Homeಕರ್ನಾಟಕದಸಂಸ ಬಣಗಳು ಈಗಲಾದರೂ ಒಂದಾಗಬೇಕು. ಏಕೆಂದರೆ...

ದಸಂಸ ಬಣಗಳು ಈಗಲಾದರೂ ಒಂದಾಗಬೇಕು. ಏಕೆಂದರೆ…

ದಸಂಸ ಸಂಘಟನಾತ್ಮಕ ಗುಂಪು ಮಾತ್ರವಲ್ಲ. ನೊಂದವರ, ಅಮಾಯಕರ, ಬಡವರ, ಶೋಷಿತರ ಕಣ್ಣೀರು ಒರೆಸಿದ ಸಂಘಟನೆ. ಅನ್ಯಾಯದ ವಿರುದ್ಧ ಸಿಡಿದು ಪ್ರಭುತ್ವವನ್ನೇ ನಡುಗಿಸಿ, ಎಲ್ಲ ತರತಮಗಳ ವಿರುದ್ಧ ಬಂಡೆದ್ದ ಸಂಘಟನೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಒಟ್ಟು ಚಳವಳಿಗಳ ಕುರಿತಾಗಿ ‘ಆಯಾ ಕಾಲದ ಪ್ರತಿರೋಧವನ್ನು ಸಂದರ್ಭವೇ ಸೃಷ್ಟಿಸುತ್ತದೆ. ಹೊಸ ತಲೆಮಾರಿನ ಚಳವಳಿಯ ಸ್ವರೂಪವೇ ಬೇರೆಯಾಗಿರುತ್ತದೆ’ ಎಂಬರ್ಥದಲ್ಲಿ ಹಿಂದೊಮ್ಮೆ ಹೇಳಿದ್ದರು.

ಹಿರಿಯ ಕವಿ ಡಾ.ವಿ.ಮುನಿವೆಂಕಟಪ್ಪ ‘ದಸಂಸದ ಸ್ಥಾಪಕರೆಲ್ಲ ಗತಿಸದೇ ಹೊರತು ಬಣಗಳ ಐಕ್ಯ ಸಾಧ್ಯವಿಲ್ಲ. ವಿಘಟಿತ ಬಣಗಳು ಯಾವ ಉದ್ದೇಶವನ್ನು ಈಡೇರಿಸುವುದಿಲ್ಲ’ ಎಂದಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪಕ ಪ್ರಮುಖ ಹೋರಾಟಗಾರರಾದ ಇಬ್ಬರ ಮಾತಿನಲ್ಲಿ ಸಾಮ್ಯತೆ ಇದೆ. ಆದರೆ ಕರ್ನಾಟಕದ ನೋವಿನ ನೆಲಗಳು ದಸಂಸ ಬಣಗಳು ಒಂದಾಗಬೇಕೆಂದು ಬಯಸುತ್ತಿವೆ.

ಎರಡು ದಶಕಗಳಿಂದ ಕೇಳುತ್ತಿರುವ ಒಂದೇ ಮಾತು. ದಸಂಸ ಬಣಗಳು ಒಂದಾಗಬೇಕು. ಯಾವಾಗ? ಹೇಗೆ? ಬಣಗಳ ಒಗ್ಗೂಡಿಸುವವರು ಯಾರು? ಹೀಗೆ ನಾನಾ ಪ್ರಶ್ನೆಗಳು. ಕವಿ ಸಿದ್ದಲಿಂಗಯ್ಯ ಅವರು ‘ನನ್ನ ಅಣ್ಣನಂತಿರುವ ದೇವನೂರ ಮಹಾದೇವ ಅವರು ದಸಂಸ ನೇತೃತ್ವ ವಹಿಸಿದರೆ ಅವರೊಂದಿಗೆ ಮುನ್ನಡೆಯುವುದಾಗಿ’ ಹೇಳಿದ್ದರು. ಅದು ಈಡೇರಲಿಲ್ಲ.

ಕರ್ನಾಟಕದಲ್ಲಿ ನೂರಾರು ಸಂಘಟನೆಗಳಿವೆ. ಒಂದೇ ಉದ್ದೇಶದ ಹತ್ತಾರು ಸಂಘಟನೆಗಳಿವೆ. ಇವುಗಳಲ್ಲಿಯೇ ಬೇಕಾದಷ್ಟು ಬಣಗಳಿವೆ. ಆದರೆ ದಸಂಸದ ನಾಲ್ಕು ಬಣಗಳ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತದೆ. ಈ ಬಣಗಳು ಮುಖ್ಯಸ್ಥರು ತಮ್ಮ ಮುನಿಸು ಬದಿಗೆ ಸರಿಸಿ ಒಂದಾಗಬೇಕೆಂದು ನಾಡಿನುದ್ದಗಲಕ್ಕೂ ಬಯಸಿದವರಿದ್ದಾರೆ.

