Homeಕರ್ನಾಟಕದಸಂಸ ಬಣಗಳು ಈಗಲಾದರೂ ಒಂದಾಗಬೇಕು. ಏಕೆಂದರೆ...

ದಸಂಸ ಬಣಗಳು ಈಗಲಾದರೂ ಒಂದಾಗಬೇಕು. ಏಕೆಂದರೆ…

ದಸಂಸ ಸಂಘಟನಾತ್ಮಕ ಗುಂಪು ಮಾತ್ರವಲ್ಲ. ನೊಂದವರ, ಅಮಾಯಕರ, ಬಡವರ, ಶೋಷಿತರ ಕಣ್ಣೀರು ಒರೆಸಿದ ಸಂಘಟನೆ. ಅನ್ಯಾಯದ ವಿರುದ್ಧ ಸಿಡಿದು ಪ್ರಭುತ್ವವನ್ನೇ ನಡುಗಿಸಿ, ಎಲ್ಲ ತರತಮಗಳ ವಿರುದ್ಧ ಬಂಡೆದ್ದ ಸಂಘಟನೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಒಟ್ಟು ಚಳವಳಿಗಳ ಕುರಿತಾಗಿ ‘ಆಯಾ ಕಾಲದ ಪ್ರತಿರೋಧವನ್ನು ಸಂದರ್ಭವೇ ಸೃಷ್ಟಿಸುತ್ತದೆ. ಹೊಸ ತಲೆಮಾರಿನ ಚಳವಳಿಯ ಸ್ವರೂಪವೇ ಬೇರೆಯಾಗಿರುತ್ತದೆ’ ಎಂಬರ್ಥದಲ್ಲಿ ಹಿಂದೊಮ್ಮೆ ಹೇಳಿದ್ದರು.

ಹಿರಿಯ ಕವಿ ಡಾ.ವಿ.ಮುನಿವೆಂಕಟಪ್ಪ ‘ದಸಂಸದ ಸ್ಥಾಪಕರೆಲ್ಲ ಗತಿಸದೇ ಹೊರತು ಬಣಗಳ ಐಕ್ಯ ಸಾಧ್ಯವಿಲ್ಲ. ವಿಘಟಿತ ಬಣಗಳು ಯಾವ ಉದ್ದೇಶವನ್ನು ಈಡೇರಿಸುವುದಿಲ್ಲ’ ಎಂದಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪಕ ಪ್ರಮುಖ ಹೋರಾಟಗಾರರಾದ ಇಬ್ಬರ ಮಾತಿನಲ್ಲಿ ಸಾಮ್ಯತೆ ಇದೆ. ಆದರೆ ಕರ್ನಾಟಕದ ನೋವಿನ ನೆಲಗಳು ದಸಂಸ ಬಣಗಳು ಒಂದಾಗಬೇಕೆಂದು ಬಯಸುತ್ತಿವೆ.

ಎರಡು ದಶಕಗಳಿಂದ ಕೇಳುತ್ತಿರುವ ಒಂದೇ ಮಾತು. ದಸಂಸ ಬಣಗಳು ಒಂದಾಗಬೇಕು. ಯಾವಾಗ? ಹೇಗೆ? ಬಣಗಳ ಒಗ್ಗೂಡಿಸುವವರು ಯಾರು? ಹೀಗೆ ನಾನಾ ಪ್ರಶ್ನೆಗಳು. ಕವಿ ಸಿದ್ದಲಿಂಗಯ್ಯ ಅವರು ‘ನನ್ನ ಅಣ್ಣನಂತಿರುವ ದೇವನೂರ ಮಹಾದೇವ ಅವರು ದಸಂಸ ನೇತೃತ್ವ ವಹಿಸಿದರೆ ಅವರೊಂದಿಗೆ ಮುನ್ನಡೆಯುವುದಾಗಿ’ ಹೇಳಿದ್ದರು. ಅದು ಈಡೇರಲಿಲ್ಲ.

ಕರ್ನಾಟಕದಲ್ಲಿ ನೂರಾರು ಸಂಘಟನೆಗಳಿವೆ. ಒಂದೇ ಉದ್ದೇಶದ ಹತ್ತಾರು ಸಂಘಟನೆಗಳಿವೆ. ಇವುಗಳಲ್ಲಿಯೇ ಬೇಕಾದಷ್ಟು ಬಣಗಳಿವೆ. ಆದರೆ ದಸಂಸದ ನಾಲ್ಕು ಬಣಗಳ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತದೆ. ಈ ಬಣಗಳು ಮುಖ್ಯಸ್ಥರು ತಮ್ಮ ಮುನಿಸು ಬದಿಗೆ ಸರಿಸಿ ಒಂದಾಗಬೇಕೆಂದು ನಾಡಿನುದ್ದಗಲಕ್ಕೂ ಬಯಸಿದವರಿದ್ದಾರೆ.

