Homeಕರ್ನಾಟಕಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

- Advertisement -
- Advertisement -

ಧರ್ಮಸ್ಥಳದ ಪಾಂಗಳ ಕ್ರಾಸ್‌ನಲ್ಲಿ ಬುಧವಾರ (ಆ.6) ನಡೆದ ಯೂಟ್ಯೂಬ್‌ ಮಾಧ್ಯಮದವರ (ಪತ್ರಕರ್ತರ) ಮೇಲಿನ ಮಾರಣಾಂತಿಕ ದಾಳಿಯನ್ನು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬೆಳ್ತಂಗಡಿ ತಾಲೂಕು ಸಮಿತಿ ತೀವ್ರವಾಗಿ ಖಂಡಿಸಿದೆ.

ದಲಿತ ಪತ್ರಕರ್ತನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹಿಸಿದೆ.

ಹಲ್ಲೆಗೊಳಗಾದ ನಾಲ್ವರು ಪತ್ರಕರ್ತರ ಪೈಕಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ದಲಿತ ಸಮುದಾಯದ ಅಭಿ ಕೂಡ ಒಬ್ಬರು. ವರದಿಗಳ ಪ್ರಕಾರ, ಅಭಿ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಲ್ಲ. ಕುಡ್ಲ ರ‍್ಯಾಂಪೇಜ್ ಯೂಟ್ಯೂಬ್ ಚಾನೆಲ್‌ನ ಅಜಯ್ ಅಂಚನ್ ಅವರು ನೀಡಿರುವ ದೂರು ಆಧರಿಸಿ ಅಭಿ ಅವರ ಹೇಳಿಕೆ ಪಡೆದುಕೊಂಡಿದ್ದಾರೆ.

ಶುಕ್ರವಾರ (ಆ.8) ಉಜಿರೆಯ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬೆಳ್ತಂಗಡಿಯ ಮುಖಂಡರು ಹಲ್ಲೆಗೊಳಗಾದ ದಲಿತ ಸಮುದಾಯದ ಪತ್ರಕರ್ತ ಅಭಿ ಮತ್ತು ಇತರರ ಆರೋಗ್ಯ ವಿಚಾರಿಸಿದ್ದಾರೆ.

ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುವ ಮತ್ತು ಅದರ ಅಂಗವೆನಿಸಿಕೊಂಡಿರುವ ಮಾಧ್ಯಮದವರ ಮೇಲೆ ಸವಾರಿ ಮಾಡುವುದೆಂದರೆ, ಅಂದು ಸಂವಿಧಾನದ ಮೇಲೆ ಮಾಡುವ ದಾಳಿಯಾಗುತ್ತದೆ ಎಂದು ದಸಂಸ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾಳಿ ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ದಸಂಸ ಬೆಳ್ತಂಗಡಿ ತಾಲೂಕು ಸಮಿತಿಯ ಮುಖಂಡ ಬಿ.ಕೆ ವಸಂತ್, ಹಲ್ಲೆಗೊಳಗಳಾದ ದಲಿತ ಪತ್ರಕರ್ತ ಅಭಿ ಅವರಿಂದ ಪೊಲೀಸರು ಕೇವಲ ಹೇಳಿಕೆ ಪಡೆದುಕೊಂಡಿದ್ದಾರೆ. ಇದು ಸಾಲದು, ಆರೋಪಿಗಳ ವಿರುದ್ದ ಪೊಲೀಸರು ದಲಿತ ದೌರ್ಜನ್ಯ ಪ್ರಕರಣ ದಾಖಲಿಸಬೇಕು. ಅಲ್ಲದೆ, ಹಲ್ಲೆ ಮಾಡುವಾಗ ವಿಡಿಯೋ ಮಾಡುವುದಕ್ಕೆ ತಡೆಯೊಡ್ಡಿದ್ದಕ್ಕೆ ಮತ್ತು ಕ್ಯಾಮಾರ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಾನಿ ಮಾಡಿದ್ದಕ್ಕೆ ದರೋಡೆ ಮತ್ತು ಸಾಕ್ಷ್ಯನಾಶ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಭಿ ಹಲ್ಲೆಗೊಳಗಾಗಿ ಅಸ್ವಸ್ಥರಾಗಿದ್ದಾಗ ಪೊಲೀಸರು ಅವರಿಂದ ಹೇಳಿಕೆ ಪಡೆದಿದ್ದಾರೆ. ಅದು ಸರಿಯಾಗಿಲ್ಲ. ಹಾಗಾಗಿ, ಪೊಲೀಸರು ಮತ್ತೊಮ್ಮೆ ಅವರಿಂದ ಹೇಳಿಕೆ ಪಡೆದು ಸರಿಯಾಗಿ ಪ್ರಕರಣ ದಾಖಲಿಸಬೇಕು. ದಲಿತ ದೌರ್ಜನ್ಯ ಸೇರಿದಂತೆ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಳ್ಳಬೇಕು ಎಂದು ವಸಂತ್ ಒತ್ತಾಯಿಸಿದ್ದಾರೆ.

ಎಸ್‌ಐಟಿ ತನಿಖೆಯ ದಿಕ್ಕು ತಪ್ಪಿಸಲು ಕಾಣದ ಕೈಗಳು ಮಾಧ್ಯಮದವರ ಮೇಲೆ ದಾಳಿ ಮಾಡಿಸಿದೆ ಎಂದು ವಂಸತ್ ಆರೋಪಿಸಿದ್ದಾರೆ.

ಉಜಿರೆ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ದಸಂಸ ಬೆಳ್ತಂಗಡಿ ನಿಯೋಗದಲ್ಲಿ ಶೇಖರ್ ಕುಕ್ಕೇಡಿ, ರಮೇಶ್ ಆರ್., ಬಿ.ಕೆ ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯೂರು, ನೇಮಿರಾಜ್ ಕಿಲ್ಲೂರ್, ಶ್ರೀಧರ್ ಎಸ್ ಕಳೆಂಜ, ಶಂಕರ್ ಮಾಲಾಡಿ, ಪ್ರಭಾಕರ್ ಶಾಂತಿಕೋಡಿ, ಹರೀಶ್ ಲಾಯಿಲ, ಕೂಸ ಅಳದಂಗಡಿ, ಸುಂದರ ನಾಲ್ಕೂರು, ಪುಷ್ಪರಾಜ್ ಶಿರ್ಲಾಲ್, ಸಂದೀಪ್ ಹೊಸಪಟ್ನ, ಶೇಖರ್ ಮಾಲಾಡಿ, ರಮೇಶ್ ಗಾಂಧಿನಗರ ಹಾಗೂ ಇತರರು ಇದ್ದರು.

ಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...