Homeಕರ್ನಾಟಕನಾಡಿನ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿಎಸ್‌‌ ನಾಗಭೂಷಣ (70) ನಿಧನ

ನಾಡಿನ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿಎಸ್‌‌ ನಾಗಭೂಷಣ (70) ನಿಧನ

- Advertisement -
- Advertisement -

ಕನ್ನಡದ ಹಿರಿಯ ಲೇಖಕ, ಸಮಾಜವಾದಿ ಚಿಂತಕ ಹಾಗೂ ಸಾಹಿತ್ಯ ವಿಮರ್ಶಕ ಡಿ.ಎಸ್. ನಾಗಭೂಷಣ್ ಗುರುವಾರ ಮುಂಜಾನೆ ಶಿವಮೊಗ್ಗದ ಕಲ್ಲಹಳ್ಳಿಯ ಸ್ವಗೃಹದಲ್ಲಿ ನಿಧನರಾದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಕಳೆದ ಕೆಲ ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಮಹಾತ್ಮ ಗಾಂಧಿಯವರ ಜೀವನ ಚರಿತ್ರೆಯಾದ, ‘ಗಾಂಧಿ ಕಥನ’ ಕೃತಿಗಾಗಿ ಅವರಿಗೆ 2021 ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಯಿತು. ‘ಇಂದಿಗೆ ಬೇಕಾದ ಗಾಂಧಿ’, ‘ಕುವೆಂಪು ಪುನರನ್ವೇಷಣೆ’ ಮತ್ತು ‘ಲೋಹಿಯಾ ಜೊತೆಯಲ್ಲಿ’ ಅವರ ಗಮನಾರ್ಹ ಕೃತಿಗಳಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರ ನಿಧನಕ್ಕೆ ಲೇಖಕರು ಮತ್ತು ಶಿಕ್ಷಣ ತಜ್ಞರು ಸಂತಾಪ ಸೂಚಿಸಿದ್ದಾರೆ. ಗುರುವಾರ ಸಂಜೆ ನಗರದ ವಿದ್ಯಾನಗರದಲ್ಲಿರುವ ರೋಟರಿ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಗೋಕಾಕ್ ವರದಿ ಹೋರಾಟ: ಕನ್ನಡದ ರಕ್ಷಣೆಗೆ ಈಗಲೂ ಮಾದರಿ

ಡಿಎಸ್‌ ನಾಗಭೂಷಣ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಇಂಗ್ಲಿಷ್‌ ಉಪನ್ಯಾಸಕ ವಿ.ಎಲ್. ನರಸಿಂಹಮೂರ್ತಿ, “ಕನ್ನಡ ಸಾಹಿತ್ಯದ ಕುರಿತು, ಕರ್ನಾಟಕದ ಸಾಂಸ್ಕೃತಿಕ ರಾಜಕಾರಣದ ಕುರಿತು ಅತ್ಯಂತ ಸೂಕ್ಷ್ಮ ಗ್ರಹಿಕೆಯಿದ್ದ ಡಿಎಸ್ಎನ್ ತಮ್ಮ ನೇರವಾದ, ನಿಷ್ಠುರವಾದ ಬರಹಳಗಿಂದ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರ ಮೈಚಳಿ ಬಿಡಿಸುತ್ತಿದ್ದರು. ಲೋಹಿಯಾ ಮತ್ತು ಗಾಂಧಿ ವಿಚಾರಗಳಲ್ಲಿ ಅದೆಷ್ಟು ಪಾಂಡಿತ್ಯ ಹೊಂದಿದ್ದರು ಎಂದರೆ ಇಂಗ್ಲಿಷ್‌ನಲ್ಲಿ ಬರೆಯುವ ರಾಮಚಂದ್ರ ಗುಹಾ, ಅಕಿಲ್ ಬಿಲ್‌ಗ್ರಾಮಿ, ಬೀಖು ಪರೇಖ್ ಅಂತವರ ತಿಳುವಳಿಕೆ ಮಿತಿಗಳನ್ನು ಕನ್ನಡದಲ್ಲಿ ಎತ್ತಿ ತೋರಿಸುತ್ತಿದ್ದರು. ಕುವೆಂಪು, ಲಂಕೇಶ್, ತೇಜಸ್ವಿ, ಜಿಎಸ್ಎಸ್, ಸೇರಿದಂತೆ ಕನ್ನಡ ಸಾಹಿತ್ಯದ ಬಗ್ಗೆ ಅಪೂರ್ವ ಒಳನೋಟಗಳುಳ್ಳ ಬರಹಗಳನ್ನು ಡಿಎಸ್ಎನ್ ಬಿಟ್ಟುಹೋಗಿದ್ದಾರೆ. ಕನ್ನಡ ವಿಮರ್ಶೆಗೆ ಡಿಎಸ್ಎನ್ ಕೊಡುಗೆ ಅಪಾರವಾದುದು ಇನ್ನು ಮೇಲೆಯಾದರು ಕನ್ನಡದ ಲೇಖಕರು, ವಿಮರ್ಶಕರು ಡಿಎಸ್‌ಎನ್ ಬರಹಗಳಿಗೆ ನ್ಯಾಯ ಸಲ್ಲಸಲಿ” ಎಂದು ಹೇಳಿದ್ದಾರೆ.

