Homeಚಳವಳಿಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

ಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು, ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

- Advertisement -
- Advertisement -

ಡಿಸೆಂಬರ್ 6, 2022 ರಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನದಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ‘ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ’ ದ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ದಲ್ಲಿ ಮಂಡಿಸಲಾದ ನಿರ್ಣಯಗಳು

1. ಭಾರತದ ವೈವಿದ್ಯಮಯ ಸೌಹಾರ್ಧಯುತ ಸಾಮರಸ್ಯ ಮತ್ತು ಬಹುತ್ವದ ಸಂಸೃತಿಯ ಮೇಲೆ ಮೇಲು -ಕೀಳು, ಸ್ಪೃಶ್ಯ- ಅಸ್ಪೃಶ್ಯ, ಶ್ರೇಷ್ಠತೆ – ಕನಿಷ್ಟತೆಯ ತಾರತಮ್ಯದ ವೈದಿಕಶಾಹಿಯ ಏಕ ಸಂಸೃತಿಯನ್ನು ಹೇರುವಂತಹ ದಬ್ಬಾಳಿಕೆಯ ನೀತಿಯನ್ನು ಈ ಸಾಂಸ್ಕೃತಿಕ ಪ್ರತಿರೋಧ ಸಮಾವೇಶವು ತೀವ್ರವಾಗಿ ಖಂಡಿಸುತ್ತದೆ. ಮತ್ತು ಇಂತಹ ವೈವಿಧ್ಯಮಯ, ಸೌಹಾರ್ದಯುತ, ಸಾಮರಸ್ಯದ ಬಹುತ್ವದ ಸಾಂಸ್ಕೃತಿಕ ಅಸ್ಮಿತೆಯ ಬದುಕನ್ನು ಉಳಿಸಿಕೊಳ್ಳಲು ಈ ಪ್ರತಿರೋಧ ಸಮಾವೇಶವು ಸಂಕಲ್ಪ ಮಾಡುತ್ತದೆ.

2. ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಯ ಸಾಧನದಂತೆ ವರ್ತಿಸುತ್ತಿರುವ ಸರ್ಕಾರದ ನಡೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ. ಇಂತಹ ಚಾತುರ್ವರ್ಣ ಮತ್ತು ಜಾತೀಯತೆ ತಾರತಮ್ಯಗಳನ್ನು ಎತ್ತಿ ಹಿಡಿಯುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸುತ್ತೇವೆ. ಭಾರತದ ಸಂವಿಧಾನ ಎತ್ತಿಹಿಡಿದಿರುವ ಮೂಲಭೂತ ಹಕ್ಕುಗಳನ್ನು ಸಮಸ್ತ ಭಾರತೀಯರೂ ಅನುಭವಿಸುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಖಾತ್ರಿಗೊಳಿಸಬೇಕಿದೆ.

3. ಹಿಂದುಳಿದ ವರ್ಗಗಳಲ್ಲಿ ಇರುವಂತೆ ಪರಿಶಿಷ್ಟ ಜಾತಿ/ವರ್ಗಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಟ್ಟು ಕಡ್ಡಾಯವಾಗಿ ಅನುಷ್ಟಾನಗೊಳಿಸಬೇಕು.

