Homeಕರ್ನಾಟಕದಸಂಸ ಬಣಗಳು ಈಗಲಾದರೂ ಒಂದಾಗಬೇಕು. ಏಕೆಂದರೆ...

ದಸಂಸ ಬಣಗಳು ಈಗಲಾದರೂ ಒಂದಾಗಬೇಕು. ಏಕೆಂದರೆ…

ದಸಂಸ ಸಂಘಟನಾತ್ಮಕ ಗುಂಪು ಮಾತ್ರವಲ್ಲ. ನೊಂದವರ, ಅಮಾಯಕರ, ಬಡವರ, ಶೋಷಿತರ ಕಣ್ಣೀರು ಒರೆಸಿದ ಸಂಘಟನೆ. ಅನ್ಯಾಯದ ವಿರುದ್ಧ ಸಿಡಿದು ಪ್ರಭುತ್ವವನ್ನೇ ನಡುಗಿಸಿ, ಎಲ್ಲ ತರತಮಗಳ ವಿರುದ್ಧ ಬಂಡೆದ್ದ ಸಂಘಟನೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಒಟ್ಟು ಚಳವಳಿಗಳ ಕುರಿತಾಗಿ ‘ಆಯಾ ಕಾಲದ ಪ್ರತಿರೋಧವನ್ನು ಸಂದರ್ಭವೇ ಸೃಷ್ಟಿಸುತ್ತದೆ. ಹೊಸ ತಲೆಮಾರಿನ ಚಳವಳಿಯ ಸ್ವರೂಪವೇ ಬೇರೆಯಾಗಿರುತ್ತದೆ’ ಎಂಬರ್ಥದಲ್ಲಿ ಹಿಂದೊಮ್ಮೆ ಹೇಳಿದ್ದರು.

ಹಿರಿಯ ಕವಿ ಡಾ.ವಿ.ಮುನಿವೆಂಕಟಪ್ಪ ‘ದಸಂಸದ ಸ್ಥಾಪಕರೆಲ್ಲ ಗತಿಸದೇ ಹೊರತು ಬಣಗಳ ಐಕ್ಯ ಸಾಧ್ಯವಿಲ್ಲ. ವಿಘಟಿತ ಬಣಗಳು ಯಾವ ಉದ್ದೇಶವನ್ನು ಈಡೇರಿಸುವುದಿಲ್ಲ’ ಎಂದಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪಕ ಪ್ರಮುಖ ಹೋರಾಟಗಾರರಾದ ಇಬ್ಬರ ಮಾತಿನಲ್ಲಿ ಸಾಮ್ಯತೆ ಇದೆ. ಆದರೆ ಕರ್ನಾಟಕದ ನೋವಿನ ನೆಲಗಳು ದಸಂಸ ಬಣಗಳು ಒಂದಾಗಬೇಕೆಂದು ಬಯಸುತ್ತಿವೆ.

ಎರಡು ದಶಕಗಳಿಂದ ಕೇಳುತ್ತಿರುವ ಒಂದೇ ಮಾತು. ದಸಂಸ ಬಣಗಳು ಒಂದಾಗಬೇಕು. ಯಾವಾಗ? ಹೇಗೆ? ಬಣಗಳ ಒಗ್ಗೂಡಿಸುವವರು ಯಾರು? ಹೀಗೆ ನಾನಾ ಪ್ರಶ್ನೆಗಳು. ಕವಿ ಸಿದ್ದಲಿಂಗಯ್ಯ ಅವರು ‘ನನ್ನ ಅಣ್ಣನಂತಿರುವ ದೇವನೂರ ಮಹಾದೇವ ಅವರು ದಸಂಸ ನೇತೃತ್ವ ವಹಿಸಿದರೆ ಅವರೊಂದಿಗೆ ಮುನ್ನಡೆಯುವುದಾಗಿ’ ಹೇಳಿದ್ದರು. ಅದು ಈಡೇರಲಿಲ್ಲ.

ಕರ್ನಾಟಕದಲ್ಲಿ ನೂರಾರು ಸಂಘಟನೆಗಳಿವೆ. ಒಂದೇ ಉದ್ದೇಶದ ಹತ್ತಾರು ಸಂಘಟನೆಗಳಿವೆ. ಇವುಗಳಲ್ಲಿಯೇ ಬೇಕಾದಷ್ಟು ಬಣಗಳಿವೆ. ಆದರೆ ದಸಂಸದ ನಾಲ್ಕು ಬಣಗಳ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತದೆ. ಈ ಬಣಗಳು ಮುಖ್ಯಸ್ಥರು ತಮ್ಮ ಮುನಿಸು ಬದಿಗೆ ಸರಿಸಿ ಒಂದಾಗಬೇಕೆಂದು ನಾಡಿನುದ್ದಗಲಕ್ಕೂ ಬಯಸಿದವರಿದ್ದಾರೆ.