ಶಿಕ್ಷಣ ತಜ್ಞ ಶ್ರೀಪಾದ ಭಟ್‌ ಅವರು, “ಡಿ.ಎಸ್.ಎನ್ ಜೊತೆಗೆ ಚರ್ಚೆ, ಸಂವಾದ ಜಗಳ ಸಾಮಾನ್ಯ ಸಂಗತಿಯಾಗಿತ್ತು. ಅವರು ಸಿಕ್ಕಾಗಲೆಲ್ಲ ಸಣ್ಣ ಮಟ್ಟದ ವಾದ ಮಾಡದೇ ಹೋದರೆ ನನಗೆ ಭಣ ಭಣ ಎನಿಸುತ್ತಿತ್ತು. ಆದರೆ ಅವರನ್ನು ಭೇಟಿಯಾಗಿ ಅನೇಕ ವರ್ಷಗಳಾಗಿದ್ದವು. ಎಪ್ಪತ್ತರ ದಶಕದ ನಮ್ಮ ಬಾಲ್ಯದ ದಿನಗಳಲ್ಲಿ ಆಕಾಶವಾಣಿಯಲ್ಲಿದ್ದ ಡಿ.ಎಸ್.ಎನ್‌ ಓದುತ್ತಿದ್ದ ಪ್ರದೇಶ ಸಮಾಚಾರ ಜನಪ್ರಿಯವಾಗಿತ್ತು. ಹಾಗೆಯೇ ಲೋಹಿಯಾ, ಕುವೆಂಪು, ಜಿಎಸ್‌ಎಸ್, ಗಾಂಧಿ ಕುರಿತ ಅವರ ಆಳವಾದ ಓದು, ಗ್ರಹಿಕೆ ಮತ್ತು ವಿಚಾರ ಮಂಡನೆ ಬೆರಗುಗೊಳಿಸುತ್ತಿತ್ತು. ಪ್ರತಿಭಾವಂತ ಲೇಖಕ. ವಸ್ತುನಿಷ್ಠವಾಗಿ ಬರೆಯುವುದು ಹೇಗೆ ಎಂಬುದಕ್ಕೆ ಉತ್ತಮ ಉದಾಹರಣೆ ಡಿ.ಎಸ್.ಎನ್. He is one of the best reader” ಎಂದು ಹೇಳಿದ್ದಾರೆ.

