Homeಕರ್ನಾಟಕಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

- Advertisement -
- Advertisement -

ಧರ್ಮಸ್ಥಳದ ಪಾಂಗಳ ಕ್ರಾಸ್‌ನಲ್ಲಿ ಬುಧವಾರ (ಆ.6) ನಡೆದ ಯೂಟ್ಯೂಬ್‌ ಮಾಧ್ಯಮದವರ (ಪತ್ರಕರ್ತರ) ಮೇಲಿನ ಮಾರಣಾಂತಿಕ ದಾಳಿಯನ್ನು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬೆಳ್ತಂಗಡಿ ತಾಲೂಕು ಸಮಿತಿ ತೀವ್ರವಾಗಿ ಖಂಡಿಸಿದೆ.

ದಲಿತ ಪತ್ರಕರ್ತನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹಿಸಿದೆ.

ಹಲ್ಲೆಗೊಳಗಾದ ನಾಲ್ವರು ಪತ್ರಕರ್ತರ ಪೈಕಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ದಲಿತ ಸಮುದಾಯದ ಅಭಿ ಕೂಡ ಒಬ್ಬರು. ವರದಿಗಳ ಪ್ರಕಾರ, ಅಭಿ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಲ್ಲ. ಕುಡ್ಲ ರ‍್ಯಾಂಪೇಜ್ ಯೂಟ್ಯೂಬ್ ಚಾನೆಲ್‌ನ ಅಜಯ್ ಅಂಚನ್ ಅವರು ನೀಡಿರುವ ದೂರು ಆಧರಿಸಿ ಅಭಿ ಅವರ ಹೇಳಿಕೆ ಪಡೆದುಕೊಂಡಿದ್ದಾರೆ.

ಶುಕ್ರವಾರ (ಆ.8) ಉಜಿರೆಯ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬೆಳ್ತಂಗಡಿಯ ಮುಖಂಡರು ಹಲ್ಲೆಗೊಳಗಾದ ದಲಿತ ಸಮುದಾಯದ ಪತ್ರಕರ್ತ ಅಭಿ ಮತ್ತು ಇತರರ ಆರೋಗ್ಯ ವಿಚಾರಿಸಿದ್ದಾರೆ.

ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುವ ಮತ್ತು ಅದರ ಅಂಗವೆನಿಸಿಕೊಂಡಿರುವ ಮಾಧ್ಯಮದವರ ಮೇಲೆ ಸವಾರಿ ಮಾಡುವುದೆಂದರೆ, ಅಂದು ಸಂವಿಧಾನದ ಮೇಲೆ ಮಾಡುವ ದಾಳಿಯಾಗುತ್ತದೆ ಎಂದು ದಸಂಸ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾಳಿ ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ದಸಂಸ ಬೆಳ್ತಂಗಡಿ ತಾಲೂಕು ಸಮಿತಿಯ ಮುಖಂಡ ಬಿ.ಕೆ ವಸಂತ್, ಹಲ್ಲೆಗೊಳಗಳಾದ ದಲಿತ ಪತ್ರಕರ್ತ ಅಭಿ ಅವರಿಂದ ಪೊಲೀಸರು ಕೇವಲ ಹೇಳಿಕೆ ಪಡೆದುಕೊಂಡಿದ್ದಾರೆ. ಇದು ಸಾಲದು, ಆರೋಪಿಗಳ ವಿರುದ್ದ ಪೊಲೀಸರು ದಲಿತ ದೌರ್ಜನ್ಯ ಪ್ರಕರಣ ದಾಖಲಿಸಬೇಕು. ಅಲ್ಲದೆ, ಹಲ್ಲೆ ಮಾಡುವಾಗ ವಿಡಿಯೋ ಮಾಡುವುದಕ್ಕೆ ತಡೆಯೊಡ್ಡಿದ್ದಕ್ಕೆ ಮತ್ತು ಕ್ಯಾಮಾರ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಾನಿ ಮಾಡಿದ್ದಕ್ಕೆ ದರೋಡೆ ಮತ್ತು ಸಾಕ್ಷ್ಯನಾಶ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಭಿ ಹಲ್ಲೆಗೊಳಗಾಗಿ ಅಸ್ವಸ್ಥರಾಗಿದ್ದಾಗ ಪೊಲೀಸರು ಅವರಿಂದ ಹೇಳಿಕೆ ಪಡೆದಿದ್ದಾರೆ. ಅದು ಸರಿಯಾಗಿಲ್ಲ. ಹಾಗಾಗಿ, ಪೊಲೀಸರು ಮತ್ತೊಮ್ಮೆ ಅವರಿಂದ ಹೇಳಿಕೆ ಪಡೆದು ಸರಿಯಾಗಿ ಪ್ರಕರಣ ದಾಖಲಿಸಬೇಕು. ದಲಿತ ದೌರ್ಜನ್ಯ ಸೇರಿದಂತೆ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಳ್ಳಬೇಕು ಎಂದು ವಸಂತ್ ಒತ್ತಾಯಿಸಿದ್ದಾರೆ.

ಎಸ್‌ಐಟಿ ತನಿಖೆಯ ದಿಕ್ಕು ತಪ್ಪಿಸಲು ಕಾಣದ ಕೈಗಳು ಮಾಧ್ಯಮದವರ ಮೇಲೆ ದಾಳಿ ಮಾಡಿಸಿದೆ ಎಂದು ವಂಸತ್ ಆರೋಪಿಸಿದ್ದಾರೆ.

ಉಜಿರೆ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ದಸಂಸ ಬೆಳ್ತಂಗಡಿ ನಿಯೋಗದಲ್ಲಿ ಶೇಖರ್ ಕುಕ್ಕೇಡಿ, ರಮೇಶ್ ಆರ್., ಬಿ.ಕೆ ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯೂರು, ನೇಮಿರಾಜ್ ಕಿಲ್ಲೂರ್, ಶ್ರೀಧರ್ ಎಸ್ ಕಳೆಂಜ, ಶಂಕರ್ ಮಾಲಾಡಿ, ಪ್ರಭಾಕರ್ ಶಾಂತಿಕೋಡಿ, ಹರೀಶ್ ಲಾಯಿಲ, ಕೂಸ ಅಳದಂಗಡಿ, ಸುಂದರ ನಾಲ್ಕೂರು, ಪುಷ್ಪರಾಜ್ ಶಿರ್ಲಾಲ್, ಸಂದೀಪ್ ಹೊಸಪಟ್ನ, ಶೇಖರ್ ಮಾಲಾಡಿ, ರಮೇಶ್ ಗಾಂಧಿನಗರ ಹಾಗೂ ಇತರರು ಇದ್ದರು.

ಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...