Homeಕರ್ನಾಟಕನಾಡಿನ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿಎಸ್‌‌ ನಾಗಭೂಷಣ (70) ನಿಧನ

ನಾಡಿನ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿಎಸ್‌‌ ನಾಗಭೂಷಣ (70) ನಿಧನ

- Advertisement -
- Advertisement -

ಕನ್ನಡದ ಹಿರಿಯ ಲೇಖಕ, ಸಮಾಜವಾದಿ ಚಿಂತಕ ಹಾಗೂ ಸಾಹಿತ್ಯ ವಿಮರ್ಶಕ ಡಿ.ಎಸ್. ನಾಗಭೂಷಣ್ ಗುರುವಾರ ಮುಂಜಾನೆ ಶಿವಮೊಗ್ಗದ ಕಲ್ಲಹಳ್ಳಿಯ ಸ್ವಗೃಹದಲ್ಲಿ ನಿಧನರಾದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಕಳೆದ ಕೆಲ ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಮಹಾತ್ಮ ಗಾಂಧಿಯವರ ಜೀವನ ಚರಿತ್ರೆಯಾದ, ‘ಗಾಂಧಿ ಕಥನ’ ಕೃತಿಗಾಗಿ ಅವರಿಗೆ 2021 ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಯಿತು. ‘ಇಂದಿಗೆ ಬೇಕಾದ ಗಾಂಧಿ’, ‘ಕುವೆಂಪು ಪುನರನ್ವೇಷಣೆ’ ಮತ್ತು ‘ಲೋಹಿಯಾ ಜೊತೆಯಲ್ಲಿ’ ಅವರ ಗಮನಾರ್ಹ ಕೃತಿಗಳಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರ ನಿಧನಕ್ಕೆ ಲೇಖಕರು ಮತ್ತು ಶಿಕ್ಷಣ ತಜ್ಞರು ಸಂತಾಪ ಸೂಚಿಸಿದ್ದಾರೆ. ಗುರುವಾರ ಸಂಜೆ ನಗರದ ವಿದ್ಯಾನಗರದಲ್ಲಿರುವ ರೋಟರಿ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಗೋಕಾಕ್ ವರದಿ ಹೋರಾಟ: ಕನ್ನಡದ ರಕ್ಷಣೆಗೆ ಈಗಲೂ ಮಾದರಿ

ಡಿಎಸ್‌ ನಾಗಭೂಷಣ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಇಂಗ್ಲಿಷ್‌ ಉಪನ್ಯಾಸಕ ವಿ.ಎಲ್. ನರಸಿಂಹಮೂರ್ತಿ, “ಕನ್ನಡ ಸಾಹಿತ್ಯದ ಕುರಿತು, ಕರ್ನಾಟಕದ ಸಾಂಸ್ಕೃತಿಕ ರಾಜಕಾರಣದ ಕುರಿತು ಅತ್ಯಂತ ಸೂಕ್ಷ್ಮ ಗ್ರಹಿಕೆಯಿದ್ದ ಡಿಎಸ್ಎನ್ ತಮ್ಮ ನೇರವಾದ, ನಿಷ್ಠುರವಾದ ಬರಹಳಗಿಂದ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರ ಮೈಚಳಿ ಬಿಡಿಸುತ್ತಿದ್ದರು. ಲೋಹಿಯಾ ಮತ್ತು ಗಾಂಧಿ ವಿಚಾರಗಳಲ್ಲಿ ಅದೆಷ್ಟು ಪಾಂಡಿತ್ಯ ಹೊಂದಿದ್ದರು ಎಂದರೆ ಇಂಗ್ಲಿಷ್‌ನಲ್ಲಿ ಬರೆಯುವ ರಾಮಚಂದ್ರ ಗುಹಾ, ಅಕಿಲ್ ಬಿಲ್‌ಗ್ರಾಮಿ, ಬೀಖು ಪರೇಖ್ ಅಂತವರ ತಿಳುವಳಿಕೆ ಮಿತಿಗಳನ್ನು ಕನ್ನಡದಲ್ಲಿ ಎತ್ತಿ ತೋರಿಸುತ್ತಿದ್ದರು. ಕುವೆಂಪು, ಲಂಕೇಶ್, ತೇಜಸ್ವಿ, ಜಿಎಸ್ಎಸ್, ಸೇರಿದಂತೆ ಕನ್ನಡ ಸಾಹಿತ್ಯದ ಬಗ್ಗೆ ಅಪೂರ್ವ ಒಳನೋಟಗಳುಳ್ಳ ಬರಹಗಳನ್ನು ಡಿಎಸ್ಎನ್ ಬಿಟ್ಟುಹೋಗಿದ್ದಾರೆ. ಕನ್ನಡ ವಿಮರ್ಶೆಗೆ ಡಿಎಸ್ಎನ್ ಕೊಡುಗೆ ಅಪಾರವಾದುದು ಇನ್ನು ಮೇಲೆಯಾದರು ಕನ್ನಡದ ಲೇಖಕರು, ವಿಮರ್ಶಕರು ಡಿಎಸ್‌ಎನ್ ಬರಹಗಳಿಗೆ ನ್ಯಾಯ ಸಲ್ಲಸಲಿ” ಎಂದು ಹೇಳಿದ್ದಾರೆ.