ದಸಂಸ ಸಂಘಟನಾತ್ಮಕ ಗುಂಪು ಮಾತ್ರವಲ್ಲ. ನೊಂದವರ, ಅಮಾಯಕರ, ಬಡವರ, ಶೋಷಿತರ ಕಣ್ಣೀರು ಒರೆಸಿದ ಸಂಘಟನೆ. ಅನ್ಯಾಯದ ವಿರುದ್ಧ ಸಿಡಿದು ಪ್ರಭುತ್ವವನ್ನೇ ನಡುಗಿಸಿ, ಎಲ್ಲ ತರತಮಗಳ ವಿರುದ್ಧ ಬಂಡೆದ್ದ ಸಂಘಟನೆ.

ನೆರೆಯ ಮಹಾರಾಷ್ಟ್ರದ ದಲಿತ ಪ್ಯಾಂಥರ್ಸ್ ಪ್ರಭಾವದಿಂದ ಪ್ರೊ.ಬಿ.ಕೃಷ್ಣಪ್ಪ ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿ ಹುಟ್ಟಿಗೆ ಕಾರಣರಾದರು. ಅದು 1975ರ ಸಂದರ್ಭ. ತುರ್ತು ಪರಿಸ್ಥಿತಿ ಎದುರಿಸಿದ ಕರಾಳ ದಿನಗಳು ಹಸಿರಾಗಿದ್ದವು. ದೇಶಕ್ಕೆ ಸ್ವಾತಂತ್ರ್ಯ ಬಂದು 25 ವರ್ಷಗಳಾದರೂ ಸಾಮಾಜಿಕ, ಆರ್ಥಿಕ ತರತಮಗಳು ಬಡ ಜನರನ್ನು ಇನ್ನಿಲ್ಲದಂತೆ ನೋಯಿಸುತ್ತಿದ್ದವು. ಹೋರಾಟಕ್ಕೆ ಜನ ತುಡಿಯುತ್ತಿದ್ದರು. ದಸಂಸ ಅವರಿಗೆ ದಿಕ್ಕಾಯಿತು.

ಪ್ರೊ.ಬಿ.ಕೃಷ್ಣಪ್ಪ

ಶೂದ್ರರಷ್ಟೇ ಅಲ್ಲದೇ ಬಡವರ ಅಭ್ಯುದಯದ ಧ್ಯೇಯದೊಂದಿಗೆ ದಸಂಸ ಪ್ರಭುತ್ವದ ಬಂಡವಾಳಶಾಹಿಗಳ ಜಮೀನುದಾರರ ಪುರೋಹಿತಶಾಹಿ ವಿರುದ್ಧ ಕಹಳೆ ಸಾರಿತು. ಹಳ್ಳಿಯ-ದಿಲ್ಲಿಯ ಅನ್ಯಾಯದ ವಿರುದ್ಧ ಗುಡುಗಿ ದಲಿತರಲ್ಲಿ ನೈತಿಕ ಶಕ್ತಿ ತುಂಬಿತು. ಮಹಾನಾಯಕ ಅಂಬೇಡ್ಕರರು ತೋರಿದ ಬೆಳಕಲ್ಲಿ ನಡೆದ ದಸಂಸ ಚಾರಿತ್ರಿಕ ಬದಲಾವಣೆಗಳಿಗೆ ಕಾರಣವಾಯಿತು.

‘ದಲಿತರು ಬರುವರು ದಾರಿ ಬಿಡಿ, ದಲಿತರ ಕೈಗೆ ರಾಜ್ಯಕೊಡಿ’ ಎಂದು ಬೀದಿಯಲ್ಲಿ ಹಾಡುತ್ತ ಅಧಿಕಾರದ ಗದ್ದುಗೆ ಕಡೆ ನಡೆಯುವಾಗಲೇ ದಸಂಸ ತನ್ನ ಶಕ್ತಿಯನ್ನು ಕಳೆದುಕೊಂಡಿತು. ಬಣಗಳಾದವು. ಸಂಚಾಲಕರೆಲ್ಲ ರಾಜ್ಯಾಧ್ಯಕ್ಷರಾದರು. ಕೆಲವರು ರಾಜಕಾರಣಿಗಳ ಹಿಂಬಾಲಕರಾದರು. ಬಡವರ ಹಿತಾಶಕ್ತಿ ಬಲಿಕೊಟ್ಟರು.