“1990ರಲ್ಲಿ ದೇವನೂರ ಮಹಾದೇವ ಅವರ ‘ಕುಸುಮ ಬಾಲೆ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ನೆಪದಲ್ಲಿ ಲೇಖಕರಿಗೆ ತುಮಕೂರಿನಲ್ಲಿ ಒಂದು ಅಭಿನಂದನೆ, ಚರ್ಚೆ ಗೋಷ್ಠಿಯಿತ್ತು. ನಾನು ಮೊದಲ ಬಾರಿಗೆ ಡಿ.ಎಸ್.ಎನ್ ರನ್ನು ಮಾತನಾಡಿಸಿದ್ದು ಅಲ್ಲಿ. ಆ ಸಮಾರಂಭಕ್ಕೆ ಬರಲು ಒಪ್ಪಿಕೊಂಡು ನಂತರ ಕೈ ಕೊಟ್ಟ ಲಂಕೇಶ್‌ರನ್ನು ಶರ್ಟಿನ ತೋಳು ಮೇಲೇರಿಸಿಕೊಳ್ಳುತ್ತಾ ಟೀಕಿಸುತ್ತಿದ್ದ ಆ ದೃಶ್ಯ ನಿನ್ನೆ, ಮೊನ್ನೆ ನಡೆದಂತಿದೆ.
ಆದರೆ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುವ ಸಂದರ್ಭದಲ್ಲಿ ಚಂಡಿ ಹಿಡಿದು ಹಠದಿಂದ ವರ್ತಿಸುವ ಅವರ ಇನ್ನೊಂದು ಮುಖ ಅನೇಕ ಸಂದರ್ಭಗಳಲ್ಲಿ ಎದುರುಗಿರುವವರನ್ನು ಪರಚುತ್ತಿತ್ತು, ಗಾಯಗೊಳಿಸುತ್ತಿತ್ತು.
ತನ್ನದೇ ಸತ್ಯ ಎಂಬ ಧೋರಣೆ ಜಗಳಗಳಿಗೆ ಕಾರಣವಾಗಿದ್ದು ಲೆಕ್ಕವೇ ಇಲ್ಲ. ನಾವು ಸ್ನೇಹಿತರು ‘ಇದೊಂದು ವಿಷಯದಲ್ಲಿ ಡಿ.ಎಸ್.ಎನ್ ಪ್ರಬುದ್ದರಾಗಿದ್ದರೆ ಎಷ್ಟು ಚಂದ’ ಎಂದು ಬೇಸರಿಸಿಕೊಳ್ಳುವುದು ಸಾಮಾನ್ಯವಾಗಿತ್ತು. ಆದರೆ ಬದುಕು ಹಾಗೆಲ್ಲಾ ಚೆಂದವಾಗಿ ಇರಲು ಬಿಡುವುದಿಲ್ಲ. ಡಿ.ಎಸ್.ಎನ್‌ರವರಿಗೆ ಈ ಫೋಟೋ ತೋರಿಸಿ ಹೀಗೆ ಇರಬೇಕಿತ್ತು ಸರ್ ನೀವು ಎಂದು ಎಷ್ಟೋ ಬಾರಿ ಹೇಳಬೇಕೆಂದುಕೊಂಡಿದ್ದೆ, ಹೇಳಲಿಲ್ಲ. ತಮ್ಮ ಬದುಕಿನ ಪಯಣ ಮುಗಿಸಿ ಎದ್ದು ನಡೆದ ಡಿ.ಎಸ್.ಎನ್.ಗೆ ನಮನಗಳು” ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್ 

ಉಪನ್ಯಾಸಕರು, ಸಿನಿಮಾ ಸಾಹಿತ್ಯಾಸಕ್ತ ರೋಹಿತ್ ಅಗಸರಹಳ್ಳಿ ಅವರು, “ಈಗ್ಗೆ ಹದಿನೈದಿಪ್ಪತ್ತು ದಿನಗಳ ಹಿಂದೆ ಶಿವಮೊಗ್ಗೆಗೆ ಹೋದಾಗ ಮೊದಲೇ ಫೋನು ಕೂಡ ಮಾಡದೆ ಡಿಎಸ್ಎನ್ ಭೇಟಿ ಮಾಡಲು ಹೋದೆವು. ಮನೆ ಕೂಡಲೆ ಸಿಕ್ಕದಿದ್ದಾಗ ಸವಿತ ಮೇಡಂ ಅವರಿಗೆ ಫೋನು ಮಾಡಬೇಕಾಯ್ತು. ಡಿಎಸ್ಎನ್ ಅವರಿಗೆ ಹುಷಾರಿಲ್ಲ, ಲಂಗ್ಸ್ ಇನ್ಫೆಕ್ಷನ್ ಆಗಿದೆ; ಹೀಗಾಗಿ ಒಂದೈದೇ ನಿಮಿಷ ಮಾತಾಡಿಸಿ ಅಂದ್ರು. ಅಲ್ಲಿವರೆಗೆ ಶಿವಮೊಗ್ಗೆಗೆ ಹೋದಾಗೆಲ್ಲ ಗೂಳಿಗಳಂತೆ ಹೇಳದೆ ಕೇಳದೆ ನುಗ್ಗಿಬಿಡುತ್ತಿದ್ದ ನಾವು ಇನ್ನು ಮೇಲೆ ಫೋನ್ ಮಾಡಿಕೊಂಡು ಹೋಗೋಣ ಅಂತ ಮಾತಾಡಿಕೊಂಡೆವು.(ನಾನು ಮತ್ತು ಸುಜಾತ) ಈಗಾಗಲೇ ಹೊಸಮನುಷ್ಯ ಪತ್ರಿಕೆ ನಿಲ್ಲಿಸಿದ್ದರಿಂದ ಅದಕ್ಕೆ ಕಾರಣ ಸರ್ ಅವರ ಅನಾರೋಗ್ಯವೇ ಅನ್ನೋದು ಕೂಡ ಗೊತ್ತಿತ್ತು.

