Homeಮುಖಪುಟಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

- Advertisement -
- Advertisement -

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ, ಟೋಲ್ ಪ್ಲಾಜಾ ಬಳಿಯ ಸಿಮೆಂಟ್ ಗೋಡೆಗೆ ಡಿಕ್ಕಿ ಹೊಡೆದಿದ್ದಾನೆ.

ಜನಗಾಂವ್ ಜಿಲ್ಲೆಯ ಪಾಲಕುರ್ತಿಯ ನಿವಾಸಿ ವೆಂಕಣ್ಣ ಎಂದು ಗುರುತಿಸಲಾದ ಆರೋಪಿ, ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಖಾಲಿ ಬಸ್‌ ಅನ್ನು ಕುಡಿದ ಮತ್ತಿನಲ್ಲಿ ತೆಗೆದುಕೊಂಡು ಸೂರ್ಯಪೇಟೆ ಕಡೆಗೆ ಚಲಾಯಿಸಿದ್ದಾನೆ ಎಂದು ವರದಿಯಾಗಿದೆ.

ಸಿಂಗರಾಜುಪಲ್ಲಿ ಟೋಲ್ ಗೇಟ್ ಬಳಿ ವಾಹನ ಸವಾರರು ಬಸ್‌ ಅನ್ನು ನಿಲ್ಲಿಸಿದಾಗ, ಬಸ್ ಸಿಮೆಂಟ್ ಬ್ಲಾಕ್‌ಗೆ ಡಿಕ್ಕಿ ಹೊಡೆದು ಹಠಾತ್ತನೆ ನಿಂತಿತು. ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ವೆಂಕಣ್ಣನನ್ನು ವಶಕ್ಕೆ ಪಡೆದು ವಾಹನ ವಶಪಡಿಸಿಕೊಂಡಿದ್ದಾರೆ.

ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯು ನಿಲ್ಲಿಸಿದ್ದ ಬಸ್‌ಗೆ ಹೇಗೆ ಪ್ರವೇಶ ಪಡೆದ? ಅದನ್ನು ಓಡಿಸಿದ್ದಾದರೂ ಹೇಗೆ ಎಂಬುದನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆ ನಡೆಯುತ್ತಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಜನಗಾಂವ್ ಸಬ್-ಇನ್ಸ್‌ಪೆಕ್ಟರ್ (ಎಸ್‌ಐ) ಎಂ. ಭರತ್, “ಬಸ್‌ ಚಾಲಕ ಗೋಪಿಕೃಷ್ಣ ರೆಡ್ಡಿ, ಪ್ರಯಾಣ ಮುಗಿದ ನಂತರ ಆರ್‌ಟಿಸಿ ಬಸ್ ನಿಲ್ದಾಣ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಬಸ್‌ ಕಳುವಾಗಿದೆ ಎಂದು ದೂರು ದಾಖಲಿಸಿದ್ದಾರೆ” ಎಂದು ಹೇಳಿದರು.

ಚಾಲಕ ಎಂದಿನಂತೆ ಕೀಲಿಯನ್ನು ರಹಸ್ಯ ಸ್ಥಳದಲ್ಲಿ ಇಟ್ಟಿದ್ದನು, ಮುಂದಿನ ಶಿಫ್ಟ್ ಚಾಲಕ ಕರ್ತವ್ಯಕ್ಕೆ ಬಂದಾಗ ಆತನಿಗೆ ಸುಲಭವಾಗಿ ಸಿಗಲಿ ಎಂದು ಕೀ ಅಲ್ಲೇ ಇಡಲಾಗಿತ್ತು ಎಂದು ದೂರುದಾರರು ಹೇಳಿದ್ದಾರೆ.

ಕದ್ದ ಬಸ್‌ನಲ್ಲಿ ವೆಂಕಣ್ಣ ಜನಗಾಂವ್ ಪಟ್ಟಣದಿಂದ 21 ಕಿಲೋಮೀಟರ್ ಪ್ರಯಾಣಿಸಿದ್ದ, ಜನಗಾಂವ್ ಜಿಲ್ಲೆಯ ದೇವುರುಪ್ಪಳ ಮಂಡಲದ ಅಡಿಯಲ್ಲಿ ಬರುವ ಸಿಂಗರಾಜಪಲ್ಲೆ ಗ್ರಾಮ ಮಿತಿಯಲ್ಲಿರುವ ಟೋಲ್ ಪ್ಲಾಜಾ ತಲುಪಿದ ನಂತರ, ಆತ ನಿಯಂತ್ರಣ ತಪ್ಪಿ ಟೋಲ್ ಪ್ಲಾಜಾ ಮೊದಲು ರಸ್ತೆಬದಿಯ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಟೋಲ್ ಗೇಟ್ ಸಿಬ್ಬಂದಿ ತಕ್ಷಣ ದೇವುರುಪ್ಪಳ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಟೋಲ್ ಪ್ಲಾಜಾಗೆ ಧಾವಿಸಿ ವೆಂಕಣ್ಣನನ್ನು ವಿಚಾರಣೆ ನಡೆಸಿದರು.

ಚೆನ್ನೂರು ಗ್ರಾಮದಲ್ಲಿರುವ ತನ್ನ ನಿವಾಸದಲ್ಲಿ ನಡೆದ ಘರ್ಷಣೆಯ ನಂತರ, ಆತ ಮದ್ಯ ಸೇವಿಸಿ ತಿರುಪತಿಗೆ ಭೇಟಿ ನೀಡಲು ಜನಗಾಂವ್ ರೈಲು ನಿಲ್ದಾಣಕ್ಕೆ ಹೋಗಿದ್ದಾಗಿ ಬಹಿರಂಗಪಡಿಸಿದ್ದಾನೆ.

ರಾತ್ರಿ ವೇಳೆ ರೈಲುಗಳು ಲಭ್ಯವಿಲ್ಲದ ಕಾರಣ, ಆತ ಜನಗಾಂವ್ ಟೌನ್ ಬಸ್ ನಿಲ್ದಾಣ ತಲುಪಲು ಬಸ್ ಹತ್ತಿದ. ನಿಂತಿದ್ದ ಬಸ್ ನೋಡಿ ಅದನ್ನು ಪ್ರವೇಶಿಸಿ ನಿದ್ರೆಗೆ ಜಾರಿದ್ದಾನೆ. ಎಚ್ಚರವಾದಾಗ, ಆತನಿಗೆ ಬಸ್ಸಿನ ಕೀ ಸಿಕ್ಕದೆ, ಕೂಡಲೇ ಆತ ಬಸ್ ಅನ್ನು ಪ್ರಾರಂಭಿಸಿದ್ದಾನೆ.

“ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ” ಎಂದು ಎಸ್ಐ ಭರತ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...