Homeಮುಖಪುಟಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು

ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು

- Advertisement -
- Advertisement -

ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಭಾರಿ ಡ್ರಗ್ಸ್ ಪಿತೂರಿ ಅಥವಾ ಅಂತಾರಾಷ್ಟ್ರೀಯ ಡ್ರಗ್ಸ್ ಕಳ್ಳಸಾಗಣೆ ಸಿಂಡಿಕೇಟ್‌ನ ಭಾಗವಾಗಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಮತ್ತು ಅವರನ್ನು ಬಂಧಿಸಿದ ಕಾರ್ಡೆಲಿಯಾ ವಿಹಾರ ನೌಕೆಯ ಮೇಲಿನ ದಾಳಿಯಲ್ಲಿ ಹಲವಾರು ಅಕ್ರಮಗಳು ನಡೆದಿವೆ ಎಂದು ವಿಶೇಷ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)ದ ತನಿಖಾ ತಂಡವು (SIT) ಪತ್ತೆಹಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಿಂದೂಸ್ಥಾನ್‌ ಟೈಮ್ಸ್‌ ವರದಿ ಮಾಡಿದೆ.

NCB ಯ ಮುಂಬೈ ಘಟಕದ ಆರೋಪಗಳಿಗೆ ವಿರುದ್ಧವಾಗಿ, SIT ಯ ಕೆಲವು ಪ್ರಮುಖ ಸಂಶೋಧನೆಗಳನ್ನು ಅಧಿಕಾರಿಗಳು ಹಿಂದೂಸ್ಥಾನ್‌ ಟೈಮ್ಸ್‌‌‌ನೊಂದಿಗೆ ಹಂಚಿಕೊಂಡಿದ್ದಾರೆ. ಅವರು ಹೇಳುವಂತೆ, “ಆರ್ಯನ್ ಖಾನ್ ಅವರಲ್ಲಿ ಡ್ರಗ್ಸ್‌ ಇರಲಿಲ್ಲ, ಆದ್ದರಿಂದ ಅವರ ಫೋನ್ ತೆಗೆದುಕೊಂಡು ಅವರ ಚಾಟ್‌ಗಳನ್ನು ಪರಿಶೀಲಿಸುವ ಅಗತ್ಯವಿಲ್ಲ. ಚಾಟ್‌ಗಳು ಆರ್ಯನ್‌ ಅವರು ಯಾವುದೇ ಅಂತರಾಷ್ಟ್ರೀಯ ಸಿಂಡಿಕೇಟ್‌ನ ಭಾಗವಾಗಿದ್ದರು ಎಂದು ಸೂಚಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್‌ ಪ್ರಕರಣ: ಆರ್ಯನ್‌ ಖಾನ್‌ ರಕ್ಷಿಸಿದ ಒಂದು ಸೆಲ್ಫಿಯ ಕಥೆ!

“ಎನ್‌ಸಿಬಿ ನಿಯಮದಂತೆ ದಾಳಿಯ ಸಮಯದಲ್ಲಿ ಮಾಡಬೇಕಿದ್ದ ಕಡ್ಡಾಯ ವೀಡಿಯೊ ರೆಕಾರ್ಡ್ ಅನ್ನು ಮಾಡಲಾಗಿಲ್ಲ. ಪ್ರಕರಣದಲ್ಲಿ ಬಂಧಿತರಾದ ಹಲವು ಆರೋಪಿಗಳಿಂದ ಡ್ರಗ್ಸ್‌ ಒಂದನ್ನೆ ವಶಪಡಿಸಿಕೊಂಡಿದೆ ಎಂದು ತೋರಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಖಚಿತವಾಗಿ ಹೇಳುವುದಾದರೆ, ಎಸ್‌ಐಟಿ ತನಿಖೆ ಪೂರ್ಣಗೊಂಡಿಲ್ಲ. ಅದು ತನ್ನ ಅಂತಿಮ ವರದಿಯನ್ನು ಎನ್‌ಸಿಬಿ ಡೈರೆಕ್ಟರ್ ಜನರಲ್ ಎಸ್‌ಎನ್ ಪ್ರಧಾನ್ ಅವರಿಗೆ ಸಲ್ಲಿಸಲು ಒಂದೆರಡು ತಿಂಗಳಾಗಬಹುದು. ನಿರ್ದಿಷ್ಟವಾಗಿ ಆರ್ಯನ್‌ ಖಾನ್ ಅವರು ಯಾವುದೇ ಮಾದಕವಸ್ತುಗಳನ್ನು ಹೊಂದಿರದಿದ್ದರೂ, ಸೇವನೆ ಮಾಡಿದ್ದಕ್ಕೆ ದೋಷಾರೋಪಣೆ ಮಾಡಬಹುದೆ ಎಂದು ಅಂತಿಮ ನಿರ್ಧಾರದ ಮೊದಲು ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಲಾಗುವುದು” ಎಂಬ ಅಂಶದ ಬಗ್ಗೆ, ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಸ್‌ಐಟಿ ತನಿಖೆಯು ದಾಳಿಯ ಬಗ್ಗೆ ಮತ್ತು ಎನ್‌ಸಿಬಿಯ ಮಾಜಿ ಮುಂಬೈ ವಲಯ ಘಟಕದ ನಿರ್ದೇಶಕ ಸಮೀರ್ ವಾಂಖೆಡೆ ಅವರ ನಡವಳಿಕೆಯ ಮೇಲೆ ಹೆಚ್ಚಿನ ಪ್ರಶ್ನೆಗಳನ್ನು ಎತ್ತುವಂತಿದೆ ಎಂದು ಹಿಂದೂಸ್ಥಾನ್ ವರದಿ ಹೇಳಿದೆ.

ಮುಂಬೈನ ಗ್ರೀನ್ ಗೇಟ್‌ನಲ್ಲಿರುವ ಅಂತರಾಷ್ಟ್ರೀಯ ಕ್ರೂಸ್ ಟರ್ಮಿನಲ್‌ನಲ್ಲಿ, ಕಾರ್ಡೆಲಿಯಾ ಕ್ರೂಸ್‌‌ ಹಡಗಿನ ಮೇಲೆ ಕಳೆದ ವರ್ಷ ಅಕ್ಟೋಬರ್ 2 ರ ರಾತ್ರಿ ವಾಂಖೆಡೆ ಮತ್ತು ಅಧಿಕಾರಿಗಳು ದಾಳಿ ಮಾಡಿದ್ದರು. ಕ್ರೂಸ್ ಹಡಗಿನಿಂದ 13 ಗ್ರಾಂ ಕೊಕೇನ್, ಐದು ಗ್ರಾಂ ಮೆಫೆಡ್ರೋನ್, 21 ಗ್ರಾಂ ಗಾಂಜಾ, 22 ಎಂಡಿಎಂಎ (ಎಕ್ಸ್ಟಸಿ) ಮಾತ್ರೆಗಳು ಮತ್ತು ₹ 1.33 ಲಕ್ಷ ನಗದನ್ನು ಈ ವೇಳೆ ಎನ್‌ಸಿಬಿ ವಶಪಡಿಸಿಕೊಂಡಿದೆ.

ಇದನ್ನೂ ಓದಿ: ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...