Homeಚಳವಳಿಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

ಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು, ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

- Advertisement -
- Advertisement -

ಡಿಸೆಂಬರ್ 6, 2022 ರಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನದಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ‘ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ’ ದ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ದಲ್ಲಿ ಮಂಡಿಸಲಾದ ನಿರ್ಣಯಗಳು

1. ಭಾರತದ ವೈವಿದ್ಯಮಯ ಸೌಹಾರ್ಧಯುತ ಸಾಮರಸ್ಯ ಮತ್ತು ಬಹುತ್ವದ ಸಂಸೃತಿಯ ಮೇಲೆ ಮೇಲು -ಕೀಳು, ಸ್ಪೃಶ್ಯ- ಅಸ್ಪೃಶ್ಯ, ಶ್ರೇಷ್ಠತೆ – ಕನಿಷ್ಟತೆಯ ತಾರತಮ್ಯದ ವೈದಿಕಶಾಹಿಯ ಏಕ ಸಂಸೃತಿಯನ್ನು ಹೇರುವಂತಹ ದಬ್ಬಾಳಿಕೆಯ ನೀತಿಯನ್ನು ಈ ಸಾಂಸ್ಕೃತಿಕ ಪ್ರತಿರೋಧ ಸಮಾವೇಶವು ತೀವ್ರವಾಗಿ ಖಂಡಿಸುತ್ತದೆ. ಮತ್ತು ಇಂತಹ ವೈವಿಧ್ಯಮಯ, ಸೌಹಾರ್ದಯುತ, ಸಾಮರಸ್ಯದ ಬಹುತ್ವದ ಸಾಂಸ್ಕೃತಿಕ ಅಸ್ಮಿತೆಯ ಬದುಕನ್ನು ಉಳಿಸಿಕೊಳ್ಳಲು ಈ ಪ್ರತಿರೋಧ ಸಮಾವೇಶವು ಸಂಕಲ್ಪ ಮಾಡುತ್ತದೆ.

2. ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಯ ಸಾಧನದಂತೆ ವರ್ತಿಸುತ್ತಿರುವ ಸರ್ಕಾರದ ನಡೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ. ಇಂತಹ ಚಾತುರ್ವರ್ಣ ಮತ್ತು ಜಾತೀಯತೆ ತಾರತಮ್ಯಗಳನ್ನು ಎತ್ತಿ ಹಿಡಿಯುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸುತ್ತೇವೆ. ಭಾರತದ ಸಂವಿಧಾನ ಎತ್ತಿಹಿಡಿದಿರುವ ಮೂಲಭೂತ ಹಕ್ಕುಗಳನ್ನು ಸಮಸ್ತ ಭಾರತೀಯರೂ ಅನುಭವಿಸುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಖಾತ್ರಿಗೊಳಿಸಬೇಕಿದೆ.

3. ಹಿಂದುಳಿದ ವರ್ಗಗಳಲ್ಲಿ ಇರುವಂತೆ ಪರಿಶಿಷ್ಟ ಜಾತಿ/ವರ್ಗಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಟ್ಟು ಕಡ್ಡಾಯವಾಗಿ ಅನುಷ್ಟಾನಗೊಳಿಸಬೇಕು.