4. ಪರಿಶಿಷ್ಟ ಜಾತಿ/ವರ್ಗಗಳಿಗೆ SCSP/TSP ಕಾಯ್ದೆಯ ಅನುಗುಣವಾಗಿ ರಾಜ್ಯ ಬಜೆಟ್ಟಿನ ಶೇ. 24.10 ಯಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು. ಈ ಅನುದಾನವನ್ನು ಸಂಪೂರ್ಣವಾಗಿ ‘ಏಕಗವಾಕ್ಷಿ ಯೋಜನೆ’ ಯಲ್ಲಿ ಅನುಷ್ಟಾನಗೊಳಿಸಬೇಕು. ದಲಿತರ ಅವಶ್ಯಕತೆಗೆ ತಕ್ಕಂತೆ ಯೋಜನೆ ರೂಪಿಸುವುದರ ಮೂಲಕ ಅನುದಾನ ದುರ್ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ಇತರೆ ವೆಚ್ಚಕ್ಕಾಗಿ ಹಣ ಬಳಸಲು ಅವಕಾಶವಿರುವ ‘7ಡಿ ಸೆಕ್ಷನ್’ ಅನ್ನು ಕಾಯ್ದೆಯಿಂದ ತೆಗೆದುಹಾಕಬೇಕು. ಕೇಂದ್ರ ಸರ್ಕಾರವೂ ಸಹ ಇದೇ ಮಾದರಿಯ ಕಾಯ್ದೆಯನ್ನು ರೂಪಿಸಬೇಕು.

5. ಕೇವಲ ಆರ್ಥಿಕ ಮಾನದಂಡದಲ್ಲಿ ಎಸ್ಸಿ/ಎಸ್ಟಿ/ಒಬಿಸಿ ಯವರನ್ನು ಹೊರತುಪಡಿಸಿ ವಾರ್ಷಿಕ 8 ಲಕ್ಷ ವರಮಾನವಿರುವ ಮೇಲ್ಜಾತಿಯವರಿಗೆ ನೀಡಿರುವ EWS ಮೀಸಲಾತಿಯನ್ನು ಈ ವೇದಿಕೆ ಖಡಾಖಂಡಿತವಾಗಿ ವಿರೋಧಿಸುತ್ತದೆ. ಈ ಅಸಂವಿಧಾನಿಕ ತಿದ್ದುಪಡಿಯನ್ನು ರದ್ದುಗೊಳಿಸಬೇಕು. ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

6. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಬಹುಕಾಲದಿಂದ ಖಾಲಿಯಾಗಿಯೇ ಉಳಿದಿರುವ ಲಕ್ಷಾಂತರ ಎಸ್ಸಿ/ಎಸ್ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿಕೊಳ್ಳಬೇಕು. ಹೊರಗುತ್ತಿಗೆ ನೇಮಕಾತಿಯನ್ನು ರದ್ದುಗೊಳಿಸಬೇಕು. ಖಾಲಿ ಹುದ್ದೆಗಳನ್ನು ಕೂಡಲೇ ತುಂಬಬೇಕು.

7. ‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು. ದಲಿತರ ಭೂಮಿಯು ದಲಿತರಲ್ಲಿಯೇ ಉಳಿಯುವಂತೆ ಮಾಡಬೇಕು. ಈ ಕಾಯ್ದೆಯ ಮೂಲ ಉದ್ದೇಶವಾದ ‘ದಲಿತರು ಭೂಮಿ ಹೊಂದುವ’ ಗುರಿಯನ್ನು ಸಮರ್ಥವಾಗಿ ಅನುಷ್ಟಾನಕ್ಕೆ ತರಬೇಕು.

8. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೋಹತ್ಯಾ ನಿಷೇಧ ಕಾಯ್ದೆ’ ಮತ್ತು ‘ಮತಾಂತರ ನಿಷೇಧ ಕಾಯ್ದೆ’ ಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

9. ಎಸ್ಸಿ/ಎಸ್ಟಿ ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಹಾಗೂ ಪ್ರತ್ಯೇಕ ಆಯೋಗವನ್ನು ರಚಿಸಿ ಕಾಲಕಾಲಕ್ಕೆ ಸಮೀಕ್ಷೆ ಮಾಡಿ ಸೌಲಭ್ಯ ಒದಗಿಸಬೇಕು. ಡಿಎನ್‌ಟಿ (ಡಿನೋಟಿಫೈ ಟ್ರೆಬ್ಸ್) ಸಮುದಾಯಗಳಿಗೆ ವಿಶೇಷ ಸೌಲಭ್ಯ ಒದಗಿಸಬೇಕು.

