Homeಚಳವಳಿಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

ಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು, ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

- Advertisement -
- Advertisement -

ಡಿಸೆಂಬರ್ 6, 2022 ರಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನದಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ‘ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ’ ದ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ದಲ್ಲಿ ಮಂಡಿಸಲಾದ ನಿರ್ಣಯಗಳು

1. ಭಾರತದ ವೈವಿದ್ಯಮಯ ಸೌಹಾರ್ಧಯುತ ಸಾಮರಸ್ಯ ಮತ್ತು ಬಹುತ್ವದ ಸಂಸೃತಿಯ ಮೇಲೆ ಮೇಲು -ಕೀಳು, ಸ್ಪೃಶ್ಯ- ಅಸ್ಪೃಶ್ಯ, ಶ್ರೇಷ್ಠತೆ – ಕನಿಷ್ಟತೆಯ ತಾರತಮ್ಯದ ವೈದಿಕಶಾಹಿಯ ಏಕ ಸಂಸೃತಿಯನ್ನು ಹೇರುವಂತಹ ದಬ್ಬಾಳಿಕೆಯ ನೀತಿಯನ್ನು ಈ ಸಾಂಸ್ಕೃತಿಕ ಪ್ರತಿರೋಧ ಸಮಾವೇಶವು ತೀವ್ರವಾಗಿ ಖಂಡಿಸುತ್ತದೆ. ಮತ್ತು ಇಂತಹ ವೈವಿಧ್ಯಮಯ, ಸೌಹಾರ್ದಯುತ, ಸಾಮರಸ್ಯದ ಬಹುತ್ವದ ಸಾಂಸ್ಕೃತಿಕ ಅಸ್ಮಿತೆಯ ಬದುಕನ್ನು ಉಳಿಸಿಕೊಳ್ಳಲು ಈ ಪ್ರತಿರೋಧ ಸಮಾವೇಶವು ಸಂಕಲ್ಪ ಮಾಡುತ್ತದೆ.

2. ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಯ ಸಾಧನದಂತೆ ವರ್ತಿಸುತ್ತಿರುವ ಸರ್ಕಾರದ ನಡೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ. ಇಂತಹ ಚಾತುರ್ವರ್ಣ ಮತ್ತು ಜಾತೀಯತೆ ತಾರತಮ್ಯಗಳನ್ನು ಎತ್ತಿ ಹಿಡಿಯುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸುತ್ತೇವೆ. ಭಾರತದ ಸಂವಿಧಾನ ಎತ್ತಿಹಿಡಿದಿರುವ ಮೂಲಭೂತ ಹಕ್ಕುಗಳನ್ನು ಸಮಸ್ತ ಭಾರತೀಯರೂ ಅನುಭವಿಸುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಖಾತ್ರಿಗೊಳಿಸಬೇಕಿದೆ.

3. ಹಿಂದುಳಿದ ವರ್ಗಗಳಲ್ಲಿ ಇರುವಂತೆ ಪರಿಶಿಷ್ಟ ಜಾತಿ/ವರ್ಗಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಟ್ಟು ಕಡ್ಡಾಯವಾಗಿ ಅನುಷ್ಟಾನಗೊಳಿಸಬೇಕು.