ಇಷ್ಟಾದರೂ ಇವತ್ತಿನ ತನಕ ಬಣಗಳು ನಿಷ್ಕ್ರೀಯವಾಗದೇ ಚಾಲನೆಯಲ್ಲಿದ್ದವು ಎಂಬುದೇ ಸಮಾಧಾನದ ಸಂಗತಿ. ಒಂದೇ ಸಮಸ್ಯೆ ವಿರುದ್ಧ ಪ್ರತ್ಯೇಕ ಹೋರಾಟಕ್ಕೆ ಕರೆ ಕೊಡುತ್ತಿದ್ದವು. ಜಾಗೃತಿ ಮೂಡಿಸುತ್ತಿದ್ದವು. ನಿರೀಕ್ಷಿತ ಫಲ ಸಿಗದೇ ಹತಾಶೆಗೊಂಡಿದ್ದವು. ಈಗ ಬಣಗಳು ಒಂದುಗೂಡುವುದೊಂದೇ ಅವುಗಳಿಗಿರುವ ದಾರಿ ಎಂಬ ಅರಿವುಂಟಾಗಿದೆ. ಹಲವು ಬಾರಿ ಒಂದಾಗಿವೆ, ಮತ್ತೆ ಬೇರೆಯಾಗಿವೆ.

ಈ ದಿಸೆಯಲ್ಲಿ ಆಶಾವಾದವೊಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅರಳಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ನಾಲ್ಕು ಬಣಗಳ ಮೈಸೂರು ಜಿಲ್ಲಾ ಸಂಚಾಲಕರು ‘ಒಂದೇ ದನಿ, ಒಂದೇ ಗುರಿ, ಒಂದೇ ಹಾದಿ’ ತತ್ವದಡಿ ಒಂದಾಗುವ ಸುದ್ದಿ ನೀಡಿದ್ದಾರೆ. ರಾಜ್ಯ ಸಂಚಾಲಕರು ಇವರ ಹಾದಿ ಹಿಡಿಯಬೇಕು. ಈ ಸಂಕಟದ ವರ್ತಮಾನಕ್ಕೆ ಮುಖಾಮುಖಿಯಾಗಬೇಕು.

ದಸಂಸ ಯಶಸ್ವಿ ಹೋರಾಟ ನೆನೆಯುವ ಸಂದರ್ಭವಿದು. ಅದು ನಾಗಸಂದ್ರದ ಭೂ ಹೋರಾಟ. ಪ್ರಭುತ್ವ ಮತ್ತು ಜಮೀನುದಾರರ ಸೊಕ್ಕಡಗಿಸಿದ ಹೋರಾಟವದು. ‘ಹೆಂಡ ಬೇಡ ಭೂಮಿ ಬೇಕು’ ಘೋಷಣೆಯಡಿ ನಾಗಸಂದ್ರದ 80ಕ್ಕೂ ಹೆಚ್ಚು ದಲಿತ ಕುಟುಂಬಗಳನ್ನು ಜೀತದಿಂದ ವಿಮುಕ್ತರಾಗಿಸಿ ಜಮೀನು ದೊರಕಿಸಿ ಚಾರಿತ್ರಿಕ ಸಾಧನೆ ಮಾಡಿದ ಹೋರಾಟ. ಅಂದದ್ದೇ ಹೋರಾಟ ಕಟ್ಟುವ ಕಾಲವಿದು.

ನಾಗಸಂದ್ರ ಭೂ ಹೋರಾಟದ ಕುರಿತ ಪುಸ್ತಕ

ಹಿಂದಿನ ಸರ್ಕಾರಗಳು ಭೂ ರಹಿತರ ಪರವಾಗಿ ಕಾಯಿದೆ ಜಾರಿಗೆ ತಂದು ಬಡವರನ್ನು ರೈತರನ್ನಾಗಿಸಿತು. ಇಂದಿನ ಸರ್ಕಾರ ರೈತರಿಂದ ಭೂಮಿ ಕಸಿಯುವ ಅಘಾತಕಾರಿ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಭೂ ಕಬಳಿಕರಿಗೆ ಕೆಂಪುಹಾಸು ಹಾಸಿದೆ.

ಕಾಲದ ಒತ್ತಡಗಳೂ ನೂರೆಂಟು. ಈಗ ದಸಂಸದ ಗುರಿ ಒಂದೇ. ಅದು ಕರ್ನಾಟಕದ ರೈತಕುಲವನ್ನು ಉಳಿಸುವುದು. ಭೂಮಿ ಉಳಿಸಲು ಹೋರಾಡುವುದು. ಆ ಮೂಲಕ ತನ್ನ ಹಿಂದಿನ ಘನತೆಯನ್ನು ಎತ್ತಿಹಿಡಿಯುವುದು.

ವಿನೋದ್ ಮಹದೇವಪುರ, ಪತ್ರಕರ್ತರು, ಯುವ ಬರಹಗಾರರು.


ಇದನ್ನೂ ಓದಿ: ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...