Homeಕರ್ನಾಟಕಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಧಾರವಾಹಿ ಕಲಾವಿದೆಯರು ಕೂಡಾ ಇದರ ಗ್ರಾಹಕರು ಎಂದು ತನಿಖೆ ಬಹಿರಂಗ ಪಡಿಸಿದೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ನಿರಂತರವಾಗಿ ಡ್ರಗ್ಸ್‌ ದಂದೆ ನಡೆಯುತ್ತಿದೆ ಎನ್ನಲಾಗಿದ್ದು, ನಟರಿಗಿಂತ ನಟಿಯರಿಂದಲೇ ಇದಕ್ಕೆ ಬೇಡಿಕೆ ಹೆಚ್ಚಾಗಿದ್ದು, ಧಾರವಾಹಿ ಕಲಾವಿದೆಯರು ಕೂಡಾ ಇದರ ಗ್ರಾಹಕರು ಎಂದು ತನಿಖೆಯಿಂದ ತಿಳಿದು ಬಂದಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್​ಸಿಬಿ) ಅಧಿಕಾರಿಗಳು ’ರಾಯಲ್ಸ್‌ ಸೂಟ್ಸ್‌ ಹೋಟೆಲ್’ ಅಪಾರ್ಟ್‌ಮೆಂಟ್ ಸಮುಚ್ಚಯದ ಪ್ಲಾಟ್‌ ಮೇಲೆ ದಾಳಿ ಮಾಡಿ ಡ್ರಗ್ಸ್ ದಂಧೆ ಒಬ್ಬ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನೂ ಬಂಧಿಸಿದ್ದರು. ಬಂಧಿತರನ್ನು ಡಿ ಅನಿಕಾ, ಅನೂಪ್ ಮೊಹಮದ್ ಮತ್ತು ರಾಜೇಶ್ ರವೀಂದ್ರನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿದ್ದು ನಿಜವೆ?

ತನಿಖೆಯ ವೇಳೆ ಹೆಸರಾಂತ ನಟ-ನಟಿಯರು, ಹಾಗೂ ಸಂಗೀತ ನಿರ್ದೇಶಕರ ಹೆಸರನ್ನು ಬಂಧಿತರು ಬಾಯಿಬಿಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ನಟಿಯರು ಡ್ರಗ್ಸ್‌ನಿಂದ ಸೌಂದರ್ಯ ಹೆಚ್ಚಾಗುತ್ತದೆ ಎಂಬ ಮನೋಭಾವನೆಯಲ್ಲಿ ಇದನ್ನು ಬಳಸುತ್ತಿದ್ದರು ಎನ್ನಲಾಗಿದೆ. ಕಲಾವಿದರು ಮಾಡುತ್ತಿದ್ದ ಪಾರ್ಟಿಗಳೆ ಈ ಡ್ರಗ್ಸ್‌ ವ್ಯಾಪಾರದ ಕೇಂದ್ರವಾಗಿದ್ದು ಅಲ್ಲಿಂದಲೇ ಆರೋಪಿಗಳು ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ.

PC: The New Indian Express

ಈ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್,‌ ‘ಇಂದಿನ ಜನರೇಷನ್‌ನಲ್ಲಿ ಮಾದಕ ವ್ಯಸನದ ಆತಂಕ ಇದ್ದೇ ಇದೆ. ಆದರೆ, ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಮಾಫಿಯಾ ಇದೆ ಎಂಬುದು ನನ್ನ ಗಮನಕ್ಕೆ ಎಲ್ಲಿಯೂ ಬಂದಿಲ್ಲ. ಅದು ನಮ್ಮ ಚಿತ್ರರಂಗಕ್ಕೆ ಬರಬಾರದು ಎಂದು ನಾನು ಆಶಿಸುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ’ಜಾಫರ್ ಪನಾಹಿ’ ಸಿನಿಮಾ ಜಗತ್ತಿನ ಬಂಡುಕೋರ: ಕೀಲಾರ ಟೆಂಟ್ ಹೌಸ್-5

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, ‘ನನಗೆ ತಿಳಿದಿರುವ ಮಟ್ಟಿಗೆ ನಮ್ಮ ಕನ್ನಡ ಚಿತ್ರರಂಗದ ಕಲಾವಿದರು ಯಾರು ಕೂಡ ಡ್ರಗ್ಸ್ ತೆಗೆದುಕೊಳ್ಳಲ್ಲ. ಬಾಡಿ ಬಿಲ್ಡ್ ಮಾಡಲು ವೈದ್ಯರ ಸಲಹೆ ಪಡೆದು, ಪ್ರೋಟಿನ್ ಮತ್ತಿತ್ತರದ್ದನ್ನು ತೆಗೆದುಕೊಳ್ಳುತ್ತಾರೆ. ಬೆಳಗ್ಗೆ ಎದ್ದಕೂಡಲೇ ಡ್ರಗ್ಸ್ ಬೇಕೇಬೇಕು ಎನ್ನುವಂತಹ ಕಲಾವಿದರು ನಮ್ಮ ಇಂಡಸ್ಟ್ರೀಯಲ್ಲಿ ಯಾರೂ ಇಲ್ಲ’ ಎಂದು ಹೇಳಿದ್ದಾರೆ.

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌, ನಟ ನಟಿಯರು ಡ್ರಗ್ಸ್‌‌ ಮಾಫಿಯಾ ದಲ್ಲಿ ಭಾಗಿಯಾಗಿರುವ ವಿಷಯವನ್ನು ನಮ್ಮ ಸರ್ಕಾರ ಹೊರಹಾಕಿದೆ. ಹಿಂದಿನ ಆಡಳಿತದಲ್ಲಿದ್ದವರು ಡ್ರಗ್ಸ್ ಮಾಫಿಯಾದ ಪರವಾಗಿದ್ದರು, ಮುಖ್ಯಮಂತ್ರಿ ಯಡಿಯೂರಪ್ಪ ಈ ಜಾಲವನ್ನು ಬೇರು ಸಮೇತ ಕಿತ್ತು ಹಾಕುವಲ್ಲಿ ಮುಂದಾಗುತ್ತಿದ್ದಾರೆ ಎಂದು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸಿದ್ದಾರೆ.


ಇದನ್ನೂ ಓದಿ: ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...