Homeಮುಖಪುಟಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

ಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ತಾಳಮುತ್ತು ನಗರ ಪೊಲೀಸ್ ಠಾಣೆಯಲ್ಲಿ 1999ರಲ್ಲಿ ಸಂಭವಿಸಿದ ಕಸ್ಟಡಿ ಸಾವು ಪ್ರಕರಣದಲ್ಲಿ ಡಿಎಸ್‌ಪಿ ಸೇರಿ 9 ಜನರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಾಸಿಕ್ಯೂಷನ್ ಪ್ರಕಾರ, ತೂತುಕುಡಿ ಜಿಲ್ಲೆಯ ಮೇಳ ಅಲಂಗರತಟ್ಟು ನಿವಾಸಿ, ಉಪ್ಪು ತಯಾರಿಕೆ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಸಿ. ವಿನ್ಸೆಂಟ್ ಅವರನ್ನು ಸೆಪ್ಟೆಂಬರ್ 17, 1999ರಂದು ವಿಚಾರಣೆಗಾಗಿ ತಾಳಮುತ್ತು ನಗರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಆಗಿನ ಸಬ್-ಇನ್ಸ್‌ಪೆಕ್ಟರ್ ಆಗಿದ್ದ ರಾಮಕೃಷ್ಣನ್ ನೇತೃತ್ವದ ಪೊಲೀಸ್ ತಂಡ ಅವರನ್ನು ಲಾಕಪ್‌ನಲ್ಲಿ ಬಂಧಿಸಿಟ್ಟಿತ್ತು. ಮರುದಿನ ವಿನ್ಸೆಂಟ್ ಅನುಮಾನಾಸ್ಪದ ರೀತಿಯಲ್ಲಿ ಲಾಕಪ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು.

ವಿನ್ಸೆಂಟ್ ಸಾವಿನ ಸಂಬಂಧ ಅವರ ಪತ್ನಿ ಕೃಷ್ಣಮ್ಮಾಳ್ ಅದೇ ಪೊಲೀಸ್ ಠಾಣೆಯಲ್ಲಿ ತನ್ನ ಪತಿಯನ್ನು ಪೊಲೀಸರು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಸಂಬಂಧ ಸಬ್-ಇನ್ಸ್‌ಪೆಕ್ಟರ್ ರಾಮಕೃಷ್ಣನ್, ಪೊಲೀಸ್‌ ಸಿಬ್ಬಂದಿ ಸೋಮಸುಂದರಂ, ಜಯಶೇಖರನ್, ಜೋಸೆಫ್ ರಾಜ್, ಪಿಚಯ್ಯ, ಚೆಲ್ಲಾತುರೈ, ವೀರಬಾಹು, ಶಿವಸುಬ್ರಮಣಿಯನ್, ಸುಬ್ಬಯ್ಯ, ರತಿನಸಾಮಿ ಮತ್ತು ಬಾಲಸುಬ್ರಮಣಿಯನ್ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆಯನ್ನು ತೂತುಕುಡಿಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದೆ. ನ್ಯಾಯಮೂರ್ತಿ ಎಂ. ತಾಂಡವನ್ ಅವರು ಪ್ರಕರಣದ ಅಪರಾಧಿಗಳಾದ ರಾಮಕೃಷ್ಣನ್, ಸೋಮಸುಂದರಂ, ಜಯಶೇಖರನ್, ಜೋಸೆಫ್ ರಾಜ್, ಪಿಚಯ್ಯ, ಚೆಲ್ಲಾತುರೈ, ವೀರಬಾಹು, ಸುಬ್ಬಯ್ಯ ಮತ್ತು ಬಾಲಸುಬ್ರಮಣಿಯನ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 10,000 ರೂಪಾಯಿ ದಂಡ ವಿಧಿಸಿದ್ದಾರೆ.

