Homeಚಳವಳಿಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

ಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು, ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

- Advertisement -
- Advertisement -

ಡಿಸೆಂಬರ್ 6, 2022 ರಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನದಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ‘ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ’ ದ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ದಲ್ಲಿ ಮಂಡಿಸಲಾದ ನಿರ್ಣಯಗಳು

1. ಭಾರತದ ವೈವಿದ್ಯಮಯ ಸೌಹಾರ್ಧಯುತ ಸಾಮರಸ್ಯ ಮತ್ತು ಬಹುತ್ವದ ಸಂಸೃತಿಯ ಮೇಲೆ ಮೇಲು -ಕೀಳು, ಸ್ಪೃಶ್ಯ- ಅಸ್ಪೃಶ್ಯ, ಶ್ರೇಷ್ಠತೆ – ಕನಿಷ್ಟತೆಯ ತಾರತಮ್ಯದ ವೈದಿಕಶಾಹಿಯ ಏಕ ಸಂಸೃತಿಯನ್ನು ಹೇರುವಂತಹ ದಬ್ಬಾಳಿಕೆಯ ನೀತಿಯನ್ನು ಈ ಸಾಂಸ್ಕೃತಿಕ ಪ್ರತಿರೋಧ ಸಮಾವೇಶವು ತೀವ್ರವಾಗಿ ಖಂಡಿಸುತ್ತದೆ. ಮತ್ತು ಇಂತಹ ವೈವಿಧ್ಯಮಯ, ಸೌಹಾರ್ದಯುತ, ಸಾಮರಸ್ಯದ ಬಹುತ್ವದ ಸಾಂಸ್ಕೃತಿಕ ಅಸ್ಮಿತೆಯ ಬದುಕನ್ನು ಉಳಿಸಿಕೊಳ್ಳಲು ಈ ಪ್ರತಿರೋಧ ಸಮಾವೇಶವು ಸಂಕಲ್ಪ ಮಾಡುತ್ತದೆ.

2. ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಯ ಸಾಧನದಂತೆ ವರ್ತಿಸುತ್ತಿರುವ ಸರ್ಕಾರದ ನಡೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ. ಇಂತಹ ಚಾತುರ್ವರ್ಣ ಮತ್ತು ಜಾತೀಯತೆ ತಾರತಮ್ಯಗಳನ್ನು ಎತ್ತಿ ಹಿಡಿಯುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸುತ್ತೇವೆ. ಭಾರತದ ಸಂವಿಧಾನ ಎತ್ತಿಹಿಡಿದಿರುವ ಮೂಲಭೂತ ಹಕ್ಕುಗಳನ್ನು ಸಮಸ್ತ ಭಾರತೀಯರೂ ಅನುಭವಿಸುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಖಾತ್ರಿಗೊಳಿಸಬೇಕಿದೆ.

3. ಹಿಂದುಳಿದ ವರ್ಗಗಳಲ್ಲಿ ಇರುವಂತೆ ಪರಿಶಿಷ್ಟ ಜಾತಿ/ವರ್ಗಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಟ್ಟು ಕಡ್ಡಾಯವಾಗಿ ಅನುಷ್ಟಾನಗೊಳಿಸಬೇಕು.