4. ಪರಿಶಿಷ್ಟ ಜಾತಿ/ವರ್ಗಗಳಿಗೆ SCSP/TSP ಕಾಯ್ದೆಯ ಅನುಗುಣವಾಗಿ ರಾಜ್ಯ ಬಜೆಟ್ಟಿನ ಶೇ. 24.10 ಯಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು. ಈ ಅನುದಾನವನ್ನು ಸಂಪೂರ್ಣವಾಗಿ ‘ಏಕಗವಾಕ್ಷಿ ಯೋಜನೆ’ ಯಲ್ಲಿ ಅನುಷ್ಟಾನಗೊಳಿಸಬೇಕು. ದಲಿತರ ಅವಶ್ಯಕತೆಗೆ ತಕ್ಕಂತೆ ಯೋಜನೆ ರೂಪಿಸುವುದರ ಮೂಲಕ ಅನುದಾನ ದುರ್ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ಇತರೆ ವೆಚ್ಚಕ್ಕಾಗಿ ಹಣ ಬಳಸಲು ಅವಕಾಶವಿರುವ ‘7ಡಿ ಸೆಕ್ಷನ್’ ಅನ್ನು ಕಾಯ್ದೆಯಿಂದ ತೆಗೆದುಹಾಕಬೇಕು. ಕೇಂದ್ರ ಸರ್ಕಾರವೂ ಸಹ ಇದೇ ಮಾದರಿಯ ಕಾಯ್ದೆಯನ್ನು ರೂಪಿಸಬೇಕು.

5. ಕೇವಲ ಆರ್ಥಿಕ ಮಾನದಂಡದಲ್ಲಿ ಎಸ್ಸಿ/ಎಸ್ಟಿ/ಒಬಿಸಿ ಯವರನ್ನು ಹೊರತುಪಡಿಸಿ ವಾರ್ಷಿಕ 8 ಲಕ್ಷ ವರಮಾನವಿರುವ ಮೇಲ್ಜಾತಿಯವರಿಗೆ ನೀಡಿರುವ EWS ಮೀಸಲಾತಿಯನ್ನು ಈ ವೇದಿಕೆ ಖಡಾಖಂಡಿತವಾಗಿ ವಿರೋಧಿಸುತ್ತದೆ. ಈ ಅಸಂವಿಧಾನಿಕ ತಿದ್ದುಪಡಿಯನ್ನು ರದ್ದುಗೊಳಿಸಬೇಕು. ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

6. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಬಹುಕಾಲದಿಂದ ಖಾಲಿಯಾಗಿಯೇ ಉಳಿದಿರುವ ಲಕ್ಷಾಂತರ ಎಸ್ಸಿ/ಎಸ್ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿಕೊಳ್ಳಬೇಕು. ಹೊರಗುತ್ತಿಗೆ ನೇಮಕಾತಿಯನ್ನು ರದ್ದುಗೊಳಿಸಬೇಕು. ಖಾಲಿ ಹುದ್ದೆಗಳನ್ನು ಕೂಡಲೇ ತುಂಬಬೇಕು.

7. ‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು. ದಲಿತರ ಭೂಮಿಯು ದಲಿತರಲ್ಲಿಯೇ ಉಳಿಯುವಂತೆ ಮಾಡಬೇಕು. ಈ ಕಾಯ್ದೆಯ ಮೂಲ ಉದ್ದೇಶವಾದ ‘ದಲಿತರು ಭೂಮಿ ಹೊಂದುವ’ ಗುರಿಯನ್ನು ಸಮರ್ಥವಾಗಿ ಅನುಷ್ಟಾನಕ್ಕೆ ತರಬೇಕು.

8. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೋಹತ್ಯಾ ನಿಷೇಧ ಕಾಯ್ದೆ’ ಮತ್ತು ‘ಮತಾಂತರ ನಿಷೇಧ ಕಾಯ್ದೆ’ ಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

9. ಎಸ್ಸಿ/ಎಸ್ಟಿ ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಹಾಗೂ ಪ್ರತ್ಯೇಕ ಆಯೋಗವನ್ನು ರಚಿಸಿ ಕಾಲಕಾಲಕ್ಕೆ ಸಮೀಕ್ಷೆ ಮಾಡಿ ಸೌಲಭ್ಯ ಒದಗಿಸಬೇಕು. ಡಿಎನ್‌ಟಿ (ಡಿನೋಟಿಫೈ ಟ್ರೆಬ್ಸ್) ಸಮುದಾಯಗಳಿಗೆ ವಿಶೇಷ ಸೌಲಭ್ಯ ಒದಗಿಸಬೇಕು.