ಶಿಕ್ಷಣ ತಜ್ಞ ಶ್ರೀಪಾದ ಭಟ್‌ ಅವರು, “ಡಿ.ಎಸ್.ಎನ್ ಜೊತೆಗೆ ಚರ್ಚೆ, ಸಂವಾದ ಜಗಳ ಸಾಮಾನ್ಯ ಸಂಗತಿಯಾಗಿತ್ತು. ಅವರು ಸಿಕ್ಕಾಗಲೆಲ್ಲ ಸಣ್ಣ ಮಟ್ಟದ ವಾದ ಮಾಡದೇ ಹೋದರೆ ನನಗೆ ಭಣ ಭಣ ಎನಿಸುತ್ತಿತ್ತು. ಆದರೆ ಅವರನ್ನು ಭೇಟಿಯಾಗಿ ಅನೇಕ ವರ್ಷಗಳಾಗಿದ್ದವು. ಎಪ್ಪತ್ತರ ದಶಕದ ನಮ್ಮ ಬಾಲ್ಯದ ದಿನಗಳಲ್ಲಿ ಆಕಾಶವಾಣಿಯಲ್ಲಿದ್ದ ಡಿ.ಎಸ್.ಎನ್‌ ಓದುತ್ತಿದ್ದ ಪ್ರದೇಶ ಸಮಾಚಾರ ಜನಪ್ರಿಯವಾಗಿತ್ತು. ಹಾಗೆಯೇ ಲೋಹಿಯಾ, ಕುವೆಂಪು, ಜಿಎಸ್‌ಎಸ್, ಗಾಂಧಿ ಕುರಿತ ಅವರ ಆಳವಾದ ಓದು, ಗ್ರಹಿಕೆ ಮತ್ತು ವಿಚಾರ ಮಂಡನೆ ಬೆರಗುಗೊಳಿಸುತ್ತಿತ್ತು. ಪ್ರತಿಭಾವಂತ ಲೇಖಕ. ವಸ್ತುನಿಷ್ಠವಾಗಿ ಬರೆಯುವುದು ಹೇಗೆ ಎಂಬುದಕ್ಕೆ ಉತ್ತಮ ಉದಾಹರಣೆ ಡಿ.ಎಸ್.ಎನ್. He is one of the best reader” ಎಂದು ಹೇಳಿದ್ದಾರೆ.