4. ಪರಿಶಿಷ್ಟ ಜಾತಿ/ವರ್ಗಗಳಿಗೆ SCSP/TSP ಕಾಯ್ದೆಯ ಅನುಗುಣವಾಗಿ ರಾಜ್ಯ ಬಜೆಟ್ಟಿನ ಶೇ. 24.10 ಯಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು. ಈ ಅನುದಾನವನ್ನು ಸಂಪೂರ್ಣವಾಗಿ ‘ಏಕಗವಾಕ್ಷಿ ಯೋಜನೆ’ ಯಲ್ಲಿ ಅನುಷ್ಟಾನಗೊಳಿಸಬೇಕು. ದಲಿತರ ಅವಶ್ಯಕತೆಗೆ ತಕ್ಕಂತೆ ಯೋಜನೆ ರೂಪಿಸುವುದರ ಮೂಲಕ ಅನುದಾನ ದುರ್ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ಇತರೆ ವೆಚ್ಚಕ್ಕಾಗಿ ಹಣ ಬಳಸಲು ಅವಕಾಶವಿರುವ ‘7ಡಿ ಸೆಕ್ಷನ್’ ಅನ್ನು ಕಾಯ್ದೆಯಿಂದ ತೆಗೆದುಹಾಕಬೇಕು. ಕೇಂದ್ರ ಸರ್ಕಾರವೂ ಸಹ ಇದೇ ಮಾದರಿಯ ಕಾಯ್ದೆಯನ್ನು ರೂಪಿಸಬೇಕು.

5. ಕೇವಲ ಆರ್ಥಿಕ ಮಾನದಂಡದಲ್ಲಿ ಎಸ್ಸಿ/ಎಸ್ಟಿ/ಒಬಿಸಿ ಯವರನ್ನು ಹೊರತುಪಡಿಸಿ ವಾರ್ಷಿಕ 8 ಲಕ್ಷ ವರಮಾನವಿರುವ ಮೇಲ್ಜಾತಿಯವರಿಗೆ ನೀಡಿರುವ EWS ಮೀಸಲಾತಿಯನ್ನು ಈ ವೇದಿಕೆ ಖಡಾಖಂಡಿತವಾಗಿ ವಿರೋಧಿಸುತ್ತದೆ. ಈ ಅಸಂವಿಧಾನಿಕ ತಿದ್ದುಪಡಿಯನ್ನು ರದ್ದುಗೊಳಿಸಬೇಕು. ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

6. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಬಹುಕಾಲದಿಂದ ಖಾಲಿಯಾಗಿಯೇ ಉಳಿದಿರುವ ಲಕ್ಷಾಂತರ ಎಸ್ಸಿ/ಎಸ್ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿಕೊಳ್ಳಬೇಕು. ಹೊರಗುತ್ತಿಗೆ ನೇಮಕಾತಿಯನ್ನು ರದ್ದುಗೊಳಿಸಬೇಕು. ಖಾಲಿ ಹುದ್ದೆಗಳನ್ನು ಕೂಡಲೇ ತುಂಬಬೇಕು.

7. ‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು. ದಲಿತರ ಭೂಮಿಯು ದಲಿತರಲ್ಲಿಯೇ ಉಳಿಯುವಂತೆ ಮಾಡಬೇಕು. ಈ ಕಾಯ್ದೆಯ ಮೂಲ ಉದ್ದೇಶವಾದ ‘ದಲಿತರು ಭೂಮಿ ಹೊಂದುವ’ ಗುರಿಯನ್ನು ಸಮರ್ಥವಾಗಿ ಅನುಷ್ಟಾನಕ್ಕೆ ತರಬೇಕು.

8. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೋಹತ್ಯಾ ನಿಷೇಧ ಕಾಯ್ದೆ’ ಮತ್ತು ‘ಮತಾಂತರ ನಿಷೇಧ ಕಾಯ್ದೆ’ ಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

9. ಎಸ್ಸಿ/ಎಸ್ಟಿ ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಹಾಗೂ ಪ್ರತ್ಯೇಕ ಆಯೋಗವನ್ನು ರಚಿಸಿ ಕಾಲಕಾಲಕ್ಕೆ ಸಮೀಕ್ಷೆ ಮಾಡಿ ಸೌಲಭ್ಯ ಒದಗಿಸಬೇಕು. ಡಿಎನ್‌ಟಿ (ಡಿನೋಟಿಫೈ ಟ್ರೆಬ್ಸ್) ಸಮುದಾಯಗಳಿಗೆ ವಿಶೇಷ ಸೌಲಭ್ಯ ಒದಗಿಸಬೇಕು.

