Homeಕರ್ನಾಟಕದಸಂಸ ಬಣಗಳು ಈಗಲಾದರೂ ಒಂದಾಗಬೇಕು. ಏಕೆಂದರೆ...

ದಸಂಸ ಬಣಗಳು ಈಗಲಾದರೂ ಒಂದಾಗಬೇಕು. ಏಕೆಂದರೆ…

ದಸಂಸ ಸಂಘಟನಾತ್ಮಕ ಗುಂಪು ಮಾತ್ರವಲ್ಲ. ನೊಂದವರ, ಅಮಾಯಕರ, ಬಡವರ, ಶೋಷಿತರ ಕಣ್ಣೀರು ಒರೆಸಿದ ಸಂಘಟನೆ. ಅನ್ಯಾಯದ ವಿರುದ್ಧ ಸಿಡಿದು ಪ್ರಭುತ್ವವನ್ನೇ ನಡುಗಿಸಿ, ಎಲ್ಲ ತರತಮಗಳ ವಿರುದ್ಧ ಬಂಡೆದ್ದ ಸಂಘಟನೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಒಟ್ಟು ಚಳವಳಿಗಳ ಕುರಿತಾಗಿ ‘ಆಯಾ ಕಾಲದ ಪ್ರತಿರೋಧವನ್ನು ಸಂದರ್ಭವೇ ಸೃಷ್ಟಿಸುತ್ತದೆ. ಹೊಸ ತಲೆಮಾರಿನ ಚಳವಳಿಯ ಸ್ವರೂಪವೇ ಬೇರೆಯಾಗಿರುತ್ತದೆ’ ಎಂಬರ್ಥದಲ್ಲಿ ಹಿಂದೊಮ್ಮೆ ಹೇಳಿದ್ದರು.

ಹಿರಿಯ ಕವಿ ಡಾ.ವಿ.ಮುನಿವೆಂಕಟಪ್ಪ ‘ದಸಂಸದ ಸ್ಥಾಪಕರೆಲ್ಲ ಗತಿಸದೇ ಹೊರತು ಬಣಗಳ ಐಕ್ಯ ಸಾಧ್ಯವಿಲ್ಲ. ವಿಘಟಿತ ಬಣಗಳು ಯಾವ ಉದ್ದೇಶವನ್ನು ಈಡೇರಿಸುವುದಿಲ್ಲ’ ಎಂದಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪಕ ಪ್ರಮುಖ ಹೋರಾಟಗಾರರಾದ ಇಬ್ಬರ ಮಾತಿನಲ್ಲಿ ಸಾಮ್ಯತೆ ಇದೆ. ಆದರೆ ಕರ್ನಾಟಕದ ನೋವಿನ ನೆಲಗಳು ದಸಂಸ ಬಣಗಳು ಒಂದಾಗಬೇಕೆಂದು ಬಯಸುತ್ತಿವೆ.

ಎರಡು ದಶಕಗಳಿಂದ ಕೇಳುತ್ತಿರುವ ಒಂದೇ ಮಾತು. ದಸಂಸ ಬಣಗಳು ಒಂದಾಗಬೇಕು. ಯಾವಾಗ? ಹೇಗೆ? ಬಣಗಳ ಒಗ್ಗೂಡಿಸುವವರು ಯಾರು? ಹೀಗೆ ನಾನಾ ಪ್ರಶ್ನೆಗಳು. ಕವಿ ಸಿದ್ದಲಿಂಗಯ್ಯ ಅವರು ‘ನನ್ನ ಅಣ್ಣನಂತಿರುವ ದೇವನೂರ ಮಹಾದೇವ ಅವರು ದಸಂಸ ನೇತೃತ್ವ ವಹಿಸಿದರೆ ಅವರೊಂದಿಗೆ ಮುನ್ನಡೆಯುವುದಾಗಿ’ ಹೇಳಿದ್ದರು. ಅದು ಈಡೇರಲಿಲ್ಲ.

ಕರ್ನಾಟಕದಲ್ಲಿ ನೂರಾರು ಸಂಘಟನೆಗಳಿವೆ. ಒಂದೇ ಉದ್ದೇಶದ ಹತ್ತಾರು ಸಂಘಟನೆಗಳಿವೆ. ಇವುಗಳಲ್ಲಿಯೇ ಬೇಕಾದಷ್ಟು ಬಣಗಳಿವೆ. ಆದರೆ ದಸಂಸದ ನಾಲ್ಕು ಬಣಗಳ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತದೆ. ಈ ಬಣಗಳು ಮುಖ್ಯಸ್ಥರು ತಮ್ಮ ಮುನಿಸು ಬದಿಗೆ ಸರಿಸಿ ಒಂದಾಗಬೇಕೆಂದು ನಾಡಿನುದ್ದಗಲಕ್ಕೂ ಬಯಸಿದವರಿದ್ದಾರೆ.