ಭೌತಿಕವಾಗಿ ಕುಗ್ಗಿದ್ದರೂ ಲವಲವಿಕೆಯಿಂದಲೇ ತಾಸು ಹೊತ್ತು ಮಾತನಾಡಿದರು. ನಾವೇ ಮತ್ತೆ ಮತ್ತೆ ಸಾರ್ ನೀವು ಹೆಚ್ಚು ಮಾತಾಡಿ ಆಯಾಸ ಮಾಡಿಕೊಳ್ಳಬೇಡಿ ಅಂತ ಹೇಳಿ ಬಂದೆವು. ಯಾಕ್ರೀ ನನ್ನಿಂದ ತಪ್ಪಿಸ್ಕೊಂಡ್ ಹೋಗೋಕೆ ಹೀಗಂತಿದೀರ ಅಂದ್ರು. ಈ ನಡುವೆ ನನ್ನ ಮಗಳು ಅಲ್ಲಿದ್ದ ಬೆಕ್ಕಿನ ಮರಿಗಳ ಜತೆ ದೋಸ್ತಿ ಸಾಧಿಸಿದ್ದರಿಂದ ಎರಡು ಮರಿಗಳೂ ನಮ್ಮೊಂದಿಗೆ ಹಾಸನಕ್ಕೆ ಬಂದವು. ಸರ್ ಅವರು ಕೌಲಗಿ ಅವರ ಮಗನ ಬಳಿ ಹೋಮಿಯೋಪತಿ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಿರುವುದಾಗಿಯೂ, ಇತ್ತೀಚೆಗೆ ಪರವಾಗಿಲ್ಲ ಎಂಬುದಾಗಿಯೂ ಹೇಳಿದರು. ಅದೆಲ್ಲ ಕೇಳಿ ಕೆಲವೇ ದಿನಗಳಲ್ಲಿ ಗೆಲುವಾಗಿ ಮತ್ತೆ ಎಲ್ಲರೊಂದಿಗೆಂತೋ ಅಂತೇ ನನ್ನೊಂದಿಗೂ ಜಗಳಕ್ಕೆ ನಿಲ್ಲುತ್ತಾರೆ ಎಂದೇ ಆಶಿಸಿದ್ದೆ. ಆದರದು ಹುಸಿಹೋಯ್ತು. ಅವರ ಜಗಳಗಂಟ ಗುಣವೇ ಅವರನ್ನು ಸ್ವಚ್ಛವ್ಯಕ್ತಿತ್ವವಾಗಿ‌ ಉಳಿಸಿದ್ದು ಎಂದು ನನಗೆ ಯಾವಾಗಲೂ ಅನ್ನಿಸೋದು. ಹೋಗಿಬನ್ನಿ ಸಾರ್…ನಿಮ್ಮ ಬರೆಹಗಳು ಅದರಲ್ಲೂ ಗಾಂಧಿಕಥನ ನಿಮ್ಮನ್ನು ಕನ್ನಡಿಗರ ನಡುವೆ ಶಾಶ್ವತವಾಗಿಸಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...