10. ರಾಜ್ಯ ಸರ್ಕಾರ ಜಾರಿಗೊಳಿಸಿರುವ ರೈತಾಪಿ ಜನರ ವಿರೋಧಿ ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎ.ಪಿ.ಎಮ್.ಸಿ.ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣ ಮಸೂದೆಯನ್ನು ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

11. ಒಕ್ಕೂಟ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅನುಷ್ಟಾನಕ್ಕೆ ತಂದಿರುವ, ಅಸಮಾನತೆಯನ್ನು ಹಾಗೂ ಚಾತುರ್ವರ್ಣ ಪದ್ಧತಿಯನ್ನು ಎತ್ತಿ ಹಿಡಿಯುವ ರಾಷ್ಟ್ರೀಯ ಶಿಕ್ಷಣ ನೀತಿ – 2020 ಅನ್ನು ಈ ಕೂಡಲೇ ರದ್ದುಗೊಳಿಸಬೇಕು.

12. ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಗೆ ಸ್ಕಾಲರ್‌ಶಿಪ್ ನಿಲ್ಲಿಸುವ ಯೋಚನೆಯನ್ನು ಕೂಡಲೇ ಕೈ ಬಿಡಬೇಕು. ಎಸ್ಸಿ/ಎಸ್ಟಿ ಮೀಸಲಾತಿಗೆ ನಿಗದಿಪಡಿಸುರುವ ವಾರ್ಷಿಕ ಆದಾಯ ಮಿತಿಯನ್ನು 10 ಲಕ್ಷಕ್ಕೆ ಏರಿಸಬೇಕೆಂದು ಒತ್ತಾಯಿಸುತ್ತೇವೆ.

13. ಹತ್ತು ನಿಮಿಷಕ್ಕೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ನ್ಯಾಯಾಲಯಗಳಲ್ಲಿ ಶೇ.96 ರಷ್ಟು ಅಟ್ರಾಸಿಟಿ ಕಾಯ್ದೆಯಡಿಯ ಪ್ರಕರಣಗಳು ಬಾಕಿ ಉಳಿದಿವೆ. ಈ ಕಾಯ್ದೆಯಡಿ ಶಿಕ್ಷೆ ನೀಡುವ ಪ್ರಮಾಣ ತೀರ ಕಡಿಮೆ ಇದೆ. ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳ ಈ ಉದ್ದೇಶಪೂರ್ವಕ ನಿರ್ಲಕ್ಯವನ್ನು ಖಂಡಿಸುತ್ತೇವೆ. ಈ ಕೂಡಲೇ ದಲಿತರಿಗೆ ಭದ್ರತೆ ಹಾಗೂ ರಕ್ಷಣೆ ಒದಗಿಸಲು ಆಗ್ರಹಿಸುತ್ತೇವೆ.

14. ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಈ ಎರಡೂ ವೃತ್ತಿಗಳಲ್ಲಿ ಮೀಸಲಾತಿ ನೀತಿಯನ್ನು ಅನುಷ್ಟಾನಕ್ಕೆ ತರಬೇಕು. ಮಲ ಹೊರುವ ಪದ್ಧತಿ ನಿಷೇಧಗೊಂಡಿದ್ದರೂ ಸಹ ನೂರಾರು ಸಾವುಗಳು ಇದರಿಂದ ಸಂಭವಿಸಿದೆ. ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಮಲ ಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಕ್ಕೆ ತರಲು ಆಗ್ರಹಿಸುತ್ತೇವೆ.

15. ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದಿರುವ ಕೋಮುವಾದಿ ದೌರ್ಜನ್ಯಗಳನ್ನು ಖಂಡಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕನ್ನಡ ನಾಡಿನ ಬಹುತ್ವವನ್ನು ಹಾಳುಗೆಡುವುತ್ತಿರುವ ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...