Homeಮುಖಪುಟಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

ಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ತಾಳಮುತ್ತು ನಗರ ಪೊಲೀಸ್ ಠಾಣೆಯಲ್ಲಿ 1999ರಲ್ಲಿ ಸಂಭವಿಸಿದ ಕಸ್ಟಡಿ ಸಾವು ಪ್ರಕರಣದಲ್ಲಿ ಡಿಎಸ್‌ಪಿ ಸೇರಿ 9 ಜನರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಾಸಿಕ್ಯೂಷನ್ ಪ್ರಕಾರ, ತೂತುಕುಡಿ ಜಿಲ್ಲೆಯ ಮೇಳ ಅಲಂಗರತಟ್ಟು ನಿವಾಸಿ, ಉಪ್ಪು ತಯಾರಿಕೆ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಸಿ. ವಿನ್ಸೆಂಟ್ ಅವರನ್ನು ಸೆಪ್ಟೆಂಬರ್ 17, 1999ರಂದು ವಿಚಾರಣೆಗಾಗಿ ತಾಳಮುತ್ತು ನಗರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಆಗಿನ ಸಬ್-ಇನ್ಸ್‌ಪೆಕ್ಟರ್ ಆಗಿದ್ದ ರಾಮಕೃಷ್ಣನ್ ನೇತೃತ್ವದ ಪೊಲೀಸ್ ತಂಡ ಅವರನ್ನು ಲಾಕಪ್‌ನಲ್ಲಿ ಬಂಧಿಸಿಟ್ಟಿತ್ತು. ಮರುದಿನ ವಿನ್ಸೆಂಟ್ ಅನುಮಾನಾಸ್ಪದ ರೀತಿಯಲ್ಲಿ ಲಾಕಪ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು.

ವಿನ್ಸೆಂಟ್ ಸಾವಿನ ಸಂಬಂಧ ಅವರ ಪತ್ನಿ ಕೃಷ್ಣಮ್ಮಾಳ್ ಅದೇ ಪೊಲೀಸ್ ಠಾಣೆಯಲ್ಲಿ ತನ್ನ ಪತಿಯನ್ನು ಪೊಲೀಸರು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಸಂಬಂಧ ಸಬ್-ಇನ್ಸ್‌ಪೆಕ್ಟರ್ ರಾಮಕೃಷ್ಣನ್, ಪೊಲೀಸ್‌ ಸಿಬ್ಬಂದಿ ಸೋಮಸುಂದರಂ, ಜಯಶೇಖರನ್, ಜೋಸೆಫ್ ರಾಜ್, ಪಿಚಯ್ಯ, ಚೆಲ್ಲಾತುರೈ, ವೀರಬಾಹು, ಶಿವಸುಬ್ರಮಣಿಯನ್, ಸುಬ್ಬಯ್ಯ, ರತಿನಸಾಮಿ ಮತ್ತು ಬಾಲಸುಬ್ರಮಣಿಯನ್ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆಯನ್ನು ತೂತುಕುಡಿಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದೆ. ನ್ಯಾಯಮೂರ್ತಿ ಎಂ. ತಾಂಡವನ್ ಅವರು ಪ್ರಕರಣದ ಅಪರಾಧಿಗಳಾದ ರಾಮಕೃಷ್ಣನ್, ಸೋಮಸುಂದರಂ, ಜಯಶೇಖರನ್, ಜೋಸೆಫ್ ರಾಜ್, ಪಿಚಯ್ಯ, ಚೆಲ್ಲಾತುರೈ, ವೀರಬಾಹು, ಸುಬ್ಬಯ್ಯ ಮತ್ತು ಬಾಲಸುಬ್ರಮಣಿಯನ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 10,000 ರೂಪಾಯಿ ದಂಡ ವಿಧಿಸಿದ್ದಾರೆ.