ದಸಂಸ ಸಂಘಟನಾತ್ಮಕ ಗುಂಪು ಮಾತ್ರವಲ್ಲ. ನೊಂದವರ, ಅಮಾಯಕರ, ಬಡವರ, ಶೋಷಿತರ ಕಣ್ಣೀರು ಒರೆಸಿದ ಸಂಘಟನೆ. ಅನ್ಯಾಯದ ವಿರುದ್ಧ ಸಿಡಿದು ಪ್ರಭುತ್ವವನ್ನೇ ನಡುಗಿಸಿ, ಎಲ್ಲ ತರತಮಗಳ ವಿರುದ್ಧ ಬಂಡೆದ್ದ ಸಂಘಟನೆ.

ನೆರೆಯ ಮಹಾರಾಷ್ಟ್ರದ ದಲಿತ ಪ್ಯಾಂಥರ್ಸ್ ಪ್ರಭಾವದಿಂದ ಪ್ರೊ.ಬಿ.ಕೃಷ್ಣಪ್ಪ ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿ ಹುಟ್ಟಿಗೆ ಕಾರಣರಾದರು. ಅದು 1975ರ ಸಂದರ್ಭ. ತುರ್ತು ಪರಿಸ್ಥಿತಿ ಎದುರಿಸಿದ ಕರಾಳ ದಿನಗಳು ಹಸಿರಾಗಿದ್ದವು. ದೇಶಕ್ಕೆ ಸ್ವಾತಂತ್ರ್ಯ ಬಂದು 25 ವರ್ಷಗಳಾದರೂ ಸಾಮಾಜಿಕ, ಆರ್ಥಿಕ ತರತಮಗಳು ಬಡ ಜನರನ್ನು ಇನ್ನಿಲ್ಲದಂತೆ ನೋಯಿಸುತ್ತಿದ್ದವು. ಹೋರಾಟಕ್ಕೆ ಜನ ತುಡಿಯುತ್ತಿದ್ದರು. ದಸಂಸ ಅವರಿಗೆ ದಿಕ್ಕಾಯಿತು.

ಪ್ರೊ.ಬಿ.ಕೃಷ್ಣಪ್ಪ

ಶೂದ್ರರಷ್ಟೇ ಅಲ್ಲದೇ ಬಡವರ ಅಭ್ಯುದಯದ ಧ್ಯೇಯದೊಂದಿಗೆ ದಸಂಸ ಪ್ರಭುತ್ವದ ಬಂಡವಾಳಶಾಹಿಗಳ ಜಮೀನುದಾರರ ಪುರೋಹಿತಶಾಹಿ ವಿರುದ್ಧ ಕಹಳೆ ಸಾರಿತು. ಹಳ್ಳಿಯ-ದಿಲ್ಲಿಯ ಅನ್ಯಾಯದ ವಿರುದ್ಧ ಗುಡುಗಿ ದಲಿತರಲ್ಲಿ ನೈತಿಕ ಶಕ್ತಿ ತುಂಬಿತು. ಮಹಾನಾಯಕ ಅಂಬೇಡ್ಕರರು ತೋರಿದ ಬೆಳಕಲ್ಲಿ ನಡೆದ ದಸಂಸ ಚಾರಿತ್ರಿಕ ಬದಲಾವಣೆಗಳಿಗೆ ಕಾರಣವಾಯಿತು.

‘ದಲಿತರು ಬರುವರು ದಾರಿ ಬಿಡಿ, ದಲಿತರ ಕೈಗೆ ರಾಜ್ಯಕೊಡಿ’ ಎಂದು ಬೀದಿಯಲ್ಲಿ ಹಾಡುತ್ತ ಅಧಿಕಾರದ ಗದ್ದುಗೆ ಕಡೆ ನಡೆಯುವಾಗಲೇ ದಸಂಸ ತನ್ನ ಶಕ್ತಿಯನ್ನು ಕಳೆದುಕೊಂಡಿತು. ಬಣಗಳಾದವು. ಸಂಚಾಲಕರೆಲ್ಲ ರಾಜ್ಯಾಧ್ಯಕ್ಷರಾದರು. ಕೆಲವರು ರಾಜಕಾರಣಿಗಳ ಹಿಂಬಾಲಕರಾದರು. ಬಡವರ ಹಿತಾಶಕ್ತಿ ಬಲಿಕೊಟ್ಟರು.

