Homeಮುಖಪುಟಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

- Advertisement -
- Advertisement -

ಮುಂಬೈನ ಕಡಲ ತೀರದಲ್ಲಿ ಐಷಾರಾಮಿ ಕ್ರೂಸ್‌ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಶನಿವಾರ (ಅ.2) ರಾತ್ರಿ ದಾಳಿ ಮಾಡಿದ ಅಧಿಕಾರಿಗಳು ಸುಮಾರು 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅದರಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್  ಅವರ ಪುತ್ರ ಆರ್ಯನ್ ಖಾನ್  ಕೂಡ ಸೇರಿದ್ದಾರೆ. ಆರ್ಯನ್ ಖಾನ್ ಅವರನ್ನು ಪ್ರಸ್ತುತ ಏಜೆನ್ಸಿಯ ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ.

ಇಬ್ಬರು ಯುವತಿಯರು ಸೇರಿದಂತೆ ಆರ್ಯನ್ ಖಾನ್, ಮುನ್ಮುನ್ ಧಮೇಚಾ, ನೂಪುರ್ ಸಾರಿಕಾ, ಇಸ್ಮೀತ್ ಸಿಂಗ್, ಮೊಹಕ್ ಜಸ್ವಾಲ್, ವಿಕ್ರಾಂತ್ ಚೋಕರ್, ಗೋಮಿತ್ ಚೋಪ್ರಾ, ಅರ್ಬಾಜ್ ಮರ್ಚಂಟ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

“ಆರ್ಯನ್ ಖಾನ್ ಸೇರಿದಂತೆ ಎಲ್ಲ ಎಂಟು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರ ಹೇಳಿಕೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತಿಳಿಸಿದೆ.

ಇದನ್ನೂ ಓದಿ: ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

NCB ತಂಡವು ಪ್ರಯಾಣಿಕರ ವೇಷದಲ್ಲಿ ಹಡಗನ್ನು ಹತ್ತಿತ್ತು ಎಂದು ಮೂಲಗಳು ತಿಳಿಸಿವೆ. Ecstasy, Cocaine (ಕೊಕೇನ್), ಎಂಡಿ (ಮೆಫೆಡ್ರೋನ್) ಮತ್ತು ಚರಸ್‌ನಂತಹ ಡ್ರಗ್ಸ್‌ಗಳನ್ನು ಹಡಗಿನಿಂದ ವಶಪಡಿಸಿಕೊಳ್ಳಲಾಗಿದೆ. ಹಡಗು ಮುಂಬೈಯಿಂದ ಹೊರಟ ನಂತರ ಸಮುದ್ರದ ಮಧ್ಯದಲ್ಲಿ ಪಾರ್ಟಿ ಆರಂಭವಾಯಿತು ಎಂದು NCB ಅಧಿಕಾರಿಗಳು ಹೇಳಿದ್ದಾರೆ.

“ವಶಕ್ಕೆ ಪಡೆದವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ವಾಸ್ತವಾಂಶಗಳ ಆಧಾರದ ಮೇಲೆ ಬಂಧಿಸಲಾಗುತ್ತದೆ. ಬಳಿಕ ಆರೋಪಿಗಳನ್ನು NDPS ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದಿದ್ದಾರೆ ಎಂದು ಹಿರಿಯ NCB ಅಧಿಕಾರಿಯೊಬ್ಬರನ್ನು NDTV ಉಲ್ಲೇಖಿಸಿ ವರದಿ ಮಾಡಿದೆ.

“ನಾವು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದೇವೆ. ಈ ಪ್ರಕ್ರಿಯೆಯಲ್ಲಿ, ಬಾಲಿವುಡ್ ಅಥವಾ ಶ್ರೀಮಂತರೊಂದಿಗೆ ಕೆಲವು ಲಿಂಕ್‌ಗಳು ಸಿಕ್ಕರೆ, ಕಾನೂನಿನ ವ್ಯಾಪ್ತಿಯಲ್ಲಿ ನಾವು ಕಾರ್ಯನಿರ್ವಹಿಸಬೇಕು” ಎಂದು ಎನ್‌ಸಿಬಿ ಮುಖ್ಯಸ್ಥ ಎಸ್‌ಎನ್ ಪ್ರಧಾನ್ ಹೇಳಿದ್ದಾರೆ.

ಕಳೆದ ವರ್ಷದ ಜೂನ್‌ನಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವಿನ ನಂತರ ಬಾಲಿವುಡ್‌ನಲ್ಲಿ ಮಾದಕದ್ರವ್ಯ ಸೇವನೆ ಆರೋಪದ ಮೇಲೆ ಎನ್‌ಸಿಬಿ ತನಿಖೆ ಆರಂಭಿಸಿತ್ತು. ಅಂದಿನಿಂದ ಡ್ರಗ್ಸ್ ವಿರೋಧಿ ಪ್ರಕರಣಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...