ದಸಂಸ ಸಂಘಟನಾತ್ಮಕ ಗುಂಪು ಮಾತ್ರವಲ್ಲ. ನೊಂದವರ, ಅಮಾಯಕರ, ಬಡವರ, ಶೋಷಿತರ ಕಣ್ಣೀರು ಒರೆಸಿದ ಸಂಘಟನೆ. ಅನ್ಯಾಯದ ವಿರುದ್ಧ ಸಿಡಿದು ಪ್ರಭುತ್ವವನ್ನೇ ನಡುಗಿಸಿ, ಎಲ್ಲ ತರತಮಗಳ ವಿರುದ್ಧ ಬಂಡೆದ್ದ ಸಂಘಟನೆ.

ನೆರೆಯ ಮಹಾರಾಷ್ಟ್ರದ ದಲಿತ ಪ್ಯಾಂಥರ್ಸ್ ಪ್ರಭಾವದಿಂದ ಪ್ರೊ.ಬಿ.ಕೃಷ್ಣಪ್ಪ ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿ ಹುಟ್ಟಿಗೆ ಕಾರಣರಾದರು. ಅದು 1975ರ ಸಂದರ್ಭ. ತುರ್ತು ಪರಿಸ್ಥಿತಿ ಎದುರಿಸಿದ ಕರಾಳ ದಿನಗಳು ಹಸಿರಾಗಿದ್ದವು. ದೇಶಕ್ಕೆ ಸ್ವಾತಂತ್ರ್ಯ ಬಂದು 25 ವರ್ಷಗಳಾದರೂ ಸಾಮಾಜಿಕ, ಆರ್ಥಿಕ ತರತಮಗಳು ಬಡ ಜನರನ್ನು ಇನ್ನಿಲ್ಲದಂತೆ ನೋಯಿಸುತ್ತಿದ್ದವು. ಹೋರಾಟಕ್ಕೆ ಜನ ತುಡಿಯುತ್ತಿದ್ದರು. ದಸಂಸ ಅವರಿಗೆ ದಿಕ್ಕಾಯಿತು.

ಪ್ರೊ.ಬಿ.ಕೃಷ್ಣಪ್ಪ

ಶೂದ್ರರಷ್ಟೇ ಅಲ್ಲದೇ ಬಡವರ ಅಭ್ಯುದಯದ ಧ್ಯೇಯದೊಂದಿಗೆ ದಸಂಸ ಪ್ರಭುತ್ವದ ಬಂಡವಾಳಶಾಹಿಗಳ ಜಮೀನುದಾರರ ಪುರೋಹಿತಶಾಹಿ ವಿರುದ್ಧ ಕಹಳೆ ಸಾರಿತು. ಹಳ್ಳಿಯ-ದಿಲ್ಲಿಯ ಅನ್ಯಾಯದ ವಿರುದ್ಧ ಗುಡುಗಿ ದಲಿತರಲ್ಲಿ ನೈತಿಕ ಶಕ್ತಿ ತುಂಬಿತು. ಮಹಾನಾಯಕ ಅಂಬೇಡ್ಕರರು ತೋರಿದ ಬೆಳಕಲ್ಲಿ ನಡೆದ ದಸಂಸ ಚಾರಿತ್ರಿಕ ಬದಲಾವಣೆಗಳಿಗೆ ಕಾರಣವಾಯಿತು.

‘ದಲಿತರು ಬರುವರು ದಾರಿ ಬಿಡಿ, ದಲಿತರ ಕೈಗೆ ರಾಜ್ಯಕೊಡಿ’ ಎಂದು ಬೀದಿಯಲ್ಲಿ ಹಾಡುತ್ತ ಅಧಿಕಾರದ ಗದ್ದುಗೆ ಕಡೆ ನಡೆಯುವಾಗಲೇ ದಸಂಸ ತನ್ನ ಶಕ್ತಿಯನ್ನು ಕಳೆದುಕೊಂಡಿತು. ಬಣಗಳಾದವು. ಸಂಚಾಲಕರೆಲ್ಲ ರಾಜ್ಯಾಧ್ಯಕ್ಷರಾದರು. ಕೆಲವರು ರಾಜಕಾರಣಿಗಳ ಹಿಂಬಾಲಕರಾದರು. ಬಡವರ ಹಿತಾಶಕ್ತಿ ಬಲಿಕೊಟ್ಟರು.