“1990ರಲ್ಲಿ ದೇವನೂರ ಮಹಾದೇವ ಅವರ ‘ಕುಸುಮ ಬಾಲೆ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ನೆಪದಲ್ಲಿ ಲೇಖಕರಿಗೆ ತುಮಕೂರಿನಲ್ಲಿ ಒಂದು ಅಭಿನಂದನೆ, ಚರ್ಚೆ ಗೋಷ್ಠಿಯಿತ್ತು. ನಾನು ಮೊದಲ ಬಾರಿಗೆ ಡಿ.ಎಸ್.ಎನ್ ರನ್ನು ಮಾತನಾಡಿಸಿದ್ದು ಅಲ್ಲಿ. ಆ ಸಮಾರಂಭಕ್ಕೆ ಬರಲು ಒಪ್ಪಿಕೊಂಡು ನಂತರ ಕೈ ಕೊಟ್ಟ ಲಂಕೇಶ್‌ರನ್ನು ಶರ್ಟಿನ ತೋಳು ಮೇಲೇರಿಸಿಕೊಳ್ಳುತ್ತಾ ಟೀಕಿಸುತ್ತಿದ್ದ ಆ ದೃಶ್ಯ ನಿನ್ನೆ, ಮೊನ್ನೆ ನಡೆದಂತಿದೆ.
ಆದರೆ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುವ ಸಂದರ್ಭದಲ್ಲಿ ಚಂಡಿ ಹಿಡಿದು ಹಠದಿಂದ ವರ್ತಿಸುವ ಅವರ ಇನ್ನೊಂದು ಮುಖ ಅನೇಕ ಸಂದರ್ಭಗಳಲ್ಲಿ ಎದುರುಗಿರುವವರನ್ನು ಪರಚುತ್ತಿತ್ತು, ಗಾಯಗೊಳಿಸುತ್ತಿತ್ತು.
ತನ್ನದೇ ಸತ್ಯ ಎಂಬ ಧೋರಣೆ ಜಗಳಗಳಿಗೆ ಕಾರಣವಾಗಿದ್ದು ಲೆಕ್ಕವೇ ಇಲ್ಲ. ನಾವು ಸ್ನೇಹಿತರು ‘ಇದೊಂದು ವಿಷಯದಲ್ಲಿ ಡಿ.ಎಸ್.ಎನ್ ಪ್ರಬುದ್ದರಾಗಿದ್ದರೆ ಎಷ್ಟು ಚಂದ’ ಎಂದು ಬೇಸರಿಸಿಕೊಳ್ಳುವುದು ಸಾಮಾನ್ಯವಾಗಿತ್ತು. ಆದರೆ ಬದುಕು ಹಾಗೆಲ್ಲಾ ಚೆಂದವಾಗಿ ಇರಲು ಬಿಡುವುದಿಲ್ಲ. ಡಿ.ಎಸ್.ಎನ್‌ರವರಿಗೆ ಈ ಫೋಟೋ ತೋರಿಸಿ ಹೀಗೆ ಇರಬೇಕಿತ್ತು ಸರ್ ನೀವು ಎಂದು ಎಷ್ಟೋ ಬಾರಿ ಹೇಳಬೇಕೆಂದುಕೊಂಡಿದ್ದೆ, ಹೇಳಲಿಲ್ಲ. ತಮ್ಮ ಬದುಕಿನ ಪಯಣ ಮುಗಿಸಿ ಎದ್ದು ನಡೆದ ಡಿ.ಎಸ್.ಎನ್.ಗೆ ನಮನಗಳು” ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್ 

ಉಪನ್ಯಾಸಕರು, ಸಿನಿಮಾ ಸಾಹಿತ್ಯಾಸಕ್ತ ರೋಹಿತ್ ಅಗಸರಹಳ್ಳಿ ಅವರು, “ಈಗ್ಗೆ ಹದಿನೈದಿಪ್ಪತ್ತು ದಿನಗಳ ಹಿಂದೆ ಶಿವಮೊಗ್ಗೆಗೆ ಹೋದಾಗ ಮೊದಲೇ ಫೋನು ಕೂಡ ಮಾಡದೆ ಡಿಎಸ್ಎನ್ ಭೇಟಿ ಮಾಡಲು ಹೋದೆವು. ಮನೆ ಕೂಡಲೆ ಸಿಕ್ಕದಿದ್ದಾಗ ಸವಿತ ಮೇಡಂ ಅವರಿಗೆ ಫೋನು ಮಾಡಬೇಕಾಯ್ತು. ಡಿಎಸ್ಎನ್ ಅವರಿಗೆ ಹುಷಾರಿಲ್ಲ, ಲಂಗ್ಸ್ ಇನ್ಫೆಕ್ಷನ್ ಆಗಿದೆ; ಹೀಗಾಗಿ ಒಂದೈದೇ ನಿಮಿಷ ಮಾತಾಡಿಸಿ ಅಂದ್ರು. ಅಲ್ಲಿವರೆಗೆ ಶಿವಮೊಗ್ಗೆಗೆ ಹೋದಾಗೆಲ್ಲ ಗೂಳಿಗಳಂತೆ ಹೇಳದೆ ಕೇಳದೆ ನುಗ್ಗಿಬಿಡುತ್ತಿದ್ದ ನಾವು ಇನ್ನು ಮೇಲೆ ಫೋನ್ ಮಾಡಿಕೊಂಡು ಹೋಗೋಣ ಅಂತ ಮಾತಾಡಿಕೊಂಡೆವು.(ನಾನು ಮತ್ತು ಸುಜಾತ) ಈಗಾಗಲೇ ಹೊಸಮನುಷ್ಯ ಪತ್ರಿಕೆ ನಿಲ್ಲಿಸಿದ್ದರಿಂದ ಅದಕ್ಕೆ ಕಾರಣ ಸರ್ ಅವರ ಅನಾರೋಗ್ಯವೇ ಅನ್ನೋದು ಕೂಡ ಗೊತ್ತಿತ್ತು.

