರದಿ ಹೇಳಿದೆ.

ಮುಂಬೈನ ಗ್ರೀನ್ ಗೇಟ್‌ನಲ್ಲಿರುವ ಅಂತರಾಷ್ಟ್ರೀಯ ಕ್ರೂಸ್ ಟರ್ಮಿನಲ್‌ನಲ್ಲಿ, ಕಾರ್ಡೆಲಿಯಾ ಕ್ರೂಸ್‌‌ ಹಡಗಿನ ಮೇಲೆ ಕಳೆದ ವರ್ಷ ಅಕ್ಟೋಬರ್ 2 ರ ರಾತ್ರಿ ವಾಂಖೆಡೆ ಮತ್ತು ಅಧಿಕಾರಿಗಳು ದಾಳಿ ಮಾಡಿದ್ದರು. ಕ್ರೂಸ್ ಹಡಗಿನಿಂದ 13 ಗ್ರಾಂ ಕೊಕೇನ್, ಐದು ಗ್ರಾಂ ಮೆಫೆಡ್ರೋನ್, 21 ಗ್ರಾಂ ಗಾಂಜಾ, 22 ಎಂಡಿಎಂಎ (ಎಕ್ಸ್ಟಸಿ) ಮಾತ್ರೆಗಳು ಮತ್ತು ₹ 1.33 ಲಕ್ಷ ನಗದನ್ನು ಈ ವೇಳೆ ಎನ್‌ಸಿಬಿ ವಶಪಡಿಸಿಕೊಂಡಿದೆ.

ಇದನ್ನೂ ಓದಿ: ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...