4. ಪರಿಶಿಷ್ಟ ಜಾತಿ/ವರ್ಗಗಳಿಗೆ SCSP/TSP ಕಾಯ್ದೆಯ ಅನುಗುಣವಾಗಿ ರಾಜ್ಯ ಬಜೆಟ್ಟಿನ ಶೇ. 24.10 ಯಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು. ಈ ಅನುದಾನವನ್ನು ಸಂಪೂರ್ಣವಾಗಿ ‘ಏಕಗವಾಕ್ಷಿ ಯೋಜನೆ’ ಯಲ್ಲಿ ಅನುಷ್ಟಾನಗೊಳಿಸಬೇಕು. ದಲಿತರ ಅವಶ್ಯಕತೆಗೆ ತಕ್ಕಂತೆ ಯೋಜನೆ ರೂಪಿಸುವುದರ ಮೂಲಕ ಅನುದಾನ ದುರ್ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ಇತರೆ ವೆಚ್ಚಕ್ಕಾಗಿ ಹಣ ಬಳಸಲು ಅವಕಾಶವಿರುವ ‘7ಡಿ ಸೆಕ್ಷನ್’ ಅನ್ನು ಕಾಯ್ದೆಯಿಂದ ತೆಗೆದುಹಾಕಬೇಕು. ಕೇಂದ್ರ ಸರ್ಕಾರವೂ ಸಹ ಇದೇ ಮಾದರಿಯ ಕಾಯ್ದೆಯನ್ನು ರೂಪಿಸಬೇಕು.

5. ಕೇವಲ ಆರ್ಥಿಕ ಮಾನದಂಡದಲ್ಲಿ ಎಸ್ಸಿ/ಎಸ್ಟಿ/ಒಬಿಸಿ ಯವರನ್ನು ಹೊರತುಪಡಿಸಿ ವಾರ್ಷಿಕ 8 ಲಕ್ಷ ವರಮಾನವಿರುವ ಮೇಲ್ಜಾತಿಯವರಿಗೆ ನೀಡಿರುವ EWS ಮೀಸಲಾತಿಯನ್ನು ಈ ವೇದಿಕೆ ಖಡಾಖಂಡಿತವಾಗಿ ವಿರೋಧಿಸುತ್ತದೆ. ಈ ಅಸಂವಿಧಾನಿಕ ತಿದ್ದುಪಡಿಯನ್ನು ರದ್ದುಗೊಳಿಸಬೇಕು. ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

6. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಬಹುಕಾಲದಿಂದ ಖಾಲಿಯಾಗಿಯೇ ಉಳಿದಿರುವ ಲಕ್ಷಾಂತರ ಎಸ್ಸಿ/ಎಸ್ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿಕೊಳ್ಳಬೇಕು. ಹೊರಗುತ್ತಿಗೆ ನೇಮಕಾತಿಯನ್ನು ರದ್ದುಗೊಳಿಸಬೇಕು. ಖಾಲಿ ಹುದ್ದೆಗಳನ್ನು ಕೂಡಲೇ ತುಂಬಬೇಕು.

7. ‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು. ದಲಿತರ ಭೂಮಿಯು ದಲಿತರಲ್ಲಿಯೇ ಉಳಿಯುವಂತೆ ಮಾಡಬೇಕು. ಈ ಕಾಯ್ದೆಯ ಮೂಲ ಉದ್ದೇಶವಾದ ‘ದಲಿತರು ಭೂಮಿ ಹೊಂದುವ’ ಗುರಿಯನ್ನು ಸಮರ್ಥವಾಗಿ ಅನುಷ್ಟಾನಕ್ಕೆ ತರಬೇಕು.

8. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೋಹತ್ಯಾ ನಿಷೇಧ ಕಾಯ್ದೆ’ ಮತ್ತು ‘ಮತಾಂತರ ನಿಷೇಧ ಕಾಯ್ದೆ’ ಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

9. ಎಸ್ಸಿ/ಎಸ್ಟಿ ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಹಾಗೂ ಪ್ರತ್ಯೇಕ ಆಯೋಗವನ್ನು ರಚಿಸಿ ಕಾಲಕಾಲಕ್ಕೆ ಸಮೀಕ್ಷೆ ಮಾಡಿ ಸೌಲಭ್ಯ ಒದಗಿಸಬೇಕು. ಡಿಎನ್‌ಟಿ (ಡಿನೋಟಿಫೈ ಟ್ರೆಬ್ಸ್) ಸಮುದಾಯಗಳಿಗೆ ವಿಶೇಷ ಸೌಲಭ್ಯ ಒದಗಿಸಬೇಕು.

