Homeಕರ್ನಾಟಕಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಧಾರವಾಹಿ ಕಲಾವಿದೆಯರು ಕೂಡಾ ಇದರ ಗ್ರಾಹಕರು ಎಂದು ತನಿಖೆ ಬಹಿರಂಗ ಪಡಿಸಿದೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ನಿರಂತರವಾಗಿ ಡ್ರಗ್ಸ್‌ ದಂದೆ ನಡೆಯುತ್ತಿದೆ ಎನ್ನಲಾಗಿದ್ದು, ನಟರಿಗಿಂತ ನಟಿಯರಿಂದಲೇ ಇದಕ್ಕೆ ಬೇಡಿಕೆ ಹೆಚ್ಚಾಗಿದ್ದು, ಧಾರವಾಹಿ ಕಲಾವಿದೆಯರು ಕೂಡಾ ಇದರ ಗ್ರಾಹಕರು ಎಂದು ತನಿಖೆಯಿಂದ ತಿಳಿದು ಬಂದಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್​ಸಿಬಿ) ಅಧಿಕಾರಿಗಳು ’ರಾಯಲ್ಸ್‌ ಸೂಟ್ಸ್‌ ಹೋಟೆಲ್’ ಅಪಾರ್ಟ್‌ಮೆಂಟ್ ಸಮುಚ್ಚಯದ ಪ್ಲಾಟ್‌ ಮೇಲೆ ದಾಳಿ ಮಾಡಿ ಡ್ರಗ್ಸ್ ದಂಧೆ ಒಬ್ಬ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನೂ ಬಂಧಿಸಿದ್ದರು. ಬಂಧಿತರನ್ನು ಡಿ ಅನಿಕಾ, ಅನೂಪ್ ಮೊಹಮದ್ ಮತ್ತು ರಾಜೇಶ್ ರವೀಂದ್ರನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿದ್ದು ನಿಜವೆ?

ತನಿಖೆಯ ವೇಳೆ ಹೆಸರಾಂತ ನಟ-ನಟಿಯರು, ಹಾಗೂ ಸಂಗೀತ ನಿರ್ದೇಶಕರ ಹೆಸರನ್ನು ಬಂಧಿತರು ಬಾಯಿಬಿಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ನಟಿಯರು ಡ್ರಗ್ಸ್‌ನಿಂದ ಸೌಂದರ್ಯ ಹೆಚ್ಚಾಗುತ್ತದೆ ಎಂಬ ಮನೋಭಾವನೆಯಲ್ಲಿ ಇದನ್ನು ಬಳಸುತ್ತಿದ್ದರು ಎನ್ನಲಾಗಿದೆ. ಕಲಾವಿದರು ಮಾಡುತ್ತಿದ್ದ ಪಾರ್ಟಿಗಳೆ ಈ ಡ್ರಗ್ಸ್‌ ವ್ಯಾಪಾರದ ಕೇಂದ್ರವಾಗಿದ್ದು ಅಲ್ಲಿಂದಲೇ ಆರೋಪಿಗಳು ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ.

PC: The New Indian Express

ಈ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್,‌ ‘ಇಂದಿನ ಜನರೇಷನ್‌ನಲ್ಲಿ ಮಾದಕ ವ್ಯಸನದ ಆತಂಕ ಇದ್ದೇ ಇದೆ. ಆದರೆ, ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಮಾಫಿಯಾ ಇದೆ ಎಂಬುದು ನನ್ನ ಗಮನಕ್ಕೆ ಎಲ್ಲಿಯೂ ಬಂದಿಲ್ಲ. ಅದು ನಮ್ಮ ಚಿತ್ರರಂಗಕ್ಕೆ ಬರಬಾರದು ಎಂದು ನಾನು ಆಶಿಸುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ’ಜಾಫರ್ ಪನಾಹಿ’ ಸಿನಿಮಾ ಜಗತ್ತಿನ ಬಂಡುಕೋರ: ಕೀಲಾರ ಟೆಂಟ್ ಹೌಸ್-5

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, ‘ನನಗೆ ತಿಳಿದಿರುವ ಮಟ್ಟಿಗೆ ನಮ್ಮ ಕನ್ನಡ ಚಿತ್ರರಂಗದ ಕಲಾವಿದರು ಯಾರು ಕೂಡ ಡ್ರಗ್ಸ್ ತೆಗೆದುಕೊಳ್ಳಲ್ಲ. ಬಾಡಿ ಬಿಲ್ಡ್ ಮಾಡಲು ವೈದ್ಯರ ಸಲಹೆ ಪಡೆದು, ಪ್ರೋಟಿನ್ ಮತ್ತಿತ್ತರದ್ದನ್ನು ತೆಗೆದುಕೊಳ್ಳುತ್ತಾರೆ. ಬೆಳಗ್ಗೆ ಎದ್ದಕೂಡಲೇ ಡ್ರಗ್ಸ್ ಬೇಕೇಬೇಕು ಎನ್ನುವಂತಹ ಕಲಾವಿದರು ನಮ್ಮ ಇಂಡಸ್ಟ್ರೀಯಲ್ಲಿ ಯಾರೂ ಇಲ್ಲ’ ಎಂದು ಹೇಳಿದ್ದಾರೆ.

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌, ನಟ ನಟಿಯರು ಡ್ರಗ್ಸ್‌‌ ಮಾಫಿಯಾ ದಲ್ಲಿ ಭಾಗಿಯಾಗಿರುವ ವಿಷಯವನ್ನು ನಮ್ಮ ಸರ್ಕಾರ ಹೊರಹಾಕಿದೆ. ಹಿಂದಿನ ಆಡಳಿತದಲ್ಲಿದ್ದವರು ಡ್ರಗ್ಸ್ ಮಾಫಿಯಾದ ಪರವಾಗಿದ್ದರು, ಮುಖ್ಯಮಂತ್ರಿ ಯಡಿಯೂರಪ್ಪ ಈ ಜಾಲವನ್ನು ಬೇರು ಸಮೇತ ಕಿತ್ತು ಹಾಕುವಲ್ಲಿ ಮುಂದಾಗುತ್ತಿದ್ದಾರೆ ಎಂದು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸಿದ್ದಾರೆ.


ಇದನ್ನೂ ಓದಿ: ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...