Homeಚಳವಳಿಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

ಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು, ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

- Advertisement -
- Advertisement -

ಡಿಸೆಂಬರ್ 6, 2022 ರಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನದಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ‘ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ’ ದ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ದಲ್ಲಿ ಮಂಡಿಸಲಾದ ನಿರ್ಣಯಗಳು

1. ಭಾರತದ ವೈವಿದ್ಯಮಯ ಸೌಹಾರ್ಧಯುತ ಸಾಮರಸ್ಯ ಮತ್ತು ಬಹುತ್ವದ ಸಂಸೃತಿಯ ಮೇಲೆ ಮೇಲು -ಕೀಳು, ಸ್ಪೃಶ್ಯ- ಅಸ್ಪೃಶ್ಯ, ಶ್ರೇಷ್ಠತೆ – ಕನಿಷ್ಟತೆಯ ತಾರತಮ್ಯದ ವೈದಿಕಶಾಹಿಯ ಏಕ ಸಂಸೃತಿಯನ್ನು ಹೇರುವಂತಹ ದಬ್ಬಾಳಿಕೆಯ ನೀತಿಯನ್ನು ಈ ಸಾಂಸ್ಕೃತಿಕ ಪ್ರತಿರೋಧ ಸಮಾವೇಶವು ತೀವ್ರವಾಗಿ ಖಂಡಿಸುತ್ತದೆ. ಮತ್ತು ಇಂತಹ ವೈವಿಧ್ಯಮಯ, ಸೌಹಾರ್ದಯುತ, ಸಾಮರಸ್ಯದ ಬಹುತ್ವದ ಸಾಂಸ್ಕೃತಿಕ ಅಸ್ಮಿತೆಯ ಬದುಕನ್ನು ಉಳಿಸಿಕೊಳ್ಳಲು ಈ ಪ್ರತಿರೋಧ ಸಮಾವೇಶವು ಸಂಕಲ್ಪ ಮಾಡುತ್ತದೆ.

2. ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಯ ಸಾಧನದಂತೆ ವರ್ತಿಸುತ್ತಿರುವ ಸರ್ಕಾರದ ನಡೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ. ಇಂತಹ ಚಾತುರ್ವರ್ಣ ಮತ್ತು ಜಾತೀಯತೆ ತಾರತಮ್ಯಗಳನ್ನು ಎತ್ತಿ ಹಿಡಿಯುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸುತ್ತೇವೆ. ಭಾರತದ ಸಂವಿಧಾನ ಎತ್ತಿಹಿಡಿದಿರುವ ಮೂಲಭೂತ ಹಕ್ಕುಗಳನ್ನು ಸಮಸ್ತ ಭಾರತೀಯರೂ ಅನುಭವಿಸುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಖಾತ್ರಿಗೊಳಿಸಬೇಕಿದೆ.

3. ಹಿಂದುಳಿದ ವರ್ಗಗಳಲ್ಲಿ ಇರುವಂತೆ ಪರಿಶಿಷ್ಟ ಜಾತಿ/ವರ್ಗಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಟ್ಟು ಕಡ್ಡಾಯವಾಗಿ ಅನುಷ್ಟಾನಗೊಳಿಸಬೇಕು.