10. ರಾಜ್ಯ ಸರ್ಕಾರ ಜಾರಿಗೊಳಿಸಿರುವ ರೈತಾಪಿ ಜನರ ವಿರೋಧಿ ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎ.ಪಿ.ಎಮ್.ಸಿ.ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣ ಮಸೂದೆಯನ್ನು ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

11. ಒಕ್ಕೂಟ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅನುಷ್ಟಾನಕ್ಕೆ ತಂದಿರುವ, ಅಸಮಾನತೆಯನ್ನು ಹಾಗೂ ಚಾತುರ್ವರ್ಣ ಪದ್ಧತಿಯನ್ನು ಎತ್ತಿ ಹಿಡಿಯುವ ರಾಷ್ಟ್ರೀಯ ಶಿಕ್ಷಣ ನೀತಿ – 2020 ಅನ್ನು ಈ ಕೂಡಲೇ ರದ್ದುಗೊಳಿಸಬೇಕು.

12. ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಗೆ ಸ್ಕಾಲರ್‌ಶಿಪ್ ನಿಲ್ಲಿಸುವ ಯೋಚನೆಯನ್ನು ಕೂಡಲೇ ಕೈ ಬಿಡಬೇಕು. ಎಸ್ಸಿ/ಎಸ್ಟಿ ಮೀಸಲಾತಿಗೆ ನಿಗದಿಪಡಿಸುರುವ ವಾರ್ಷಿಕ ಆದಾಯ ಮಿತಿಯನ್ನು 10 ಲಕ್ಷಕ್ಕೆ ಏರಿಸಬೇಕೆಂದು ಒತ್ತಾಯಿಸುತ್ತೇವೆ.

13. ಹತ್ತು ನಿಮಿಷಕ್ಕೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ನ್ಯಾಯಾಲಯಗಳಲ್ಲಿ ಶೇ.96 ರಷ್ಟು ಅಟ್ರಾಸಿಟಿ ಕಾಯ್ದೆಯಡಿಯ ಪ್ರಕರಣಗಳು ಬಾಕಿ ಉಳಿದಿವೆ. ಈ ಕಾಯ್ದೆಯಡಿ ಶಿಕ್ಷೆ ನೀಡುವ ಪ್ರಮಾಣ ತೀರ ಕಡಿಮೆ ಇದೆ. ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳ ಈ ಉದ್ದೇಶಪೂರ್ವಕ ನಿರ್ಲಕ್ಯವನ್ನು ಖಂಡಿಸುತ್ತೇವೆ. ಈ ಕೂಡಲೇ ದಲಿತರಿಗೆ ಭದ್ರತೆ ಹಾಗೂ ರಕ್ಷಣೆ ಒದಗಿಸಲು ಆಗ್ರಹಿಸುತ್ತೇವೆ.

14. ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಈ ಎರಡೂ ವೃತ್ತಿಗಳಲ್ಲಿ ಮೀಸಲಾತಿ ನೀತಿಯನ್ನು ಅನುಷ್ಟಾನಕ್ಕೆ ತರಬೇಕು. ಮಲ ಹೊರುವ ಪದ್ಧತಿ ನಿಷೇಧಗೊಂಡಿದ್ದರೂ ಸಹ ನೂರಾರು ಸಾವುಗಳು ಇದರಿಂದ ಸಂಭವಿಸಿದೆ. ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಮಲ ಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಕ್ಕೆ ತರಲು ಆಗ್ರಹಿಸುತ್ತೇವೆ.

15. ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದಿರುವ ಕೋಮುವಾದಿ ದೌರ್ಜನ್ಯಗಳನ್ನು ಖಂಡಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕನ್ನಡ ನಾಡಿನ ಬಹುತ್ವವನ್ನು ಹಾಳುಗೆಡುವುತ್ತಿರುವ ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...