Homeಕರ್ನಾಟಕಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಧಾರವಾಹಿ ಕಲಾವಿದೆಯರು ಕೂಡಾ ಇದರ ಗ್ರಾಹಕರು ಎಂದು ತನಿಖೆ ಬಹಿರಂಗ ಪಡಿಸಿದೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ನಿರಂತರವಾಗಿ ಡ್ರಗ್ಸ್‌ ದಂದೆ ನಡೆಯುತ್ತಿದೆ ಎನ್ನಲಾಗಿದ್ದು, ನಟರಿಗಿಂತ ನಟಿಯರಿಂದಲೇ ಇದಕ್ಕೆ ಬೇಡಿಕೆ ಹೆಚ್ಚಾಗಿದ್ದು, ಧಾರವಾಹಿ ಕಲಾವಿದೆಯರು ಕೂಡಾ ಇದರ ಗ್ರಾಹಕರು ಎಂದು ತನಿಖೆಯಿಂದ ತಿಳಿದು ಬಂದಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್​ಸಿಬಿ) ಅಧಿಕಾರಿಗಳು ’ರಾಯಲ್ಸ್‌ ಸೂಟ್ಸ್‌ ಹೋಟೆಲ್’ ಅಪಾರ್ಟ್‌ಮೆಂಟ್ ಸಮುಚ್ಚಯದ ಪ್ಲಾಟ್‌ ಮೇಲೆ ದಾಳಿ ಮಾಡಿ ಡ್ರಗ್ಸ್ ದಂಧೆ ಒಬ್ಬ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನೂ ಬಂಧಿಸಿದ್ದರು. ಬಂಧಿತರನ್ನು ಡಿ ಅನಿಕಾ, ಅನೂಪ್ ಮೊಹಮದ್ ಮತ್ತು ರಾಜೇಶ್ ರವೀಂದ್ರನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿದ್ದು ನಿಜವೆ?

ತನಿಖೆಯ ವೇಳೆ ಹೆಸರಾಂತ ನಟ-ನಟಿಯರು, ಹಾಗೂ ಸಂಗೀತ ನಿರ್ದೇಶಕರ ಹೆಸರನ್ನು ಬಂಧಿತರು ಬಾಯಿಬಿಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ನಟಿಯರು ಡ್ರಗ್ಸ್‌ನಿಂದ ಸೌಂದರ್ಯ ಹೆಚ್ಚಾಗುತ್ತದೆ ಎಂಬ ಮನೋಭಾವನೆಯಲ್ಲಿ ಇದನ್ನು ಬಳಸುತ್ತಿದ್ದರು ಎನ್ನಲಾಗಿದೆ. ಕಲಾವಿದರು ಮಾಡುತ್ತಿದ್ದ ಪಾರ್ಟಿಗಳೆ ಈ ಡ್ರಗ್ಸ್‌ ವ್ಯಾಪಾರದ ಕೇಂದ್ರವಾಗಿದ್ದು ಅಲ್ಲಿಂದಲೇ ಆರೋಪಿಗಳು ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ.

PC: The New Indian Express

ಈ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್,‌ ‘ಇಂದಿನ ಜನರೇಷನ್‌ನಲ್ಲಿ ಮಾದಕ ವ್ಯಸನದ ಆತಂಕ ಇದ್ದೇ ಇದೆ. ಆದರೆ, ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಮಾಫಿಯಾ ಇದೆ ಎಂಬುದು ನನ್ನ ಗಮನಕ್ಕೆ ಎಲ್ಲಿಯೂ ಬಂದಿಲ್ಲ. ಅದು ನಮ್ಮ ಚಿತ್ರರಂಗಕ್ಕೆ ಬರಬಾರದು ಎಂದು ನಾನು ಆಶಿಸುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ’ಜಾಫರ್ ಪನಾಹಿ’ ಸಿನಿಮಾ ಜಗತ್ತಿನ ಬಂಡುಕೋರ: ಕೀಲಾರ ಟೆಂಟ್ ಹೌಸ್-5

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, ‘ನನಗೆ ತಿಳಿದಿರುವ ಮಟ್ಟಿಗೆ ನಮ್ಮ ಕನ್ನಡ ಚಿತ್ರರಂಗದ ಕಲಾವಿದರು ಯಾರು ಕೂಡ ಡ್ರಗ್ಸ್ ತೆಗೆದುಕೊಳ್ಳಲ್ಲ. ಬಾಡಿ ಬಿಲ್ಡ್ ಮಾಡಲು ವೈದ್ಯರ ಸಲಹೆ ಪಡೆದು, ಪ್ರೋಟಿನ್ ಮತ್ತಿತ್ತರದ್ದನ್ನು ತೆಗೆದುಕೊಳ್ಳುತ್ತಾರೆ. ಬೆಳಗ್ಗೆ ಎದ್ದಕೂಡಲೇ ಡ್ರಗ್ಸ್ ಬೇಕೇಬೇಕು ಎನ್ನುವಂತಹ ಕಲಾವಿದರು ನಮ್ಮ ಇಂಡಸ್ಟ್ರೀಯಲ್ಲಿ ಯಾರೂ ಇಲ್ಲ’ ಎಂದು ಹೇಳಿದ್ದಾರೆ.

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌, ನಟ ನಟಿಯರು ಡ್ರಗ್ಸ್‌‌ ಮಾಫಿಯಾ ದಲ್ಲಿ ಭಾಗಿಯಾಗಿರುವ ವಿಷಯವನ್ನು ನಮ್ಮ ಸರ್ಕಾರ ಹೊರಹಾಕಿದೆ. ಹಿಂದಿನ ಆಡಳಿತದಲ್ಲಿದ್ದವರು ಡ್ರಗ್ಸ್ ಮಾಫಿಯಾದ ಪರವಾಗಿದ್ದರು, ಮುಖ್ಯಮಂತ್ರಿ ಯಡಿಯೂರಪ್ಪ ಈ ಜಾಲವನ್ನು ಬೇರು ಸಮೇತ ಕಿತ್ತು ಹಾಕುವಲ್ಲಿ ಮುಂದಾಗುತ್ತಿದ್ದಾರೆ ಎಂದು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸಿದ್ದಾರೆ.


ಇದನ್ನೂ ಓದಿ: ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...