ಇಷ್ಟಾದರೂ ಇವತ್ತಿನ ತನಕ ಬಣಗಳು ನಿಷ್ಕ್ರೀಯವಾಗದೇ ಚಾಲನೆಯಲ್ಲಿದ್ದವು ಎಂಬುದೇ ಸಮಾಧಾನದ ಸಂಗತಿ. ಒಂದೇ ಸಮಸ್ಯೆ ವಿರುದ್ಧ ಪ್ರತ್ಯೇಕ ಹೋರಾಟಕ್ಕೆ ಕರೆ ಕೊಡುತ್ತಿದ್ದವು. ಜಾಗೃತಿ ಮೂಡಿಸುತ್ತಿದ್ದವು. ನಿರೀಕ್ಷಿತ ಫಲ ಸಿಗದೇ ಹತಾಶೆಗೊಂಡಿದ್ದವು. ಈಗ ಬಣಗಳು ಒಂದುಗೂಡುವುದೊಂದೇ ಅವುಗಳಿಗಿರುವ ದಾರಿ ಎಂಬ ಅರಿವುಂಟಾಗಿದೆ. ಹಲವು ಬಾರಿ ಒಂದಾಗಿವೆ, ಮತ್ತೆ ಬೇರೆಯಾಗಿವೆ.

ಈ ದಿಸೆಯಲ್ಲಿ ಆಶಾವಾದವೊಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅರಳಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ನಾಲ್ಕು ಬಣಗಳ ಮೈಸೂರು ಜಿಲ್ಲಾ ಸಂಚಾಲಕರು ‘ಒಂದೇ ದನಿ, ಒಂದೇ ಗುರಿ, ಒಂದೇ ಹಾದಿ’ ತತ್ವದಡಿ ಒಂದಾಗುವ ಸುದ್ದಿ ನೀಡಿದ್ದಾರೆ. ರಾಜ್ಯ ಸಂಚಾಲಕರು ಇವರ ಹಾದಿ ಹಿಡಿಯಬೇಕು. ಈ ಸಂಕಟದ ವರ್ತಮಾನಕ್ಕೆ ಮುಖಾಮುಖಿಯಾಗಬೇಕು.

ದಸಂಸ ಯಶಸ್ವಿ ಹೋರಾಟ ನೆನೆಯುವ ಸಂದರ್ಭವಿದು. ಅದು ನಾಗಸಂದ್ರದ ಭೂ ಹೋರಾಟ. ಪ್ರಭುತ್ವ ಮತ್ತು ಜಮೀನುದಾರರ ಸೊಕ್ಕಡಗಿಸಿದ ಹೋರಾಟವದು. ‘ಹೆಂಡ ಬೇಡ ಭೂಮಿ ಬೇಕು’ ಘೋಷಣೆಯಡಿ ನಾಗಸಂದ್ರದ 80ಕ್ಕೂ ಹೆಚ್ಚು ದಲಿತ ಕುಟುಂಬಗಳನ್ನು ಜೀತದಿಂದ ವಿಮುಕ್ತರಾಗಿಸಿ ಜಮೀನು ದೊರಕಿಸಿ ಚಾರಿತ್ರಿಕ ಸಾಧನೆ ಮಾಡಿದ ಹೋರಾಟ. ಅಂದದ್ದೇ ಹೋರಾಟ ಕಟ್ಟುವ ಕಾಲವಿದು.

ನಾಗಸಂದ್ರ ಭೂ ಹೋರಾಟದ ಕುರಿತ ಪುಸ್ತಕ

ಹಿಂದಿನ ಸರ್ಕಾರಗಳು ಭೂ ರಹಿತರ ಪರವಾಗಿ ಕಾಯಿದೆ ಜಾರಿಗೆ ತಂದು ಬಡವರನ್ನು ರೈತರನ್ನಾಗಿಸಿತು. ಇಂದಿನ ಸರ್ಕಾರ ರೈತರಿಂದ ಭೂಮಿ ಕಸಿಯುವ ಅಘಾತಕಾರಿ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಭೂ ಕಬಳಿಕರಿಗೆ ಕೆಂಪುಹಾಸು ಹಾಸಿದೆ.

ಕಾಲದ ಒತ್ತಡಗಳೂ ನೂರೆಂಟು. ಈಗ ದಸಂಸದ ಗುರಿ ಒಂದೇ. ಅದು ಕರ್ನಾಟಕದ ರೈತಕುಲವನ್ನು ಉಳಿಸುವುದು. ಭೂಮಿ ಉಳಿಸಲು ಹೋರಾಡುವುದು. ಆ ಮೂಲಕ ತನ್ನ ಹಿಂದಿನ ಘನತೆಯನ್ನು ಎತ್ತಿಹಿಡಿಯುವುದು.

ವಿನೋದ್ ಮಹದೇವಪುರ, ಪತ್ರಕರ್ತರು, ಯುವ ಬರಹಗಾರರು.


ಇದನ್ನೂ ಓದಿ: ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...