10. ರಾಜ್ಯ ಸರ್ಕಾರ ಜಾರಿಗೊಳಿಸಿರುವ ರೈತಾಪಿ ಜನರ ವಿರೋಧಿ ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎ.ಪಿ.ಎಮ್.ಸಿ.ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣ ಮಸೂದೆಯನ್ನು ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

11. ಒಕ್ಕೂಟ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅನುಷ್ಟಾನಕ್ಕೆ ತಂದಿರುವ, ಅಸಮಾನತೆಯನ್ನು ಹಾಗೂ ಚಾತುರ್ವರ್ಣ ಪದ್ಧತಿಯನ್ನು ಎತ್ತಿ ಹಿಡಿಯುವ ರಾಷ್ಟ್ರೀಯ ಶಿಕ್ಷಣ ನೀತಿ – 2020 ಅನ್ನು ಈ ಕೂಡಲೇ ರದ್ದುಗೊಳಿಸಬೇಕು.

12. ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಗೆ ಸ್ಕಾಲರ್‌ಶಿಪ್ ನಿಲ್ಲಿಸುವ ಯೋಚನೆಯನ್ನು ಕೂಡಲೇ ಕೈ ಬಿಡಬೇಕು. ಎಸ್ಸಿ/ಎಸ್ಟಿ ಮೀಸಲಾತಿಗೆ ನಿಗದಿಪಡಿಸುರುವ ವಾರ್ಷಿಕ ಆದಾಯ ಮಿತಿಯನ್ನು 10 ಲಕ್ಷಕ್ಕೆ ಏರಿಸಬೇಕೆಂದು ಒತ್ತಾಯಿಸುತ್ತೇವೆ.

13. ಹತ್ತು ನಿಮಿಷಕ್ಕೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ನ್ಯಾಯಾಲಯಗಳಲ್ಲಿ ಶೇ.96 ರಷ್ಟು ಅಟ್ರಾಸಿಟಿ ಕಾಯ್ದೆಯಡಿಯ ಪ್ರಕರಣಗಳು ಬಾಕಿ ಉಳಿದಿವೆ. ಈ ಕಾಯ್ದೆಯಡಿ ಶಿಕ್ಷೆ ನೀಡುವ ಪ್ರಮಾಣ ತೀರ ಕಡಿಮೆ ಇದೆ. ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳ ಈ ಉದ್ದೇಶಪೂರ್ವಕ ನಿರ್ಲಕ್ಯವನ್ನು ಖಂಡಿಸುತ್ತೇವೆ. ಈ ಕೂಡಲೇ ದಲಿತರಿಗೆ ಭದ್ರತೆ ಹಾಗೂ ರಕ್ಷಣೆ ಒದಗಿಸಲು ಆಗ್ರಹಿಸುತ್ತೇವೆ.

14. ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಈ ಎರಡೂ ವೃತ್ತಿಗಳಲ್ಲಿ ಮೀಸಲಾತಿ ನೀತಿಯನ್ನು ಅನುಷ್ಟಾನಕ್ಕೆ ತರಬೇಕು. ಮಲ ಹೊರುವ ಪದ್ಧತಿ ನಿಷೇಧಗೊಂಡಿದ್ದರೂ ಸಹ ನೂರಾರು ಸಾವುಗಳು ಇದರಿಂದ ಸಂಭವಿಸಿದೆ. ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಮಲ ಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಕ್ಕೆ ತರಲು ಆಗ್ರಹಿಸುತ್ತೇವೆ.

15. ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದಿರುವ ಕೋಮುವಾದಿ ದೌರ್ಜನ್ಯಗಳನ್ನು ಖಂಡಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕನ್ನಡ ನಾಡಿನ ಬಹುತ್ವವನ್ನು ಹಾಳುಗೆಡುವುತ್ತಿರುವ ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...