10. ರಾಜ್ಯ ಸರ್ಕಾರ ಜಾರಿಗೊಳಿಸಿರುವ ರೈತಾಪಿ ಜನರ ವಿರೋಧಿ ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎ.ಪಿ.ಎಮ್.ಸಿ.ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣ ಮಸೂದೆಯನ್ನು ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

11. ಒಕ್ಕೂಟ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅನುಷ್ಟಾನಕ್ಕೆ ತಂದಿರುವ, ಅಸಮಾನತೆಯನ್ನು ಹಾಗೂ ಚಾತುರ್ವರ್ಣ ಪದ್ಧತಿಯನ್ನು ಎತ್ತಿ ಹಿಡಿಯುವ ರಾಷ್ಟ್ರೀಯ ಶಿಕ್ಷಣ ನೀತಿ – 2020 ಅನ್ನು ಈ ಕೂಡಲೇ ರದ್ದುಗೊಳಿಸಬೇಕು.

12. ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಗೆ ಸ್ಕಾಲರ್‌ಶಿಪ್ ನಿಲ್ಲಿಸುವ ಯೋಚನೆಯನ್ನು ಕೂಡಲೇ ಕೈ ಬಿಡಬೇಕು. ಎಸ್ಸಿ/ಎಸ್ಟಿ ಮೀಸಲಾತಿಗೆ ನಿಗದಿಪಡಿಸುರುವ ವಾರ್ಷಿಕ ಆದಾಯ ಮಿತಿಯನ್ನು 10 ಲಕ್ಷಕ್ಕೆ ಏರಿಸಬೇಕೆಂದು ಒತ್ತಾಯಿಸುತ್ತೇವೆ.

13. ಹತ್ತು ನಿಮಿಷಕ್ಕೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ನ್ಯಾಯಾಲಯಗಳಲ್ಲಿ ಶೇ.96 ರಷ್ಟು ಅಟ್ರಾಸಿಟಿ ಕಾಯ್ದೆಯಡಿಯ ಪ್ರಕರಣಗಳು ಬಾಕಿ ಉಳಿದಿವೆ. ಈ ಕಾಯ್ದೆಯಡಿ ಶಿಕ್ಷೆ ನೀಡುವ ಪ್ರಮಾಣ ತೀರ ಕಡಿಮೆ ಇದೆ. ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳ ಈ ಉದ್ದೇಶಪೂರ್ವಕ ನಿರ್ಲಕ್ಯವನ್ನು ಖಂಡಿಸುತ್ತೇವೆ. ಈ ಕೂಡಲೇ ದಲಿತರಿಗೆ ಭದ್ರತೆ ಹಾಗೂ ರಕ್ಷಣೆ ಒದಗಿಸಲು ಆಗ್ರಹಿಸುತ್ತೇವೆ.

14. ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಈ ಎರಡೂ ವೃತ್ತಿಗಳಲ್ಲಿ ಮೀಸಲಾತಿ ನೀತಿಯನ್ನು ಅನುಷ್ಟಾನಕ್ಕೆ ತರಬೇಕು. ಮಲ ಹೊರುವ ಪದ್ಧತಿ ನಿಷೇಧಗೊಂಡಿದ್ದರೂ ಸಹ ನೂರಾರು ಸಾವುಗಳು ಇದರಿಂದ ಸಂಭವಿಸಿದೆ. ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಮಲ ಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಕ್ಕೆ ತರಲು ಆಗ್ರಹಿಸುತ್ತೇವೆ.

15. ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದಿರುವ ಕೋಮುವಾದಿ ದೌರ್ಜನ್ಯಗಳನ್ನು ಖಂಡಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕನ್ನಡ ನಾಡಿನ ಬಹುತ್ವವನ್ನು ಹಾಳುಗೆಡುವುತ್ತಿರುವ ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...