ಇಷ್ಟಾದರೂ ಇವತ್ತಿನ ತನಕ ಬಣಗಳು ನಿಷ್ಕ್ರೀಯವಾಗದೇ ಚಾಲನೆಯಲ್ಲಿದ್ದವು ಎಂಬುದೇ ಸಮಾಧಾನದ ಸಂಗತಿ. ಒಂದೇ ಸಮಸ್ಯೆ ವಿರುದ್ಧ ಪ್ರತ್ಯೇಕ ಹೋರಾಟಕ್ಕೆ ಕರೆ ಕೊಡುತ್ತಿದ್ದವು. ಜಾಗೃತಿ ಮೂಡಿಸುತ್ತಿದ್ದವು. ನಿರೀಕ್ಷಿತ ಫಲ ಸಿಗದೇ ಹತಾಶೆಗೊಂಡಿದ್ದವು. ಈಗ ಬಣಗಳು ಒಂದುಗೂಡುವುದೊಂದೇ ಅವುಗಳಿಗಿರುವ ದಾರಿ ಎಂಬ ಅರಿವುಂಟಾಗಿದೆ. ಹಲವು ಬಾರಿ ಒಂದಾಗಿವೆ, ಮತ್ತೆ ಬೇರೆಯಾಗಿವೆ.

ಈ ದಿಸೆಯಲ್ಲಿ ಆಶಾವಾದವೊಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅರಳಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ನಾಲ್ಕು ಬಣಗಳ ಮೈಸೂರು ಜಿಲ್ಲಾ ಸಂಚಾಲಕರು ‘ಒಂದೇ ದನಿ, ಒಂದೇ ಗುರಿ, ಒಂದೇ ಹಾದಿ’ ತತ್ವದಡಿ ಒಂದಾಗುವ ಸುದ್ದಿ ನೀಡಿದ್ದಾರೆ. ರಾಜ್ಯ ಸಂಚಾಲಕರು ಇವರ ಹಾದಿ ಹಿಡಿಯಬೇಕು. ಈ ಸಂಕಟದ ವರ್ತಮಾನಕ್ಕೆ ಮುಖಾಮುಖಿಯಾಗಬೇಕು.

ದಸಂಸ ಯಶಸ್ವಿ ಹೋರಾಟ ನೆನೆಯುವ ಸಂದರ್ಭವಿದು. ಅದು ನಾಗಸಂದ್ರದ ಭೂ ಹೋರಾಟ. ಪ್ರಭುತ್ವ ಮತ್ತು ಜಮೀನುದಾರರ ಸೊಕ್ಕಡಗಿಸಿದ ಹೋರಾಟವದು. ‘ಹೆಂಡ ಬೇಡ ಭೂಮಿ ಬೇಕು’ ಘೋಷಣೆಯಡಿ ನಾಗಸಂದ್ರದ 80ಕ್ಕೂ ಹೆಚ್ಚು ದಲಿತ ಕುಟುಂಬಗಳನ್ನು ಜೀತದಿಂದ ವಿಮುಕ್ತರಾಗಿಸಿ ಜಮೀನು ದೊರಕಿಸಿ ಚಾರಿತ್ರಿಕ ಸಾಧನೆ ಮಾಡಿದ ಹೋರಾಟ. ಅಂದದ್ದೇ ಹೋರಾಟ ಕಟ್ಟುವ ಕಾಲವಿದು.

ನಾಗಸಂದ್ರ ಭೂ ಹೋರಾಟದ ಕುರಿತ ಪುಸ್ತಕ

ಹಿಂದಿನ ಸರ್ಕಾರಗಳು ಭೂ ರಹಿತರ ಪರವಾಗಿ ಕಾಯಿದೆ ಜಾರಿಗೆ ತಂದು ಬಡವರನ್ನು ರೈತರನ್ನಾಗಿಸಿತು. ಇಂದಿನ ಸರ್ಕಾರ ರೈತರಿಂದ ಭೂಮಿ ಕಸಿಯುವ ಅಘಾತಕಾರಿ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಭೂ ಕಬಳಿಕರಿಗೆ ಕೆಂಪುಹಾಸು ಹಾಸಿದೆ.

ಕಾಲದ ಒತ್ತಡಗಳೂ ನೂರೆಂಟು. ಈಗ ದಸಂಸದ ಗುರಿ ಒಂದೇ. ಅದು ಕರ್ನಾಟಕದ ರೈತಕುಲವನ್ನು ಉಳಿಸುವುದು. ಭೂಮಿ ಉಳಿಸಲು ಹೋರಾಡುವುದು. ಆ ಮೂಲಕ ತನ್ನ ಹಿಂದಿನ ಘನತೆಯನ್ನು ಎತ್ತಿಹಿಡಿಯುವುದು.

ವಿನೋದ್ ಮಹದೇವಪುರ, ಪತ್ರಕರ್ತರು, ಯುವ ಬರಹಗಾರರು.


ಇದನ್ನೂ ಓದಿ: ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...