Homeಮುಖಪುಟಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

- Advertisement -
- Advertisement -

ಮುಂಬೈನ ಕಡಲ ತೀರದಲ್ಲಿ ಐಷಾರಾಮಿ ಕ್ರೂಸ್‌ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಶನಿವಾರ (ಅ.2) ರಾತ್ರಿ ದಾಳಿ ಮಾಡಿದ ಅಧಿಕಾರಿಗಳು ಸುಮಾರು 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅದರಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್  ಅವರ ಪುತ್ರ ಆರ್ಯನ್ ಖಾನ್  ಕೂಡ ಸೇರಿದ್ದಾರೆ. ಆರ್ಯನ್ ಖಾನ್ ಅವರನ್ನು ಪ್ರಸ್ತುತ ಏಜೆನ್ಸಿಯ ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ.

ಇಬ್ಬರು ಯುವತಿಯರು ಸೇರಿದಂತೆ ಆರ್ಯನ್ ಖಾನ್, ಮುನ್ಮುನ್ ಧಮೇಚಾ, ನೂಪುರ್ ಸಾರಿಕಾ, ಇಸ್ಮೀತ್ ಸಿಂಗ್, ಮೊಹಕ್ ಜಸ್ವಾಲ್, ವಿಕ್ರಾಂತ್ ಚೋಕರ್, ಗೋಮಿತ್ ಚೋಪ್ರಾ, ಅರ್ಬಾಜ್ ಮರ್ಚಂಟ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

“ಆರ್ಯನ್ ಖಾನ್ ಸೇರಿದಂತೆ ಎಲ್ಲ ಎಂಟು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರ ಹೇಳಿಕೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತಿಳಿಸಿದೆ.

ಇದನ್ನೂ ಓದಿ: ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

NCB ತಂಡವು ಪ್ರಯಾಣಿಕರ ವೇಷದಲ್ಲಿ ಹಡಗನ್ನು ಹತ್ತಿತ್ತು ಎಂದು ಮೂಲಗಳು ತಿಳಿಸಿವೆ. Ecstasy, Cocaine (ಕೊಕೇನ್), ಎಂಡಿ (ಮೆಫೆಡ್ರೋನ್) ಮತ್ತು ಚರಸ್‌ನಂತಹ ಡ್ರಗ್ಸ್‌ಗಳನ್ನು ಹಡಗಿನಿಂದ ವಶಪಡಿಸಿಕೊಳ್ಳಲಾಗಿದೆ. ಹಡಗು ಮುಂಬೈಯಿಂದ ಹೊರಟ ನಂತರ ಸಮುದ್ರದ ಮಧ್ಯದಲ್ಲಿ ಪಾರ್ಟಿ ಆರಂಭವಾಯಿತು ಎಂದು NCB ಅಧಿಕಾರಿಗಳು ಹೇಳಿದ್ದಾರೆ.

“ವಶಕ್ಕೆ ಪಡೆದವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ವಾಸ್ತವಾಂಶಗಳ ಆಧಾರದ ಮೇಲೆ ಬಂಧಿಸಲಾಗುತ್ತದೆ. ಬಳಿಕ ಆರೋಪಿಗಳನ್ನು NDPS ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದಿದ್ದಾರೆ ಎಂದು ಹಿರಿಯ NCB ಅಧಿಕಾರಿಯೊಬ್ಬರನ್ನು NDTV ಉಲ್ಲೇಖಿಸಿ ವರದಿ ಮಾಡಿದೆ.

“ನಾವು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದೇವೆ. ಈ ಪ್ರಕ್ರಿಯೆಯಲ್ಲಿ, ಬಾಲಿವುಡ್ ಅಥವಾ ಶ್ರೀಮಂತರೊಂದಿಗೆ ಕೆಲವು ಲಿಂಕ್‌ಗಳು ಸಿಕ್ಕರೆ, ಕಾನೂನಿನ ವ್ಯಾಪ್ತಿಯಲ್ಲಿ ನಾವು ಕಾರ್ಯನಿರ್ವಹಿಸಬೇಕು” ಎಂದು ಎನ್‌ಸಿಬಿ ಮುಖ್ಯಸ್ಥ ಎಸ್‌ಎನ್ ಪ್ರಧಾನ್ ಹೇಳಿದ್ದಾರೆ.

ಕಳೆದ ವರ್ಷದ ಜೂನ್‌ನಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವಿನ ನಂತರ ಬಾಲಿವುಡ್‌ನಲ್ಲಿ ಮಾದಕದ್ರವ್ಯ ಸೇವನೆ ಆರೋಪದ ಮೇಲೆ ಎನ್‌ಸಿಬಿ ತನಿಖೆ ಆರಂಭಿಸಿತ್ತು. ಅಂದಿನಿಂದ ಡ್ರಗ್ಸ್ ವಿರೋಧಿ ಪ್ರಕರಣಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...