ಆರೋಪಿಗಳಾದ ರತಿನಸಾಮಿ ಮತ್ತು ಶಿವಸುಬ್ರಮಣಿಯನ್ ಇಬ್ಬರೂ ಈಗ ಸೇವೆಯಿಂದ ನಿವೃತ್ತರಾಗಿದ್ದಾರೆ. ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿದೆ. ಸರ್ಕಾರಿ ವಕೀಲ ಎಸ್.ಪಿ ಆನಂದ್ ಗೇಬ್ರಿಯಲ್ ರಾಜ್ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸಿದ್ದಾರೆ.

ಶಿಕ್ಷೆಗೊಳಗಾದವರಲ್ಲಿ ಸಬ್-ಇನ್ಸ್‌ಪೆಕ್ಟರ್ ರಾಮಕೃಷ್ಣನ್ ಈಗ ಶ್ರೀವೈಕುಂಠಂ ಡಿಎಸ್‌ಪಿ ಆಗಿದ್ದಾರೆ. ಸೋಮಸುಂದರಂ ಪ್ರಸ್ತುತ ಇನ್ಸ್‌ಪೆಕ್ಟರ್ ಆಗಿ ಮತ್ತು ಪಿಚಯ್ಯ ಭೂಕಬಳಿಕೆ ತಡೆ ವಿಭಾಗದಲ್ಲಿ ವಿಶೇಷ ಸಬ್-ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಇತರರು ಸೇವೆಯಿಂದ ನಿವೃತ್ತರಾಗಿದ್ದಾರೆ.

ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ ವಿನ್ಸೆಂಟ್ ಸಾವು 1999, ಸೆ.18ರಂದು ಮಧ್ಯಾಹ್ನ 1:30ರಿಂದ ಸಂಜೆ 7:30ರ ನಡುವೆ ಸಂಭವಿಸಿತ್ತು. ವಿನ್ಸೆಂಟ್ ಮುನ್ನಾದಿನ ತೀವ್ರವಾಗಿ ಗಾಯಗೊಂಡಿದ್ದರು ಎಂದು ವೈದ್ಯಕೀಯ ಸಾಕ್ಷ್ಯವು ದೃಢಪಡಿಸಿದೆ. ಹೀಗಾಗಿ, ಇದು ಕಸ್ಟಡಿ ಸಾವು ಅಲ್ಲದೆ ಬೇರೇನೂ ಅಲ್ಲ ಎಂದು ಶನಿವಾರ ವಿಚಾರಣೆ ಸಂದರ್ಭದಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ತಾಂಡವನ್ ಹೇಳಿದ್ದಾರೆ.

ಕಸ್ಟಡಿಯಲ್ಲಿ ಸಾವು ಸಂಭವಿಸಿದಾಗ ಅದು ಕಸ್ಟಡಿ ಸಾವು ಅಲ್ಲ ಎಂದು ಸಾಬೀತಾಗುವವರೆಗೂ ಪೋಲಿಸರ ಮೇಲೆಯೇ ಶಂಕೆಯಿರುತ್ತದೆ. ಇಲ್ಲಿ ಆರೋಪಿ ಪೋಲಿಸರು ಅದು ಕಸ್ಟಡಿ ಸಾವು ಅಲ್ಲ ಎಂದು ಸಾಬೀತುಗೊಳಿಸಿಲ್ಲ. ಹೀಗಾಗಿ, ಇದು ಕಸ್ಟಡಿ ಸಾವು ಎಂದು ಭಾವಿಸಲೇಬೇಕು ಎಂದಿದ್ದಾರೆ.

ಪೋಲಿಸರು ಲಾಠಿಗಳಿಂದ ವಿನ್ಸೆಂಟ್‌ರನ್ನು ಥಳಿಸಿದ್ದರು ಎನ್ನುವುದನ್ನು ಸಾಕ್ಷ್ಯಾಧಾರಗಳು ಸ್ಪಷ್ಟಪಡಿಸಿವೆ. ತಮ್ಮ ಹಲ್ಲೆಯಿಂದ ಆತ ಸಾಯಬಹುದು ಎನ್ನುವುದು ಗೊತ್ತಿದ್ದರೂ ಪೋಲಿಸರು ಅವರ ಮೇಲೆ ದಾಳಿ ನಡೆಸಿದ್ದರು ಎಂದೂ ನ್ಯಾ.ತಾಂಡವನ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...