Homeಕರ್ನಾಟಕಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

- Advertisement -
- Advertisement -

ಧರ್ಮಸ್ಥಳದ ಪಾಂಗಳ ಕ್ರಾಸ್‌ನಲ್ಲಿ ಬುಧವಾರ (ಆ.6) ನಡೆದ ಯೂಟ್ಯೂಬ್‌ ಮಾಧ್ಯಮದವರ (ಪತ್ರಕರ್ತರ) ಮೇಲಿನ ಮಾರಣಾಂತಿಕ ದಾಳಿಯನ್ನು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬೆಳ್ತಂಗಡಿ ತಾಲೂಕು ಸಮಿತಿ ತೀವ್ರವಾಗಿ ಖಂಡಿಸಿದೆ.

ದಲಿತ ಪತ್ರಕರ್ತನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹಿಸಿದೆ.

ಹಲ್ಲೆಗೊಳಗಾದ ನಾಲ್ವರು ಪತ್ರಕರ್ತರ ಪೈಕಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ದಲಿತ ಸಮುದಾಯದ ಅಭಿ ಕೂಡ ಒಬ್ಬರು. ವರದಿಗಳ ಪ್ರಕಾರ, ಅಭಿ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಲ್ಲ. ಕುಡ್ಲ ರ‍್ಯಾಂಪೇಜ್ ಯೂಟ್ಯೂಬ್ ಚಾನೆಲ್‌ನ ಅಜಯ್ ಅಂಚನ್ ಅವರು ನೀಡಿರುವ ದೂರು ಆಧರಿಸಿ ಅಭಿ ಅವರ ಹೇಳಿಕೆ ಪಡೆದುಕೊಂಡಿದ್ದಾರೆ.

ಶುಕ್ರವಾರ (ಆ.8) ಉಜಿರೆಯ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬೆಳ್ತಂಗಡಿಯ ಮುಖಂಡರು ಹಲ್ಲೆಗೊಳಗಾದ ದಲಿತ ಸಮುದಾಯದ ಪತ್ರಕರ್ತ ಅಭಿ ಮತ್ತು ಇತರರ ಆರೋಗ್ಯ ವಿಚಾರಿಸಿದ್ದಾರೆ.

ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುವ ಮತ್ತು ಅದರ ಅಂಗವೆನಿಸಿಕೊಂಡಿರುವ ಮಾಧ್ಯಮದವರ ಮೇಲೆ ಸವಾರಿ ಮಾಡುವುದೆಂದರೆ, ಅಂದು ಸಂವಿಧಾನದ ಮೇಲೆ ಮಾಡುವ ದಾಳಿಯಾಗುತ್ತದೆ ಎಂದು ದಸಂಸ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾಳಿ ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ದಸಂಸ ಬೆಳ್ತಂಗಡಿ ತಾಲೂಕು ಸಮಿತಿಯ ಮುಖಂಡ ಬಿ.ಕೆ ವಸಂತ್, ಹಲ್ಲೆಗೊಳಗಳಾದ ದಲಿತ ಪತ್ರಕರ್ತ ಅಭಿ ಅವರಿಂದ ಪೊಲೀಸರು ಕೇವಲ ಹೇಳಿಕೆ ಪಡೆದುಕೊಂಡಿದ್ದಾರೆ. ಇದು ಸಾಲದು, ಆರೋಪಿಗಳ ವಿರುದ್ದ ಪೊಲೀಸರು ದಲಿತ ದೌರ್ಜನ್ಯ ಪ್ರಕರಣ ದಾಖಲಿಸಬೇಕು. ಅಲ್ಲದೆ, ಹಲ್ಲೆ ಮಾಡುವಾಗ ವಿಡಿಯೋ ಮಾಡುವುದಕ್ಕೆ ತಡೆಯೊಡ್ಡಿದ್ದಕ್ಕೆ ಮತ್ತು ಕ್ಯಾಮಾರ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಾನಿ ಮಾಡಿದ್ದಕ್ಕೆ ದರೋಡೆ ಮತ್ತು ಸಾಕ್ಷ್ಯನಾಶ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಭಿ ಹಲ್ಲೆಗೊಳಗಾಗಿ ಅಸ್ವಸ್ಥರಾಗಿದ್ದಾಗ ಪೊಲೀಸರು ಅವರಿಂದ ಹೇಳಿಕೆ ಪಡೆದಿದ್ದಾರೆ. ಅದು ಸರಿಯಾಗಿಲ್ಲ. ಹಾಗಾಗಿ, ಪೊಲೀಸರು ಮತ್ತೊಮ್ಮೆ ಅವರಿಂದ ಹೇಳಿಕೆ ಪಡೆದು ಸರಿಯಾಗಿ ಪ್ರಕರಣ ದಾಖಲಿಸಬೇಕು. ದಲಿತ ದೌರ್ಜನ್ಯ ಸೇರಿದಂತೆ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಳ್ಳಬೇಕು ಎಂದು ವಸಂತ್ ಒತ್ತಾಯಿಸಿದ್ದಾರೆ.

ಎಸ್‌ಐಟಿ ತನಿಖೆಯ ದಿಕ್ಕು ತಪ್ಪಿಸಲು ಕಾಣದ ಕೈಗಳು ಮಾಧ್ಯಮದವರ ಮೇಲೆ ದಾಳಿ ಮಾಡಿಸಿದೆ ಎಂದು ವಂಸತ್ ಆರೋಪಿಸಿದ್ದಾರೆ.

ಉಜಿರೆ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ದಸಂಸ ಬೆಳ್ತಂಗಡಿ ನಿಯೋಗದಲ್ಲಿ ಶೇಖರ್ ಕುಕ್ಕೇಡಿ, ರಮೇಶ್ ಆರ್., ಬಿ.ಕೆ ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯೂರು, ನೇಮಿರಾಜ್ ಕಿಲ್ಲೂರ್, ಶ್ರೀಧರ್ ಎಸ್ ಕಳೆಂಜ, ಶಂಕರ್ ಮಾಲಾಡಿ, ಪ್ರಭಾಕರ್ ಶಾಂತಿಕೋಡಿ, ಹರೀಶ್ ಲಾಯಿಲ, ಕೂಸ ಅಳದಂಗಡಿ, ಸುಂದರ ನಾಲ್ಕೂರು, ಪುಷ್ಪರಾಜ್ ಶಿರ್ಲಾಲ್, ಸಂದೀಪ್ ಹೊಸಪಟ್ನ, ಶೇಖರ್ ಮಾಲಾಡಿ, ರಮೇಶ್ ಗಾಂಧಿನಗರ ಹಾಗೂ ಇತರರು ಇದ್ದರು.

ಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...