4. ಪರಿಶಿಷ್ಟ ಜಾತಿ/ವರ್ಗಗಳಿಗೆ SCSP/TSP ಕಾಯ್ದೆಯ ಅನುಗುಣವಾಗಿ ರಾಜ್ಯ ಬಜೆಟ್ಟಿನ ಶೇ. 24.10 ಯಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು. ಈ ಅನುದಾನವನ್ನು ಸಂಪೂರ್ಣವಾಗಿ ‘ಏಕಗವಾಕ್ಷಿ ಯೋಜನೆ’ ಯಲ್ಲಿ ಅನುಷ್ಟಾನಗೊಳಿಸಬೇಕು. ದಲಿತರ ಅವಶ್ಯಕತೆಗೆ ತಕ್ಕಂತೆ ಯೋಜನೆ ರೂಪಿಸುವುದರ ಮೂಲಕ ಅನುದಾನ ದುರ್ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ಇತರೆ ವೆಚ್ಚಕ್ಕಾಗಿ ಹಣ ಬಳಸಲು ಅವಕಾಶವಿರುವ ‘7ಡಿ ಸೆಕ್ಷನ್’ ಅನ್ನು ಕಾಯ್ದೆಯಿಂದ ತೆಗೆದುಹಾಕಬೇಕು. ಕೇಂದ್ರ ಸರ್ಕಾರವೂ ಸಹ ಇದೇ ಮಾದರಿಯ ಕಾಯ್ದೆಯನ್ನು ರೂಪಿಸಬೇಕು.

5. ಕೇವಲ ಆರ್ಥಿಕ ಮಾನದಂಡದಲ್ಲಿ ಎಸ್ಸಿ/ಎಸ್ಟಿ/ಒಬಿಸಿ ಯವರನ್ನು ಹೊರತುಪಡಿಸಿ ವಾರ್ಷಿಕ 8 ಲಕ್ಷ ವರಮಾನವಿರುವ ಮೇಲ್ಜಾತಿಯವರಿಗೆ ನೀಡಿರುವ EWS ಮೀಸಲಾತಿಯನ್ನು ಈ ವೇದಿಕೆ ಖಡಾಖಂಡಿತವಾಗಿ ವಿರೋಧಿಸುತ್ತದೆ. ಈ ಅಸಂವಿಧಾನಿಕ ತಿದ್ದುಪಡಿಯನ್ನು ರದ್ದುಗೊಳಿಸಬೇಕು. ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

6. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಬಹುಕಾಲದಿಂದ ಖಾಲಿಯಾಗಿಯೇ ಉಳಿದಿರುವ ಲಕ್ಷಾಂತರ ಎಸ್ಸಿ/ಎಸ್ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿಕೊಳ್ಳಬೇಕು. ಹೊರಗುತ್ತಿಗೆ ನೇಮಕಾತಿಯನ್ನು ರದ್ದುಗೊಳಿಸಬೇಕು. ಖಾಲಿ ಹುದ್ದೆಗಳನ್ನು ಕೂಡಲೇ ತುಂಬಬೇಕು.

7. ‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು. ದಲಿತರ ಭೂಮಿಯು ದಲಿತರಲ್ಲಿಯೇ ಉಳಿಯುವಂತೆ ಮಾಡಬೇಕು. ಈ ಕಾಯ್ದೆಯ ಮೂಲ ಉದ್ದೇಶವಾದ ‘ದಲಿತರು ಭೂಮಿ ಹೊಂದುವ’ ಗುರಿಯನ್ನು ಸಮರ್ಥವಾಗಿ ಅನುಷ್ಟಾನಕ್ಕೆ ತರಬೇಕು.

8. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೋಹತ್ಯಾ ನಿಷೇಧ ಕಾಯ್ದೆ’ ಮತ್ತು ‘ಮತಾಂತರ ನಿಷೇಧ ಕಾಯ್ದೆ’ ಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

9. ಎಸ್ಸಿ/ಎಸ್ಟಿ ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಹಾಗೂ ಪ್ರತ್ಯೇಕ ಆಯೋಗವನ್ನು ರಚಿಸಿ ಕಾಲಕಾಲಕ್ಕೆ ಸಮೀಕ್ಷೆ ಮಾಡಿ ಸೌಲಭ್ಯ ಒದಗಿಸಬೇಕು. ಡಿಎನ್‌ಟಿ (ಡಿನೋಟಿಫೈ ಟ್ರೆಬ್ಸ್) ಸಮುದಾಯಗಳಿಗೆ ವಿಶೇಷ ಸೌಲಭ್ಯ ಒದಗಿಸಬೇಕು.