ದಸಂಸ ಸಂಘಟನಾತ್ಮಕ ಗುಂಪು ಮಾತ್ರವಲ್ಲ. ನೊಂದವರ, ಅಮಾಯಕರ, ಬಡವರ, ಶೋಷಿತರ ಕಣ್ಣೀರು ಒರೆಸಿದ ಸಂಘಟನೆ. ಅನ್ಯಾಯದ ವಿರುದ್ಧ ಸಿಡಿದು ಪ್ರಭುತ್ವವನ್ನೇ ನಡುಗಿಸಿ, ಎಲ್ಲ ತರತಮಗಳ ವಿರುದ್ಧ ಬಂಡೆದ್ದ ಸಂಘಟನೆ.

ನೆರೆಯ ಮಹಾರಾಷ್ಟ್ರದ ದಲಿತ ಪ್ಯಾಂಥರ್ಸ್ ಪ್ರಭಾವದಿಂದ ಪ್ರೊ.ಬಿ.ಕೃಷ್ಣಪ್ಪ ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿ ಹುಟ್ಟಿಗೆ ಕಾರಣರಾದರು. ಅದು 1975ರ ಸಂದರ್ಭ. ತುರ್ತು ಪರಿಸ್ಥಿತಿ ಎದುರಿಸಿದ ಕರಾಳ ದಿನಗಳು ಹಸಿರಾಗಿದ್ದವು. ದೇಶಕ್ಕೆ ಸ್ವಾತಂತ್ರ್ಯ ಬಂದು 25 ವರ್ಷಗಳಾದರೂ ಸಾಮಾಜಿಕ, ಆರ್ಥಿಕ ತರತಮಗಳು ಬಡ ಜನರನ್ನು ಇನ್ನಿಲ್ಲದಂತೆ ನೋಯಿಸುತ್ತಿದ್ದವು. ಹೋರಾಟಕ್ಕೆ ಜನ ತುಡಿಯುತ್ತಿದ್ದರು. ದಸಂಸ ಅವರಿಗೆ ದಿಕ್ಕಾಯಿತು.

ಪ್ರೊ.ಬಿ.ಕೃಷ್ಣಪ್ಪ

ಶೂದ್ರರಷ್ಟೇ ಅಲ್ಲದೇ ಬಡವರ ಅಭ್ಯುದಯದ ಧ್ಯೇಯದೊಂದಿಗೆ ದಸಂಸ ಪ್ರಭುತ್ವದ ಬಂಡವಾಳಶಾಹಿಗಳ ಜಮೀನುದಾರರ ಪುರೋಹಿತಶಾಹಿ ವಿರುದ್ಧ ಕಹಳೆ ಸಾರಿತು. ಹಳ್ಳಿಯ-ದಿಲ್ಲಿಯ ಅನ್ಯಾಯದ ವಿರುದ್ಧ ಗುಡುಗಿ ದಲಿತರಲ್ಲಿ ನೈತಿಕ ಶಕ್ತಿ ತುಂಬಿತು. ಮಹಾನಾಯಕ ಅಂಬೇಡ್ಕರರು ತೋರಿದ ಬೆಳಕಲ್ಲಿ ನಡೆದ ದಸಂಸ ಚಾರಿತ್ರಿಕ ಬದಲಾವಣೆಗಳಿಗೆ ಕಾರಣವಾಯಿತು.

‘ದಲಿತರು ಬರುವರು ದಾರಿ ಬಿಡಿ, ದಲಿತರ ಕೈಗೆ ರಾಜ್ಯಕೊಡಿ’ ಎಂದು ಬೀದಿಯಲ್ಲಿ ಹಾಡುತ್ತ ಅಧಿಕಾರದ ಗದ್ದುಗೆ ಕಡೆ ನಡೆಯುವಾಗಲೇ ದಸಂಸ ತನ್ನ ಶಕ್ತಿಯನ್ನು ಕಳೆದುಕೊಂಡಿತು. ಬಣಗಳಾದವು. ಸಂಚಾಲಕರೆಲ್ಲ ರಾಜ್ಯಾಧ್ಯಕ್ಷರಾದರು. ಕೆಲವರು ರಾಜಕಾರಣಿಗಳ ಹಿಂಬಾಲಕರಾದರು. ಬಡವರ ಹಿತಾಶಕ್ತಿ ಬಲಿಕೊಟ್ಟರು.

