Homeಕರ್ನಾಟಕಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಧಾರವಾಹಿ ಕಲಾವಿದೆಯರು ಕೂಡಾ ಇದರ ಗ್ರಾಹಕರು ಎಂದು ತನಿಖೆ ಬಹಿರಂಗ ಪಡಿಸಿದೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ನಿರಂತರವಾಗಿ ಡ್ರಗ್ಸ್‌ ದಂದೆ ನಡೆಯುತ್ತಿದೆ ಎನ್ನಲಾಗಿದ್ದು, ನಟರಿಗಿಂತ ನಟಿಯರಿಂದಲೇ ಇದಕ್ಕೆ ಬೇಡಿಕೆ ಹೆಚ್ಚಾಗಿದ್ದು, ಧಾರವಾಹಿ ಕಲಾವಿದೆಯರು ಕೂಡಾ ಇದರ ಗ್ರಾಹಕರು ಎಂದು ತನಿಖೆಯಿಂದ ತಿಳಿದು ಬಂದಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್​ಸಿಬಿ) ಅಧಿಕಾರಿಗಳು ’ರಾಯಲ್ಸ್‌ ಸೂಟ್ಸ್‌ ಹೋಟೆಲ್’ ಅಪಾರ್ಟ್‌ಮೆಂಟ್ ಸಮುಚ್ಚಯದ ಪ್ಲಾಟ್‌ ಮೇಲೆ ದಾಳಿ ಮಾಡಿ ಡ್ರಗ್ಸ್ ದಂಧೆ ಒಬ್ಬ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನೂ ಬಂಧಿಸಿದ್ದರು. ಬಂಧಿತರನ್ನು ಡಿ ಅನಿಕಾ, ಅನೂಪ್ ಮೊಹಮದ್ ಮತ್ತು ರಾಜೇಶ್ ರವೀಂದ್ರನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿದ್ದು ನಿಜವೆ?

ತನಿಖೆಯ ವೇಳೆ ಹೆಸರಾಂತ ನಟ-ನಟಿಯರು, ಹಾಗೂ ಸಂಗೀತ ನಿರ್ದೇಶಕರ ಹೆಸರನ್ನು ಬಂಧಿತರು ಬಾಯಿಬಿಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ನಟಿಯರು ಡ್ರಗ್ಸ್‌ನಿಂದ ಸೌಂದರ್ಯ ಹೆಚ್ಚಾಗುತ್ತದೆ ಎಂಬ ಮನೋಭಾವನೆಯಲ್ಲಿ ಇದನ್ನು ಬಳಸುತ್ತಿದ್ದರು ಎನ್ನಲಾಗಿದೆ. ಕಲಾವಿದರು ಮಾಡುತ್ತಿದ್ದ ಪಾರ್ಟಿಗಳೆ ಈ ಡ್ರಗ್ಸ್‌ ವ್ಯಾಪಾರದ ಕೇಂದ್ರವಾಗಿದ್ದು ಅಲ್ಲಿಂದಲೇ ಆರೋಪಿಗಳು ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ.

PC: The New Indian Express

ಈ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್,‌ ‘ಇಂದಿನ ಜನರೇಷನ್‌ನಲ್ಲಿ ಮಾದಕ ವ್ಯಸನದ ಆತಂಕ ಇದ್ದೇ ಇದೆ. ಆದರೆ, ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಮಾಫಿಯಾ ಇದೆ ಎಂಬುದು ನನ್ನ ಗಮನಕ್ಕೆ ಎಲ್ಲಿಯೂ ಬಂದಿಲ್ಲ. ಅದು ನಮ್ಮ ಚಿತ್ರರಂಗಕ್ಕೆ ಬರಬಾರದು ಎಂದು ನಾನು ಆಶಿಸುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ’ಜಾಫರ್ ಪನಾಹಿ’ ಸಿನಿಮಾ ಜಗತ್ತಿನ ಬಂಡುಕೋರ: ಕೀಲಾರ ಟೆಂಟ್ ಹೌಸ್-5

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, ‘ನನಗೆ ತಿಳಿದಿರುವ ಮಟ್ಟಿಗೆ ನಮ್ಮ ಕನ್ನಡ ಚಿತ್ರರಂಗದ ಕಲಾವಿದರು ಯಾರು ಕೂಡ ಡ್ರಗ್ಸ್ ತೆಗೆದುಕೊಳ್ಳಲ್ಲ. ಬಾಡಿ ಬಿಲ್ಡ್ ಮಾಡಲು ವೈದ್ಯರ ಸಲಹೆ ಪಡೆದು, ಪ್ರೋಟಿನ್ ಮತ್ತಿತ್ತರದ್ದನ್ನು ತೆಗೆದುಕೊಳ್ಳುತ್ತಾರೆ. ಬೆಳಗ್ಗೆ ಎದ್ದಕೂಡಲೇ ಡ್ರಗ್ಸ್ ಬೇಕೇಬೇಕು ಎನ್ನುವಂತಹ ಕಲಾವಿದರು ನಮ್ಮ ಇಂಡಸ್ಟ್ರೀಯಲ್ಲಿ ಯಾರೂ ಇಲ್ಲ’ ಎಂದು ಹೇಳಿದ್ದಾರೆ.

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌, ನಟ ನಟಿಯರು ಡ್ರಗ್ಸ್‌‌ ಮಾಫಿಯಾ ದಲ್ಲಿ ಭಾಗಿಯಾಗಿರುವ ವಿಷಯವನ್ನು ನಮ್ಮ ಸರ್ಕಾರ ಹೊರಹಾಕಿದೆ. ಹಿಂದಿನ ಆಡಳಿತದಲ್ಲಿದ್ದವರು ಡ್ರಗ್ಸ್ ಮಾಫಿಯಾದ ಪರವಾಗಿದ್ದರು, ಮುಖ್ಯಮಂತ್ರಿ ಯಡಿಯೂರಪ್ಪ ಈ ಜಾಲವನ್ನು ಬೇರು ಸಮೇತ ಕಿತ್ತು ಹಾಕುವಲ್ಲಿ ಮುಂದಾಗುತ್ತಿದ್ದಾರೆ ಎಂದು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸಿದ್ದಾರೆ.


ಇದನ್ನೂ ಓದಿ: ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...