ಆರೋಪಿಗಳಾದ ರತಿನಸಾಮಿ ಮತ್ತು ಶಿವಸುಬ್ರಮಣಿಯನ್ ಇಬ್ಬರೂ ಈಗ ಸೇವೆಯಿಂದ ನಿವೃತ್ತರಾಗಿದ್ದಾರೆ. ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿದೆ. ಸರ್ಕಾರಿ ವಕೀಲ ಎಸ್.ಪಿ ಆನಂದ್ ಗೇಬ್ರಿಯಲ್ ರಾಜ್ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸಿದ್ದಾರೆ.

ಶಿಕ್ಷೆಗೊಳಗಾದವರಲ್ಲಿ ಸಬ್-ಇನ್ಸ್‌ಪೆಕ್ಟರ್ ರಾಮಕೃಷ್ಣನ್ ಈಗ ಶ್ರೀವೈಕುಂಠಂ ಡಿಎಸ್‌ಪಿ ಆಗಿದ್ದಾರೆ. ಸೋಮಸುಂದರಂ ಪ್ರಸ್ತುತ ಇನ್ಸ್‌ಪೆಕ್ಟರ್ ಆಗಿ ಮತ್ತು ಪಿಚಯ್ಯ ಭೂಕಬಳಿಕೆ ತಡೆ ವಿಭಾಗದಲ್ಲಿ ವಿಶೇಷ ಸಬ್-ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಇತರರು ಸೇವೆಯಿಂದ ನಿವೃತ್ತರಾಗಿದ್ದಾರೆ.

ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ ವಿನ್ಸೆಂಟ್ ಸಾವು 1999, ಸೆ.18ರಂದು ಮಧ್ಯಾಹ್ನ 1:30ರಿಂದ ಸಂಜೆ 7:30ರ ನಡುವೆ ಸಂಭವಿಸಿತ್ತು. ವಿನ್ಸೆಂಟ್ ಮುನ್ನಾದಿನ ತೀವ್ರವಾಗಿ ಗಾಯಗೊಂಡಿದ್ದರು ಎಂದು ವೈದ್ಯಕೀಯ ಸಾಕ್ಷ್ಯವು ದೃಢಪಡಿಸಿದೆ. ಹೀಗಾಗಿ, ಇದು ಕಸ್ಟಡಿ ಸಾವು ಅಲ್ಲದೆ ಬೇರೇನೂ ಅಲ್ಲ ಎಂದು ಶನಿವಾರ ವಿಚಾರಣೆ ಸಂದರ್ಭದಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ತಾಂಡವನ್ ಹೇಳಿದ್ದಾರೆ.

ಕಸ್ಟಡಿಯಲ್ಲಿ ಸಾವು ಸಂಭವಿಸಿದಾಗ ಅದು ಕಸ್ಟಡಿ ಸಾವು ಅಲ್ಲ ಎಂದು ಸಾಬೀತಾಗುವವರೆಗೂ ಪೋಲಿಸರ ಮೇಲೆಯೇ ಶಂಕೆಯಿರುತ್ತದೆ. ಇಲ್ಲಿ ಆರೋಪಿ ಪೋಲಿಸರು ಅದು ಕಸ್ಟಡಿ ಸಾವು ಅಲ್ಲ ಎಂದು ಸಾಬೀತುಗೊಳಿಸಿಲ್ಲ. ಹೀಗಾಗಿ, ಇದು ಕಸ್ಟಡಿ ಸಾವು ಎಂದು ಭಾವಿಸಲೇಬೇಕು ಎಂದಿದ್ದಾರೆ.

ಪೋಲಿಸರು ಲಾಠಿಗಳಿಂದ ವಿನ್ಸೆಂಟ್‌ರನ್ನು ಥಳಿಸಿದ್ದರು ಎನ್ನುವುದನ್ನು ಸಾಕ್ಷ್ಯಾಧಾರಗಳು ಸ್ಪಷ್ಟಪಡಿಸಿವೆ. ತಮ್ಮ ಹಲ್ಲೆಯಿಂದ ಆತ ಸಾಯಬಹುದು ಎನ್ನುವುದು ಗೊತ್ತಿದ್ದರೂ ಪೋಲಿಸರು ಅವರ ಮೇಲೆ ದಾಳಿ ನಡೆಸಿದ್ದರು ಎಂದೂ ನ್ಯಾ.ತಾಂಡವನ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...