10. ರಾಜ್ಯ ಸರ್ಕಾರ ಜಾರಿಗೊಳಿಸಿರುವ ರೈತಾಪಿ ಜನರ ವಿರೋಧಿ ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎ.ಪಿ.ಎಮ್.ಸಿ.ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣ ಮಸೂದೆಯನ್ನು ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

11. ಒಕ್ಕೂಟ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅನುಷ್ಟಾನಕ್ಕೆ ತಂದಿರುವ, ಅಸಮಾನತೆಯನ್ನು ಹಾಗೂ ಚಾತುರ್ವರ್ಣ ಪದ್ಧತಿಯನ್ನು ಎತ್ತಿ ಹಿಡಿಯುವ ರಾಷ್ಟ್ರೀಯ ಶಿಕ್ಷಣ ನೀತಿ – 2020 ಅನ್ನು ಈ ಕೂಡಲೇ ರದ್ದುಗೊಳಿಸಬೇಕು.

12. ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಗೆ ಸ್ಕಾಲರ್‌ಶಿಪ್ ನಿಲ್ಲಿಸುವ ಯೋಚನೆಯನ್ನು ಕೂಡಲೇ ಕೈ ಬಿಡಬೇಕು. ಎಸ್ಸಿ/ಎಸ್ಟಿ ಮೀಸಲಾತಿಗೆ ನಿಗದಿಪಡಿಸುರುವ ವಾರ್ಷಿಕ ಆದಾಯ ಮಿತಿಯನ್ನು 10 ಲಕ್ಷಕ್ಕೆ ಏರಿಸಬೇಕೆಂದು ಒತ್ತಾಯಿಸುತ್ತೇವೆ.

13. ಹತ್ತು ನಿಮಿಷಕ್ಕೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ನ್ಯಾಯಾಲಯಗಳಲ್ಲಿ ಶೇ.96 ರಷ್ಟು ಅಟ್ರಾಸಿಟಿ ಕಾಯ್ದೆಯಡಿಯ ಪ್ರಕರಣಗಳು ಬಾಕಿ ಉಳಿದಿವೆ. ಈ ಕಾಯ್ದೆಯಡಿ ಶಿಕ್ಷೆ ನೀಡುವ ಪ್ರಮಾಣ ತೀರ ಕಡಿಮೆ ಇದೆ. ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳ ಈ ಉದ್ದೇಶಪೂರ್ವಕ ನಿರ್ಲಕ್ಯವನ್ನು ಖಂಡಿಸುತ್ತೇವೆ. ಈ ಕೂಡಲೇ ದಲಿತರಿಗೆ ಭದ್ರತೆ ಹಾಗೂ ರಕ್ಷಣೆ ಒದಗಿಸಲು ಆಗ್ರಹಿಸುತ್ತೇವೆ.

14. ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಈ ಎರಡೂ ವೃತ್ತಿಗಳಲ್ಲಿ ಮೀಸಲಾತಿ ನೀತಿಯನ್ನು ಅನುಷ್ಟಾನಕ್ಕೆ ತರಬೇಕು. ಮಲ ಹೊರುವ ಪದ್ಧತಿ ನಿಷೇಧಗೊಂಡಿದ್ದರೂ ಸಹ ನೂರಾರು ಸಾವುಗಳು ಇದರಿಂದ ಸಂಭವಿಸಿದೆ. ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಮಲ ಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಕ್ಕೆ ತರಲು ಆಗ್ರಹಿಸುತ್ತೇವೆ.

15. ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದಿರುವ ಕೋಮುವಾದಿ ದೌರ್ಜನ್ಯಗಳನ್ನು ಖಂಡಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕನ್ನಡ ನಾಡಿನ ಬಹುತ್ವವನ್ನು ಹಾಳುಗೆಡುವುತ್ತಿರುವ ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...