Homeಕರ್ನಾಟಕಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

- Advertisement -
- Advertisement -

ಧರ್ಮಸ್ಥಳದ ಪಾಂಗಳ ಕ್ರಾಸ್‌ನಲ್ಲಿ ಬುಧವಾರ (ಆ.6) ನಡೆದ ಯೂಟ್ಯೂಬ್‌ ಮಾಧ್ಯಮದವರ (ಪತ್ರಕರ್ತರ) ಮೇಲಿನ ಮಾರಣಾಂತಿಕ ದಾಳಿಯನ್ನು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬೆಳ್ತಂಗಡಿ ತಾಲೂಕು ಸಮಿತಿ ತೀವ್ರವಾಗಿ ಖಂಡಿಸಿದೆ.

ದಲಿತ ಪತ್ರಕರ್ತನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹಿಸಿದೆ.

ಹಲ್ಲೆಗೊಳಗಾದ ನಾಲ್ವರು ಪತ್ರಕರ್ತರ ಪೈಕಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ದಲಿತ ಸಮುದಾಯದ ಅಭಿ ಕೂಡ ಒಬ್ಬರು. ವರದಿಗಳ ಪ್ರಕಾರ, ಅಭಿ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಲ್ಲ. ಕುಡ್ಲ ರ‍್ಯಾಂಪೇಜ್ ಯೂಟ್ಯೂಬ್ ಚಾನೆಲ್‌ನ ಅಜಯ್ ಅಂಚನ್ ಅವರು ನೀಡಿರುವ ದೂರು ಆಧರಿಸಿ ಅಭಿ ಅವರ ಹೇಳಿಕೆ ಪಡೆದುಕೊಂಡಿದ್ದಾರೆ.

ಶುಕ್ರವಾರ (ಆ.8) ಉಜಿರೆಯ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬೆಳ್ತಂಗಡಿಯ ಮುಖಂಡರು ಹಲ್ಲೆಗೊಳಗಾದ ದಲಿತ ಸಮುದಾಯದ ಪತ್ರಕರ್ತ ಅಭಿ ಮತ್ತು ಇತರರ ಆರೋಗ್ಯ ವಿಚಾರಿಸಿದ್ದಾರೆ.

ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುವ ಮತ್ತು ಅದರ ಅಂಗವೆನಿಸಿಕೊಂಡಿರುವ ಮಾಧ್ಯಮದವರ ಮೇಲೆ ಸವಾರಿ ಮಾಡುವುದೆಂದರೆ, ಅಂದು ಸಂವಿಧಾನದ ಮೇಲೆ ಮಾಡುವ ದಾಳಿಯಾಗುತ್ತದೆ ಎಂದು ದಸಂಸ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾಳಿ ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ದಸಂಸ ಬೆಳ್ತಂಗಡಿ ತಾಲೂಕು ಸಮಿತಿಯ ಮುಖಂಡ ಬಿ.ಕೆ ವಸಂತ್, ಹಲ್ಲೆಗೊಳಗಳಾದ ದಲಿತ ಪತ್ರಕರ್ತ ಅಭಿ ಅವರಿಂದ ಪೊಲೀಸರು ಕೇವಲ ಹೇಳಿಕೆ ಪಡೆದುಕೊಂಡಿದ್ದಾರೆ. ಇದು ಸಾಲದು, ಆರೋಪಿಗಳ ವಿರುದ್ದ ಪೊಲೀಸರು ದಲಿತ ದೌರ್ಜನ್ಯ ಪ್ರಕರಣ ದಾಖಲಿಸಬೇಕು. ಅಲ್ಲದೆ, ಹಲ್ಲೆ ಮಾಡುವಾಗ ವಿಡಿಯೋ ಮಾಡುವುದಕ್ಕೆ ತಡೆಯೊಡ್ಡಿದ್ದಕ್ಕೆ ಮತ್ತು ಕ್ಯಾಮಾರ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಾನಿ ಮಾಡಿದ್ದಕ್ಕೆ ದರೋಡೆ ಮತ್ತು ಸಾಕ್ಷ್ಯನಾಶ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಭಿ ಹಲ್ಲೆಗೊಳಗಾಗಿ ಅಸ್ವಸ್ಥರಾಗಿದ್ದಾಗ ಪೊಲೀಸರು ಅವರಿಂದ ಹೇಳಿಕೆ ಪಡೆದಿದ್ದಾರೆ. ಅದು ಸರಿಯಾಗಿಲ್ಲ. ಹಾಗಾಗಿ, ಪೊಲೀಸರು ಮತ್ತೊಮ್ಮೆ ಅವರಿಂದ ಹೇಳಿಕೆ ಪಡೆದು ಸರಿಯಾಗಿ ಪ್ರಕರಣ ದಾಖಲಿಸಬೇಕು. ದಲಿತ ದೌರ್ಜನ್ಯ ಸೇರಿದಂತೆ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಳ್ಳಬೇಕು ಎಂದು ವಸಂತ್ ಒತ್ತಾಯಿಸಿದ್ದಾರೆ.

ಎಸ್‌ಐಟಿ ತನಿಖೆಯ ದಿಕ್ಕು ತಪ್ಪಿಸಲು ಕಾಣದ ಕೈಗಳು ಮಾಧ್ಯಮದವರ ಮೇಲೆ ದಾಳಿ ಮಾಡಿಸಿದೆ ಎಂದು ವಂಸತ್ ಆರೋಪಿಸಿದ್ದಾರೆ.

ಉಜಿರೆ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ದಸಂಸ ಬೆಳ್ತಂಗಡಿ ನಿಯೋಗದಲ್ಲಿ ಶೇಖರ್ ಕುಕ್ಕೇಡಿ, ರಮೇಶ್ ಆರ್., ಬಿ.ಕೆ ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯೂರು, ನೇಮಿರಾಜ್ ಕಿಲ್ಲೂರ್, ಶ್ರೀಧರ್ ಎಸ್ ಕಳೆಂಜ, ಶಂಕರ್ ಮಾಲಾಡಿ, ಪ್ರಭಾಕರ್ ಶಾಂತಿಕೋಡಿ, ಹರೀಶ್ ಲಾಯಿಲ, ಕೂಸ ಅಳದಂಗಡಿ, ಸುಂದರ ನಾಲ್ಕೂರು, ಪುಷ್ಪರಾಜ್ ಶಿರ್ಲಾಲ್, ಸಂದೀಪ್ ಹೊಸಪಟ್ನ, ಶೇಖರ್ ಮಾಲಾಡಿ, ರಮೇಶ್ ಗಾಂಧಿನಗರ ಹಾಗೂ ಇತರರು ಇದ್ದರು.

ಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...