ಇಷ್ಟಾದರೂ ಇವತ್ತಿನ ತನಕ ಬಣಗಳು ನಿಷ್ಕ್ರೀಯವಾಗದೇ ಚಾಲನೆಯಲ್ಲಿದ್ದವು ಎಂಬುದೇ ಸಮಾಧಾನದ ಸಂಗತಿ. ಒಂದೇ ಸಮಸ್ಯೆ ವಿರುದ್ಧ ಪ್ರತ್ಯೇಕ ಹೋರಾಟಕ್ಕೆ ಕರೆ ಕೊಡುತ್ತಿದ್ದವು. ಜಾಗೃತಿ ಮೂಡಿಸುತ್ತಿದ್ದವು. ನಿರೀಕ್ಷಿತ ಫಲ ಸಿಗದೇ ಹತಾಶೆಗೊಂಡಿದ್ದವು. ಈಗ ಬಣಗಳು ಒಂದುಗೂಡುವುದೊಂದೇ ಅವುಗಳಿಗಿರುವ ದಾರಿ ಎಂಬ ಅರಿವುಂಟಾಗಿದೆ. ಹಲವು ಬಾರಿ ಒಂದಾಗಿವೆ, ಮತ್ತೆ ಬೇರೆಯಾಗಿವೆ.

ಈ ದಿಸೆಯಲ್ಲಿ ಆಶಾವಾದವೊಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅರಳಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ನಾಲ್ಕು ಬಣಗಳ ಮೈಸೂರು ಜಿಲ್ಲಾ ಸಂಚಾಲಕರು ‘ಒಂದೇ ದನಿ, ಒಂದೇ ಗುರಿ, ಒಂದೇ ಹಾದಿ’ ತತ್ವದಡಿ ಒಂದಾಗುವ ಸುದ್ದಿ ನೀಡಿದ್ದಾರೆ. ರಾಜ್ಯ ಸಂಚಾಲಕರು ಇವರ ಹಾದಿ ಹಿಡಿಯಬೇಕು. ಈ ಸಂಕಟದ ವರ್ತಮಾನಕ್ಕೆ ಮುಖಾಮುಖಿಯಾಗಬೇಕು.

ದಸಂಸ ಯಶಸ್ವಿ ಹೋರಾಟ ನೆನೆಯುವ ಸಂದರ್ಭವಿದು. ಅದು ನಾಗಸಂದ್ರದ ಭೂ ಹೋರಾಟ. ಪ್ರಭುತ್ವ ಮತ್ತು ಜಮೀನುದಾರರ ಸೊಕ್ಕಡಗಿಸಿದ ಹೋರಾಟವದು. ‘ಹೆಂಡ ಬೇಡ ಭೂಮಿ ಬೇಕು’ ಘೋಷಣೆಯಡಿ ನಾಗಸಂದ್ರದ 80ಕ್ಕೂ ಹೆಚ್ಚು ದಲಿತ ಕುಟುಂಬಗಳನ್ನು ಜೀತದಿಂದ ವಿಮುಕ್ತರಾಗಿಸಿ ಜಮೀನು ದೊರಕಿಸಿ ಚಾರಿತ್ರಿಕ ಸಾಧನೆ ಮಾಡಿದ ಹೋರಾಟ. ಅಂದದ್ದೇ ಹೋರಾಟ ಕಟ್ಟುವ ಕಾಲವಿದು.

ನಾಗಸಂದ್ರ ಭೂ ಹೋರಾಟದ ಕುರಿತ ಪುಸ್ತಕ

ಹಿಂದಿನ ಸರ್ಕಾರಗಳು ಭೂ ರಹಿತರ ಪರವಾಗಿ ಕಾಯಿದೆ ಜಾರಿಗೆ ತಂದು ಬಡವರನ್ನು ರೈತರನ್ನಾಗಿಸಿತು. ಇಂದಿನ ಸರ್ಕಾರ ರೈತರಿಂದ ಭೂಮಿ ಕಸಿಯುವ ಅಘಾತಕಾರಿ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಭೂ ಕಬಳಿಕರಿಗೆ ಕೆಂಪುಹಾಸು ಹಾಸಿದೆ.

ಕಾಲದ ಒತ್ತಡಗಳೂ ನೂರೆಂಟು. ಈಗ ದಸಂಸದ ಗುರಿ ಒಂದೇ. ಅದು ಕರ್ನಾಟಕದ ರೈತಕುಲವನ್ನು ಉಳಿಸುವುದು. ಭೂಮಿ ಉಳಿಸಲು ಹೋರಾಡುವುದು. ಆ ಮೂಲಕ ತನ್ನ ಹಿಂದಿನ ಘನತೆಯನ್ನು ಎತ್ತಿಹಿಡಿಯುವುದು.

ವಿನೋದ್ ಮಹದೇವಪುರ, ಪತ್ರಕರ್ತರು, ಯುವ ಬರಹಗಾರರು.


ಇದನ್ನೂ ಓದಿ: ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...