ಭೌತಿಕವಾಗಿ ಕುಗ್ಗಿದ್ದರೂ ಲವಲವಿಕೆಯಿಂದಲೇ ತಾಸು ಹೊತ್ತು ಮಾತನಾಡಿದರು. ನಾವೇ ಮತ್ತೆ ಮತ್ತೆ ಸಾರ್ ನೀವು ಹೆಚ್ಚು ಮಾತಾಡಿ ಆಯಾಸ ಮಾಡಿಕೊಳ್ಳಬೇಡಿ ಅಂತ ಹೇಳಿ ಬಂದೆವು. ಯಾಕ್ರೀ ನನ್ನಿಂದ ತಪ್ಪಿಸ್ಕೊಂಡ್ ಹೋಗೋಕೆ ಹೀಗಂತಿದೀರ ಅಂದ್ರು. ಈ ನಡುವೆ ನನ್ನ ಮಗಳು ಅಲ್ಲಿದ್ದ ಬೆಕ್ಕಿನ ಮರಿಗಳ ಜತೆ ದೋಸ್ತಿ ಸಾಧಿಸಿದ್ದರಿಂದ ಎರಡು ಮರಿಗಳೂ ನಮ್ಮೊಂದಿಗೆ ಹಾಸನಕ್ಕೆ ಬಂದವು. ಸರ್ ಅವರು ಕೌಲಗಿ ಅವರ ಮಗನ ಬಳಿ ಹೋಮಿಯೋಪತಿ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಿರುವುದಾಗಿಯೂ, ಇತ್ತೀಚೆಗೆ ಪರವಾಗಿಲ್ಲ ಎಂಬುದಾಗಿಯೂ ಹೇಳಿದರು. ಅದೆಲ್ಲ ಕೇಳಿ ಕೆಲವೇ ದಿನಗಳಲ್ಲಿ ಗೆಲುವಾಗಿ ಮತ್ತೆ ಎಲ್ಲರೊಂದಿಗೆಂತೋ ಅಂತೇ ನನ್ನೊಂದಿಗೂ ಜಗಳಕ್ಕೆ ನಿಲ್ಲುತ್ತಾರೆ ಎಂದೇ ಆಶಿಸಿದ್ದೆ. ಆದರದು ಹುಸಿಹೋಯ್ತು. ಅವರ ಜಗಳಗಂಟ ಗುಣವೇ ಅವರನ್ನು ಸ್ವಚ್ಛವ್ಯಕ್ತಿತ್ವವಾಗಿ‌ ಉಳಿಸಿದ್ದು ಎಂದು ನನಗೆ ಯಾವಾಗಲೂ ಅನ್ನಿಸೋದು. ಹೋಗಿಬನ್ನಿ ಸಾರ್…ನಿಮ್ಮ ಬರೆಹಗಳು ಅದರಲ್ಲೂ ಗಾಂಧಿಕಥನ ನಿಮ್ಮನ್ನು ಕನ್ನಡಿಗರ ನಡುವೆ ಶಾಶ್ವತವಾಗಿಸಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...